![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Oct 27, 2023, 5:48 PM IST
ಮೈಸೂರು: ಪ್ರತಿ ಜಿಲ್ಲೆಗೊಂದರಂತೆ ಸರ್ಕಾರಿ ಮೆಡಿಕಲ್ ಕಾಲೇಜು ಆರಂಭಿಸಲಾಗುವುದೆಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಹೇಳಿದರು.
ಶುಕ್ರವಾರ ಮೈಸೂರು ಮೆಡಿಕಲ್ ಕಾಲೇಜಿನಲ್ಲಿ ಕಾಲೇಜಿನ ಶತಮಾನೋತ್ಸವದ ಅಂಗವಾಗಿ ಏರ್ಪಡಿಸಿದ್ದ ವಸ್ತುಪ್ರದರ್ಶನ ಉದ್ಘಾಟನಾ ಕಾರ್ಯಕ್ರಮದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ರಾಜ್ಯದಲ್ಲಿ 23 ಮೆಡಿಕಲ್ ಕಾಲೇಜುಗಳಿದ್ದು, ಉಳಿದ ಜಿಲ್ಲೆಗಳಲ್ಲಿಯೂ ಹಣಕಾಸಿನ ಲಭ್ಯತೆ ನೋಡಿಕೊಂಡು ಹೊಸ ಮೆಡಿಕಲ್ ಕಾಲೇಜು ತೆರೆಯಲಾಗುವುದೆಂದರು.
ಶತಮಾನೋತ್ಸವ ಆಚರಿಸಿಕೊಳ್ಳುತ್ತಿರುವ ಮೈಸೂರು ಮೆಡಿಕಲ್ ಕಾಲೇಜಿನಲ್ಲಿ ಟ್ರಾಮಾ ಕೇರ್ ಸೆಂಟರ್ ಆರಂಭವಾಗಿದೆ ಹಾಗೂ ಸೂಪರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಕಾಮಗಾರಿಗಳು ಆರಂಭವಾಗಿವೆ. ಕೆ.ಆರ್ ಆಸ್ಪತ್ರೆಯ ಸಂಪೂರ್ಣ ನವೀಕರಣ ಕಾರ್ಯ ಮುಗಿಸಲು ಜನವರಿಯವರಗೆ ಗಡುವು ನೀಡಲಾಗಿದೆ. ನಂತರ ಮೂರು ತಿಂಗಳೊಳಗಾಗಿ ಸಂಪೂರ್ಣ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಹಾಗು ಅಗತ್ಯ ಉಪಕರಣಗಳನ್ನು ಒದಗಿಸಲಾಗುವುದು ಎಂದರು.
ಮೆಡಿಕಲ್ ಸೀಟುಗಳ ಹೆಚ್ಚಳದ ಬಗೆಗೆ ಪ್ರತಿಕ್ರಿಯಿಸಿದ ಸಚಿವರು ಪ್ರಸ್ತುತ ,150 ಸೀಟುಗಳು ಲಭ್ಯವಿದ್ದು, ಮುಂದಿನ ದಿನಗಳಲ್ಲಿ ಆ ಸಂಖ್ಯೆಯನ್ನು 200 ಕ್ಕೆ ಹೆಚ್ಚಳ ಮಾಡಲಾಗುವುದು ಎಂದರು.
ಕೇಂದ್ರದ ನೀತಿಯಂತೆ 10 ಲಕ್ಷ ಜನಸಂಖ್ಯೆಗೆ ನೂರು ಮೆಡಿಕಲ್ ಸೀಟುಗಳು ಇರಬೇಕಾಗುತ್ತದೆ. ನಮ್ಮಲ್ಲಿ ಅದಕ್ಕಿಂತ ಹೆಚ್ಚಿದೆ, ಈ ಹಿಂದೆ ಇಂತಹ ನಿರ್ಬಂಧ ಇರಲಿಲ್ಲ ಇದೊಂದು ರೀತಿ ದಕ್ಷಿಣದ ರಾಜ್ಯಗಳ ವಿರುದ್ದದ ಮಲತಾಯಿ ಧೋರಣೆ ಎಂದರು.
ಮೆಡಿಕಲ್ ಸೀಟುಗಳ ಸಂಖ್ಯೆಯಲ್ಲಿ ರಾಜ್ಯ ಮೊದಲ ಸ್ಥಾನದಲ್ಲಿದೆ. ಪ್ರತಿವರ್ಷ 12 ಸಾವಿರ ಸೀಟುಗಳನ್ನು ನೀಡುತಿದ್ದೇವೆ , ಹಾಗೂ ಸಾಕಷ್ಟು ಖಾಸಗಿ ಮೆಡಿಕಲ್ ಕಾಲೇಜುಗಳಿದ್ದು ಸಾಕಷ್ಟು ಸೀಟುಗಳು ಲಭ್ಯವಿವೆ ಎಂದರು.
ಶತಮಾನೋತ್ಸವ ಆಚರಿಸಿಕೊಳ್ಳುತ್ತಿರುವ ಮೈಸೂರು ಮೆಡಿಕಲ್ ಕಾಲೇಜು ಜ್ನಾಪಕಾರ್ಥಕವಾಗಿ ಮೈಸೂರಿನ ಲ್ಲಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಿಸಲು 5 ಎಕರೆ ಜಾಗ ಗುರುತಿಸಲಾಗಿದ್ದು ಪ್ರಕ್ರಿಯೆ ಆರಂಭವಾಗಿದೆ ಎಂದರು.
ಶಾಸಕ ಹರೀಶ್ ಗೌಡ, ಸಂಸ್ಥೆಯ ನಿರ್ದೇಶಕರು ಉಪಸ್ಥಿತರಿದ್ದರು
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.