ಬಿಲ್‌ ಕಟ್ಟದಿದ್ದರೆ ನಗರದಲ್ಲಿನ ಸರ್ಕಾರಿ ಶಾಲೆಗಳ ಕರೆಂಟ್‌ ಕಟ್‌


Team Udayavani, Jun 20, 2023, 1:11 PM IST

ಬಿಲ್‌ ಕಟ್ಟದಿದ್ದರೆ ನಗರದಲ್ಲಿನ ಸರ್ಕಾರಿ ಶಾಲೆಗಳ ಕರೆಂಟ್‌ ಕಟ್‌

ನಂಜನಗೂಡು: ಅತ್ತ ಶಿಕ್ಷಣ ಇಲಾಖೆಯೂ ಹಣ ನೀಡಿಲ್ಲ, ಇತ್ತ ಸ್ಥಳೀಯ ಸಂಸ್ಥೆಗಳು ಪಾವತಿಸುತ್ತಿಲ್ಲ, ಇನ್ನೂ ವಿದ್ಯಾರ್ಥಿಗಳಿಂದಲೂ ವಸೂಲಿ ಮಾಡುವಂತಿಲ್ಲ, ಹೀಗಾದ್ರೆ ಸರ್ಕಾರಿ ಶಾಲೆಗಳ ವಿದ್ಯುತ್‌ ಬಿಲ್‌ ಕಟ್ಟುವುದು ಹೇಗೆ?, ಬಿಲ್‌ ಬಾಕಿ ಕಟ್ಟದಿದ್ದರೆ ಸೆಸ್ಕ್ ನವರು ಸಂಪರ್ಕ ಕಡಿತ ಮಾಡುವುದಾಗಿ ಎಚ್ಚರಿಕೆ ನೀಡಿದ್ದು, ಮಕ್ಕಳಿಗೆ ಕಂಪ್ಯೂಟರ್‌, ಲ್ಯಾಬ್‌, ಪಾಠ ಪ್ರವಚನ ಹೇಗೆ ಮಾಡುವುದು ಎಂಬ ಚಿಂತೆ ಸರ್ಕಾರಿ ಶಾಲಾ ಶಿಕ್ಷಕರನ್ನು ಕಾಡುತ್ತಿದೆ.

ನಂಜನಗೂಡು ಸರ್ಕಾರಿ ಬಾಲಕಿಯರ ಶಾಲೆಯ ವಿದ್ಯುತ್‌ ಬಿಲ್‌ ಬಾಕಿ 15,000 ರೂ., ಬಾಲಕರ ಪ್ರೌಢಶಾಲೆಯ ಬಿಲ್‌ ಬಾಕಿ 19,000 ರೂ. ಇದ್ದು, ನಗರ ವ್ಯಾಪ್ತಿಯ ಪ್ರಾಥಮಿಕ, ಹಿರಿಯ ಪ್ರಾಥಮಿಕ ಶಾಲೆಗಳ ಬಿಲ್‌ ತಲಾ 10 ಸಾವಿರ ರೂ. ದಾಟಿದೆ ಎನ್ನಲಾಗಿದೆ. ಈ ಹಣವನ್ನು 30 ದಿನದಲ್ಲಿ ಪಾವತಿಸದೇ ಇದ್ದಲ್ಲಿ ಮಕ್ಕಳ ಲ್ಯಾಬ್‌, ಕಂಪ್ಯೂಟರ್‌ ಶಿಕ್ಷಣ ಕೊನೆಗೆ ಶೌಚಾಲಯಗಳ ನಿರ್ವಹಣೆ ಹೇಗೆ ಎಂಬ ಆತಂಕ ಶಾಲಾ ಮುಖ್ಯಸ್ಥರನ್ನು ಕಾಡತೊಡಗಿದೆ.

ಯಾವುದೇ ಆದಾಯ ಇಲ್ಲ: ಮಕ್ಕಳಿಂದ ಪ್ರವೇಶ ಶುಲ್ಕ ಹೊರತುಪಡಿಸಿ, ಯಾವುದೇ ಶುಲ್ಕ ವಸೂಲಿ ಮಾಡುವಂತಿಲ್ಲ, ಇನ್ನು ಶಾಲೆಗಳಿಗೆ ಬೇರೆ ರೂಪದ ಆದಾಯಗಳು ಇಲ್ಲ, ಹೀಗಿರುವಾಗ ವಿದ್ಯುತ್‌ ಹಣ ಪಾವತಿ ಹೇಗೆ ಎಂಬ ಚಿಂತೆ ಬಹುತೇಕ ಸರ್ಕಾರಿ ಶಾಲೆಯನ್ನು ಕಾಡತೊಡಗಿದೆ. ಈ ಸಮಸ್ಯೆ ನಗರದಲ್ಲಿನ ಪ್ರಾಥಮಿಕ, ಹಿರಿಯ ಪ್ರಾಥಮಿಕ, ಪ್ರೌಢಶಾಲೆಗಳನ್ನು ಆವರಿಸಿದೆ.

ಸಂಪರ್ಕ ಕಡಿತದ ಎಚ್ಚರಿಕೆ: ಸೆಸ್ಕ್ನಿಂದ ವಿದ್ಯುತ್‌ ಬಿಲ್‌ ಬಾಕಿ ವಸೂಲಾತಿಗೆ ಟಾರ್ಗೆಟ್‌ ನೀಡಿರುವುದರಿಂದ ಅಲ್ಲಿನ ಸಿಬ್ಬಂದಿ, ಬೀಲ್‌ ನೀಡಿ, 15 ದಿನದಲ್ಲಿ ಬಾಕಿ ಸಹಿತ ಹಣ ಪಾವತಿಸದಿದ್ದರೆ ಬಡ್ಡಿ ಹಾಕಲಾಗುತ್ತೆ, 30 ದಿನದಲ್ಲಿ ಪಾವತಿಯಾಗದಿದ್ದರೆ ಕಟ್ಟಡದ ವಿದ್ಯುತ್‌ ಸಂಪರ್ಕ ಸ್ಥಗಿತ ಮಾಡಲಾಗುತ್ತದೆ ಎಂಬ ಎಚ್ಚರಿಕೆಯನ್ನೂ ನೀಡಲಾಗಿದೆ.

ಶಿಕ್ಷಣ ಸಂಸ್ಥೆಯಲ್ಲಿ ವಿದ್ಯುತ್‌ ನಿರ್ವಹಣೆಗಾಗಿ ಯಾವುದೇ ಹಣ ಇಲ್ಲ. ಅದನ್ನು ಸ್ಥಳೀಯ ಸಂಸ್ಥೆಗಳೇ ಭರ್ತಿ ಮಾಡಿದರೆ ಮಕ್ಕಳ ಶಿಕ್ಷಣಕ್ಕೆ ಅನುಕೂಲ. ●ಶಿವಲಿಂಗಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ.

ನಗರಸಭಾ ವ್ಯಾಪ್ತಿಯ ಸರ್ಕಾರಿ ಶಾಲೆಗಳಿಗೆ ಈ ಬಾಬ್ತು ಹಣ ನೀಡಲು ಅವಕಾಶ ಇದೆ. ಈ ಕುರಿತು 21-12 -22ರಂದು ನಗರ ವ್ಯಾಪ್ತಿಯ 16 ಶಾಲೆಗಳು ಅಧಿಕೃತವಾಗಿ ನಗರಸಭೆಗೆ ಮನವಿ ಮಾಡಿವೆ. ಅವರ ಉತ್ತರವನ್ನು ಕಾಯಲಾಗುತ್ತಿದೆ. ● ಶಾಲಾ ಮುಖ್ಯಸ್ಥರು. ‌

ಸರ್ಕಾರಿ ಶಾಲೆಗಳಲ್ಲಿನ ವಿದ್ಯುತ್‌ ಬಿಲ್‌ ಸಮಸ್ಯೆ ಇದೀಗ ತಮ್ಮ ಗಮನಕ್ಕೆ ಬಂದಿದೆ. ತಕ್ಷಣ ವಿದ್ಯುತ್‌ ಸ್ಥಗಿತ ಮಾಡದಂತೆ ಸೆಸ್ಕ್ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಪಾವತಿಗೆ ಶಿಕ್ಷಣ ಇಲಾಖೆಯಲ್ಲಿ ಹಣ ಇಲ್ಲವಾದ್ದರಿಂದ ಬದಲಿ ವ್ಯವಸ್ಥೆಯತ್ತ ಯೋಚಿಸಬೇಕಿದೆ. ●ದರ್ಶನ್‌ ಧ್ರುವನಾರಾಯಣ, ಶಾಸಕ. ‌

ಸರ್ಕಾರಿ ಶಾಲೆಗಳಿಗೆ ವಿದ್ಯುತ್‌ ಬಿಲ್‌ ಪಾವತಿಗಾಗಿ ಸಾಕಷ್ಟು ಕಾಲಾವಕಾಶ ನೀಡಲಾಗಿದೆ. ಸೆಸ್ಕ್ ನಮಗೆ ಬಾಕಿ ವಸೂಲಿಗಾಗಿ ಟಾರ್ಗೆಟ್‌ ನೀಡಿದೆ. ನಾವೀಗ ವಸೂಲಿ ಮಾಡಲು ಕಠಿಣ ಕ್ರಮಕ್ಕೆ ಮುಂದಾಗುವುದು ಅನಿವಾರ್ಯ. ●ಕಿರಣ, ನಂಜನಗೂಡು ಸೆಸ್ಕ್ ಅಧಿಕಾರಿ.

ಪ್ರಸಕ್ತ ಸಾಲಿನ ನಗರಸಭೆ ಮುಂಗಡ ಪತ್ರದಲ್ಲಿ 16 ಸರ್ಕಾರಿ ಶಾಲೆಗಳ ವಿದ್ಯುತ್‌ ಬಿಲ್‌ ಪಾವತಿಗಾಗಿ 10 ಲಕ್ಷ ರೂ. ಕಾಯ್ದಿರಿಸಲಾಗಿದೆ. ●ಕಪೀಲೇಶ, ನಗರಸಭಾ ಸದಸ್ಯ

ಸರ್ಕಾರಿ ಶಾಲೆಗಳ ವಿದ್ಯುತ್‌ ಶುಲ್ಕ ಪಾವತಿಗೆ ನಗರಸಭೆಯಲ್ಲಿ ಅವಕಾಶ ಇಲ್ಲ. ●ಶ್ರೀನಿವಾಸ್‌, ನಗರಸಭೆ ಇಇ

-ಶ್ರೀಧರ್‌ ಆರ್‌. ಭಟ್‌

ಟಾಪ್ ನ್ಯೂಸ್

anjura-roll

Recipe: ಈ ಬಾರಿಯ ಹಬ್ಬಕ್ಕೆ ಸಕ್ಕರೆ-ಬೆಲ್ಲ ಬಳಸದೇ ಈ ಸಿಹಿ ಖಾದ್ಯ ತಯಾರಿಸಿ

Bulldozer Action:ಬುಲ್ಡೋಜರ್‌ ಕಾರ್ಯಾಚರಣೆ-ಅಸ್ಸಾಂ ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ನೋಟಿಸ್

Bulldozer Action:ಬುಲ್ಡೋಜರ್‌ ಕಾರ್ಯಾಚರಣೆ-ಅಸ್ಸಾಂ ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ನೋಟಿಸ್

Mudhol: ಪ್ರತಿಯೊಂದರಲ್ಲೂ ರಾಜಕೀಯ ಸರಿಯಲ್ಲ: ಸಚಿವ ಆರ್.ಬಿ. ತಿಮ್ಮಾಪುರ

Mudhol: ಪ್ರತಿಯೊಂದರಲ್ಲೂ ರಾಜಕೀಯ ಸರಿಯಲ್ಲ: ಸಚಿವ ಆರ್.ಬಿ. ತಿಮ್ಮಾಪುರ

INDvsBAN: ಟೆಸ್ಟ್‌ ನಲ್ಲಿ ಟಿ20ಯಂತೆ ಬ್ಯಾಟ್‌ ಬೀಸಿದ ಭಾರತ; ರೋಚಕತೆಯತ್ತ ಪಂದ್ಯ

INDvsBAN: ಟೆಸ್ಟ್‌ ನಲ್ಲಿ ಟಿ20ಯಂತೆ ಬ್ಯಾಟ್‌ ಬೀಸಿದ ಭಾರತ; ರೋಚಕತೆಯತ್ತ ಪಂದ್ಯ

Bangaluru: ಜಿಗಣಿಯಲ್ಲಿ ನೆಲೆಸಿದ್ದ ಪಾಕ್‌ ಕುಟುಂಬ ಸದಸ್ಯರ ಬಂಧನ, ಮಕ್ಕಳೊಂದಿಗೆ ವಾಸ!

Bangaluru: ಜಿಗಣಿಯಲ್ಲಿ ನೆಲೆಸಿದ್ದ ಪಾಕ್‌ ಕುಟುಂಬ ಸದಸ್ಯರ ಬಂಧನ, ಮಕ್ಕಳೊಂದಿಗೆ ವಾಸ!

Dandeli : ಸರಣಿ ಕಳ್ಳತನ ಪ್ರಕರಣ… ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ

Dandeli : ಸರಣಿ ಕಳ್ಳತನ ಪ್ರಕರಣ… ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ

Tusshar Kapoor: ʼಗೋಲ್‌ ಮಾಲ್‌ʼ ನಟ ತುಷಾರ್‌ ಕಪೂರ್‌ ಫೇಸ್‌ಬುಕ್‌ ಖಾತೆ ಹ್ಯಾಕ್

Tusshar Kapoor: ʼಗೋಲ್‌ ಮಾಲ್‌ʼ ನಟ ತುಷಾರ್‌ ಕಪೂರ್‌ ಫೇಸ್‌ಬುಕ್‌ ಖಾತೆ ಹ್ಯಾಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag: ನೀರಿನಲ್ಲಿ ಕೊಚ್ಚಿಹೋದ ಯುವಕರು; ಓರ್ವನ ಶವ ಪತ್ತೆ, ಮತ್ತೋರ್ವನಿಗೆ ಶೋಧ

Gadag: ನೀರಿನಲ್ಲಿ ಕೊಚ್ಚಿಹೋದ ಯುವಕರು; ಓರ್ವನ ಶವ ಪತ್ತೆ, ಮತ್ತೋರ್ವನಿಗೆ ಶೋಧ

Mahisha

Mysuru: ಮಹಿಷಾ ಪ್ರತಿಮೆ ಪುಷ್ಪಾರ್ಚನೆಗೆ ಪೊಲೀಸರ ತಡೆ: ಆಕ್ರೋಶ

CM-Ashokapuram

Mysuru: ನಾನು ಹೆದರುವ, ಜಗ್ಗುವ, ಬಗ್ಗುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

1-bahga

K.S.Bhagawan ವಿವಾದ;ಮಾನ ಮರ್ಯಾದೆ ಇದ್ದರೆ ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಬೇಕು…

Yadhu

Udupi: ಚಾಮುಂಡಿ ಬೆಟ್ಟದ ಮೇಲೆ ಮಹಿಷ ದಸರಾ ಸರಿಯಲ್ಲ: ಸಂಸದ ಯದುವೀರ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

anjura-roll

Recipe: ಈ ಬಾರಿಯ ಹಬ್ಬಕ್ಕೆ ಸಕ್ಕರೆ-ಬೆಲ್ಲ ಬಳಸದೇ ಈ ಸಿಹಿ ಖಾದ್ಯ ತಯಾರಿಸಿ

Python Rescue: ಬೃಹತ್ ಗಾತ್ರದ ಹೆಬ್ಬಾವು ಸೆರೆ

Python Rescue: ಬೃಹತ್ ಗಾತ್ರದ ಹೆಬ್ಬಾವು ಸೆರೆ

Bulldozer Action:ಬುಲ್ಡೋಜರ್‌ ಕಾರ್ಯಾಚರಣೆ-ಅಸ್ಸಾಂ ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ನೋಟಿಸ್

Bulldozer Action:ಬುಲ್ಡೋಜರ್‌ ಕಾರ್ಯಾಚರಣೆ-ಅಸ್ಸಾಂ ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ನೋಟಿಸ್

janaka kannada movie

Sandalwood: ತಂದೆ-ಮಗನ ಕಥಾಹಂದರ ʼಜನಕʼ

Mudhol: ಪ್ರತಿಯೊಂದರಲ್ಲೂ ರಾಜಕೀಯ ಸರಿಯಲ್ಲ: ಸಚಿವ ಆರ್.ಬಿ. ತಿಮ್ಮಾಪುರ

Mudhol: ಪ್ರತಿಯೊಂದರಲ್ಲೂ ರಾಜಕೀಯ ಸರಿಯಲ್ಲ: ಸಚಿವ ಆರ್.ಬಿ. ತಿಮ್ಮಾಪುರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.