ಹುಲಿರಾಯನ ಎಣಿಕೆಗೆ ಕ್ಷಣಗಣನೆ ಶುರು


Team Udayavani, Jan 6, 2018, 6:25 AM IST

Tiger-062018.jpg

ಹುಣಸೂರು: ರಾಷ್ಟ್ರೀಯ ಹುಲಿ ಗಣತಿ-2018ರ ಕಾರ್ಯಕ್ಕೆ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ಅರಣ್ಯ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ.

ಜನವರಿ 17ರ ವರೆಗೆ ರಾಜ್ಯದ ಎಲ್ಲ ವನ್ಯಜೀವಿ ತಾಣ ಹಾಗೂ ಜನವರಿ 15 ರಿಂದ ಫೆಬ್ರವರಿ 3 ರವರೆಗೆ ಪ್ರಾದೇಶಿಕ ವಿಭಾಗಗಳಲ್ಲಿ ಗಣತಿ ಕಾರ್ಯ ನಡೆಯಲಿದೆ. 

ಹುಲಿ ಗಣತಿಯಿಂದಾಗಿ ಉದ್ಯಾನದಲ್ಲಿನ ವನ್ಯಜೀವಿಗಳ ಆವಾಸ ಸ್ಥಾನಗಳ ಸ್ಥಿತಿಗತಿ ಬಗ್ಗೆ, ಮಾಂಸಹಾರಿ-ಸಸ್ಯಹಾರಿ ಪ್ರಾಣಿಗಳ ಆಹಾರದ ಸಮತೋಲನ ಸ್ಥಿತಿ, ಅವುಗಳ ಸಂರಕ್ಷಣೆ ಮತ್ತು ಉದ್ಯಾನದ ನಿರ್ವಹಣೆಗೆ ಹುಲಿ ಗಣತಿ ಅನುಕೂಲವಾಗಲಿದೆ.

68 ಬೀಟ್‌-272 ಸಿಬ್ಬಂದಿ: ನಾಗರಹೊಳೆ ಉದ್ಯಾನದ 8 ವಲಯಗಳಿಂದ 68 ಬೀಟ್‌(ತಂಡ)ಗಳನ್ನು ರಚಿಸಲಾಗಿದ್ದು, ತಂಡದಲ್ಲಿ ಒಬ್ಬ ಗಾರ್ಡ್‌ ಸೇರಿ ನಾಲ್ಕು ಮಂದಿ ಇರುತ್ತಾರೆ. ಈಗಾಗಲೇ ಗುರುತಿಸಿರುವ 2 ಕಿ.ಮೀ. ಟ್ರಾÂಜಾಕ್ಟ್ಲೆನ್‌ನಲ್ಲಿ ಗಣತಿಕಾರ್ಯ ನಡೆಸಲಿದ್ದು, ಪ್ರತಿದಿನದ ಮಾಹಿತಿಯನ್ನು ನಿಗದಿತ ಫಾರಂಗಳಲ್ಲಿ ದಾಖಲಿಸಲಾಗುವುದು. ಮಾಂಸಹಾರಿ ಪ್ರಾಣಿಗಳಾದ ಹುಲಿ, ಚಿರತೆ ಮತ್ತಿತರ ಪ್ರಾಣಿಗಳ ಹೆಜ್ಜೆ, ಮಲದ ಮೂಲಕ ಹಾಗೂ ಸಸ್ಯಹಾರಿ ಪ್ರಾಣಿಗಳಾದ ಆನೆ, ಕಾಡೆಮ್ಮೆ, ಜಿಂಕೆ, ಮೊಲ, ಕಾಡುಕುರಿ, ಮುಳ್ಳುಹಂದಿ, ಕಾಡುಹಂದಿ ಸೇರಿ ಸಸ್ಯಹಾರಿ ಪ್ರಾಣಿಗಳ ಹಿಕ್ಕೆ, ಹೆಜ್ಜೆ ಗುರುತು ಪತ್ತೆ ಹಚ್ಚುವುದು ಮತ್ತು ಅವುಗಳಿಗೆ ಸಿಗುವ ಆಹಾರದ ಬಗ್ಗೆ ದಿಕ್ಸೂಚಿ ಬಳಸಿಕೊಂಡು ಟ್ರ್ಯಾಂಜಾಕ್ಟ್ ಲೆನ್‌ ಮೂಲಕ ಗುರುತಿಸಿ, ನಿಗದಿತ ಪ್ರತ್ಯೇಕ ಫಾರಂಗಳಲ್ಲಿ ದಾಖಲು ಮಾಡಲಾಗುವುದು. ಕಾಡಂಚಿನ ಗ್ರಾಮಗಳ ಸಾಕು ಪ್ರಾಣಿಗಳಿಂದ ಕಾಡಿನ ಮೇಲೆ ಒತ್ತಡವಿದೆಯೇ ಎಂಬುದನ್ನು ಸಹ ದಾಖಲಿಸಬೇಕು.

ಹಂತ ಹಂತವಾಗಿ ಗಣತಿ: ಗಣತಿ ಕಾರ್ಯದಲ್ಲಿ ಈ ಹಿಂದೆ ಆನೆ ಗಣತಿ ಸಂದರ್ಭದಲ್ಲಿ ನಿರ್ಮಿಸಿರುವ ಟ್ರ್ಯಾಂಜಾಕ್ಟ್ ಲೆನ್‌ಅನ್ನೇ ಈ ಗಣತಿಗೂ ಬಳಸಲಾಗುತ್ತಿದೆ. ಎರಡು ದಿನ ಗಣತಿಯ ಸಿದ್ಧತೆ, ಮೂರು ದಿನ ಮಾಂಸಹಾರಿ ಪ್ರಾಣಿ, ನಂತರದ ಮೂರುದಿನ ಸಸ್ಯಹಾರಿ ಪ್ರಾಣಿಗಳ ಮತ್ತು ಸಸ್ಯ ಸಂಪತ್ತಿನ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತದೆ. ಗಣತಿ ಕಾರ್ಯದ ಬಗ್ಗೆ ಪ್ರಾತ್ಯಕ್ಷತೆ ಮೂಲಕ ನಾಗರಹೊಳೆ ಎಸಿಎಫ್ ಅಂಟೋನಿಪೌಲ್‌, ವೀರನಹೊಸಹಳ್ಳಿ ವಲಯದ ಆರ್‌ಎಫ್ಒ ಮಧುಸೂಧನ್‌, ಡಿಆರ್‌ಎಫ್ಒ ನವೀನ್‌, ಅರಣ್ಯ ರಕ್ಷಕ ಪ್ರವೀಣ್‌ ಹಾಗೂ ನ್ಯಾಚುರಲಿಸ್ಟ್‌ ಗೋಪಿ ತರಬೇತಿ ನೀಡಿದರು.

ವಲಯ ಅರಣ್ಯಾಧಿಕಾರಿಗಳಾದ ಶಿವರಾಂ, ಕಿರಣ್‌ಕುಮಾರ್‌, ಅರವಿಂದ್‌, ಸುಬ್ರಹ್ಮಣ್ಯ, ಸುರೇಂದ್ರ, ಶರಣಬಸಪ್ಪ ಸೇರಿ 250ಕ್ಕೂ ಹೆಚ್ಚು ಸಿಬ್ಬಂದಿ ತರಬೇತಿಯಲ್ಲಿ ಭಾಗವಹಿಸಿದ್ದರು. ನಾಗರಹೊಳೆ ಉದ್ಯಾನ 643 ಚದರ ಕಿ.ಮೀ.ಇದ್ದು, 8 ವಲಯಗಳಿವೆ.  ಉದ್ಯಾನದ ಕಡಿಮೆ ಪ್ರದೇಶದಲ್ಲಿ ಹುಲಿಗಳ ಸಾಂದ್ರತೆ ಹೆಚ್ಚಿರುವುದರಿಂದ ಈ ಉದ್ಯಾನ ಮಹತ್ವ ಪಡೆದಿದೆ. ಈಗಾಗಲೇ ಹುಲಿಗಣತಿಗೆ ಸಕಲ ಸಿದ್ಧತೆಯಾಗಿದ್ದು, ತರಬೇತಿ ಮೂಲಕ ಸಿಬ್ಬಂದಿಯನ್ನು ಅಣಿಗೊಳಿಸಲಾಗಿದೆ ಎಂದು ಎಸಿಎಫ್ ಪ್ರಸನ್ನಕುಮಾರ್‌ “ಉದಯವಾಣಿಗೆ’ ಮಾಹಿತಿ ನೀಡಿದರು.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.