ಸಾಲಮನ್ನಾ ಹೇಗೆ ಮಾಡಲ್ವೋ ನೋಡ್ತೇನೆ


Team Udayavani, Apr 7, 2017, 12:27 PM IST

mys2.jpg

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರ ಸಾಲಮನ್ನಾ ಮಾಡುವುದಿಲ್ಲ ಎನ್ನುತ್ತಿದ್ದಾರೆ. ಅದೇಗೆ ಮಾಡುವುದಿಲ್ಲವೋ ನೋಡಿಯೇ ಬಿಡುತ್ತೇನೆ. ಉಪ ಚುನಾವಣೆ ನಂತರ ಹೋರಾಟ ನಡೆಸಿ ಇದೇ ಸರ್ಕಾರದಿಂದ ಸಾಲಮನ್ನಾ ಮಾಡಿಸುತ್ತೇನೆ. ಇದು ತನ್ನ ಸವಾಲು ಎಂದು ಬಿಜೆಪಿ ರಾಜಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪಗುಡುಗಿದರು.

ನಂಜನಗೂಡಿನ ಬಿಜೆಪಿ ಚುನಾವಣಾ ಪ್ರಚಾರ ಕಾರ್ಯಾಲಯದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ಅವಧಿಯಲ್ಲಿ ರಾಜ್ಯ ದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ರೈತರ ಸಾಲ ಮನ್ನಾ ಮಾಡುವುದು ಬೇರೆ ವಿಷಯ. ಆದರೆ, ಸಿದ್ದರಾಮಯ್ಯ ಸರ್ಕಾರ ಅದೇಗೆ ರೈತರ ಸಾಲಮನ್ನಾ ಮಾಡುವು ದಿಲ್ಲ ಎಂದು ನೋಡುತ್ತೇನೆ. ಉಪ ಚುನಾ ವಣೆಯ ನಂತರ ಹೋರಾಟ ನಡೆಸಿ ಇದೇ ಸರ್ಕಾರದಿಂದ ಸಾಲ ಮನ್ನಾ ಮಾಡಿಸು ತ್ತೇವೆ ಎಂದು ಸವಾಲು ಹಾಕಿದರು.

ನಂಜನಗೂಡು ಮತ್ತು ಗುಂಡ್ಲುಪೇಟೆ ಕ್ಷೇತ್ರಗಳಲ್ಲಿ ಹೇರಳವಾಗಿ ಹಣ ಸುರಿಯು ತ್ತಿದ್ದೀರಲ್ಲ ಸಿದ್ದರಾಮಯ್ಯನವರೆ, ಯಾರಪ್ಪನ ದುಡ್ಡು ಎಂದು ಜನರ ಹಣ ವನ್ನು ಹೀಗೆ ಖರ್ಚು ಮಾಡುತ್ತಿದ್ದೀರಿ? ನಿಮ್ಮ ತುಘಲಕ್‌ ದರ್ಬಾರು, ಸೊಕ್ಕಿನ ನಡೆ, ದುರಹಂಕಾರಕ್ಕೆ ಜನ ತಕ್ಕ ಉತ್ತರ ನೀಡಲಿದ್ದಾರೆ ಎಂದರು.

ಬಿಜೆಪಿ ತತ್ವ, ನೀತಿ, ಸಿದ್ಧಾಂತಗಳಿಗೆ ಅನುಗುಣವಾಗಿ ಚುನಾವಣೆ ಎದುರಿಸು ತ್ತಿದೆ ಹೊರತು ಹಣಬಲದಿಂದ ಎಂದೂ ಚುನಾವಣೆ ಮಾಡಿಲ್ಲ. ಕಾಂಗ್ರೆಸ್‌ನವರು ಜನರ ಹಣವನ್ನು ಕೊಳ್ಳೆ ಹೊಡೆದು ತಂದು ಜನರಿಗೇ ಹಂಚಿ ಮತ ಗಳಿಸಲು ಯತ್ನಿಸುತ್ತಿದ್ದಾರೆ. ಅಧಿಕಾರದ ಬಲದಿಂದ ಪೊಲೀಸರನ್ನು ದುರುಪ ಯೋಗಪಡಿಸಿ ಕೊಂಡು, ಎಲ್ಲಾ ಬಗೆಯ ವಾಮ ಮಾರ್ಗ ಗಳನ್ನು ಬಳಸಿಕೊಂಡು ಗೆಲ್ಲಲು ಯತ್ನಿಸು ತ್ತಿದ್ದಾರೆ. ಆದರೆ, ಈ ಬಾರಿ ಮತದಾರರು ಅವರ ತಂತ್ರಗಳಿಗೆ ಶರಣಾ ಗುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾವು ಮತದಾರರಿಗೆ ಸುಳ್ಳು ಭರವಸೆಗಳನ್ನು ನೀಡಿ ವಂಚಿಸುತ್ತಿಲ್ಲ. ವಾಸ್ತವಾಂಶ ಗಳನ್ನು ಜನರ ಎದುರಿಗಿಟ್ಟು ಮತ ಕೇಳುತ್ತಿದ್ದೇವೆ. ನಂಜುಂಡೇಶ್ವರ ಮತ್ತು ಚಾಮುಂಡೇಶ್ವರಿ ನಾಡಿನಲ್ಲಿ ಬದಲಾ ವಣೆಗಳನ್ನು ತರುವ ರೀತಿಯಲ್ಲಿ ಈ ಉಪ ಚುನಾವಣೆಗಳ ಫ‌ಲಿತಾಂಶ ಹೊರಬೀಳಲಿ ಎಂದು ಬೇಡಿಕೊಂಡಿದ್ದೇವೆ. ಅದು ಫ‌ಲ ನೀಡಲಿದೆ ಎಂದರು.

ಣ ಹಂಚೋರನ್ನು ಹಿಡಿಯಿರಿ: ಹಣಹಂಚುವ ಕಾಂಗ್ರೆಸ್‌ನವರನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿ ಎಂದು ಕಾರ್ಯ ಕರ್ತರಿಗೆ ಕರೆ ನೀಡಿದ ಅವರು, ಶ್ರೀನಿವಾಸ ಪ್ರಸಾದ್‌ ಅವರ ಸ್ವಾಭಿಮಾನ ವನ್ನು  ಬೆಂಬಲಿಸಿ ಬಿಜೆಪಿ ಗೆಲ್ಲಿಸಿ ಎಂದರು. ಸಚಿವರು ಬಂದಿರು ವುದು ಪ್ರಚಾರಕ್ಕಲ್ಲ, ಹಣ ಹಂಚಲು ಠಿಕಾಣಿ ಹೂಡಿದ್ದಾರೆ. ನಿಮ್ಮ ದುರಹಂಕಾರದ ಆಡಳಿತ ಮದ್ದರೆಯಲು ಎರಡೂ ಕ್ಷೇತ್ರದ ಮತದಾರರು ಸಿದ್ಧರಾಗಿದ್ದಾರೆ.

ರಾಜ್ಯದ ಖಜಾನೆಯನ್ನ ಲೂಟಿ ಮಾಡಿದ ಹಣ ಇಲ್ಲಿ ಹರಿಯುತ್ತಿದೆ. ನಂಜನಗೂಡಿನಲ್ಲಿ ಕಾಂಗ್ರೆಸ್‌ ದಯಾನೀಯ ಸೋಲು ಖಚಿತ ಎಂದರು. ಸಂಸದೆ ಶೋಭಾ ಕರಂದ್ಲಾಜೆ, ಮಾಜಿ ಸಚಿವರಾದ ಮುರುಗೇಶ್‌ ನಿರಾಣಿ, ಸಿ.ಎಂ.ಉದಾಸಿ, ವಿಧಾನ ಪರಿಷತ್‌ ಸದಸ್ಯ ಡಿ.ಎಸ್‌.ವೀರಯ್ಯ, ಮಾಜಿ ಸದಸ್ಯ ಸಿ.ರಮೇಶ್‌ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-saddasd

Heavy Rain ಅಬ್ಬರ; ಜು.9 ರಂದು ದಕ್ಷಿಣ ಕನ್ನಡ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ

Devara-Mane

Banakal: ದೇವರಮನೆಯಲ್ಲಿ ಮೋಜು-ಮಸ್ತಿಗೆ ಕಡಿವಾಣ

1-BC

Shivamogga:ಅಳಿಯನ ಸಾವಿನ ಕುರಿತು ಪ್ರತಿಕ್ರಿಯಿಸಿದ ಬಿ.ಸಿ.ಪಾಟೀಲ್

Panaji ಭಾರೀ ಮಳೆ; ಗೋಡೆ ಕುಸಿದು ಮೂವರು ಕಾರ್ಮಿಕರ ಸಾವು

Panaji ಭಾರೀ ಮಳೆ; ಗೋಡೆ ಕುಸಿದು ಮೂವರು ಕಾರ್ಮಿಕರ ಸಾವು

1-dsadsad

Corruption ತಡೆಯುವಲ್ಲಿ ಬಿಜೆಪಿ, ಕಾಂಗ್ರೆಸ್ ಸರ್ಕಾರಗಳು ವಿಫಲ: ಚಾಮರಸ ಮಾಲಿ ಪಾಟೀಲ್

Militants opened fire on an army vehicle at Kathua

Kathua; ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ ಉಗ್ರರು

1-qewqewqe

Udupi; ನೆರೆ ನೀರಲ್ಲಿ ಕೊಚ್ಚಿಹೋದ ಕಾರು: ಮೂವರು ಪ್ರಾಣಾಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HC-Mahadevappa

CM Siddaramaiah ಪತ್ನಿಗೆ ಕಾನೂನು ಬದ್ಧವಾಗಿ ಸೈಟ್‌: ಸಚಿವ ಡಾ.ಎಚ್‌.ಸಿ. ಮಹದೇವಪ್ಪ

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

23

“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್‌. ಶ್ರೀವತ್ಸ

Hunasuru

Dengue: ಹುಣಸೂರು ಆಸ್ಪತ್ರೆಯಲ್ಲಿ 10 ಹಾಸಿಗೆಯ ಪ್ರತ್ಯೇಕ ವಾರ್ಡ್ ಮೀಸಲು

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

1-saddasd

Heavy Rain ಅಬ್ಬರ; ಜು.9 ರಂದು ದಕ್ಷಿಣ ಕನ್ನಡ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ

1-weewq

Hindus ಹೇಳಿಕೆ ;ರಾಹುಲ್ ಹೇಳಿಕೆಗೆ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಬೆಂಬಲ

1-wewewq

Ullal: ಕಾರಿನ ಮೇಲೆ ಉರುಳಿ ಬಿದ್ದ ಬೃಹತ್ ಮರ

Devara-Mane

Banakal: ದೇವರಮನೆಯಲ್ಲಿ ಮೋಜು-ಮಸ್ತಿಗೆ ಕಡಿವಾಣ

1-BC

Shivamogga:ಅಳಿಯನ ಸಾವಿನ ಕುರಿತು ಪ್ರತಿಕ್ರಿಯಿಸಿದ ಬಿ.ಸಿ.ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.