ದಳದಲ್ಲೇ ಜಿಟಿಡಿ ಉಳಿಸಿಕೊಳ್ಳಲು ಹೊಸ ದಾಳ

ಪತ್ನಿಗೆ ಎಂಎಲ್‌ಸಿ ಟಿಕೆಟ್‌, ಪುತ್ರನಿಗೆ ಹುಣಸೂರು ಅಸೆಂಬ್ಲಿ ಟಿಕೆಟ್‌ ಭರವಸೆ „ ಜೆಡಿಎಸ್‌ ದಾಳಕ್ಕೆ ಜಿಟಿ ದೇವೇಗೌಡರು ಬೀಳುವುದು ಅನುಮಾನ

Team Udayavani, Nov 14, 2021, 12:29 PM IST

GT DEVEGAWDA POLITICS

ಮೈಸೂರು: ಮೈಸೂರು-ಚಾಮರಾಜನಗರ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಜಾತ್ಯತೀತ ಜನತಾದಳ ಹಾಗೂ ಬಿಜೆಪಿ ತನ್ನದೇ ಆದ ದಾಳವನ್ನು ಉರುಳಿಸಿದೆ. ಆದರೆ, ಈ ಎರಡು ದಾಳಗಳು ಯಶಸ್ವಿಯಾಗುವುದು ಅನುಮಾನ.

ಜೆಡಿಎಸ್‌ ಉರುಳಿಸಿರುವ ದಾಳ ಪಕ್ಷದಿಂದ ದೂರ ಸರಿದಿರುವ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡರನ್ನು ಪಕ್ಷದಲ್ಲೇ ಉಳಿಸಿಕೊಳ್ಳುವ ಪ್ರಯತ್ನದ ಒಂದು ಭಾಗವಾಗಿದೆ. ಸ್ಥಳೀಯ ಸಂಸ್ಥೆ ಗಳಿಂದ ವಿಧಾನಪರಿಷತ್ತಿಗೆ ನಡೆಯುವ ಚುನಾವಣೆ ಯಲ್ಲಿ ಜಿ.ಟಿ.ದೇವೇಗೌಡರನ್ನು ಪಕ್ಷದಲ್ಲೇ ಇರುವಂತೆ ಒಲಿಸಿಕೊಳ್ಳಲು ಜಿ.ಟಿ.ದೇವೇಗೌಡರ ಪತ್ನಿ ಲಲಿತಾ ದೇವೇಗೌಡರಿಗೆ ಟಿಕೆಟ್‌ ನೀಡಲು ಮುಂದಾಗಿದೆ.

ಇದನ್ನೂ ಓದಿ:-ಸೆಮಿ ಸೋಲಿನ ಬಳಿಕ ಅಭಿಮಾನಿಗಳ ಬಳಿ ಕ್ಷಮೆ ಕೇಳಿದ ಪಾಕ್ ವೇಗಿ ಹಸನ್ ಅಲಿ

ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ಹುಣ ಸೂರು ಕ್ಷೇತ್ರದಿಂದ ಜಿ.ಟಿ.ದೇವೇಗೌಡರ ಪುತ್ರ ಎಂಸಿ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಜಿ.ಡಿ.ಹರೀಶ್‌ ಗೌಡ ಅವರಿಗೂ ಟಿಕೆಟ್‌ ನೀಡುವ ಭರವಸೆ ನೀಡಿದೆ. ಆದರೆ, ಈ ದಾಳಕ್ಕೆ ಜಿ.ಟಿ.ದೇವೇಗೌಡ ಅವರು ಮಣಿದಿಲ್ಲ. ಜೆಡಿಎಸ್‌ನಲ್ಲಿ ತಮ್ಮನ್ನು ಕಟ್ಟಿ ಹಾಕುವ ಪ್ರಯತ್ನ ಇದು ಎಂಬುದು ಅವರ ಲೆಕ್ಕಾಚಾರವಾಗಿದೆ. ಇನ್ನು ವಿಧಾನಪರಿಷತ್‌ ಸದಸ್ಯ ಜೆಡಿಎಸ್‌ನ ಸಂದೇಶ್‌ ನಾಗರಾಜ್‌ ಅವರು ಮೈಸೂರು- ಚಾಮ ರಾಜನಗರ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ ಕೇಳುತ್ತಿದ್ದಾರೆ.

ಆದರೆ, ಬಿಜೆಪಿ ನಾಯಕರ ಲೆಕ್ಕಾಚಾರ ಬೇರೆಯೇ ಇದೆ. ಸಂದೇಶ ನಾಗರಾಜ್‌ ಅವರಿಗೆ ಮೈಸೂರು ಬದಲು ಮಂಡ್ಯ ಜಿಲ್ಲಾ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ ಚುನಾವಣೆಗೆ ಟಿಕೆಟ್‌ ನೀಡಲು ಬಿಜೆಪಿ ಆಸಕ್ತಿ ತೋರಿದೆ. ಈ ಕುರಿತು ಸಂದೇಶ ನಾಗರಾಜ್‌ ಅವರ ಜೊತೆ ಚರ್ಚಿಸಿದೆ. ಆದರೆ, ಇದಕ್ಕೆ ಸಂದೇಶ್‌ ನಾಗರಾಜ್‌ ಸಿದ್ಧರಿಲ್ಲ. ಬಿಜೆಪಿಯ ಕೆಲವು ಮುಖಂಡರು ಮಂಡ್ಯ ಜಿಲ್ಲಾ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿಗೆ ಸ್ಪರ್ಧಿಸುವಂತೆ ನನಗೆ ಆಹ್ವಾನ ನೀಡಿದ್ದಾರೆ. ಆದರೆ, ಇದನ್ನು ನಾನು ಒಪ್ಪಿಲ್ಲ. ಮೈಸೂರು ನನ್ನ ಕಾರ್ಯಕ್ಷೇತ್ರ.

ನಾನೇಕೆ ಮಂಡ್ಯ ಜಿಲ್ಲೆಗೆ ಹೋಗಲಿ? ಎಂದು ಸಂದೇಶ ನಾಗರಾಜ್‌ ಶನಿವಾರ ಉದಯವಾಣಿ ಜೊತೆ ಮಾತಾಡುತ್ತಾ ಪ್ರಶ್ನಿಸಿದರು. ಜೆಡಿಎಸ್‌ ತನ್ನಿಂದ ದೂರ ಸರಿದಿರುವ ಜಿ.ಟಿ. ದೇವೇಗೌಡರ ಮನವೊಲಿಕೆಗೆ ಅವರ ಕುಟುಂಬ ದವರಿಗೆ ಟಿಕೆಟ್‌ ನೀಡಲು ಮುಂದಾಗಿದ್ದರೆ, ಇನ್ನೊಂ ದೆಡೆ ಜೆಡಿಎಸ್‌ ತೊರೆಯಲು ನಿರ್ಧರಿಸಿ ಬಿಜೆಪಿ ಟಿಕೆಟ್‌ ಕೇಳುತ್ತಿರುವ ಸಂದೇಶ್‌ ನಾಗರಾಜ್‌ ಅವರಿಗೆ ಪಕ್ಕದ ಮಂಡ್ಯ ಜಿಲ್ಲೆಯಿಂದ ಸ್ಪರ್ಧಿಸುವಂತೆ ಬಿಜೆಪಿ ಆಫ‌ರ್‌ ನೀಡಿದೆ. ಆದರೆ, ಎರಡು ಪಕ್ಷಗಳು ಉರುಳಿಸಿರುವ ಈ ದಾಳಗಳು ಕೈಗೂಡುವುದು ಅನುಮಾನವಾಗಿದೆ.

            ಎಂಎಲ್ಸಿ ಚುನಾವಣೆಗೆ ನನ್ನ ಕುಟುಂಬದವರು ಸರ್ಧಿಸಲ್ಲ – ನನ್ನ ಕುಟುಂಬದವರು ಎಂಎಲ್‌ಸಿ ಚುನಾವಣೆಯಲ್ಲಿ ಕಣಕ್ಕಿಳಿಯುವ ಪ್ರಶ್ನೆಯೇ ಇಲ್ಲ. ಜೆಡಿಎಸ್‌ನವರು ನನ್ನನ್ನು ಬಿಟ್ಟೇ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪಕ್ಷದ ಅಧ್ಯಕ್ಷರನ್ನು ನೇಮಿಸಿದ್ದಾರೆ. ನನ್ನ ಗಮನಕ್ಕೆ ಬರದೇ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಕುಮಾರಸ್ವಾಮಿ ಬಂದು ಹೋಗಿದ್ದಾರೆ. ಜೆಡಿಎಸ್‌ನಿಂದ ನನ್ನನ್ನು ದೂರ ಇಟ್ಟಿದ್ದಾರೆ’ ಎಂದು ಶಾಸಕ ಜಿ.ಟಿ.ದೇವೇಗೌಡರು ತಿಳಿಸಿದ್ದಾರೆ.

ಜಿಟಿಡಿ ನೇತೃತದಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆ

 ಮೈಸೂರು: ಶಾಸಕ ಜಿ.ಟಿ.ದೇವೇಗೌಡರ ನಾಯ ಕತ್ವದಲ್ಲೇ ಮೈಸೂರು ಜಿಲ್ಲೆಯಲ್ಲಿ ಜೆಡಿಎಸ್‌ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಎದುರಿಸು ತ್ತದೆ. ಅವರ ಕುಟುಂಬದವರೇ ಎಂಎಲ್‌ಸಿ ಚುನಾ ವಣೆಗೆ ಜೆಡಿಎಸ್‌ನಿಂದ ಕಣಕ್ಕಿಳಿದರೂ ಆಶ್ಚರ್ಯ ವಿಲ್ಲ ಎಂದು ಕೆ.ಆರ್‌.ನಗರ ಕ್ಷೇತ್ರದ ಜೆಡಿಎಸ್‌ ಶಾಸಕ, ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರ ಆಪ್ತರಾದ ಸಾ. ರಾ.ಮಹೇಶ್‌ ಹೇಳಿದರು.

ಶನಿವಾರ ಇಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಮೈಸೂರು-ಚಾಮರಾಜನಗರ ಜಿಲ್ಲಾ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿಗೆ ನಡೆ ಯುವ ಚುನಾವಣೆಯಲ್ಲಿ ತಮ್ಮ ಪಕ್ಷದಿಂದ ಬಸಂತ್‌ ನಂಜಪ್ಪ, ವಿವೇಕಾನಂದ, ಅಭಿಷೇಕ್‌, ಕೃಷ್ಣ ನಾಯಕ್‌ ಅವರು ಟಿಕೆಟ್‌ ಆಕಾಂಕ್ಷಿಗಳಾಗಿದ್ದಾರೆ.

ಶಾಸಕ ಜಿ.ಟಿ.ದೇವೇಗೌಡರ ಕುಟುಂಬದಿಂದಲೇ ಅಭ್ಯರ್ಥಿಯಾದರೂ ಆಶ್ಚರ್ಯವಿಲ್ಲ ಎಂದರು. ಶಾಸಕ ಸಂದೇಶ್‌ ನಾಗರಾಜ್‌ ಜೆಡಿಎಸ್‌ ತೊರೆ ಯುವುದಾಗಿ ನೀಡಿರುವ ಹೇಳಿಕೆ ಬಗ್ಗೆ ಗಮನ ಸೆಳೆ ದಾಗ, ಸಂದೇಶ್‌ ನಾಗರಾಜ್‌ ಕಳೆದ ಚುನಾವಣೆ ಯಲ್ಲಿ ಗೆದ್ದ ದಿನವೇ ಅವರು ಜೆಡಿಎಸ್‌ನಲ್ಲಿ ಮುಂದುವರಿಯುವುದು ಮುಗಿದ ಅಧ್ಯಾಯ ವಾಗಿತ್ತು ಎಂದರು.

ಟಾಪ್ ನ್ಯೂಸ್

10-ckm

Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

rangapattana-Elephnat

Dasara: ಶ್ರೀರಂಗಪಟ್ಟಣ ದಸರಾಗೆ ಆರಂಭದಲ್ಲೇ ವಿಘ್ನ: ಅಡ್ಡಾದಿಡ್ಡಿ ಓಡಾಡಿದ ಆನೆ

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

7(1)

Mangalore: ಊದು ಪೂಜೆ: ಹುಲಿ ವೇಷಕ್ಕೆ ಮುಹೂರ್ತ!

ಟ್ಯಾಂಕ್ ನೀರಿಗೆ ವಿಷ, ಬೆಚ್ಚಿಬಿದ್ದ ಗ್ರಾಮಸ್ಥರು

Hatti: ಟ್ಯಾಂಕ್ ನೀರಿಗೆ ವಿಷ, ಬೆಚ್ಚಿಬಿದ್ದ ಗ್ರಾಮಸ್ಥರು

6

Basroor- ಕುಂದಾಪುರ ಹೆದ್ದಾರಿ ಬದಿ ಹುಲ್ಲು ಕಟಾವು

11-Hagaribommanahalli

Hagaribommanahalli: ಆಕಳು ಮೇಯಿಸಲು ಹೋದ ಇಬ್ಬರು ಸಿಡಿಲಿಗೆ ಬಲಿ

5

Udupi: ಗ್ರಾಮ ಪಂಚಾಯತ್ ನೌಕರರ ಕಷ್ಟ ಕೇಳ್ಳೋರಿಲ್ಲ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.