ಫೀವರ್ ಕ್ಲಿನಿಕ್ ಮತ್ತು ಆಂಬುಲೆನ್ಸ್ ಗೆ ಎಂಎಲ್‌ಸಿ ವಿಶ್ವನಾಥ್ ಚಾಲನೆ


Team Udayavani, Jan 17, 2022, 6:17 PM IST

ಫೀವರ್ ಕ್ಲಿನಿಕ್ ಮತ್ತು ಆಂಬುಲೆನ್ಸ್ ಗೆ ಎಂಎಲ್‌ಸಿ ವಿಶ್ವನಾಥ್ ಚಾಲನೆ

ಹುಣಸೂರು: ಹುಣಸೂರು ಸಾರ್ವಜನಿಕ ಆಸ್ಪತ್ರೆಗೆ ವಿಧಾನಪರಿಷತ್ ಸದಸ್ಯರ ಕ್ಷೇತ್ರಾಭಿವೃದ್ದಿ ಅನುದಾನದಡಿ ಆವರಣದಲ್ಲಿ ನಿರ್ಮಿಸಿರುವ ಫೀವರ್‌ ಅಕ್ಲಿನಿಕ್ ಹಾಗೂ ಸುಸಜ್ಜಿತ ಆಂಬುಲೆನ್ಸ್ ಗೆ ಶಾಸಕರಾದ ಎಚ್.ವಿಶ್ವನಾಥ್ ಎಚ್.ಪಿ.ಮಂಜುನಾಥರೊಡಗೂಡಿ ಚಾಲನೆ ನೀಡಿದರು.

ನಂತರ ನಡೆದ ಸರಳ ಸಮಾರಂಭದಲ್ಲಿ ಮಾತನಾಡಿದ ಎಂ.ಎಲ್.ಸಿ.ವಿಶ್ವನಾಥರು ಕಳೆದ ಎರಡು ವರ್ಷಗಳಲ್ಲಿ ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ರೋಗಿಗಳ ಒತ್ತಡದ ನಡುವೆ ವೈದ್ಯರು ಕೆಲಸ ಮಾಡುವ ಸ್ಥಿತಿ ಇತ್ತು. ಇದಕ್ಕಾಗಿ ಪ್ರತ್ಯೇಕ ಫೀವರ್ ಕ್ಲಿನಿಕ್ ಕಟ್ಟಡ ಹಾಗೂ ಸುಸಜ್ಜಿತ ಆಂಬುಲೆನ್ಸ್ ಅತ್ಯವಶ್ಯದ ಬಗ್ಗೆ ಇಲ್ಲಿನ ವೈದ್ಯರು ಪ್ರಸ್ತಾಪಿಸಿದ್ದರು.

ಅಂದು ತಾವು ಭರವಸೆ ನೀಡಿದ್ದಂತೆ ಆಸ್ಪತ್ರೆ ಆವರಣದಲ್ಲಿ 12 ಲಕ್ಷರೂ ವೆಚ್ಚದಡಿ ಫೀವರ್ ಕ್ಲೀನಿಕ್ ಕಟ್ಟಡ ನಿರ್ಮಿಸಿ ಸೇವೆಗೆ ಸಮರ್ಪಿಸಲಾಗುತ್ತಿದೆ. ಇನ್ನು ಆಸ್ಪತ್ರೆಗೆ ಬಹಳ ಅತ್ಯವಶ್ಯವಾಗಿದ್ದ ಆಂಬುಲೆನ್ಸನ್ನು 30 ಲಕ್ಷರೂ ಅನುದಾನದಡಿ  ಆಕ್ಸಿಜನ್,ವೆಂಟಿಲೇಟರ್, ಕಾಫ್ ಇಂಡಿಕೇಟರ್,ವೀಲ್ ಚೇರ್, ಇ.ಸಿ.ಜಿ. ಸೇರಿದಂತೆ ಅತ್ಯಾಧುನಿಕ ಸೌಲಭ್ಯಗಳುಳ್ಳ ವಾಹನವನ್ನು ನೀಡಲಾಗಿದೆ. ಈ ಎರಡು ಸೌಲಭ್ಯಗಳಿಂದ ಸಮರ್ಪಕ ಆರೋಗ್ಯ ಸೇವೆ ದೊರೆಯಲಿದೆ. ಇವೆಲ್ಲವೂ ಸಮರ್ಪಕವಾಗಿ ಬಳಕೆಯಾಗಲೆಂದು ಆಶಿಸಿ, ಇಲ್ಲಿನ ವೈದ್ಯರು ಕೊರೊನಾ ವಿರುದ್ದ ಹೋರಾಟದಲ್ಲಿ ಸಮರೋಪಾದಿಯಲ್ಲಿ ಶ್ರಮಿಸುತ್ತಿದ್ದಾರೆಂದು ಶ್ಲಾಘಿಸಿದರು.

ತಮ್ಮ ಅನುದಾನದಲ್ಲಿ ಶೈಕ್ಷಣಿಕ, ಆರೋಗ್ಯ, ಸಂಸ್ಕೃತಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ಈವರೆಗೆ 1.32 ಕೋಟಿರೂ ವೆಚ್ಚದ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಅಧ್ಯಕ್ಷತೆವಹಿಸಿದ್ದ ಶಾಸಕ ಎಚ್.ಪಿ.ಮಂಜುನಾಥ್ ಮಾತನಾಡಿ ಆಸ್ಪತ್ರೆ ಮೇಲೆ ಸಾಕಷ್ಟು ಒತ್ತಡವಿತ್ತು. ಪ್ರತ್ಯೇಕ ಫೀವರ್‌ಕ್ಲಿನಿಕ್ ಹಾಗೂ ಆಂಬುಲೆನ್ಸ್ ಅತ್ಯವಶ್ಯವಾಗಿತ್ತು. ಇದನ್ನು ಮನಗಂಡ ಎಂ.ಎಲ್.ಸಿ.ವಿಶ್ವನಾಥರು ತಮ್ಮ ಅನುದಾನದಡಿ ಫೀವರ್‌ಕ್ಲಿನಿಕ್ ಕಟ್ಟಡ ಹಾಗೂ ಆಂಬುಲೆನ್ಸ್ ಸೌಲಭ್ಯ ಕಲ್ಪಿಸಿರುವುದಕ್ಕೆ ಅವರನ್ನು ಅಭಿನಂದಿಸಿ, ಎಂ.ಎಲ್.ಸಿ.ಯವರ ಕನಸಿನ ಚಿಲ್ಕುಂದ ನೀರಾವರಿ ಯೋಜನೆ ಇಂದು ನಾಳೆ ಎಂಬಂತಾಗಿದ್ದು, ಶೀಘ್ರ ಅನುಷ್ಟಾನವಾಗಲಿ ಎಂದರು.

ವೈದ್ಯರ ಸೇವೆ ಅನನ್ಯ:

ಕೊರೊನಾ ನಿಯಂತ್ರಣದಲ್ಲಿ ಇಲ್ಲಿನ ಆಸ್ಪತ್ರೆ ಹಾಗೂ ತಾಲೂಕಿನ ಎಲ್ಲ ವೈದ್ಯರು, ಆರೋಗ್ಯ,ಅಂಗನವಾಡಿ-ಆಶಾ ಕಾರ್ಯಕರ್ತರ ಬದ್ದತೆಯ ನಿರ್ವಹಣೆಯಿಂದ ಕೊರೊನಾ ನಿಯಂತ್ರಣಗೊಳಿಸಿದ್ದರು. ಅಲ್ಲದೆ ಲಸಿಕೆ ನೀಡುವಲ್ಲಿ ಮೊದಲ ಡೋಸ್ ಶೇ.೯೮ರಷ್ಟು, ಎರಡನೇ ಡೋಸ್ ಶೇ.೮೩ರಷ್ಟು ಸಾಧನೆಗೈದಿದ್ದಾರೆಂದು ಪ್ರಶಂಸಿಸಿ, ಮುಂದಿನ ಕೊರೊನಾ ನಿಯಂತ್ರಣಕ್ಕೆ ನಾವೆಲ್ಲರೂ ಸಹಕರಿಸುವ ಜೊತೆಗೆ ಜನರು ತಮ್ಮನ್ನು ತಾವು ಕಾಪಾಡಿಕೊಳ್ಳಲು ಅಗತ್ಯ ಮುನ್ನೆಚ್ಚರಿಕೆವಹಿಸುವಂತೆ ಮನವಿ ಮಾಡಿದರು.

ಶೀಘ್ರ ಆಕ್ಸಿಜನ್ ಪ್ಲಾಂಟ್ ಉದ್ಘಾಟನೆ:

ಆಸ್ಪತ್ರೆ ಆವರಣದಲ್ಲಿ ಸುಮಾರು 50 ಲಕ್ಷರೂ ವೆಚ್ಚದಲ್ಲಿ ನಿರ್ಮಿಸಿರುವ ಆಕ್ಸಿಜನ್‌ಪ್ಲಾಂಟ್ ಹಾಗೂ ಐ.ಟಿ.ಸಿ.ಕಂಪನಿ ನೆರವಿನ ಮತ್ತೊಂದು ಆಕ್ಸಿಜನ್ ಪ್ಲಾಂಟ್ ಕಾಮಗಾರಿ ಮುಗಿದಿದ್ದು, ಎರಡೂ ಪ್ಲಾಂಟ್ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಶೀಘ್ರ ಉದ್ಘಾಟಿಸಲಾಗುವುದೆಂದರು. ಇದೇ ವೇಳೆ ಹನಗೋಡು ಆಸ್ಪತ್ರೆಗೆ  ವೈಯಕ್ತಿಕವಾಗಿ ನೀಡಿರುವ ಆಂಬುಲೆನ್ಸನ್ನು ಆರೋಗ್ಯ ಇಲಾಖೆ ಸುಪರ್ದಿಗೆ ತೆಗೆದುಕೊಂಡು ನಿರ್ವಹಣೆ ಮಾಡುವಂತೆ ಡಿಎಚ್‌ಓ ಡಾ.ಕೆ.ಎಚ್.ಪ್ರಸಾದ್‌ರಿಗೆ ಸೂಚಿಸಿದರು.

ಆಸ್ಪತ್ರೆ ಆಡಳಿತಾಧಿಕಾರಿ ಡಾ.ಸರ್ವೇಶ್ ರಾಜೇಅರಸ್ ಮಾತನಾಡಿ ಕೊರೊನಾಕ್ಕೆ ಸಂಬಂಧಿಸಿದಂತೆ ಪ್ರತ್ಯೇಕವಾಗಿ ಫೀವರ್ ಕ್ಲಿನಿಕ್ ಅವಶ್ಯವಿತ್ತು. ಇಲ್ಲಿ ಮೂರು ಕೊಠಡಿಗಳಿದ್ದು. ಪ್ರತ್ಯೇಕವಾಗಿ ಪರೀಕ್ಷೆ, ಸಲಹೆ ನೀಡಲು ಸಹಕಾರಿಯಾಗಿದೆ. ಆಂಬುಲೆನ್ಸ್ ನ್ನು ಅವಶ್ಯಕತೆ ಇದ್ದುದ್ದನ್ನು ಮನವರಿಕೆ ಮಾಡಿಕೊಟ್ಟ ಮೇರೆಗೆ ಸುಸಜ್ಜಿತ ಆಂಬುಲೆನ್ಸ್ ನೀಡಿರುವುದು ಸಾಕಷ್ಟು ಅನುಕೂಲವಾಗಿದೆ ಎಂದರು.

ಟಿಎಚ್‌ಓ ಡಾ.ಕೀರ್ತಿಕುಮಾರ್ ಮಾತನಾಡಿದರು. ಸಭೆಯಲ್ಲಿ ತಹಸೀಲ್ದಾರ್ ಡಾ.ಅಶೋಕ್, ನಗರಸಭೆ ಅಧ್ಯಕ್ಷೆ ಸೌರಭಸಿದ್ದರಾಜು, ಸದಸ್ಯ ಹರೀಶ್, ಹುಡಾ ಅಧ್ಯಕ್ಷ ಗಣೇಶ್‌ಕುಮಾರಸ್ವಾಮಿ, ಬಿಜೆಪಿ ತಾಲೂಕು ಅಧ್ಯಕ್ಷ ಹಳ್ಳದಕೊಪ್ಪಲುನಾಗಣ್ಣಗೌಡ, ಟಿ.ಎ.ಪಿ.ಸಿ.ಎಂ.ಎಸ್. ಅಧ್ಯಕ್ಷ ಕೆಂಪೇಗೌಡ, ಮುಖಂಡ ಕಣಗಾಲುರಾಮೇಗೌಡ ಇದ್ದರು.

ಮಕ್ಕಳ ಔಷಧಿಗೆ 10 ಲಕ್ಷ: ಇತ್ತೀಚೆಗೆ ಕೊರೊನಾ ಮಕ್ಕಳನ್ನು ಬಾಧಿಸುತ್ತಿದ್ದು, ಮಕ್ಕಳ ಔಷಧ ಕೊರತೆ ಬಗ್ಗೆ ಮಾಹಿತಿ ನೀಡಿದ್ದು. ತಮ್ಮ ಅನುದಾನದಡಿ ಮಕ್ಕಳ ಔಷಧಕ್ಕಾಗಿ ೧೦ ಲಕ್ಷರೂ ನೀಡುವುದಾಗಿ ಎಂ.ಎಲ್.ಸಿ.ವಿಶ್ವನಾಥರು ತಿಳಿಸಿದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.