Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ
Team Udayavani, Sep 21, 2024, 6:20 AM IST
ಮೈಸೂರು: ಮೈಸೂರು ದಸರಾ ಉದ್ಘಾಟಕರನ್ನಾಗಿ ಹಿರಿಯ ಸಾಹಿತಿ ಪ್ರೊ| ಹಂ.ಪ. ನಾಗರಾಜಯ್ಯ ಅವರನ್ನು ಆಹ್ವಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ಘೋಷಿಸಿದರು. ಕನ್ನಡ ಭಾಷೆ ಮತ್ತು ಸಾಹಿತ್ಯ ಕ್ಷೇತ್ರಕ್ಕೆ ಹಂಪನಾ ಕೊಡುಗೆ ಅನನ್ಯ. ಇದನ್ನು ಪರಿಗಣಿಸಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದರು.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಶುಕ್ರವಾರ ಆಯೋಜಿಸಿದ್ದ ಕರ್ನಾಟಕ ಸಾಂಸ್ಕೃತಿಕ ಮುನ್ನೋಟ; ಚಿಂತನಾ ಸಮಾವೇಶದ ಉದ್ಘಾಟನೆ ಕಾರ್ಯಕ್ರಮದಲ್ಲಿ ಪ್ರೊ| ಹಂಪನಾ ಕೂಡ ಭಾಗವಹಿಸಿದ್ದರು. ಅವರನ್ನು ವೇದಿಕೆ ಮೇಲೆ ಆಹ್ವಾನಿಸಿದ ಸಿದ್ದರಾಮಯ್ಯ ಹೂಗುಚ್ಛ ನೀಡಿ ಶುಭ ಕೋರಿ ತಮ್ಮ ಆಸನದ ಪಕ್ಕದಲ್ಲಿಯೇ ಕೂರಿಸಿ ಗೌರವ ತೋರಿದರು.
ಭಾಷಾ ಶಾಸ್ತ್ರಜ್ಞರು, ಸಂಶೋಧಕರು,
ಪ್ರಾಧ್ಯಾಪಕರು…
ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಹಂಪಸಂದ್ರದ ಹಂ.ಪ. ನಾಗರಾಜಯ್ಯ (ಹಂಪನಾ), ಅಧ್ಯಾಪಕರಾಗಿ, ಬೆಂಗಳೂರು ವಿ.ವಿ.ಯಲ್ಲಿ ಕಲಾ ವಿಭಾಗದ ಮುಖ್ಯಸ್ಥರಾಗಿ, ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕರಾಗಿ, ಕನ್ನಡ-ಸಂಸ್ಕೃತಿ ಇಲಾಖೆಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದರು. 1978ರಿಂದ 1986ರ ವರೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದ ಹಂಪನಾ ಎಲ್ಲ ಕ್ಷೇತ್ರಗಳಿಗೆ ಸಂಬಂಧಿಸಿದ ವಿವಿಧ ಲೇಖಕರ ಸುಮಾರು 300 ಮೌಲಿಕ ಪುಸ್ತಕಗಳನ್ನು ಪ್ರಕಟಿಸಿದರು. ಕನ್ನಡ ಸಾಹಿತ್ಯ ಮತ್ತು ಜೈನ ಪರಂಪರೆ ಕುರಿತು ಅಪಾರ ವಿದ್ವತ್ ಹೊಂದಿರುವ ಹಂಪನಾ, ಸಾಹಿತ್ಯದ ಹಲವು ಪ್ರಕಾರಗಳಲ್ಲಿ ಮಹತ್ವದ ಕೃತಿಗಳನ್ನು ಪ್ರಕಟಿಸಿದ್ದಾರೆ. ಅವರ ಸಾಹಿತ್ಯ ಸೇವೆ ಪರಿಗಣಿಸಿ ಹಂಪಿಯ ಕನ್ನಡ ವಿ.ವಿ. 2006ರಲ್ಲಿ ನಾಡೋಜ ಪ್ರಶಸ್ತಿ ನೀಡಿ ಗೌರವಿಸಿದೆ.
ಉದಯವಾಣಿ ಸಂದರ್ಶನ:
ನನಗಿಂದು ಸಂತೋಷಾಘಾತ…
1. ದಸರಾ ಉದ್ಘಾಟಕರಾಗಿ ಆಯ್ಕೆ ಆಗುವ ನಿರೀಕ್ಷೆ ಇತ್ತಾ?
ನನಗೆ ಅನಿರೀಕ್ಷಿತವಾಗಿ ದೊರೆತ ಅಪೂರ್ವ, ಅವಿಸ್ಮರಣೀಯ ಸಂದರ್ಭ ಇದು. ಸಾಮಾನ್ಯವಾಗಿ ವಿದ್ಯುತ್ ಆಘಾತ ಎಂದು ಕರೆಯುತ್ತಾರೆ. ಅದೇ ರೀತಿ ನನಗಿಂದು ಸಂತೋಷಾ
ಘಾತವಾಗಿದೆ.
2. ನಿಮ್ಮ ಮೈಸೂರಿನ ನಂಟು ಹೇಗಿದೆ?
ನನ್ನ ಮೈಸೂರು ನಂಟು ತುಂಬಾ ಹಳೆಯದು. ವಿದ್ಯಾರ್ಥಿ ಜೀವನ ಇÇÉೇ ಕಳೆದಿದ್ದು ಮಹಾರಾಜ ಕಾಲೇಜಿನಲ್ಲಿ ಬಿಎ ಆನರ್ಸ್ ಪದವಿ, ಮೈಸೂರು ವಿ.ವಿ.ಯಲ್ಲಿ ಎಂಎ ಪದವಿ ಪಡೆದುಕೊಂಡಿ¨ªೆ. ಯಾವ ಊರಿನಲ್ಲಿ ಬದುಕಿನ ಜ್ಞಾನ ಉಂಟಾಯಿತೋ, ಅಕ್ಷರ ಲೋಕಕ್ಕೆ ಬಾಗಿಲು ತೆರೆದು ಸರಸ್ವತಿ ನನ್ನನ್ನು ಒಳಗೆ ಕರೆದುಕೊಂಡಲೋ ಇದೀಗ ಅದೇ ಊರಿನ ದಸರೆ ಉತ್ಸವವನ್ನು ಉದ್ಘಾಟಿಸುವ ಅವಕಾಶ ಒಲಿದು ಬಂದಿದೆ.
3. ದಸರಾ ನೋಡಿದ್ದೀರಾ? ನಿಮ್ಮ ಅನುಭವ ಏನು?
ಸುಮಾರು 50 ಬಾರಿ ನೋಡಿರಬಹುದು. ಆ ಸಂಭ್ರಮವನ್ನು ಅನುಭವಿಸಿ ರೋಮಾಚನಗೊಂಡಿದ್ದೇನೆ. ಇದು ಪ್ರಜಾಪ್ರಭುತ್ವ. ನಾನು ಕರ್ನಾಟಕದ ಒಬ್ಬ ಪ್ರಜೆ. ಇಡೀ ಕರ್ನಾಟಕದ ಕನ್ನಡಿಗರ ಪರ ನಾನು ದಸರಾ ಮಹೋತ್ಸವವನ್ನು ಉದ್ಘಾಟಿಸ ಬಯಸುತ್ತೇನೆ.
4. ಇವತ್ತಿನ ಕಾಲಕ್ಕೆ ದಸರಾ ಮಹೋತ್ಸವ ಬಗ್ಗೆ ಏನು ಹೇಳಬಯಸುತ್ತೀರಾ?
ಬಹಳ ಸ್ಥಿತ್ಯಂತರದ ಕಾಲಘಟ್ಟದಲ್ಲಿ ನಾವಿದ್ದೇವೆ. ಹಬ್ಬದ ಮಹತ್ವ ಏನು? ಈ ಕಾಲಕ್ಕೆ ಅವುಗಳನ್ನು ಉಳಿಸಿಕೊಳ್ಳುವ ಬಗ್ಗೆ ಆಲೋಚಿಸಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ
1 ಮೆಟ್ರಿಕ್ ಟನ್ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್ ಸಿಂಗ್
Road Mishap ಸ್ಲೀಪರ್ ಕೋಚ್ ಬಸ್ ಪಲ್ಟಿ: ಓರ್ವ ಮೃತ್ಯು; 11 ಮಂದಿಗೆ ಗಾಯ
Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.