![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 9, 2023, 10:02 PM IST
ಮೈಸೂರು: ನಗರದ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ ಸ್ವಾಮೀಜಿಯವರ ಆಶ್ರಯದಲ್ಲಿ ಶ್ರೀ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ಚಾತುರ್ಮಾಸ್ಯದ ಅಂಗವಾಗಿ ಸೆ 10 ಭಾನುವಾರ ಸಂತ ಸಮಾವೇಶ ಮತ್ತು ಬೃಹತ್ ಧರ್ಮಸಭೆಯನ್ನು ಆಯೋಜಿಸಲಾಗಿದೆ .
ಪೇಜಾವರ ಶ್ರೀಗಳ ಚಾತುರ್ಮಾಸ್ಯ ವ್ರತ ಸಮಿತಿ ಮತ್ತು ವಿಶ್ವ ಹಿಂದೂ ಪರಿಷತ್ ಮೈಸೂರು ಜಿಲ್ಲಾ ಘಟಕಗಳ ಜಂಟಿ ಸಂಯೋಜನೆಯಲ್ಲಿ ಈ ಸಮಾವೇಶ ನಡೆಯಲಿದೆ .
ಬೆಳಗ್ಗೆ 10 ರಿಂದ ಮಧ್ಯಾಹ್ನ 1 ರ ತನಕ ನಡೆಯುವ ಈ ಕಾರ್ಯಕ್ರಮದಲ್ಲಿ ಅನೇಕ ಮಠಾಧೀಶರು , ಸಾಧು ಸಂತರು ಭಾಗವಹಿಸಲಿದ್ದಾರೆ. ಬೆಳಗ್ಗೆ 10 ರಿಂದ 11.30 ರ ವರೆಗೆ ಸಂತ ಸಮಾವೇಶದಲ್ಲಿ ಹಿಂದೂ ಸಮಾಜದ ಪ್ರಚಲಿತ ವಿದ್ಯಮಾನಗಳ ಕುರಿತು ಮಠಾಧೀಶರು ಮಂಥನ ನಡೆಸಲಿದ್ದು,ಸಾರ್ವಜನಿಕರು ಭಾಗವಹಿಸಲು ಅವಕಾಶ ಇರುವುದಿಲ್ಲ.
ರಾಜಕಾರಣಿಗಳಿಂದ ಸನಾತನ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆಗಳು, ಗೋಹತ್ಯಾನಿಷೇಧ ಆಂದೋಲನ , ಜಾತಿಯ ಹೋರಾಟಗಳಷ್ಟೇ ಧರ್ಮದ ಪರವಾಗಿಯೂ ಮಠಾಧೀಶರು ಸಂದರ್ಭಾನುಸಾರ ಧ್ವನಿ ಎತ್ತಬೇಕಾದ ಅವಶ್ಯಕತೆ , ಹಿಂದು ದೇವಳಗಳ ಸುರಕ್ಷತೆ , ಲವ್ ಜಿಹಾದ್ , ಲ್ಯಾಂಡ್ ಜಿಹಾದ್ , ಜಾತ್ರಾ ಜಿಹಾದ್ ಮೊದಲಾದವುಗಳು ಮತ್ತು ಹಿಂದೂ ಭಾವನೆಗಳ ಮೇಲಾಗುತ್ತಿರುವ ಅನೇಕ ರೀತಿಯ ಹಾನಿಗಳ ತಡೆ ಮೊದಲಾದ ಅನೇಕ ವಿಷಯಗಳನ್ನು ಚರ್ಚಿಸುವ ಸಾಧ್ಯತೆ ಇದೆ.
ನಂತರ ಬೃಹತ್ ಹಿಂದೂ ಧರ್ಮಸಭೆ ನಡೆಯಲಿದ್ದು ಇದರಲ್ಲಿ ಸುಮಾರು 5 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ . ಪೇಜಾವರ ಶ್ರೀಗಳು ಅಧ್ಯಕ್ಷತೆ ವಹಿಸಲಿದ್ದು ಮಂಗಳೂರು ಗುರುಪುರ ಶ್ರೀ ವಜ್ರದೇಹಿ ಸಂಸ್ಥಾನದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಸಹಿತ ಕೆಲವು ಮಠಾಧೀಶರು ಮಾರ್ಗದರ್ಶನ ನೀಡಲಿದ್ದಾರೆ. ಕಾರ್ಯಕ್ರಮವು ಗಣಪತಿ ಸಚ್ಚಿದಾನಂದಾಶ್ರಮದ ಸಭಾಂಗಣದಲ್ಲಿ ನಡೆಯಲಿದೆ .
ಧರ್ಮಸಭೆಯಲ್ಲಿ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ವಿಶ್ವಹಿಂದೂ ಪರಿಷತ್ ಮತ್ತು ಚಾತುರ್ಮಾಸ್ಯ ಸಮಿತಿ ಕರೆ ನೀಡಿದೆ
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.