ಸಂಸ್ಕೃತಿ ಹೆಸರಲ್ಲಿ ಮೌಡ್ಯ ಪೋಷಣೆ


Team Udayavani, Oct 27, 2018, 11:34 AM IST

m1-samskruti.jpg

ಮೈಸೂರು: ಪ್ರಸ್ತುತ ಸಂದರ್ಭದಲ್ಲಿ ಸಂಸ್ಕೃತಿಯ ಹೆಸರಿನಲ್ಲಿ ಮೌಡ್ಯ ಹಾಗೂ ಜಾತಿ ವ್ಯವಸ್ಥೆಯನ್ನು ಪೋಷಿಸಲಾಗುತ್ತಿದ್ದು, ಈ ನಿಟ್ಟಿನಲ್ಲಿ ಸಂಸ್ಕೃತಿಯನ್ನು ಉದಾರವಾಗಿ ನೋಡುವುದನ್ನು ಬಿಡಬೇಕಿದೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಡಾ.ಮೊಗಳ್ಳಿ ಗಣೇಶ್‌ ಹೇಳಿದರು. 

ನಗರದ ಮೈಸೂರು ವಿವಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಜಾನಪದ ವಿಭಾಗದಿಂದ ಮಾನಸಗಂಗೋತ್ರಿಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಜಾನಪದ ಮತ್ತು ಜಾಗತೀಕರಣ: ಸಾಂಸ್ಕೃತಿಕ ಪಲ್ಲಟಗಳು’ ವಿಷಯ  ಕುರಿತು ಅವರು ಉಪನ್ಯಾಸ ನೀಡಿದರು.

ಸಂಸ್ಕೃತಿಗಳೇ ಮೂಗುದಾರ: ನಾಗರಿಕತೆ ಎಂಬುದು ಚಲನಶೀಲವಾಗಿದೆ. ಹೊಸದನ್ನು ಕಂಡುಕೊಂಡು ಜೀವನ ನಡೆಸುವಂತದ್ದಾಗಿದೆ. ಅಖಂಡತೆ ಕಂಡುಕೊಳ್ಳುವ ನಿಟ್ಟಿನಲ್ಲಿ ಬೆಳೆದು ಬಂದಿರುವ ನಾಗರಿಕತೆಯನ್ನು ನಾವು ಆಧುನಿಕತೆ ಎಂದೂ ಕರೆಯುತ್ತೇವೆ. ಈ ಹಿನ್ನೆಲೆಯಲ್ಲಿ ಆಧುನಿಕತೆ, ನಾಗರಿಕತೆ, ಚಲನಶೀಲತೆಗಳು ಒಂದೇ ಪರಿಣಾಮ ಬೀರಲಾರದು.

ಆದರೆ ಇತ್ತೀಚಿನ ದಿನಗಳಲ್ಲಿ ನಮ್ಮ ಸಂಸ್ಕೃತಿಗಳೇ ನಮ್ಮ ಮೂಗುದಾರವಾಗಿದೆ. ಸಂಸ್ಕೃತಿಯ ಹೆಸರಿನಲ್ಲಿ ಅನೇಕ ಮೂಗುದಾರಗಳನ್ನು ಆಯಾ ಜಾತಿಗಳಿಗೆ ಹಾಕಿ, ಧಾರ್ಮಿಕತೆ ಹೆಸರಲ್ಲಿ ಬಂಧಿಸಲಾಗುತ್ತಿದೆ. ಇನ್ನಾದರೂ ಸಂಸ್ಕೃತಿಯನ್ನು ಉದಾರವಾಗಿ ನೋಡುವುದನ್ನು ಬಿಡಬೇಕಿದೆ ಎಂದರು.

ವಿಮಶಾತ್ಮಕವಾಗಿ ನೋಡಿ: ಅಲ್ಲದೇ ವಿವಿಧ ಕಾರಣಗಳಿಂದಾಗಿ ನಾವು ನಮ್ಮದಲ್ಲದ ಸಂಸ್ಕೃತಿಯನ್ನು ಧರ್ಮದ ಹೆಸರಲ್ಲಿ ಒಪ್ಪಿಕೊಳ್ಳುವಂತಾಗಿದೆ. ಜಾತಿ ವ್ಯವಸ್ಥೆಯೊಂದಿಗೆ ಬಂದಿರುವ ಈ ಸಂಸ್ಕೃತಿಗಳನ್ನು ನಾವೆಷ್ಟು ಇಟ್ಟುಕೊಳ್ಳಬೇಕಿತ್ತು? ಬೆತ್ತಲೆ ಸೇವೆ, ಎಲ್ಲವ್ವನ ಪದಗಳು ಇದರಲ್ಲಿ ಯಾವುದನ್ನು ಸಮರ್ಥಿಸುತ್ತಿವೆ?

ಮಾರಮ್ಮನ ಹಬ್ಬದ ಕೋಣದ ಬಲಿ ಯಾವ ಮೌಲ್ಯವನ್ನು ಪ್ರತಿಪಾದಿಸುತ್ತದೆ? ಇವು ನಮ್ಮ ಸಂಸ್ಕೃತಿಯಲ್ಲ. ಹೀಗಾಗಿ ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದ ಅವರು, ಭಾರತೀಯ ಸಂಸ್ಕೃತಿ ಯಾವುದೆಂದು ಬಿಡಿಸಿ ನೋಡಿದಾಗ ಇವೆಲ್ಲವೂ ಸರಿಯಾಗಿ ಕಾಣಲಿದ್ದು, ಸಂಸ್ಕೃತಿಗಳನ್ನು ನಾವು ಬಹಳ ವಿಮಶಾìತ್ಮಕವಾಗಿ ನೋಡಬೇಕಿದೆ ಎಂದು ಹೇಳಿದರು. 

ಮಾನವೀಯತೆ: ದೇಶಕ್ಕೆ ಸಂವಿಧಾನವನ್ನು ನೀಡಿದ ಡಾ.ಬಿ.ಆರ್‌.ಅಂಬೇಡ್ಕರ್‌ ಅವರಂತಹ ಮೇರು ವ್ಯಕ್ತಿಗೆ ದಲಿತ ಸಂಸ್ಕೃತಿ ಎಂದರೆ ಗೊತ್ತಿರಲಿಲ್ಲವೆಂದಲ್ಲ. ಆದರೆ ಅವರು ಯಾಕೆ ಆ ಕುರಿತು ಹೆಚ್ಚು ಮಾತನಾಡದೆ, ಈ ಸಂಸ್ಕೃತಿ ನಮ್ಮವಲ್ಲ ಎಲ್ಲರೂ ಇದರಿಂದ ಹೊರಗೆ ಬನ್ನಿ ಎನ್ನುತ್ತಾರೆ. ಆದ್ದರಿಂದ ನಾವು ನಮ್ಮ ಸಾಂಸ್ಕೃತಿಕ ಕನ್ನಡಿಗಳನ್ನು ಛಿದ್ರಗೊಳಿಸಬೇಕಾದ ಅಗತ್ಯವಿದ್ದು, ಬದಲಿಗೆ ಅಖಂಡ ಮಾನವನನ್ನು ತೋರುವ ಕನ್ನಡಿ ಬೇಕಿದೆ.

ಈ ಎಲ್ಲಾ ಕಾರಣದಿಂದ ಬಾಬಾ ಸಾಹೇಬರು ಅಖಂಡ ಮಾನವೀಯತೆ ಪ್ರತಿಬಿಂಬಿಸುವ ಸಂವಿಧಾನ ಕೊಟ್ಟಿದ್ದರೂ, ಅದನ್ನೇ ಒಡೆಯುವ ನಿಟ್ಟಿನಲ್ಲಿ ಹುನ್ನಾರ ನಡೆಸಲಾಗುತ್ತಿದೆ ಎಂದರು. ಕಾರ್ಯಕ್ರಮದಲ್ಲಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಪ್ರೊ.ಎನ್‌.ಎಂ.ತಳವಾರ, ಜಾನಪದ ಅಧ್ಯಯನ ಮಂಡಳಿ ಅಧ್ಯಕ್ಷ ಡಾ.ಎಂ.ನಂಜಯ್ಯ ಹೊಂಗನೂರು, ಕೈಲಾಶ್‌ ಮೂರ್ತಿ ಹಾಜರಿದ್ದರು. 

ಟಾಪ್ ನ್ಯೂಸ್

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Mysuru: ಬಾಲ್ಯ ವಿವಾಹ: 12 ಮಂದಿ ವಿರುದ್ಧ ಪ್ರಕರಣ ದಾಖಲು

Mysuru: ಬಾಲ್ಯ ವಿವಾಹ: 12 ಮಂದಿ ವಿರುದ್ಧ ಪ್ರಕರಣ ದಾಖಲು

T. S. Srivatsa;ಮುನಿರತ್ನ ಬಂಧನ ವಿಚಾರದಲ್ಲಿ ಸರ್ಕಾರ ದ್ವಿಮುಖ ನೀತಿ: ಆರೋಪ

T. S. Srivatsa;ಮುನಿರತ್ನ ಬಂಧನ ವಿಚಾರದಲ್ಲಿ ಸರ್ಕಾರ ದ್ವಿಮುಖ ನೀತಿ: ಆರೋಪ

CTCM ಸಿದ್ದರಾಮಯ್ಯರಿಂದ ದ್ವೇಷ ರಾಜಕಾರಣ: ಸಿ.ಟಿ.ರವಿ

CM ಸಿದ್ದರಾಮಯ್ಯರಿಂದ ದ್ವೇಷ ರಾಜಕಾರಣ: ಸಿ.ಟಿ.ರವಿ

Hunsur: ನೀರು ತರಲು ಹೋಗಿದ್ದ ಪತ್ನಿಯ ಕತ್ತು ಕಡಿದ ಪತಿ

Hunsur: ನೀರು ತರಲು ಹೋಗಿದ್ದ ಪತ್ನಿಯ ಕತ್ತು ಕಡಿದ ಪತಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.