ರಂಗಾಯಣಕ್ಕೆ ಆರೆಸ್ಸೆಸ್‌ ಅಜೆಂಡಾ ತರಲ್ಲ


Team Udayavani, Feb 21, 2020, 2:56 PM IST

MYSURU-TDY-1

ಮೈಸೂರು: ರಂಗಭೂಮಿ ಕಟ್ಟಲು ಮತ್ತು ರಂಗಾಯಣ ಬೆಳೆಸಲು ನಾನು ಭದ್ಧತೆಯಿಂದ ಕಾರ್ಯನಿರ್ವಹಿಸುತ್ತಿದ್ದು, ಸಂಘ ಪರಿವಾರದ ಹಿಡನ್‌ ಅಜೆಂಡಾವನ್ನಾಗಲಿ ಅಥವಾ ಬಿಜೆಪಿಯ ಚಿಂತನೆಯನ್ನಾಗಲಿ ರಂಗಾಯಣಕ್ಕೆ ತುರಕಲು ಬಂದಿಲ್ಲ ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಸಿ. ಕಾರ್ಯಪ್ಪ ಸ್ಪಷ್ಟನೆ ನೀಡಿದರು.

ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ಮುಗಿದ ಹಿನ್ನೆಲೆಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾರೋ ಮಾತನಾಡಿಕೊಳ್ಳುವ ರೀತಿ ನಾನು ನಡೆದುಕೊಳ್ಳುತ್ತಿಲ್ಲ. ನಮಗೆ ಸಂಘರ್ಷ ಬೇಕಿಲ್ಲ, ಸಮನ್ವಯತೆ ಬೇಕಾಗಿದೆ. ಅದಕ್ಕಾಗಿಯೇ ಹಗಲಿರುಳು ರಂಗಾಯಣಕ್ಕಾಗಿ ಕೆಲಸ ಮಾಡುತ್ತಿದ್ದೇನೆ. ಬಹುರೂಪಿಯನ್ನು ಗಾಂಧಿಯಿಸಂನಲ್ಲಿ ಕೊಂಡೊಯ್ಯುವಲ್ಲಿ ಯಶಸ್ವಿಯಾಗಿದ್ದೇವೆ. ಪಂಥಗಳನ್ನು ಮೀರಿ ಪಥದಲ್ಲಿ ನಡೆದಿದ್ದೇವೆ. ರಂಗಾ ಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಹಕಾರ ನೀಡಿದ್ದಾರೆ ಎಂದರು.

ಬಹುರೂಪಿ ಆರಂಭದಲ್ಲಿ ನನ್ನ ವೈಯಕ್ತಿಕ ಹೇಳಿಕೆಯಿಂದಾದ ವಿವಾದವನ್ನು ಟೀಕಿಸಿದ್ದಾರೆ. ಅವರೆಲ್ಲರೂ ನನ್ನ ಸ್ನೇಹಿತರೆ. ಒಬ್ಬೊಬ್ಬರಿಗೆ ಒಂದೊಂದು ಸಿದ್ಧಾಂತವಿದೆ. ಅದನ್ನು ಯಾರೂ ವಿರೋಧಿಸಬೇಕೆಂದಿಲ್ಲ ಅಥವಾ ಒಪ್ಪಿಕೊಳ್ಳಬೇಕೆಂದಿಲ್ಲ. ಬಹುರೂಪಿಗೆ ಬಂದು ಕೆಲವರು ಟೀ ಕುಡಿಯದೆ ಹೋಗಿದ್ದಾರೆ. ಆಗಲೂ ನನಗೆ ಬೇಸರವಾಗಿದೆ. ನಮ್ಮಲ್ಲಿನ ಏನೇ ಭಿನ್ನಾಭಿಪ್ರಾಯವಿದ್ದರೂ ಅದನ್ನೆಲ್ಲವನ್ನು ಮೀರಿ ಸ್ನೇಹ ಉಳಿಸಿಕೊಳ್ಳಬೇಕು. ಬುದ್ಧ, ಬಸವ, ಗಾಂಧಿ ಯಾರ ಸ್ವತ್ತೂ ಅಲ್ಲ ಎಂದು ಹೇಳಿದರು.

ರಂಗಾಯಣ ಜಂಟಿ ನಿರ್ದೇಶಕ ವಿ.ಎನ್‌. ಮಲ್ಲಿಕಾರ್ಜುನಸ್ವಾಮಿ, 2019ರ ಬಹುರೂಪಿಯಲ್ಲಿ 5.40 ಲಕ್ಷ ರೂ. ಮೌಲ್ಯದ ಟಿಕೆಟ್‌, ಈ ವರ್ಷದ ಬಹುರೂಪಿಯಲ್ಲಿ 6.29 ಲಕ್ಷ ರೂ. ಮೌಲ್ಯದ ಟಿಕೆಟ್‌ ಮಾರಾಟವಾಗಿದೆ. ಕಳೆದ ಬಾರಿ 65 ಸಾವಿರ ಮಂದಿ, ಈ ಸಲ 1.20 ಲಕ್ಷ ಮಂದಿ ಭಾಗವಹಿಸಿದ್ದರು ಎಂದರು. ಗೋಷ್ಠಿಯಲ್ಲಿ ಸಂಚಾಲಕ ಹುಲುಗಪ್ಪ ಕಟ್ಟಿಮನಿ ಇತರರಿದ್ದರು.

ಟಾಪ್ ನ್ಯೂಸ್

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.