Mysore: ಕರ್ನಾಟಕದಲ್ಲಿ ರಾಕ್ಷಸರ ರಾಜ್ಯ ಆಡಳಿತಕ್ಕೆ ಬಂದಿದೆ; ಪ್ರತಾಪ್ ಸಿಂಹ ವಾಗ್ದಾಳಿ
ಮಹಿಷಾ ದಸರಾವನ್ನು ತಡೆಯುವುದೇ ನಮ್ಮ ಉದ್ದೇಶ
Team Udayavani, Oct 4, 2023, 2:49 PM IST
ಮೈಸೂರು: ಒಂದೊಂದು ಸರಿ ಒಳ್ಳೆಯವರು ರಾಜ್ಯ ಅಳುತ್ತಾರೆ. ಒಂದೊಂದು ಬಾರಿ ರಾಕ್ಷಸರು ರಾಜ್ಯ ಅಳುತ್ತಾರೆ. ರಾಕ್ಷಸರ ರಾಜ್ಯಭಾರ ಈಗ ನಡೆಯುತ್ತಿದೆ. ಶಿವಮೊಗ್ಗ ಪ್ರಕರಣ, ಕೋಲಾರದ ಪ್ರಕರಣ ನೋಡಿದರೆ ಇದು ಗೊತ್ತಾಗುತ್ತಿದೆ. ಕರ್ನಾಟಕದಲ್ಲಿ ಒಳ್ಳೆಯವರ ಆಡಳಿತ ಹೋಗಿ ರಾಕ್ಷಸರ ರಾಜ್ಯ ಆಡಳಿತ ಬಂದಿದೆ ಎಂದು ರಾಜ್ಯ ಸರಕಾರದ ವಿರುದ್ದ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದರು.
ನಗರದಲ್ಲಿ ಮಾತನಾಡಿದ ಅವರು, ಕಲ್ಲು ಹೊಡೆಯುವ ಸಂಸ್ಕೃತಿ ಹಿಂದೂ ಧರ್ಮದವರಿಗೆ ಗೊತ್ತಿಲ್ಲ. ಸಾಮೂಹಿಕ ಪ್ರಾರ್ಥನೆ ಮಾಡಿ ಒಟ್ಟಾಗಿ ಹೊರಗಡೆ ಬಂದು ಚಾಕು ಚೂರಿ ಹಿಡಿದು ಹಿಂಬದಿಯಿಂದ ಚುಚ್ಚುವುದು ಹಿಂದೂ ಸಂಸ್ಕೃತಿ ಅಲ್ಲ. ಚುಕ್ಕಾಣಿ ಹಿಡಿದವರು ಮನಸ್ಥಿತಿಯಂತೆ ಉಳಿದವರು ಇರುತ್ತಾರೆ. ಸಿದ್ದರಾಮಯ್ಯ ಎಲ್ಲಾ ನೋಡಿ ಕಣ್ಮುಂಚಿ ಕುಳಿತಿದ್ದಾರೆ ಎಂದರು.
ಪಿಎಫ್ ಐ, ಕೆಎಫ್ ಡಿ ಮೇಲಿನ ಕೇಸ್ ವಾಪಾಸ್ ಪಡೆದ ಕಾರಣ ಇವತ್ತು ವಿಕೃತಿಗಳು ವಿಜೃಂಭಿಸುತ್ತಿವೆ. ಸಿದ್ದರಾಮಯ್ಯ ಇದಕ್ಕೆ ಕಾರಣ. ಅವರು ಬಿಗಿ ಆಗಿ ಇದ್ದರೆ ಈ ರೀತಿ ಆಗುತ್ತಿರಲಿಲ್ಲ. ಕೆಎಫ್ ಡಿ ,ಪಿಎಫ್ ಐ ಸಂಘಟನೆಗಳು ಎದ್ದು ನಿಂತಿವೆ. ಸರಕಾರಕ್ಕೆ ಲಂಗು ಲಾಗಾಮು ಇಲ್ಲ. ಮುಸ್ಲಿಂ ಪುಂಡರು ಎಸ್ಪಿ ಮೇಲೆ ಕಲ್ಲು ತೂರುತ್ತಾರೆ. ಕೋಲಾರದಲ್ಲಿ ದಲಿತ ಸಂಸದರ ಮೇಲೆ ಎಸ್ಪಿ ಹಲ್ಲೆ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.
ಇದನ್ನೂ ಓದಿ: Shivamogga Incident: ರಾಗಿಗುಡ್ಡಕ್ಕೆ ಆತಂರಿಕ ಭದ್ರತಾ ವಿಭಾಗದ ಅಧಿಕಾರಿಗಳ ತಂಡ ಭೇಟಿ
ಕಾವೇರಿ ನೀರು ವಿಚಾರವನ್ನು ಪ್ರತಿಕ್ರಿಯೆ ನೀಡಿದ ಅವರು, ತಮಿಳುನಾಡು ಸಿಎಂ ಸ್ಟಾಲಿನ್ ವಿರುದ್ದ ಒಬ್ಬರಾದರೂ ಮಾತಾಡಿದ್ದಾರಾ? ಈ ಸರಕಾರಕ್ಕೆ ಬೆನ್ನು ಮೂಳೆಯೆ ಇಲ್ಲ. ಸ್ಟಾಲಿನ್ ಬಗ್ಗೆ ಒಂದು ಹೇಳಿಕೆ ಕೊಡಲಿ ನೋಡೋಣಾ? ಸಿದ್ದರಾಮಯ್ಯ ಎದುರಾಳಿಗಳ ಮೇಲೆ ಉಡಾಫೆಯಿಂದ ಕೂಗಾಡುತ್ತಾರೆ ಸ್ಟಾಲಿನ ಬಗ್ಗೆ ಯಾಕೆ ಧ್ವನಿ ಎತ್ತುತ್ತಿಲ್ಲ. ಸ್ಟಾಲಿನ್ ವಿರುದ್ದ ಮಾತಾಡಲು ಕಾಂಗ್ರೆಸ್ ನ ಎಲ್ಲಾ ನಾಯಕರಿಗೆ ತೊಡೆ ನಡುಗುತ್ತದೆ ಎಂದರು.
ಮಹಿಷಾ ದಸರಾ ಆಚರಣೆಯ ವಿರುದ್ಧ ಗುಡುಗಿದ ಅವರು, ಮಹಿಷಾ ದಸರಾವನ್ನು ತಡೆಯುವುದೇ ನಮ್ಮ ಉದ್ದೇಶ. ಈ ವಿಚಾರದಲ್ಲಿ ಸಂಘರ್ಷಕ್ಕೂ ನಾವು ಸಿದ್ದರಿದ್ದೇವೆ. ಮೈಸೂರು ಜಿಲ್ಲೆಯ 11 ಶಾಸಕರು, ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಎಲ್ಲಾ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಈ ಬಗ್ಗೆ ಧರ್ಮಾತೀತವಾಗಿ ಎಲ್ಲರಿಗೂ ಕರೆ ಕೊಡುತ್ತಿದ್ದೇವೆ ಎಂದರು.
ಮಹಿಷಾ ದಸರಾ ಆಚರಣೆ ವಿರೋಧಿಸಿ ಅಕ್ಟೋಬರ್ 13 ರಂದು ಚಲೋ ಚಾಮುಂಡಿ ಬೆಟ್ಟ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು ಕೈ ಜೋಡಿಸಬೇಕು. ಸಮಸ್ತ ಮೈಸೂರಿನ ಜನ ಬರಬೇಕು. ಇದು ಚಾಮುಂಡಿ ತಾಯಿಯ ಭಕ್ತರ ಚಳುವಳಿ. ಎಲ್ಲಾ ಪಕ್ಷರ ಜನರು ಈ ಚಳುವಳಿಯಲ್ಲಿ ಭಾಗವಹಿಸಿ ಎಂದು ಸಂಸದ ಕರೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ
Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ
Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್
Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ
Significant Agreement: ವನ-ವನ್ಯಜೀವಿ ಸಂರಕ್ಷಣೆಗೆ ಯತ್ನ: ಸಚಿವ ಈಶ್ವರ ಖಂಡ್ರೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್ ಗೆ ಭಾರತದ ಚಾಟಿ
Laapataa Ladies: ಕಾಣೆಯಾದ ಮಹಿಳೆಯರ ಆಸ್ಕರ್ ಪ್ರಯಾಣ
Kanpur Test: ಪಂದ್ಯ ಬಿಟ್ಟು ಹೋಟೆಲ್ ಗೆ ತೆರಳಿದ ಭಾರತೀಯ ಆಟಗಾರರು
Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು
SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.