ನಾಡಿಗೆ ನಾಲ್ವಡಿಯವರ ಕೊಡುಗೆ ಅಪಾರ


Team Udayavani, Jun 5, 2022, 4:49 PM IST

ನಾಡಿಗೆ ನಾಲ್ವಡಿಯವರ ಕೊಡುಗೆ ಅಪಾರ

ಕೆ.ಆರ್‌.ನಗರ: ನಾಲ್ವಡಿ ಕೃಷ್ಣರಾಜ ಒಡೆಯರ್‌ ಮೈಸೂರು ಸಂಸ್ಥಾನ ವಿಶ್ವಮಾನ್ಯವಾಗಿ ಸರ್ವಾಂಗೀಣ ಪ್ರಗತಿ ಹೊಂದಲು ಕಾರಣೀಭೂತರಾದ ಮಹಾರಾಜರು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ವೈ.ಡಿ.ರಾಜಣ್ಣ ಹೇಳಿದರು.

ಪಟ್ಟಣದ ರೋಟರಿ ಭವನದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಶನಿವಾರ ನಡೆದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಜಯಂತ್ಯುತ್ಸವದಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ನಾಲ್ವಡಿಯವರು 1895ರಲ್ಲಿ ಪಟ್ಟಾಭಿಕ್ತರಾದರೂ ಕೇವಲ 10 ವರ್ಷದ ಬಾಲಕರಾಗಿದ್ದರಿಂದ ಅವರ ತಾಯಿ ಮಹಾರಾಣಿ ವಾಣಿವಿಲಾಸ ಸನ್ನಿಧಾನದವರು ರೀಜೆಂಟರಾಗಿ ಆಡಳಿತ ನಡೆಸಿದರು. ರಾಜಕುಮಾರನಿಗೆ ಸೂಕ್ತ ವಿದ್ಯಾಭ್ಯಾಸ, ಆಡಳಿತ ತರಬೇತಿಗಳನ್ನು ನಿಗಾ ವಹಿಸಿ ನಡೆಸಿದ್ದರಿಂದ ಮೈಸೂರು ರಾಜ್ಯಕ್ಕೆ ಒಬ್ಬ ಸಮರ್ಥ ಆಡಳಿತಗಾರರಾಗಿ ನಾಲ್ವಡಿ ದೊರಕಿದರು ಎಂದರು.

ನಾಲ್ವಡಿಯವರು ಕೃಷಿ, ಶಿಕ್ಷಣ, ಆರೋಗ್ಯ, ನೀರಾವರಿ ಮತ್ತಿತರ ಕ್ಷೇತ್ರಗಳಿಗೆ ನೀಡಿದ ಕೊಡುಗೆಗಳನ್ನು ನಾವು ಸದಾ ಸ್ಮರಿಸಬೇಕು ಎಂದ ಅವರು, ಇಡೀ ವಿಶ್ವವೇ ಬೆರಗಾಗುವ ರೀತಿಯಲ್ಲಿ ಅಂದೇ ಮೈಸೂರು ವಿಶ್ವದ್ಯಾನಿಲಯವನ್ನು ಸ್ಥಾಪಿಸಿದ ನಾಲ್ವಡಿಯವರು ಮುಂದಿನ ನೂರಾರುವರ್ಷಗಳ ದೂರದೃಷ್ಟಿಯಿಂದ ಅನೇಕ ಯೋಜನೆಗಳನ್ನು ಜಾರಿಗೆ ತಂದರು ಎಂದು ತಿಳಿಸಿದರು.

ತಾಲೂಕು ಅಧ್ಯಕ್ಷ ಜಿ.ಡಿಂಡಿಮಶಂಕರ್‌ ಮಾತನಾಡಿ, ಕೆ.ಆರ್‌.ನಗರ ಪಟ್ಟಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್‌ಅವರ ಕೊಡುಗೆ ಅಪಾರವಾದುದು. ಆದ್ದರಿಂದ ಪಟ್ಟಣಕ್ಕೆ ಕೃಷ್ಣರಾಜನಗರ ಎಂದು ಅವರ ಹೆಸರನ್ನೇ ಇಡಲಾಗಿದೆ. ದೇಶದಲ್ಲಿಯೇ ನೀಲಿನಕ್ಷೆ ತಯಾರಿಸಿ ನಿರ್ಮಿಸಿದ ಯೋಜಿತ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಬೇರೆಡೆಯಿಂದ ಬಂದ ಸರ್ಕಾರಿ ನೌಕರರು ಒಮ್ಮೆ ಇಲ್ಲಿಗೆಬಂದರೆ ಪಟ್ಟಣದ ಸೌಂದರ್ಯಕ್ಕೆ ಮಾರುಹೋಗಿ ಇಲ್ಲಿಯೇ ವಾಸಮಾಡತೊಡಗುತ್ತಾರೆ ಎಂದು ಹೇಳಿದರು.

ಕೃಷ್ಣರಾಜಸಾಗರ ಅಣೆಕಟ್ಟು ನಿರ್ಮಾಣದ ಪರಿಣಾಮ ಎಡತೊರೆ ಇಂದು ಕೃಷ್ಣರಾಜನಗರವಾಗಿ ಬಹಳ ಸುಸಜ್ಜಿತವಾಗಿ ಪಟ್ಟಣವನ್ನು ನಾಲ್ವಡಿಯವರು ನಿರ್ಮಾಣ ಮಾಡಿದ್ದಾರೆ. ಪಟ್ಟಣದ ಜನತೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಕನ್ನಡ ಕಲಾಕೂಟದ ಅಧ್ಯಕ್ಷ ಎಂ.ಚಂದ್ರಶೇಖರ್‌, ಪರಿಷತ್ತಿನ ಜಿಲ್ಲಾ ಕೋಶಾಧ್ಯಕ್ಷಜಿ.ಪ್ರಕಾಶ್‌, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ದ್ರಾಕ್ಷಾಯಿಣಿ, ಪದಾಧಿಕಾರಿಗಳಾದ ಸಿ.ಆರ್‌. ಉದಯಕುಮಾರ್‌, ಎಚ್‌.ಎಸ್‌.ಸ್ವಾಮಿ, ಭಾಸ್ಕರ್‌, ರಾಮಕೃಷ್ಣ, ಮಧುವನ ಹಳ್ಳಿರಾಜು, ಬಿ.ಎಲ್‌. ಮಹದೇವ, ಎಚ್‌.ಕೆ.ಪುಟ್ಟೇಗೌಡ, ನಾರಾಯಣ್‌, ರಾಜಣ್ಣ, ಕೃಷ್ಣಯ್ಯ, ಗೋಪಾಲ್‌ ಇತರರು ಇದ್ದರು.

ಟಾಪ್ ನ್ಯೂಸ್

ಸಂತೋಷ್ ಲಾಡ್

Shiggavi Bypoll; ಗೆಲ್ಲುವ ಅಭ್ಯರ್ಥಿಗೆ ಪಕ್ಷ ಟಿಕೆಟ್ ನೀಡಲಿದೆ: ಸಂತೋಷ್ ಲಾಡ್

ನಿಮ್ಮ ಸಹಪಾಠಿಗಳು ಎಲ್ಲಿದ್ದಾರೆ ?: ಜೀವನದ ಪ್ರಯಾಣದಲ್ಲಿ ಎಲ್ಲವನ್ನು ಅನುಭವಿಸಬೇಕು

INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ

INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

8-ptr-bus-campaign

Udayavani Campaign: 14 ಹೊಸ ಬಸ್‌ ಓಡಾಟಕ್ಕೆ ಕೆಎಸ್‌ಆರ್‌ಟಿಸಿ ಸಿದ್ಧ

ವಿಜಯೇಂದ್ರ

Shimoga; ಸಿಎಂ ಗಮನಕ್ಕೆ ಬಾರದೆ ವಾಲ್ಮೀಕಿ ನಿಗಮ ಹಣ ಲೂಟಿ ಸಾಧ್ಯವಿಲ್ಲ: ವಿಜಯೇಂದ್ರ ಆರೋಪ

Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?

Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ಕೊಡಗು, ನಾಗರಹೊಳೆಯಲ್ಲಿ ಭಾರೀ ಮಳೆಗೆ ತುಂಬಿದ ಹನಗೋಡು ಅಣೆಕಟ್ಟೆ

Hunasur: ಪತ್ನಿ ಮನೆಗೆ ಹೋಗಿ ಹಿಂತಿರುಗುವ ವೇಳೆ ರಸ್ತೆ ಅಪಘಾತ… ಪತಿ ಮೃತ್ಯು

Hunasur: ಪತ್ನಿ ಮನೆಗೆ ಹೋಗಿ ಹಿಂತಿರುಗುವ ವೇಳೆ ರಸ್ತೆ ಅಪಘಾತ… ಪತಿ ಮೃತ್ಯು

Hunasuru: ಮನೆ ಬಳಿ ಮಂಗಳಮುಖಿಯರ ಗಲಾಟೆ, ಆತ್ಮಹತ್ಯೆಗೆ ಶರಣಾದ ಬಾಲಕ

Hunasuru: ಮನೆ ಬಳಿ ಮಂಗಳಮುಖಿಯರ ಗಲಾಟೆ, ಹೆದರಿ ಆತ್ಮಹತ್ಯೆಗೆ ಶರಣಾದ ಬಾಲಕ

B.Y. Vijayendra “ಅಭ್ಯರ್ಥಿ ಇನ್ನೂ ತೀರ್ಮಾನ ಆಗಿಲ್ಲ’; ನಾಡಿದ್ದು ದಿಲ್ಲಿಗೆ ತೆರಳಿ ಚರ್ಚೆ

B.Y. Vijayendra “ಅಭ್ಯರ್ಥಿ ಇನ್ನೂ ತೀರ್ಮಾನ ಆಗಿಲ್ಲ’; ನಾಡಿದ್ದು ದಿಲ್ಲಿಗೆ ತೆರಳಿ ಚರ್ಚೆ

ನಕಲಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ: 3 ಕೋಟಿ ರೂ. ಕಳೆದುಕೊಂಡ ಯುವಕ!

Fake ಷೇರು ಮಾರುಕಟ್ಟೆಯಲ್ಲಿ ಹೂಡಿಕೆ: 3 ಕೋಟಿ ರೂ. ಕಳೆದುಕೊಂಡ ಯುವಕ!

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

ಸಂತೋಷ್ ಲಾಡ್

Shiggavi Bypoll; ಗೆಲ್ಲುವ ಅಭ್ಯರ್ಥಿಗೆ ಪಕ್ಷ ಟಿಕೆಟ್ ನೀಡಲಿದೆ: ಸಂತೋಷ್ ಲಾಡ್

ನಿಮ್ಮ ಸಹಪಾಠಿಗಳು ಎಲ್ಲಿದ್ದಾರೆ ?: ಜೀವನದ ಪ್ರಯಾಣದಲ್ಲಿ ಎಲ್ಲವನ್ನು ಅನುಭವಿಸಬೇಕು

INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ

INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

8-ptr-bus-campaign

Udayavani Campaign: 14 ಹೊಸ ಬಸ್‌ ಓಡಾಟಕ್ಕೆ ಕೆಎಸ್‌ಆರ್‌ಟಿಸಿ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.