16ರಿಂದ ಕಬ್ಬು ಅರೆಯುವ ಕಾರ್ಯ ಆರಂಭ: ಸಾರಾ


Team Udayavani, Sep 12, 2022, 1:32 PM IST

16ರಿಂದ ಕಬ್ಬು ಅರೆಯುವ ಕಾರ್ಯ ಆರಂಭ: ಸಾರಾ

ಭೇರ್ಯ: ಚುಂಚನಕಟ್ಟೆ ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಗುತ್ತಿಗೆಗೆ ಪಡೆದಿರುವ ನಿರಾಣಿ ಶುಗರ್ನವರು ಸೆ.16ರಿಂದ ಕಬ್ಬು ಅರೆಯುವ ಕಾರ್ಯವನ್ನು ಆರಂಭಿಲಿದ್ದಾರೆ ಎಂದು ಶಾಸಕ ಸಾ. ರಾ.ಮಹೇಶ್‌ ಹೇಳಿದರು.

ಸಾಲಿಗ್ರಾಮ ತಾಲೂಕಿನ ಚುಂಚನಕಟ್ಟೆ ಶ್ರೀರಾಮ ಸಕ್ಕರೆ ಕಾರ್ಖಾನೆಯ ಕಬ್ಬು ಅರೆಯುವ ಕಾರ್ಯಕ್ಕೆ ಪೂರ್ವ ಭಾವಿಯಾಗಿ ಬಾಯ್ಲರ್‌ಗೆ ಅಗ್ನಿ ಸ್ಪರ್ಶಿಸಿ ಮಾತನಾಡಿದರು. ಕಳೆದ 12 ವರ್ಷಗಳಿಂದ ಕಬ್ಬು ಅರೆಯುವ ಕಾರ್ಯ ಸ್ಥಗಿತಗೊಳಿಸಿದ್ದ ಕಾರ್ಖಾನೆ ಪ್ರಸಕ್ತ ತಿಂಗಳಲ್ಲಿ ಕಾರ್ಯಾರಂಭ ಮಾಡಲಿದ್ದು ಇದರಿಂದ ರೈತರಿಗೆ ಅನುಕೂಲವಾಗಲಿದೆ ಎಂದು ಸಂತಸ ವ್ಯಕ್ತಪಡಿಸಿದ ಅವರು, ಕಾರ್ಖಾನೆಯವರು ರೈತರಿಗೆ ಯಾವುದೇ ತೊಂದರೆ ನೀಡಬಾರದು ಎಂದು ಆಡಳಿತ ಮಂಡಳಿಯವರಿಗೆ ಸೂಚಿಸಿದರು. ಕಾರ್ಖಾನೆ ಪ್ರಸ್ತುತ ನಿತ್ಯ 1,250 ಟನ್‌ ಕಬ್ಬು ಅರೆಯಲಿದ್ದು ಮುಂದಿನ ದಿನಗಳಲ್ಲಿ ಕನಿಷ್ಠ 5 ಸಾವಿರ ಟನ್‌ ಕಬ್ಬು ಅರೆಯುವ ಸಾಮರ್ಥಯ ಹೊಂದಲಿದ್ದು ಇದರಿಂದ ರೈತರು ಮತ್ತು ಕಾರ್ಮಿಕರಿಗೆ ಅನುಕೂಲವಾಗಲಿದೆ ಎಂದು ಮಾಹಿತಿ ನೀಡಿದರು.

ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ತಾಲೂಕುಗಳ ಭಾಗದಲ್ಲಿ ಉತ್ತಮವಾದ ನೀರಾವರಿ ಮತ್ತು ರಸ್ತೆ ವ್ಯವಸ್ಥೆ ಇದ್ದು ರೈತರು ಕಬ್ಬು ಬೆಳೆದು ಲಾಭ ಗಳಿಸಬೇಕೆಂದು ಕಿವಿಮಾತು ಹೇಳಿದರು. ಕಾರ್ಖಾನೆ ಕಬ್ಬು ಅರೆಯುವ ಕಾರ್ಯ ಆರಂಭಿಸುವುದರಿಂದ ಈ ಭಾಗದ ಮತ್ತು ಇತರ ತಾಲೂಕುಗಳ ಸಾವಿರಾರು ಮಂದಿ ರೈತರು ಮತ್ತು ಕಾರ್ಮಿಕರಿಗೆ ಉದ್ಯೋಗ ಸಿಗಲಿದ್ದು ಇದು ಹಲವು ಜನರ ಜೀವನಕ್ಕೆ ದಾರಿಯಾಗಲಿದೆ ಎಂದರು.

ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಎಚ್ ಡಿ . ಕೆ. ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಕಾರ್ಖಾನೆಯನ್ನು ಖಾಸಗಿಯವರಿಗೆ ಗುತ್ತಿಗೆಗೆ ನೀಡಲು ಪ್ರಕ್ರಿಯೆ ಆರಂಭಿಸಿದ್ದು ಅನಂತರ ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್‌. ಯಡಿಯೂರಪ್ಪನವರು ಮತ್ತು ಪ್ರಸ್ತುತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಎಲ್ಲಾ ಸಹಕಾರ ನೀಡಿದ್ದಾರೆ ಎಂದು ಕೃತಜ್ಞತೆ ವ್ಯಕ್ತಪಡಿಸಿದರು.

ಕಾರ್ಖಾನೆ ಆರಂಭಿಸಿ ಅನಂತರ ಸ್ಥಳೀಯರಿಗೆ ಉದ್ಯೋಗದಲ್ಲಿ ಅವಕಾಶ ನೀಡುವುದರ ಜೊತೆಗೆ ಕಬ್ಬು ಬೆಳೆಗಾರರ ಹಿತ ಕಾಪಾಡಲು ಆಡಳಿತ ಮಂಡಳಿ ಮೊದಲ ಆದ್ಯತೆ ನೀಡುವದರೊಂದಿಗೆ ಕಾಲ ಕಾಲಕ್ಕೆ ನನಗೆ ಕಾರ್ಖಾನೆಯ ಅಭಿವೃದ್ಧಿ ಮತ್ತು ಸ್ಥಿತಿ ಗತಿಗಳ ಬಗ್ಗೆ ವರದಿ ನೀಡಬೇಕೆಂದು ಶಾಸಕರು ಆದೇಶಿಸಿದರು.

ಆ ನಂತರ ಶಾಸಕರು ಕಾರ್ಖಾನೆಯ ಎಲ್ಲಾ ವಿಭಾಗಗಳನ್ನು ಪರಿಶೀಲಿಸಿ ಅಧಿಕಾರಿಗಳ ಸಭೆ ನಡೆಸಿ ಸೂಕ್ತ ಸಲಹೆ ಮತ್ತು ಸೂಚನೆ ನೀಡಿದರಲ್ಲದೆ ಯಾವುದೇ ಸಮಸ್ಯೆ ಮತ್ತು ದೂರುಗಳಿದ್ದರೆ ತಕ್ಷಣ ನನಗೆ ವರದಿ ನೀಡಬೇಕೆಂದರು.

ಈ ಸಂದರ್ಭದಲ್ಲಿ ನಿರಾಣಿ ಶುಗರ್ ಮುಖ್ಯಸ್ಥ ಯರಗಟ್ಟಿ, ಪ್ರಧಾನ ವ್ಯವಸ್ಥಾಪಕ ಬೋರೇಗೌಡ, ಮುಖ್ಯ ಎಂಜಿನಿಯರ್‌ ನಾಗೈಗೌಡ, ಕಬ್ಬು ಅಭಿವೃದ್ಧಿ ಅಧಿಕಾರಿ ರವಿಚಂದ್ರನ್‌, ರಾಜ್ಯ ಜೆಡಿಎಸ್‌ ಪ್ರಧಾನ ಕಾರ್ಯದರ್ಷಿ ಚಂದ್ರಶೇಖರ್‌ ಜಿ.ಪಂ. ಮಾಜಿ ಸದಸ್ಯ ಎಂ. ಟಿ. ಕುಮಾರ್‌, ಟಿಎಪಿಸಿಎಂಎಸ್‌ ಮಾಜಿ ನಿರ್ದೇಶಕ ಎಸ್‌. ಟಿ. ಕೀರ್ತಿ ಮತ್ತು ಇತರ ರೈತ ಮುಖಂಡರು ಹಾಗೂ ಕಾರ್ಖಾನೆ ಸಿಬ್ಬಂದಿ ಹಾಜರಿದ್ದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysuru-Elephant

Mysuru Dasara: ಎರಡನೇ ತಂಡದ ಗಜಪಡೆಗೆ ತೂಕ ಪರೀಕ್ಷೆ: ಸುಗ್ರೀವ 5.2 ಟನ್‌

3-hunsur

Hunsur: ಗಣಪತಿ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯ: ಇನ್ಸ್ಪೆಕ್ಟರ್ ಮುನಿಯಪ್ಪ

CM-Siddu

Report on Corruption: ಕೋವಿಡ್‌ ಅಕ್ರಮ: ಸಂಪುಟ ಸಭೆಯಲ್ಲಿ ಚರ್ಚಿಸಿ ಕ್ರಮ: ಸಿಎಂ

Yadhuveer

Mysuru: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ಅಕ್ರಮ: ಸಂಸದ ಯದುವೀರ್‌

Chamundi-Sabhe

Mysore: ಚಾಮುಂಡೇಶ್ವರಿ ದೇಗುಲ ಸಂಪ್ರದಾಯ, ಘನತೆ ಕಾಪಾಡಿ ಉನ್ನತೀಕರಿಸಿ: ಸಿದ್ದರಾಮಯ್ಯ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.