ಮನೆಯಂದ್ರೆ ಬೋರ್‌, ಕಾಲೇಜೇ ಬೆಸ್ಟ್‌

ಮತ್ತೆ ಶಾಲಾ-ಕಾಲೇಜು ಬಂದ್‌ಗೆ ವಿದ್ಯಾರ್ಥಿಗಳ ಬೇಸರ

Team Udayavani, Mar 24, 2021, 6:20 PM IST

ಮನೆಯಂದ್ರೆ ಬೋರ್‌, ಕಾಲೇಜೇ ಬೆಸ್ಟ್‌

ಸಾಂದರ್ಭಿಕ ಚಿತ್ರ

ಮೈಸೂರು: ಕೋವಿಡ್ ಎರಡನೇ ಅಲೆ ರಾಜ್ಯದಲ್ಲೂ ಸದ್ದು ಮಾಡುತ್ತಿರುವ ಬೆನ್ನಲ್ಲೆ ಶಾಲೆ ಹಾಗೂ ಕಾಲೇಜುಗಳನ್ನು ಮತ್ತೆ ಬಂದ್‌ ಮಾಡಬೇಕೆ ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ. ಈ ನಡುವೆ ವಿದ್ಯಾರ್ಥಿ ಗಳು ಮಾತ್ರ ತರಗತಿ ಮುಂದುವರಿಸುವುದೇ ಸೂಕ್ತ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ಕೋವಿಡ್ ಲಾಕ್‌ಡೌನ್‌ನಿಂದ ಶಾಲಾ-ಕಾಲೇಜುಗಳು ವರ್ಷಗಟ್ಟಲೆ ಮುಚ್ಚಿದ್ದ ಹಿನ್ನೆಲೆ ಮನೆಯಲ್ಲೇ ಕುಳಿತು ಬೇಸವಾಗಿದ್ದು, ದಿನಪೂರ್ತಿ ಮನೆಯಲ್ಲಿರಲು ಆಗುವುದಿಲ್ಲ. ಜೊತೆಗೆ ಆನ್‌ಲೈನ್‌ತರಗತಿಗಳಿಗೆ ನಾವು ಹೊಂದಿಕೊಳ್ಳಲಾಗುತ್ತಿಲ್ಲಎಂಬುದು ಗ್ರಾಮಾಂತರ ಮತ್ತು ನಗರ ಪ್ರದೇಶದ ವಿದ್ಯಾರ್ಥಿಗಳ ಅಳಲು.

ತರಗತಿಗೆ ಬರಲು ಉತ್ಸುಕ: ಸರ್ಕಾರದ ಮಾರ್ಗಸೂಚಿ ಪಾಲಿಸಿ ನಾವು ತರಗತಿಗೆ ಹಾಜರಾಗುತ್ತೇವೆ. ತರಗತಿಯಲ್ಲಿ ಸಾಮಾಜಿಕ ಅಂತರ ಪಾಲಿಸಿಯೇ ಪಾಠ ಆಲಿಸುತ್ತೇವೆ. ಆದರೆ, ಶಾಲಾ,ಕಾಲೇಜುಗಳನ್ನು ಮಾತ್ರ ಬಂದ್‌ ಮಾಡಬೇಡಿ. ಇದು ವಿದ್ಯಾರ್ಥಿಗಳ ಮನವಿಯಾಗಿದೆ. ಇದಲ್ಲದೆಗ್ರಾಮಾಂತರ ಹಾಗೂ ನಗರ ಪ್ರದೇಶಗಳಲ್ಲಿ ಶಾಲೆ ಮತ್ತು ಕಾಲೇಜುಗಳು ಪುನಾರಂಭವಾದಗಿನಿಂದಲೂ ವಿದ್ಯಾರ್ಥಿಗಳು ಉತ್ಸಾಹದಿಂದ ತರಗತಿಗೆ ಹಾಜರಾಗುತ್ತಿದ್ದು, ಹಾಜರಾತಿ ಪ್ರಮಾಣ ಶೇ.90 ಕಂಡುಬಂದಿದೆ. ಜೊತೆಗೆ ಕೊರೊನಾ ಎರಡನೇ ಅಲೆ ಭೀತಿ ರಾಜ್ಯದೆಲ್ಲೆಡೆ ಆವರಿಸಿದ್ದರೂ, ಸೋಂಕಿಗೆಹೆದರದ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಲು ಉತ್ಸುಕರಾಗಿರುವುದು ವಿಶೇಷ.

ಮತ್ತೆ ರಜೆ ಆತಂಕ: ಈಗಾಗಲೇ ಜಿಲ್ಲಾದ್ಯಂತ ಗ್ರಾಮಾಂತರ ಮತ್ತು ನಗರ ಪ್ರದೇಶದ ಎಲ್ಲಾಶಾಲಾ-ಕಾಲೇಜುಗಳಲ್ಲಿ ತರಗತಿಗಳು ಸುಸೂತ್ರವಾಗಿ ನಡೆಯುತ್ತಿದ್ದು, ಶೇ.90 ವಿದ್ಯಾರ್ಥಿಗಳು ತರಗತಿಗೆಹಾಜರಾಗುತ್ತಿದ್ದಾರೆ. ಈ ನಡುವೆ ಕೊರೊನಾಎರಡನೇ ಅಲೆ ಎದ್ದಿರುವುದರಿಂದ ಸರ್ಕಾರ ಮತ್ತೆ ರಜೆ ಘೋಷಣೆ ಮಾಡಲಿದೆ ಎಂಬ ಆತಂಕದಲ್ಲಿ ವಿದ್ಯಾರ್ಥಿಗಳಿದ್ದಾರೆ.

ಪೋಷಕರಲ್ಲಿ ಎದುರಾದ ಆತಂಕ: ಕೋವಿಡ್ ಎರಡನೇ ಅಲೆ ಹಿನ್ನೆಲೆ ಪೋಷಕರು ಮತ್ತೆಆತಂಕಗೊಂಡಿದ್ದರೆ. ಮಕ್ಕಳು ಮನೆಯಲ್ಲಿರದೆ ತರಗತಿಗೆ ಹಾಜರಾಗುತ್ತೇವೆ ಎದು ಹಠಕ್ಕೆ ಬಿದ್ದಿದ್ದಾರೆ.ಇದರಿಂದ ಪೇಚಿಗೆ ಸಿಲುಕಿರುವ ಪೋಷಕರು, ಸರ್ಕಾರದ ನಿರ್ಧಾರ ಏನೆಂಬುದನ್ನು ಎದುರುನೋಡುತ್ತಿದ್ದು, ಶಾಲಾ-ಕಾಲೇಜಿಗೆ ರಜೆ ನೀಡುವುದೆಸೂಕ್ತ ಎಂಬ ಅಭಿಪ್ರಾಯಕ್ಕೆ ಬಂದಿದ್ದಾರೆ.

ಶಾಲಾ-ಕಾಲೇಜುಗಳಲ್ಲಿ ಎಸ್‌ಒಪಿ ಪಾಲನೆಗೆ ಸೂಚನೆ: ಜಿಲ್ಲಾದ್ಯಂತ ಎಲ್ಲಾ ಶಾಲಾ-ಕಾಲೇಜುಗಳಲ್ಲಿ

ಕೋವಿಡ್‌ ಸ್ಟಾಂಡರ್ಡ್‌ ಆಪರೇಟಿಂಗ್‌ ಪ್ರೊಸ್ಯೂಜರ್‌ (ಮಾಸ್ಕ್ ಬಳಕೆ, ಸಾಮಾಜಿಕ ಅಂತರಪಾಲನೆ, ಥರ್ಮಲ್‌ ಸ್ಕ್ರೀನಿಂಗ್‌, ಸ್ಯಾನಿಟೈಸರ್‌ಪ್ರಕ್ರಿಯೆ) ನಡೆಸುವಂತೆ ಜಿಲ್ಲಾಡಳಿತ ಶಿಕ್ಷಣ ಇಲಾಖೆಗೆಸೂಚನೆ ನೀಡಿದ್ದು, ಅದರಂತೆ ಮತ್ತೆ ಎಲ್ಲಾಶಾಲಾ-ಕಾಲೇಜುಗಳಲ್ಲಿ ಎಸ್‌ಒಪಿ ಪ್ರಕ್ರಿಯೆ ಪುನಾರಂಭಗೊಂಡಿದೆ.

ಎಸ್‌ಒಪಿ ವೇಳೆ ವಿದ್ಯಾರ್ಥಿಗಳಲ್ಲಿ ಜ್ವರ, ಕೆಮ್ಮು ಅಥವಾ ದೇಹದಲ್ಲಿ ಉಷ್ಣಾಂಶ ಹೆಚ್ಚಿದ್ದರೆ ಅವರನ್ನೂಕೂಡಲೇ ಕೋವಿಡ್‌ ಟೆಸ್ಟ್‌ಗೆ ಒಳಪಡಿಸಿ, ತರಗತಿಯನ್ನು ಸ್ಯಾನಿಟೈಸ್‌ ಮಾಡಲು ಶಿಕ್ಷಕರಿಗೆ ನಿರ್ದೇಶನ ನೀಡಲಾಗಿದ್ದು, ತಮ್ಮ ವ್ಯಾಪ್ತಿಯಶಾಲೆಗಳಲ್ಲಿ ಕೋವಿಡ್‌ ಪ್ರಕರಣ ಪತ್ತೆಯಾದಲ್ಲಿ ಪರಿಸ್ಥಿತಿ ಅವಲೋಕಿಸಿ ಅಂತಹ ಶಾಲೆಗಳಿಗೆ ರಜೆ ನೀಡುವ ಅಧಿಕಾರವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗೆ ನೀಡಲಾಗಿದೆ.

ಜೊತೆಗೆ ಒಂದು ಕೊಠಡಿಯಲ್ಲಿ 20 ಮಕ್ಕಳುಮೀರದಂತೆ ತರಗತಿ ನಡೆಸುವುದು, ಬಿಸಿ ನೀರಿನವ್ಯವಸ್ಥೆ, ಶೌಚಾಲಯ ಶುಚಿತ್ವ ಕಾಪಾಡಿಕೊಳ್ಳುವುದುಸೇರಿ ಸರ್ಕಾರದ ಮಾರ್ಗಸೂಚಿ ಪಾಲನೆ ಮಾಡುವಮೂಲಕ ಕೋವಿಡ್ ಸೋಂಕು ಹರಡದಂತೆ ಶಿಕ್ಷಣ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.

ಕೋವಿಡ್ ಎರಡನೇ ಅಲೆ ಹಿನ್ನೆಲೆ ಜಿಲ್ಲೆಯಾ ಎಲ್ಲಾ ಶಾಲೆಗಳಲ್ಲೂ ಸ್ಟಾಂಡರ್ಡ್‌ ಆಪರೇಟಿಂಗ್‌ಪ್ರೊಸ್ಯೂಜರ್‌ ಪಾಲನೆ ಮಾಡಲಾಗುತ್ತಿದ್ದು, ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬರುವಮಕ್ಕಳನ್ನು ಕೋವಿಡ್‌ ಟೆಸ್ಟ್‌ಗೆ ಒಳಪಡಿಸ ಲಾಗುವುದು. ಮಕ್ಕಳಿಗೆ ಸೋಂಕುಹರಡದಂತೆ ಮುಂಜಾಗ್ರತ ಕ್ರಮಗಳನ್ನುಕೈಗೊಳ್ಳಲಾಗಿದ್ದು, ಪೋಷಕರು ತಮ್ಮಮಕ್ಕಳನ್ನು ಭಯ ಪಡದೆ ಶಾಲೆಗೆ ಕಳುಹಿಸಬಹುದು. ಡಾ.ಪಾಂಡುರಂಗ, ಡಿಡಿಪಿಐ ಮೈಸೂರು

 

ಸತೀಶ್‌ ದೇಪುರ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.