ಆಂತರಿಕ ಒಪ್ಪಂದ ಮಾಡಿಕೊಂಡು ಅಧಿಕಾರ ಹಿಡಿಯಿರಿ: ಮಾಜಿ ಶಾಸಕ ಮಂಜುನಾಥ್

ಚಾಮುಂಡೇಶ್ವರಿ, ಹುಣಸೂರು, ಪಿರಿಯಾಪಟ್ಟಣದಲ್ಲಿ ಪ್ರತಾಪಸಿಂಹ ಯಾರಿಗೆ ಮತ ಹಾಕಿಸಿದ್ದಾರೆ?

Team Udayavani, Jun 18, 2023, 10:21 PM IST

1-saasdsad

 

ಹುಣಸೂರು:ಶೀಘ್ರದಲ್ಲೇ ಗ್ರಾಮ ಪಂಚಾಯ್ತಿ ವರಿಷ್ಠರ ಚುನಾವಣೆ ಬರಲಿದ್ದು, ಯಾರೂ ಕೂಡ ಅನಾಗತ್ಯವಾಗಿ ಹಣ ಖರ್ಚುಮಾಡಿಕೊಳ್ಳದಂತೆ ಮಾಜಿ ಶಾಸಕ ಎಚ್.ಪಿ.ಮಂಜುನಾಥ್ ಕಿವಿಮಾತು ಹೇಳಿದರು.

ನಗರದ ಸಾಯಿಬಾಬಾ ಮಂದಿರದ ಅವರಣದಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಗ್ರಾ.ಪಂ.ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಮೀಸಲಾತಿ ನಿಗದಿಯಾಗಲಿದ್ದು, ಈಗಾಗಲೇ ಕೆಲವರು ಲಾಭಿಯಲ್ಲಿ ತೊಡಗಿರುವ ಬಗ್ಗೆ ಮಾಹಿತಿ ಬಂದಿದ್ದು, ಕಳೆದ ನಾಲ್ಕೈದು ಬಾರಿಯ ಮೀಸಲಾತಿಯನ್ನು ಪರಿಗಣಿಸಿ ಮುಂದಿನ ಅವಧಿಗೆ ಮೀಸಲಾತಿ ಪರಿಷ್ಕರಣೆಯಾಗಲಿದೆ. ಆದ್ದರಿಂದ ಆಮಿಷಕ್ಕೆ ಬಲಿಯಾಗಿ ಹಣ ಕಳೆದುಕೊಂಡು ಮುಂದೆ ಪರಿತಪಿಸುವ ಬದಲು ಒಡಂಬಡಿಕೆಯಿಂದ ವರಿಷ್ಠರನ್ನು ಆಯ್ಕೆಮಾಡಿಕೊಳ್ಳುವುದು ಒಳಿತೆಂದರು.

ತಾವೂ ಹಲವು ಮುಖಂಡರನ್ನು ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತಿ ಚುನಾವಣೆಗಳಲ್ಲಿ ಹಣ ಖರ್ಚು ಮಾಡಿ ಗೆಲ್ಲಿಸುವ ಮೂಲಕ ಅಧಿಕಾರ ಹಿಡಿಯಲಾಗದವರಿಗೂ ಅವಕಾಶ ಕಲ್ಪಿಸಿದ್ದೆ. ಆದರೆ ಹಣದ ಆಸೆಗೆ ಬಿದ್ದು ನನಗೆ ಹಾಗೂ ಪಕ್ಷಕ್ಕೂ ದ್ರೋಹ ಮಾಡಿದರು. ಚುನಾವಣೆ ವೇಳೆ ಮಾರಾಟವಾಗಿದ್ದವರೂ ಸಹ ನನ್ನ ಹುಟ್ಟುಹಬ್ಬಕ್ಕೆ ಶುಭಕೋರಲು ಮಧ್ಯರಾತ್ರಿಯಿಂದಲೇ ಪೋನಾಯಿಸುತ್ತಿದ್ದಾರೆಂದು ಮಾಜಿ ಶಾಸಕ ಎಚ್.ಪಿ. ಮಂಜುನಾಥ್ ಬೇಸರ ವ್ಯಕ್ತಪಡಿಸಿದರು.

ನನ್ನ ಅಧಿಕಾರ ಅವಧಿಯಲ್ಲಿ ದೇವಸ್ಥಾನಕ್ಕೆ ಹಣ ಕೊಟ್ಟಿರುವುದು, ರಸ್ತೆ ಮಾಡಿಸುವುದು ಹಾಗೂ ಸಾಗುವಳಿಗೆ ಹಕ್ಕುಪತ್ರ ಕೊಡಿಸಿರುವುದಕ್ಕೆ ಕೆಲವರು ಅವರ ಅಪ್ಪನ ಮನೆಯಿಂದ ಕೊಡುತ್ತಾನಾ ಎಂದು ಟೀಕಿಸುತ್ತಿದ್ದರು. ಯಾವ ರಾಜಕಾರಣಿಯು ಅವರ ಮನೆಯಿಂದ ಕೊಡುವುದಿಲ್ಲ, ಆದರೆ ಜನ ನೀಡಿದ ಅಧಿಕಾರದಿಂದ ಅದನ್ನು ಪುಣ್ಯದ ಕೆಲಸ ಎಂದು ಮಾಡಿದ್ದೇನಷ್ಟೆ. ಕಳೆದ ೧೫ವರ್ಷದಿಂದ ಕಷ್ಟದಲ್ಲಿದ್ದವರಿಗೆ ನನ್ನ ಮನೆಯ ಹಣವನ್ನು ನೀಡಿದ್ದೇನೆಂದರು.

ನನ್ನ56ನೇ ಹುಟ್ಟುಹಬ್ಬದ ಅಂಗವಾಗಿ ಸ್ವತಃ ರಕ್ತದಾನ ಮಾಡುವ ಮೂಲಕ ನನ್ನ ತಂದೆ-ತಾಯಿಯ ಮಗನಾಗಿ ನನ್ನ ರಕ್ತವನ್ನು ದಾನ ಮಾಡಿ ನನ್ನ ವಿರುದ್ದ ಮಾತಾಡುವವರ ಋಣ ತೀರಿಸಿದ್ದೇನೆ.

ನಾನು ಕಳೆದ ೧೫ವರ್ಷದಿಂದ ಸಾರ್ವಜನಿಕರು. ಬಡವರಿಗಾಗಿ ನನ್ನ ಹುಟ್ಟು ಹಬ್ಬದಂದು ಆರೋಗ್ಯ ಶಿಬಿರವನ್ನು ನಡೆಸಿಕೊಂಡು ಬರುತ್ತಿದ್ದೇನೆ. ಇದು ಆನೇಕ ಬಡ ರೋಗಿಗಳಿಗೆ ಉಪಯೋಗವಾಗುವ ಕಾರ್ಯಕ್ರಮವಾಗಿದ್ದು. ಸಾಕಷ್ಟು ಬಡವರು ಇದರ ಪ್ರಯೋಜನವನ್ನು ಪಡೆದುಕೊಳ್ಳುತ್ತಿದ್ದಾರೆ. ನಾನು ಈ ತಾಲೂಕಿನ ಮಗ, ನನ್ನ ಕೊನೆ ಉಸಿರಿರುವರೆಗೂ ಈ ತಾಲೂಕಿನ ಅಭಿವೃದ್ದಿಗೆ ಹಾಗೂ ಬಡವರ ಕಷ್ಟಗಳಿಗೆ ಶ್ರಮಿಸುತ್ತೇನೆ ಎಂದರು.

ಪ್ರತಾಪ್‌ಸಿಂಹ ಎಳಸು, ಮಂಜುನಾಥ್ ಟಾಂಗ್
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಂಸದ ಪ್ರತಾಪ್‌ಸಿಂಹರವರನ್ನು ಎಳಸು ಎಂದು ಹೇಳಿರುವುದನ್ನು ಸಮರ್ಥಿಸಿಕೊಂಡರು. ಸಿದ್ದರಾಮಯ್ಯ, ಬೊಮ್ಮಾಯಿ, ಡಿ.ಕೆ.ಶಿವಕುಮಾರ್, ಯಡಿಯೂರಪ್ಪ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶಾಮಿಲಾಗಿದ್ದಾರೆ ಎಂದಿರುವುದು ಎಳಸುತನದ ಹೇಳಿಕೆ ಎಂದ ಮಂಜುನಾಥ್ ರವರು ಚಾಮುಂಡೇಶ್ವರಿ, ಹುಣಸೂರು, ಪಿರಿಯಾಪಟ್ಟಣದಲ್ಲಿ ಪ್ರತಾಪಸಿಂಹ ಯಾರಿಗೆ ಮತ ಹಾಕಿಸಿದ್ದಾರೆ ಎಂಬುದು ಅವರ ಪಕ್ಷದ ಮುಖಂಡರಿಗೂ, ಕ್ಷೇತ್ರದ ಜನರಿಗೂ ಗೊತ್ತಿದೆ. ಹುಣಸೂರಿನಲ್ಲಿ ಬಿಜೆಪಿಗೆ ಕೇವಲ 6ಸಾವಿರ ಮತ ಅಷ್ಟೇನಾ ಎಂದು ಪ್ರಶ್ನಿಸಿ ಪ್ರತಾಪ್‌ಸಿಂಹರವರ ಪಕ್ಷ ನಿಷ್ಠೆ ಇದೇನಾ ಎಂದು ಪ್ರಶ್ನಿಸಿದರು.

ಈ ಸಂದರ್ಭದಲ್ಲಿ ತಾಲೂಕು ಕಾಂಗ್ರೆಸ್ ಕಾರ್ಯಾಧ್ಯಕ್ಷ ಪುಟ್ಟರಾಜು, ಮುಳ್ಳೂರು ಗ್ರಾ.ಪಂ.ಅಧ್ಯಕ್ಷೆ ಜಯಲಕ್ಷ್ಮೀ ಮತ್ತಿತರರಿದ್ದರು.

ಟಾಪ್ ನ್ಯೂಸ್

anjura-roll

Recipe: ಈ ಬಾರಿಯ ಹಬ್ಬಕ್ಕೆ ಸಕ್ಕರೆ-ಬೆಲ್ಲ ಬಳಸದೇ ಈ ಸಿಹಿ ಖಾದ್ಯ ತಯಾರಿಸಿ

Bulldozer Action:ಬುಲ್ಡೋಜರ್‌ ಕಾರ್ಯಾಚರಣೆ-ಅಸ್ಸಾಂ ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ನೋಟಿಸ್

Bulldozer Action:ಬುಲ್ಡೋಜರ್‌ ಕಾರ್ಯಾಚರಣೆ-ಅಸ್ಸಾಂ ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ನೋಟಿಸ್

Mudhol: ಪ್ರತಿಯೊಂದರಲ್ಲೂ ರಾಜಕೀಯ ಸರಿಯಲ್ಲ: ಸಚಿವ ಆರ್.ಬಿ. ತಿಮ್ಮಾಪುರ

Mudhol: ಪ್ರತಿಯೊಂದರಲ್ಲೂ ರಾಜಕೀಯ ಸರಿಯಲ್ಲ: ಸಚಿವ ಆರ್.ಬಿ. ತಿಮ್ಮಾಪುರ

INDvsBAN: ಟೆಸ್ಟ್‌ ನಲ್ಲಿ ಟಿ20ಯಂತೆ ಬ್ಯಾಟ್‌ ಬೀಸಿದ ಭಾರತ; ರೋಚಕತೆಯತ್ತ ಪಂದ್ಯ

INDvsBAN: ಟೆಸ್ಟ್‌ ನಲ್ಲಿ ಟಿ20ಯಂತೆ ಬ್ಯಾಟ್‌ ಬೀಸಿದ ಭಾರತ; ರೋಚಕತೆಯತ್ತ ಪಂದ್ಯ

Bangaluru: ಜಿಗಣಿಯಲ್ಲಿ ನೆಲೆಸಿದ್ದ ಪಾಕ್‌ ಕುಟುಂಬ ಸದಸ್ಯರ ಬಂಧನ, ಮಕ್ಕಳೊಂದಿಗೆ ವಾಸ!

Bangaluru: ಜಿಗಣಿಯಲ್ಲಿ ನೆಲೆಸಿದ್ದ ಪಾಕ್‌ ಕುಟುಂಬ ಸದಸ್ಯರ ಬಂಧನ, ಮಕ್ಕಳೊಂದಿಗೆ ವಾಸ!

Dandeli : ಸರಣಿ ಕಳ್ಳತನ ಪ್ರಕರಣ… ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ

Dandeli : ಸರಣಿ ಕಳ್ಳತನ ಪ್ರಕರಣ… ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ

Tusshar Kapoor: ʼಗೋಲ್‌ ಮಾಲ್‌ʼ ನಟ ತುಷಾರ್‌ ಕಪೂರ್‌ ಫೇಸ್‌ಬುಕ್‌ ಖಾತೆ ಹ್ಯಾಕ್

Tusshar Kapoor: ʼಗೋಲ್‌ ಮಾಲ್‌ʼ ನಟ ತುಷಾರ್‌ ಕಪೂರ್‌ ಫೇಸ್‌ಬುಕ್‌ ಖಾತೆ ಹ್ಯಾಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag: ನೀರಿನಲ್ಲಿ ಕೊಚ್ಚಿಹೋದ ಯುವಕರು; ಓರ್ವನ ಶವ ಪತ್ತೆ, ಮತ್ತೋರ್ವನಿಗೆ ಶೋಧ

Gadag: ನೀರಿನಲ್ಲಿ ಕೊಚ್ಚಿಹೋದ ಯುವಕರು; ಓರ್ವನ ಶವ ಪತ್ತೆ, ಮತ್ತೋರ್ವನಿಗೆ ಶೋಧ

Mahisha

Mysuru: ಮಹಿಷಾ ಪ್ರತಿಮೆ ಪುಷ್ಪಾರ್ಚನೆಗೆ ಪೊಲೀಸರ ತಡೆ: ಆಕ್ರೋಶ

CM-Ashokapuram

Mysuru: ನಾನು ಹೆದರುವ, ಜಗ್ಗುವ, ಬಗ್ಗುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

1-bahga

K.S.Bhagawan ವಿವಾದ;ಮಾನ ಮರ್ಯಾದೆ ಇದ್ದರೆ ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಬೇಕು…

Yadhu

Udupi: ಚಾಮುಂಡಿ ಬೆಟ್ಟದ ಮೇಲೆ ಮಹಿಷ ದಸರಾ ಸರಿಯಲ್ಲ: ಸಂಸದ ಯದುವೀರ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

anjura-roll

Recipe: ಈ ಬಾರಿಯ ಹಬ್ಬಕ್ಕೆ ಸಕ್ಕರೆ-ಬೆಲ್ಲ ಬಳಸದೇ ಈ ಸಿಹಿ ಖಾದ್ಯ ತಯಾರಿಸಿ

Python Rescue: ಬೃಹತ್ ಗಾತ್ರದ ಹೆಬ್ಬಾವು ಸೆರೆ

Python Rescue: ಬೃಹತ್ ಗಾತ್ರದ ಹೆಬ್ಬಾವು ಸೆರೆ

Bulldozer Action:ಬುಲ್ಡೋಜರ್‌ ಕಾರ್ಯಾಚರಣೆ-ಅಸ್ಸಾಂ ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ನೋಟಿಸ್

Bulldozer Action:ಬುಲ್ಡೋಜರ್‌ ಕಾರ್ಯಾಚರಣೆ-ಅಸ್ಸಾಂ ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ನೋಟಿಸ್

janaka kannada movie

Sandalwood: ತಂದೆ-ಮಗನ ಕಥಾಹಂದರ ʼಜನಕʼ

Mudhol: ಪ್ರತಿಯೊಂದರಲ್ಲೂ ರಾಜಕೀಯ ಸರಿಯಲ್ಲ: ಸಚಿವ ಆರ್.ಬಿ. ತಿಮ್ಮಾಪುರ

Mudhol: ಪ್ರತಿಯೊಂದರಲ್ಲೂ ರಾಜಕೀಯ ಸರಿಯಲ್ಲ: ಸಚಿವ ಆರ್.ಬಿ. ತಿಮ್ಮಾಪುರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.