ರಾಜಪಥ ಭ್ರಷ್ಟಾಚಾರ ಕುರಿತು ಲೋಕಾ ತನಿಖೆ ಶುರು


Team Udayavani, Feb 9, 2018, 11:51 AM IST

m2-rajapata.jpg

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಪ್ರಮುಖ ರಸ್ತೆಗಳಲ್ಲಿ ನಡೆಸಲಾಗಿರುವ ರಾಜಪಥ ಕಾಮಗಾರಿಯಲ್ಲಿ ಹಣ ದುರುಪಯೋಗವಾಗಿರುವ ಬಗ್ಗೆ ದೂರು ಸಲ್ಲಿಕೆಯಾಗಿರುವ ಹಿನ್ನೆಲೆಯಲ್ಲಿ ತನಿಖೆ ಕೈಗೊಂಡಿರುವ ಲೋಕಾಯುಕ್ತ ಅಧಿಕಾರಿಗಳು, ನಗರದಲ್ಲಿ ನಡೆದಿರುವ ರಾಜಪಥ ಕಾಮಗಾರಿ ಪರಿಶೀಲನೆ ಆರಂಭಿಸಿದ್ದಾರೆ.

ರಾಜಪಥ ಕಾಮಗಾರಿಯಲ್ಲಿ ಭಾರೀ ಅವ್ಯವಹಾರ ನಡೆದಿರುವ ಬಗ್ಗೆ ಪಾಲಿಕೆಯ ಬಿಜೆಪಿ ಸದಸ್ಯ ನಂದೀಶ್‌ ಪ್ರೀತಂ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಗುರುವಾರ ನಗರಕ್ಕೆ ಆಗಮಿಸಿದ ಲೋಕಾಯುಕ್ತ ತಾಂತ್ರಿಕ ವಿಭಾಗದ ಕಾರ್ಯಪಾಲಕ ಎಂಜಿನಿಯರ್‌ ಎಚ್‌.ಎಂ.ಜಯಕುಮಾರ್‌ ನೇತೃತ್ವದ ತಂಡ ಎರಡು ದಿನಗಳ ಕಾಲ ಪರಿಶೀಲನೆ ನಡೆಸಲಿದೆ.

ನಗರದ ಹಾರ್ಡಿಂಜ್‌ ವೃತ್ತದಲ್ಲಿ ಗುರುವಾರ ಪರಿಶೀಲನೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ವಿಶೇಷವಾಗಿ ರಾಜಪಥ ಕಾಮಗಾರಿಯಲ್ಲಿ ರಸ್ತೆಬದಿಯಲ್ಲಿ ಅಳವಡಿಸಿರುವ ಸ್ಟೋನ್‌ ರೇಲಿಂಗ್‌(ಕಲ್ಲಿನ ಬ್ಯಾರಿಕೇಡ್‌)ಗಳ ಗುಣಮಟ್ಟ ಹಾಗೂ ಇನ್ನಿತರ ಅಂಶಗಳನ್ನು ಪರಿಶೀಲಿಸಿದರು.

ದೂರಿನ ಹಿನ್ನೆಲೆ: ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಮೈಸೂರಿಗೆ ನೀಡಿದ್ದ ವಿಶೇಷ 100 ಕೋಟಿ ರೂ. ಅನುದಾನದಲ್ಲಿ 16 ಕೋಟಿ ರೂ.ಗಳನ್ನು ರಾಜಪಥ ಕಾಮಗಾರಿಗೆ ಬಳಸಲಾಗಿತ್ತು. ಇದಕ್ಕಾಗಿ ಅಂದಾಜು ಪಟ್ಟಿಯನ್ನು ತಯಾರಿಸಿ, ಟೆಂಡರ್‌ ಕರೆದು, ಚಾಬ್ರಾಸ್‌ ಅಸೋಸಿಯೇಟ್ಸ್‌ ಸಂಸ್ಥೆಗೆ 2010ರಲ್ಲಿ ಕಾಮಗಾರಿ ಗುತ್ತಿಗೆ ನೀಡಲಾಗಿತ್ತು.

ಅಂದು ಪಾಲಿಕೆ ಆಯುಕ್ತರಾಗಿದ್ದ ಸಿ.ಜೆ.ಬೆಟಸೂರ್‌ ಮಠ ಅವರು ಸರ್ಕಾರದಿಂದ ಅನುಮತಿ ಪಡೆಯದೆ ಶೇ.91.60 ಹೆಚ್ಚುವರಿ ಹಣವನ್ನು ಕಾಮಗಾರಿ ಗುತ್ತಿಗೆ ಪಡೆದಿದ್ದ ಸಂಸ್ಥೆಗೆ ನೀಡಲು ಆದೇಶಿಸಿದ್ದಾರೆ. ಆದರೆ, ಗುತ್ತಿಗೆದಾರ ರಾಜಪಥ ಕಾಮಗಾರಿಯಲ್ಲಿ ಅಳವಡಿಸಿರುವ ಸ್ಟೋನ್‌ ರೇಲಿಂಗ್‌ ಅನ್ನು ಒಂದು ಮೀಟರ್‌ಗೆ 4,375 ರೂ.ಗಳಿಗೆ ಅಳವಡಿಸಲು ಒಪ್ಪಿಕೊಂಡು, ಕಾಮಗಾರಿಯನ್ನು ಆರಂಭಿಸಿದ್ದರು.

ಹೀಗಿದ್ದರೂ ಅಂದಿನ ಜಿಲ್ಲಾಧಿಕಾರಿ ಹರ್ಷಗುಪ್ತಾ ಹಾಗೂ ಪಾಲಿಕೆ ಆಯುಕ್ತರಾಗಿದ್ದ ಸಿ.ಜೆ.ಬೆಟಸೂರ್‌ ಮಠ ಅವರ ಆದೇಶದಂತೆ, ಒಂದು ಮೀಟರ್‌ ಸ್ಟೋನ್‌ ರೇಲಿಂಗ್‌ಗೆ 33,000 ರೂ.ಗಳನ್ನು ಪಾವತಿಸಲಾಗಿದೆ ಎಂದು ಪಾಲಿಕೆ ಸದಸ್ಯ ನಂದೀಶ್‌ ಪ್ರೀತಂ 2015ರ ಮಾರ್ಚ್‌ 9 ರಂದು ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ಇಂದಿನ ಬೆಲೆ 5500 ರೂ.: ರಾಜಪಥ ಕಾಮಗಾರಿಯಲ್ಲಿ ಅಳವಡಿಸಿರುವ ಸ್ಟೋನ್‌ ರೇಲಿಂಗ್‌ 1 ಮೀಟರ್‌ಗೆ 4,375 ರೂ.ಗಳಿದ್ದರೂ, ಈ ಇಬ್ಬರು ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಡೇಟಾ ರೇಟ್ಸ್‌ ಅನ್ನು ಶೇ.685 ಹೆಚ್ಚಿಸಿ ಗುತ್ತಿಗೆದಾರನಿಗೆ ಪಾವತಿಸಿದ್ದು, ಇದರಿಂದ ಸರ್ಕಾರಕ್ಕೆ 25.88 ಕೋಟಿ ರೂ.ಗಳು ನಷ್ಟವಾಗಿದೆ.

ಅಲ್ಲದೆ ಈಗಾಗಲೇ ಅಳವಡಿಸಿರುವ ಸ್ಟೋನ್‌ ರೇಲಿಂಗ್‌ ಇಂದಿನ ಮಾರುಕಟ್ಟೆ ಬೆಲೆ, ಒಂದು ಮೀಟರ್‌ಗೆ 5500 ರೂ. ಆಗಿದೆ. ಹೀಗಾಗಿ ಹರ್ಷಗುಪ್ತಾ ಹಾಗೂ ಸಿ.ಜೆ.ಬೆಟಸೂರ್‌ ಮಠ ಅವರುಗಳು ಗುತ್ತಿಗೆದಾರನೊಂದಿಗೆ ಒಳ ಒಪ್ಪಂದ ಮಾಡಿಕೊಂಡು ಬಾರೀ ಹಣ ದುರುಪಯೋಗ ಮಾಡಿದ್ದಾರೆ ಎಂಬುದು ಪಾಲಿಕೆ ಸದಸ್ಯ ನಂದೀಶ್‌ ಪ್ರೀತಂ ಅವರ ಆರೋಪ.

ಪರಿಶೀಲನೆ ಆರಂಭ: ರಾಜಪಥ ಕಾಮಗಾರಿ ನಡೆಸಲಾಗಿರುವ ಹಾರ್ಡಿಂಜ್‌ ವೃತ್ತ, ಚಾಮರಾಜ ಒಡೆಯರ್‌ ವೃತ್ತ, ಕೆ.ಆರ್‌. ವೃತ್ತ ಹಾಗೂ ಸಯ್ನಾಜಿರಾವ್‌ ರಸ್ತೆ ಮಾರ್ಗದಲ್ಲಿ ನಡೆದಿರುವ ರಾಜಪಥ ಕಾಮಗಾರಿಯನ್ನು ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಪಾಲಿಕೆ ಅಭಿವೃದ್ಧಿ ಅಧಿಕಾರಿ ರುದ್ರೇಶ್‌ ಕುಮಾರ್‌, ಸಹಾಯಕ ಎಂಜಿನಿಯರ್‌ಗಳಾದ ವಾಸು, ಸತ್ಯಮೂರ್ತಿ ಮತ್ತಿತರೆ ಅಧಿಕಾರಿಗಳು ಹಾಜರಿದ್ದರು.

ನಗರದಲ್ಲಿ ನಡೆದಿರುವ ರಾಜಪಥ ಕಾಮಗಾರಿಯ ಸ್ಟೋನ್‌ ರೇಲಿಂಗ್‌ ಅಳವಡಿಕೆಯಲ್ಲಿ ಅಂದಿನ ಜಿಲ್ಲಾಧಿಕಾರಿ ಹರ್ಷಗುಪ್ತಾ ಹಾಗೂ ಪಾಲಿಕೆ ಆಯುಕ್ತರಾಗಿದ್ದ ಸಿ.ಜೆ.ಬೆಟಸೂರ್‌ ಮಠ ಅವರು ಸರ್ಕಾರದ ಅನುಮತಿ ಪಡೆಯದೆ, ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ಹಣವನ್ನು ಗುತ್ತಿಗೆದಾರನಿಗೆ ನೀಡಿದ್ದಾರೆ. ಅಲ್ಲದೆ 5 ಕಿ.ಮೀ ಇದ್ದ ರಾಜಪಥ ಕಾಮಗಾರಿ ವಿಸ್ತೀರ್ಣವನ್ನು 1.45 ಕಿ.ಮೀ.ಗೆ ಇಳಿಸುವ ಮೂಲಕ ಅವ್ಯವಹಾರ ನಡೆಸಿದ್ದು, ಈ ಬಗ್ಗೆ ತನಿಖೆಕೈಗೊಂಡು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕಿದೆ.
-ನಂದೀಶ್‌ ಪ್ರೀತಂ, ಪಾಲಿಕೆ ಸದಸ್ಯ.

ಟಾಪ್ ನ್ಯೂಸ್

1-wewqewqe

Rajasthan; ಮೋದಿಗೆ ಕೊಟ್ಟ ಭರವಸೆ ಈಡೇರದ್ದಕ್ಕೆ ಪ್ರಭಾವಿ ಸಚಿವ ರಾಜೀನಾಮೆ

Kollur: ಸೊಸೈಟಿ ಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Kollur: ಸೊಸೈಟಿ ಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Dengue-nagendra

Hunasuru: ಡೆಂಗ್ಯೂಗೆ ಆರೋಗ್ಯಾಧಿಕಾರಿಯೇ ಮೃತ್ಯು!

1983ರ ಕಥೆ! ಅಂದು ಅವಮಾನದಿಂದ ಬಿಸಿಸಿಐಯನ್ನು ಕಾಪಾಡಿದ್ದು ಲತಾ ಮಂಗೇಶ್ಕರ್

1983ರ ಕಥೆ! ಅಂದು ಅವಮಾನದಿಂದ ಬಿಸಿಸಿಐಯನ್ನು ಕಾಪಾಡಿದ್ದು ಲತಾ ಮಂಗೇಶ್ಕರ್

Sagara ಹಣ ಬಿಡುಗಡೆ ಮಾಡಿಸದೆ ಅವಧಿ ಪೂರೈಸಿದ ಹಾಲಪ್ಪ; ಬೇಳೂರು ವ್ಯಂಗ್ಯ

Sagara ಹಣ ಬಿಡುಗಡೆ ಮಾಡಿಸದೆ ಅವಧಿ ಪೂರೈಸಿದ ಹಾಲಪ್ಪ; ಬೇಳೂರು ವ್ಯಂಗ್ಯ

Hosanagar; ವಿಪರೀತ ಮಳೆ: ಸಂಕ ದಾಟುವ ವೇಳೆ ಕೊಚ್ಚಿ ಹೋದ ಮಹಿಳೆ ಸಾವು

Hosanagar; ವಿಪರೀತ ಮಳೆ: ಸಂಕ ದಾಟುವ ವೇಳೆ ಕೊಚ್ಚಿ ಹೋದ ಮಹಿಳೆ ಸಾವು

1-dsdsadsa

Victory parade; ಮುಂಬೈ ನಲ್ಲಿ T20 ಚಾಂಪಿಯನ್ನರಿಗೆ ಸಂಭ್ರಮೋಲ್ಲಾಸದ ಸ್ವಾಗತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dengue-nagendra

Hunasuru: ಡೆಂಗ್ಯೂಗೆ ಆರೋಗ್ಯಾಧಿಕಾರಿಯೇ ಮೃತ್ಯು!

Hunsur ಮೊಬೈಲ್‌ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್‌

Hunsur ಮೊಬೈಲ್‌ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್‌

Grama Panchayat ಮಟ್ಟದಲ್ಲಿ ಟಾಸ್ಕ್ ಪೋರ್ಸ್‌: ಕೃಷ್ಣ ಬೈರೇಗೌಡ

Grama Panchayat ಮಟ್ಟದಲ್ಲಿ ಟಾಸ್ಕ್ ಪೋರ್ಸ್‌: ಕೃಷ್ಣ ಬೈರೇಗೌಡ

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

Chirathe

Hunasuru: ಹಬ್ಬನಕುಪ್ಪೆಯಲ್ಲಿ ಬೋನಿಗೆ ಬಿದ್ದ ಚಿರತೆ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

1-wewqewqe

Rajasthan; ಮೋದಿಗೆ ಕೊಟ್ಟ ಭರವಸೆ ಈಡೇರದ್ದಕ್ಕೆ ಪ್ರಭಾವಿ ಸಚಿವ ರಾಜೀನಾಮೆ

1-sa-dsadsa

Mangaluru; ಮಣ್ಣುಕುಸಿತದಿಂದ ಸಾವನ್ನಪ್ಪಿದ ಕಾರ್ಮಿಕನ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ

Kollur: ಸೊಸೈಟಿ ಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Kollur: ಸೊಸೈಟಿ ಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Dengue-nagendra

Hunasuru: ಡೆಂಗ್ಯೂಗೆ ಆರೋಗ್ಯಾಧಿಕಾರಿಯೇ ಮೃತ್ಯು!

1983ರ ಕಥೆ! ಅಂದು ಅವಮಾನದಿಂದ ಬಿಸಿಸಿಐಯನ್ನು ಕಾಪಾಡಿದ್ದು ಲತಾ ಮಂಗೇಶ್ಕರ್

1983ರ ಕಥೆ! ಅಂದು ಅವಮಾನದಿಂದ ಬಿಸಿಸಿಐಯನ್ನು ಕಾಪಾಡಿದ್ದು ಲತಾ ಮಂಗೇಶ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.