ಮೈಸೂರು ವಿವಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ಹೆಸರಿಡಿ


Team Udayavani, Jun 10, 2017, 1:59 PM IST

mys6.jpg

ಮೈಸೂರು: ಶತಮಾನದ ಇತಿಹಾಸ ಕಂಡಿರುವ ಮೈಸೂರು ವಿವಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ವಿಶ್ವವಿದ್ಯಾನಿಲಯ ಎಂದು ನಾಮಕರಣ ಮಾಡುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ಮಾಡಬೇಕಿದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಡಾ.ಸಿ.ಎಸ್‌.ದ್ವಾರಕಾನಾಥ್‌ ಒತ್ತಾಯಿಸಿದರು. ಮೈಸೂರು ವಿವಿ ವತಿಯಿಂದ ಕ್ರಾಫ‌ರ್ಡ್‌ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಜನ್ಮದಿನಾಚರಣೆಯಲ್ಲಿ ಮಾತನಾಡಿ, ಒಡೆಯರ್‌ ಅವರು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವ ಜತೆಗೆ ಮಹಿಳೆಯರ ಏಳಿಗೆಗೆ ಶ್ರಮಿಸಿದ್ದರು ಎಂದರು.

ಅಲ್ಲದೆ ವಾಣಿವಿಲಾಸ ಆಸ್ಪತ್ರೆ, ರೇಷ್ಮೆ ನೇಯ್ಗೆ ಕಾರ್ಖಾನೆ ಸ್ಥಾಪನೆ ಸೇರಿದಂತೆ ಸಮಾಜದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಹೀಗಾಗಿ ಮೈಸೂರು ವಿವಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ಹೆಸರನ್ನು ಇಡಬೇಕಿತ್ತು. ಮಾನಸಗಂಗೋತ್ರಿಯ ಮುಖ್ಯದ್ವಾರದಲ್ಲಿ ಕುವೆಂಪು ಪ್ರತಿಮೆ ಸ್ಥಾಪಿಸಲಾಗಿದೆ. ಒಂದೊಮ್ಮೆ ಕುವೆಂಪು ಬದುಕಿದ್ದರೆ ಪ್ರತಿಮೆ ಪ್ರತಿಷ್ಠಾಪಿಸಲು ಮುಂದಾದವರ ಕಪಾಳಕ್ಕೆ ಬಾರಿಸಿ ನಾಲ್ವಡಿ ಕೃಷ್ಣರಾಜ ಒಡೆಯರ್‌ರ ಪ್ರತಿಮೆ ಸ್ಥಾಪಿಸುವಂತೆ ಹೇಳುತ್ತಿದ್ದರು. ಆದರೆ ಅದೃಷ್ಟವಶಾತ್‌ ವಿವಿ ಕಾರ್ಯಸೌಧದ ಎದುರು ಅವರ ಪ್ರತಿಮೆ ಸ್ಥಾಪಿಸಿರುವುದು ಸಂತೋಷದ ಸಂಗತಿ ಎಂದು ಅಭಿಪ್ರಾಯಪಟ್ಟರು.

ಮೈಸೂರು ವಿವಿಗೆ ಇದೇ ಮೊದಲ ಬಾರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ಜನ್ಮ ದಿನಾಚರಣೆ ಆಚರಿಸಲಾಗುತ್ತಿದೆ. ಆದರೆ ಏಕೆ ಇಷ್ಟು ವರ್ಷಗಳವರೆಗೆ ಆಚರಣೆ ಮಾಡಲಿಲ್ಲ ಎಂಬುದು ಪ್ರಶ್ನಾರ್ಥಕವಾಗಿದ್ದು, ಬಹುಶಃ ಬಹುಜನ ಚಳವಳಿ ಹುಟ್ಟದಿದ್ದರೆ ಕೆಲವು ವೈದಿಕ ಮನಸ್ಸುಗಳು ನಾಲ್ವಡಿ ಅವರನ್ನು ಪರಿಚಯಿಸದೆ, ಅವರನ್ನು ಕತ್ತಲಲ್ಲಿಯೇ ಇಡುವ ಪ್ರಯತ್ನ ಮಾಡುತ್ತಿದ್ದಮ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮೈಸೂರು ವಿವಿ ಪ್ರಭಾರ ಕುಲಪತಿ ಪ್ರೊ.ದಯಾನಂದ ಮಾನೆ ಮಾತನಾಡಿ, ಈ ಹಿಂದೆ ಮೈಸೂರು ವಿವಿ ಕ್ರಾಪರ್ಡ್‌ ಭವನದಲ್ಲಿ ವಿಶ್ರಾಂತ ಕುಲಪತಿಗಳ ಭಾವಚಿತ್ರವಿತ್ತು. ಆದರೆ ಇದೀಗ ನಾಲ್ವಡಿ ಕೃಷ್ಣರಾಜ ಒಡೆಯರ್‌ರ ಭಾವಚಿತ್ರವನ್ನು ಅಳವಡಿಸಲಾಗಿದೆ. ಅಲ್ಲದೆ ಮೈಸೂರು ವಿಶ್ವವಿದ್ಯಾನಿಲಯಕ್ಕೆ ವಿವಿಯ ಸಂಸ್ಥಾಪಕ ನಾಲ್ವಡಿ ಕೃಷ್ಣರಾಜ ಒಡೆಯರ್‌ರ ಹೆಸರನ್ನು ಮೈಸೂರು ವಿವಿಗೆ ನಾಮಕರಣ ಮಾಡುವ ನಿಟ್ಟಿನಲ್ಲಿ ಜೂ.22ರಂದು ಸಿಂಡಿಕೇಟ್‌ ಸಭೆ ಕರೆಯಲಾಗಿದ್ದು, ತೀರ್ಮಾನಿಸಿ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು ಎಂದು ತಿಳಿಸಿದರು. ಮೈಸೂರು ವಿವಿ ಕುಲಸಚಿವೆ ಭಾರತಿ, ಪರೀûಾಂಗ ಕುಲಸಚಿವ ಪೊ.ಜೆ.ಸೋಮಶೇಖರ್‌ ಇದ್ದರು.

ದಾಖಲೆ ಇದ್ದರೆ ಪುರಾವೆ ಸಹಿತ ನಿರೂಪಿಸಿ: ಇತ್ತೀಚೆಗೆ ಪ್ರಕಟಗೊಂಡ ಪ್ರೊ.ಪಿ.ವಿ.ನಂಜರಾಜ ಅರಸು ಅವರ ನಾನು ಕನ್ನಂಬಾಡಿಕಟ್ಟೆ… ಹೀಗೊಂದು ಆತ್ಮಕಥೆ ಕೃತಿಯಲ್ಲಿ ಇತಿಹಾಸ ತಿರುಚುವ ಪ್ರಯತ್ನ ಮಾಡಲಾಗಿದೆ ಎಂಬ ಆರೋಪಗಳು ಕೇಳಿ ಬರುತ್ತಿದೆ. ಆದರೆ ಕೃತಿ ಲೇಖಕ ಪ್ರೊ.ಪಿ.ವಿ.ನಂಜರಾಜ ಅರಸು ಇತಿಹಾಸವನ್ನು ಸರಿಪಡಿಸುವ ಕೆಲಸ ಮಾಡಿದ್ದಾರೆ. ಸರ್‌ ಎಂ.ವಿಶ್ವೇಶ್ವರಯ್ಯ ಉತ್ತಮ ಜಾnನಿಯಾಗಿದ್ದು, ಅವರ ಬಗ್ಗೆ ತಮಗೆ ಅಪಾರ ಗೌರವವಿದೆ. ಕನ್ನಂಬಾಡಿ ಕಟ್ಟೆ ನಿರ್ಮಾಣದಲ್ಲಿ 8 ಎಂಜಿನಿಯರ್‌ಗಳು ಕೆಲಸ ಮಾಡಿದ್ದು, ಅವರಲ್ಲಿ ಸರ್‌ ಎಂ.ವಿಶ್ವೇಶ್ವರಯ್ಯ ಸಹ ಒಬ್ಬರಾಗಿದ್ದಾರೆ.

ಕೆಂಗಲ್‌ ಹನುಮಂತಯ್ಯ ವಿಧಾನಸೌಧ ಕಟ್ಟಿದವರು ಅವರ ಹೆಸರನ್ನು ಹೇಳಲಿದ್ದು, ವಿಧಾನಸೌಧ ನಿರ್ಮಾಣಕ್ಕಾಗಿ ಶ್ರಮಿಸಿದವರ ಹೆಸರು ಹೊರ ಬರುವುದಿಲ್ಲ. ಅದೇ ರೀತಿಯಲ್ಲಿ ನಂಜರಾಜ ಅರಸು ತಮ್ಮ ಕೃತಿಯಲ್ಲಿ ವಾಸ್ತವ ಸತ್ಯ ಹೊರ ಹಾಕಿದ್ದಾರೆ. ಆದರೆ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಕೃತಿ ಕುರಿತು ಇಲ್ಲಸಲ್ಲದ ಆರೋಪ ಮಾಡುತ್ತಿದ್ದು, ಕೃತಿಯಲ್ಲಿರುವಂತೆ ಕೆಆರ್‌ಎಸ್‌ ಅಣ್ಣೆಕಟ್ಟೆ ಕಟ್ಟಿದವರು ಸರ್‌ ಎಂ.ವಿಶ್ವೇಶ್ವೇರಯ್ಯ ಅಲ್ಲ ಎಂಬ ಉಲ್ಲೇಖ ಸುಳ್ಳು ಎನ್ನುವವರು ದಾಖಲೆ, ಆಧಾರವಿದ್ದರೆ ಪುರಾವೇ ಸಹಿತ ನಿರೂಪಿಸಲಿ ಎಂದು ಸವಾಲು ಹಾಕಿದರು.

ಟಾಪ್ ನ್ಯೂಸ್

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಸ್ಲೀಪರ್ ಕೋಚ್ ಬಸ್ ಪಲ್ಟಿ: ಓರ್ವ ಮೃತ್ಯು; 11 ಮಂದಿಗೆ ಗಾಯ

Road Mishap ಸ್ಲೀಪರ್ ಕೋಚ್ ಬಸ್ ಪಲ್ಟಿ: ಓರ್ವ ಮೃತ್ಯು; 11 ಮಂದಿಗೆ ಗಾಯ

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Untitled-1

Kasaragod ಅಪರಾಧ ಸುದ್ದಿಗಳು

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

Suspend

MLA ಇ. ಚಂದ್ರಶೇಖರನ್‌ ವಿರುದ್ಧ ಫೇಸ್‌ಬುಕ್‌ ಪೋಸ್ಟ್‌; ಡೆಪ್ಯೂಟಿ ತಹಶೀಲ್ದಾರ್‌ ಅಮಾನತು

POlice

Kundapura: ನಿಂದನೆ, ಜೀವ ಬೆದರಿಕೆ: ಕೇಸು ದಾಖಲು

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.