ರಾತ್ರಿ ಬೆಳೆ ತಿಂದು ಜಮೀನಿನಲ್ಲೇ ಬೀಡು ಬಿಟ್ಟ ಕಾಡಾನೆಗಳು


Team Udayavani, Nov 19, 2021, 2:42 PM IST

ಕಾಡಾನೆ ಹಳ್ಳಿಗೆ

ಹುಣಸೂರು: ನಾಗರಹೊಳೆ ಉದ್ಯಾನದಿಂದ ಮೇವನ್ನರಸಿ ಹೊರಬಂದಿದ್ದ 6 ಆನೆಗಳ ಹಿಂಡು ಗುರುಪುರ ಸುತ್ತಮುತ್ತಲ ಗ್ರಾಮದಲ್ಲಿ ಸಾಕಷ್ಟು ಬೆಳೆ ತಿಂದು-ತುಳಿದು ನಾಶಪಡಿಸಿ, ಜನರ ಕಾಟದಿಂದ ಹೈರಾಣಾಗಿ ಕೊನೆಗೂ ಕುರುಚಲ ಕಾಡಿನಲ್ಲಿ ಆಶ್ರಯ ಪಡೆದಿದೆ.

ನಾಗರಹೊಳೆ ಉದ್ಯಾನದಿಂದ ನಾಡಿಗೆ ಬಂದಿದ್ದ ಆರು ಕಾಡಾನೆಗಳ ಹಿಂಡು ಬುಧವಾರ ರಾತ್ರಿ ಗುರುಪುರ ಟಿಬೇಟ್‌ ಕ್ಯಾಂಪ್‌ ಬಳಿಯ ಕುಂಟೇರಿ ಪಾರೆಕಡೆಯಿಂದ ದಾಟಿ ಬಂದು ಸಾಕಷ್ಟು ಬೆಳೆ ನಾಶ ಮಾಡಿ, ಗುರುವಾರ ಬೆಳಗ್ಗೆಯಾದರೂ ಹೊಸೂರು, ಕಾಳೇನಹಳ್ಳಿ ಗ್ರಾಮದ ಜಮೀನಿನಲ್ಲಿ ಕಾಣಿಸಿಕೊಂಡಿವೆ. ಗ್ರಾಮದಲ್ಲಿ ಈ ಸುದ್ದಿ ಹಬ್ಬಿ ಸ್ಥಳದಲ್ಲಿ ನೂರಾರು ಮಂದಿ ಜಮಾಯಿಸಿ ಕಾಡಾನೆಗಳನ್ನು ಕಾಡಿಗಟ್ಟಲು ಹರಸಾಹಸ ಪಟ್ಟರು.

ದನಗಳಂತೆ ಅಟ್ಟಾಡಿದರು: ಆನೆಗಳ ಹಿಂಡು ಜಮೀನಿನಲ್ಲಿ ಬೀಡು ಬಿಟ್ಟಿದ್ದ ವೇಳೆ ಹುಚ್ಚೆದ್ದ ಯುವ ಪಡೆ ಆನೆಗಳಿಗೆ ಕಲ್ಲು ಹೊಡೆಯುತ್ತಾ, ಕೇಕೆ ಹಾಕುತ್ತಾ ಅತ್ತಿಂದಿತ್ತ ಅಟ್ಟಾಡಿಸಿದರು. ಗಾಬರಿಗೊಂಡ ಆನೆಗಳು ಕೊನೆಗೆ ಬೆಳಗ್ಗೆ 11ರ ವೇಳೆಗೆ ಗುರುಪುರ ಬಳಿಯ ಹುಣಸೇಕಟ್ಟೆ ಹಳ್ಳದ ಪ್ಲಾಂಟೇಷನ್‌ನಲ್ಲಿ ಸೇರಿಕೊಂಡು ಆಶ್ರಯ ಪಡೆದವು.

ಪೊಲೀಸ್‌-ಅರಣ್ಯ ಸಿಬ್ಬಂದಿ ಹರಸಾಹಸ; ಆನೆಗಳನ್ನು ನೋಡಲು- ಅಟ್ಟಾಡಿಸಲು ಜಮಾಯಿಸಿದ್ದ ಜನರನ್ನು ನಿಯಂತ್ರಿಸಲು ಪೊಲೀಸರು-ಅರಣ್ಯ ಸಿಬ್ಬಂದಿ ಹರಸಾಹಸ ಪಟ್ಟರು. ಜನರನ್ನು ನಿಯಂತ್ರಿಸಿ, ಆನೆಗಳನ್ನು ಕಾಡಿಗಟ್ಟಲು ಸಿಬ್ಬಂದಿ ಶ್ರಮಪಟ್ಟರಾದರೂ ಜನರ ಕೂಗಾಟದಿಂದ ಬೆದರಿ ಹುಣಸೇಕಟ್ಟೆ ಹಳ್ಳ ಸೇರಿಕೊಂಡು ಜನರ ಕಾಟದಿಂದ ತಪ್ಪಿಸಿಕೊಂಡವು.

ಗಾಳಿಯಲ್ಲಿ ಗುಂಡು-ಪಟಾಕಿ ಸಿಡಿಸಿದರು: ಜಮೀನಿನಲ್ಲಿ ಬೀಡು ಬಿಟ್ಟಿದ್ದ ಆನೆಗಳ ಹಿಂಡನ್ನು ಕಾಡಿಗಟ್ಟಲು ಸಾಕಷ್ಟು ಪಟಾಕಿ ಸಿಡಿಸಿದರು. ಗಾಳಿಯಲ್ಲಿ ಗುಂಡು ಹಾರಿಸಲಾಯಿತಾದರೂ ಆನೆಗಳು ಕಾಡಿಗೆ ಮರಳಲಿಲ್ಲ. ಕೊನೆಗೆ ರಾತ್ರಿವೇಳೆ ಕಾಡಿಗಟ್ಟಲು ತೀರ್ಮಾನಿಸಿ, ಹುಣಸೂರು-ಎಚ್‌.ಡಿ.ಕೋಟೆ ಮುಖ್ಯ ರಸ್ತೆಯಲ್ಲಿ ಬೀಡುಬಿಟ್ಟು ಆನೆಗಳು ಹಳ್ಳದಿಂದ ಹೊರಬಾರದಂತೆ ಕಾವಲು ಕಾಯ್ದರು.

ಸಾಕಷ್ಟು ಬೆಳೆ ನಷ್ಟ: ರಾತ್ರಿ ಇಡೀ ಬೆಳೆ ತಿಂದು ಹಾಕಿದ್ದ ಆನೆಗಳ ಹಿಂಡು, ಕಾಳೇನಹಳ್ಳಿ, ಹೊಸೂರು ಮತ್ತಿತರ ಗ್ರಾಮಗಳಲ್ಲಿ ಜಮೀನಿಲ್ಲಿ ಬೆಳೆದಿದ್ದ ರಾಗಿ, ಜೋಳ, ಹುರಳಿ, ಅವರೆ ಮತ್ತಿತರ ಬೆಳೆಗಳನ್ನು ತಿಂದು-ತುಳಿದು ನಾಶ ಪಡಿಸಿವೆ.

ರೈಲ್ವೆ ಹಳಿ ಬೇಲಿ ಇಲ್ಲ: ನಾಗರಹೊಳೆ ಉದ್ಯಾ ನದ ವೀರನಹೊಸಹಳ್ಳಿ ವಲಯಕ್ಕೆ ಸೊಳ್ಳೆಪುರ ಅರಣ್ಯ ಪ್ರದೇಶ ಸೇರಿದ್ದು, ಈ ಭಾಗದಲ್ಲಿ ರೈಲ್ವೆ ಹಳಿ ತಡೆಗೋಡೆ ನಿರ್ಮಿಸದೆ ಅರಣ್ಯದಿಂದ ಆನೆಗಳು ಹೊರಬರುತ್ತಿರುವುದೇ ಕಾರಣವಾ ಗಿದ್ದು, ಮತ್ತೂಂದೆಡೆ ಕೆಲ ಚಾಲಕಿ ಆನೆಗಳು ರೈಲ್ವೆ ಹಳಿ ತಡೆಗೋಡೆಯನ್ನೇ ದಾಟಿ ಹೊರಬರುತ್ತಿ ರುವುದು ರೈತರನ್ನು ಮತ್ತಷ್ಟು ಆತಂಕಕ್ಕೆ ದೂಡಿದೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.