![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Mar 6, 2020, 12:05 PM IST
ಮೈಸೂರು: ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದ ಬಿಜೆಪಿ ಮುಖಂಡ ಅಪಾರ್ಟ್ ಮೆಂಟ್ ಒಂದರಲ್ಲಿ ಸ್ನೇಹಿತರಿಂದಲೇ ಹತ್ಯೆಯಾದ ಘಟನೆ ಗುರುವಾರ ತಡರಾತ್ರಿ ಮೈಸೂರಿನ ಕುವೆಂಪುನಗರದಲ್ಲಿ ನಡೆದಿದೆ.
ಬಿಜೆಪಿ ಮುಖಂಡ ಹೆಚ್.ವಿ.ರಾಜೀವ್ ಬೆಂಬಲಿಗನಾಗಿದ್ದ ಆನಂದ್ ಅಲಿಯಾಸ್ ವಡ್ಡ ಆನಂದ್ ಕೊಲೆಯಾದ ವ್ಯಕ್ತಿ.
ಕಳೆದ 13 ವರ್ಷಗಳ ಹಿಂದೆ ಜನತಾ ನಗರದ ಸ್ಮಶಾನ ರಸ್ತೆಯಲ್ಲಿ ನಡೆದ ಕೊಲೆ ಪ್ರಕರಣ ಕೊಲೆ ಕೇಸ್ ನಲ್ಲಿ ಆನಂದ್ ಆರೋಪಿಯಾಗಿದ್ದ. ರಿಯಲ್ ಎಸ್ಟೇಟ್ ಹಾಗೂ ಫೈನಾನ್ಸ್ ನಡೆಸುತ್ತಿದ್ದ. ಹಳೇ ವೈಷಮ್ಯದ ಕಾರಣ ಕೊಲೆ ಮಾಡಲಾಗಿರುವ ಶಂಕೆ ವ್ಯಕ್ತವಾಗಿದೆ.
ಆನಂದ್ ನಿನ್ನೆ ಉತ್ತನಹಳ್ಳಿ ಸಮೀಪ ಖಾಸಗಿ ಕಲ್ಯಾಣ ಮಂಟಪದಲ್ಲಿ ಪಾರ್ಟಿ ಮುಗಿಸಿ ಬಂದಿದ್ದ. ಸರ್ವಿಸ್ ಅಪಾರ್ಟ್ ಮೆಂಟ್ ನಲ್ಲಿ ರೂಂ ಮಾಡಿ ಪಾರ್ಟಿ ಆಯೋಜನೆ ಮಾಡಿದ್ದ. ಪಾರ್ಟಿ ನಡೆಯುವಾಗಲೇ ಸ್ನೇಹಿತರೊಂದಿಗೆ ಮಾತಿನ ಚಕಮಕಿ ನಡೆದಿತ್ತು ಎನ್ನಲಾಗಿದೆ. ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ ಸ್ನೇಹಿತರು ಬಿಯರ್ ಬಾಟಲಿಯಿಂದ ಹೊಟ್ಟೆಗೆ ಚುಚ್ಚಿದ್ದಾರೆ. ಮನಸೋ ಇಚ್ಛೆ ಬಾಟಲಿಯಿಂದ ಇರಿದು ಹತ್ಯೆ ಮಾಡಿದ್ದಾರೆ. ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಕುವೆಂಪು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.