ಮಂಟೇಸ್ವಾಮಿ ಕ್ಷೇತ್ರಗಳ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್
Team Udayavani, Sep 16, 2017, 1:15 PM IST
ಮೈಸೂರು: ಮೈಸೂರು, ಚಾಮರಾಜ ನಗರ ಹಾಗೂ ಮಂಡ್ಯ ಜಿಲ್ಲೆಗಳಲ್ಲಿರುವ ಮಂಟೇಸ್ವಾಮಿ ಪರಂಪರೆ ಕ್ಷೇತ್ರಗಳಿಗೆ ಬರುವ ಭಕ್ತಾದಿಗಳಿಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಲು ಮಾಸ್ಟರ್ ಪ್ಲಾನ್ ರೂಪಿಸಿ ಮುಖ್ಯಮಂತ್ರಿಯವರು ನೀಡಿರುವ 3 ಕೋಟಿ ರೂ.ಅನುದಾನ ಬಳಸಿಕೊಂಡು ಅಗತ್ಯ ಸೌಕರ್ಯ ಒದಗಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ.ಬಸವರಾಜು ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಮಂಟೇಸ್ವಾಮಿ ಪರಂಪರೆ ಕ್ಷೇತ್ರಗಳ ಅಭಿವೃದ್ಧಿ ಸಂಬಂಧ ಸಭೆ ನಡೆಸಿದರು. ಮುಖ್ಯಮಂತ್ರಿಯವರು 2017-18ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದ್ದಂತೆ ಈ ಕ್ಷೇತ್ರಗಳ ಅಭಿವೃದ್ಧಿಗಾಗಿ 3ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದಾರೆ.
ಈ ಪೈಕಿ ಮೈಸೂರು ವಿವಿಯಲ್ಲಿ ಮಂಟೇಸ್ವಾಮಿ ಪರಂಪರೆ ಅಧ್ಯಯನ ಪೀಠ ಸ್ಥಾಪಿಸಲು 1 ಕೋಟಿ ರೂ. ನೀಡಲಾಗಿದ್ದು, ಇನ್ನುಳಿದ 2 ಕೋಟಿಯಲ್ಲಿ ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲೂಕಿನ ಕಪ್ಪಡಿ ಕ್ಷೇತ್ರದ ಅಭಿವೃದ್ಧಿಗೆ 70 ಲಕ್ಷ ರೂ., ಚಾಮರಾಜ ನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರು ಕ್ಷೇತ್ರಕ್ಕೆ 65 ಲಕ್ಷ ರೂ. ಹಾಗೂ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬೊಪ್ಪಗೌಡನ ಪುರ ಕ್ಷೇತ್ರದ ಅಭಿವೃದ್ಧಿಗೆ 65 ಲಕ್ಷ ರೂ. ಹಂಚಿಕೆ ಮಾಡಲಾಗಿದೆ ಎಂದು ಹೇಳಿದರು.
ಈ ಕ್ಷೇತ್ರಗಳಲ್ಲಿ ಜನವರಿಯಿಂದ ಮಾರ್ಚ್ ಅಂತ್ಯದವರೆಗೆ ಜಾತ್ರೆಗಳು ನಡೆಯಲಿದ್ದು, ನಾಡಿನ ಮೂಲೆ ಮೂಲೆಗಳಿಂದ ಲಕ್ಷಾಂತರ ಭಕ್ತಾದಿಗಳು ಆಗಮಿಸುತ್ತಾರೆ. ಹೀಗಾಗಿ ಕುಡಿಯುವ ನೀರು, ಶೌಚಾಲಯ, ಸ್ನಾನಘಟ್ಟ ನಿರ್ಮಾಣ, ವಸತಿ ವ್ಯವಸ್ಥೆ, ಉರುಳುಸೇವೆಗೆ ಪ್ರತ್ಯೇಕ ಪಥ ನಿರ್ಮಾಣ, ವ್ಯವಸ್ಥಿತ ಅಂಗಡಿ-ಮುಂಗಟ್ಟುಗಳು ಹಾಗೂ ಸಸಿಗಳನ್ನು ಬೆಳೆಸಲು ಆದ್ಯತೆ ನೀಡುವಂತೆ ತಿಳಿಸಿದರು.
ಕ್ಷೇತ್ರಗಳ ಸೌಂದರ್ಯ ಹಾಳಾಗದಂತೆ ಮಾಸ್ಟರ್ಪ್ಲಾನ್ ರೂಪಿಸುವಾಗ ಶ್ವಾಶತ ಯೋಜನೆಗಳು ಹಾಗೂ ಅಲ್ಪಾವಧಿ ಯೋಜನೆಗಳೆಂದು 2ಪಟ್ಟಿ ಮಾಡಿಕೊಂಡು ನೀರು ಒದಗಿಸುವ ಕೆಲಸಕ್ಕೆ ಆದ್ಯತೆ ನೀಡಿ, ಹಂತ ಹಂತವಾಗಿ ಅಭಿವೃದ್ಧಿಪಡಿಸಿ ಎಂದು ಸೂಚಿಸಿದರು. ಈ ಕ್ಷೇತ್ರಗಳಲ್ಲಿನ ಗದ್ದುಗೆಗಳು ಶಿಥಿಲಗೊಂಡಿದ್ದರೆ, ಅವುಗಳ ಜೀರ್ಣೋದ್ಧಾರಕ್ಕೂ ಕ್ರಮವಹಿಸಿ, ಕಪ್ಪಡಿ ಕ್ಷೇತ್ರದಲ್ಲಿ ಕಾವೇರಿ ನದಿ ಪಾತ್ರ ಮಲಿನವಾಗದಂತೆ ಎಚ್ಚರವಹಿಸಿ ಎಂದು ತಿಳಿಸಿದರು.
ಕಪ್ಪಡಿ ಮತ್ತು ಚಿಕ್ಕಲ್ಲೂರು ಕ್ಷೇತ್ರಗಳ ರಸ್ತೆ ಅಗಲೀಕರಣ ಮತ್ತು ಅಭಿವೃದ್ಧಿ ಸಂಬಂಧ ಪ್ರತ್ಯೇಕ ಪ್ರಸ್ತಾವನೆ ಕಳುಹಿಸಿ ವಿವಿಯಲ್ಲಿ ಮಂಟೇಸ್ವಾಮಿ ಅಧ್ಯಯನ ಪೀಠ ಸ್ಥಾಪನೆ ಸಂಬಂಧ ಜಿಲ್ಲಾಡಳಿತ, ವಿವಿಯೊಂದಿಗೆ ಸಮನ್ವಯ ಮಾಡುವಂತೆ ತಿಳಿಸಿದರು. ಜಿಲ್ಲಾಧಿಕಾರಿ ರಂದೀಪ್ ಡಿ., ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಮಲ್ಲಿಕಾರ್ಜುನ ಸ್ವಾಮಿ, ಸಹಾಯಕ ನಿರ್ದೇಶಕ ಎಚ್.ಚೆನ್ನಪ್ಪ, ಪ್ರಭುರಾಜೇ ಅರಸು ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ
Mysuru Dasara: ಖಾಸಗಿ ದರ್ಬಾರ್ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ
MUDA Case: ನ್ಯಾಯ ನನ್ನ ಪರವಿದೆ, ರಾಜಕೀಯ ಪ್ರೇರಿತ ಕೇಸ್ ಎದುರಿಸಿ ಗೆಲ್ಲುವೆ: ಸಿಎಂ
MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ಸಾಧ್ಯತೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.