![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Mar 8, 2020, 2:28 PM IST
ಮೈಸೂರು: ಬಿಜೆಪಿ ಸರ್ಕಾರ ಶಾದಿ ಭಾಗ್ಯ ಒಂದೇ ಅಲ್ಲ ರಾಜ್ಯದ ಎಲ್ಲ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತ ಮಾಡಿದೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಬಿಜೆಪಿಯಿಂದ ಶಾದಿಭಾಗ್ಯ ಯೋಜನೆಗೆ ತಿಲಾಂಜಲಿ ವಿಚಾರವಾಗಿ ಮೈಸೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಬೆಳಗಾವಿಯಲ್ಲಿ ಬಿಜೆಪಿ ಶಾಸಕರೇ ನನ್ನ ಕ್ಷೇತ್ರಕ್ಕೆ ಅನುದಾನ ಬಂದಿಲ್ಲ ಅಂತ ಗಲಾಟೆ ಮಾಡಿದ್ದಾರೆ. ಮಂತ್ರಿಯನ್ನು ಕೂರಿಸಿಕೊಂಡು ಅನುದಾನ ಕೊಡಿ ಅಂತಾ ಕೇಳಿದ್ದಾರೆ. ಮುಖ್ಯಮಂತ್ರಿ ನೆರೆ ಹಾವಳಿಯಿಂದ ತೊಂದರೆಗೀಡಾಗಿರುವ ಜನರಿಗೆ ಹಣ ಬಿಡುಗಡೆ ಮಾಡಿ ಎಂದರೂ ಅಧಿಕಾರಿಗಳು ಬಿಡುಗಡೆ ಮಾಡಿಲ್ಲವೆಂದು ಬಿಜೆಪಿ ಶಾಸಕರೇ ಆರೋಪಿಸಿಸುತ್ತಿದ್ದಾರೆ. ಇದು ಸದ್ಯದ ಬಿಜೆಪಿ ಸರ್ಕಾರದ ಸ್ಥಿತಿ ಎಂದು ಕುಟುಕಿದರು.
ಕೃಷಿ ಸಚಿವ ಬಿ.ಸಿ. ಪಾಟೀಲ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಕುಮಾರಸ್ವಾಮಿ, ಕೃಷಿ ಸಚಿವರೇ ನಾಲಿಗೆ ಇದೆ ಅಂತ ತೆವಲಿಗೆ ಮಾತನಾಡಬೇಡಿ. ಸುಮ್ಮನೆ ಸುಳ್ಳು ಹೇಳಿಕೊಂಡು ಓಡಾಡಬೇಡಿ ಎಂದರು. ಮಾತ್ರವಲ್ಲದೆ ಅವರಿಗೆ ಸಾಲ ಮನ್ನಾದ ಬಗ್ಗೆ ಮಾಹಿತಿಯೇ ಇಲ್ಲ. ನಾನು ಅಧಿಕಾರದಿಂದ ಕೆಳಗಿಳಿಯುವಾಗ ಬರೀ ಘೋಷಣೆ ಮಾಡಿಲ್ಲ. ಬದಲಿಗೆ 25 ಸಾವಿರ ಕೋಟಿ ಹಣ ಹೊಂದಿಸಿ ಅಧಿಕಾರದಿಂದ ಇಳಿದಿದ್ದೇನೆ ಎಂದರು.
ನಾನು ಹೊಂದಿಸಿಕೊಟ್ಟಿದ್ದ 800 ಕೋಟಿ ಹಣವನ್ನು ಇನ್ನೂ ಬಿಡುಗಡೆ ಮಾಡದೆ ಹಾಗೆಯೇ ಇಟ್ಟುಕೊಂಡಿದ್ದಾರೆ. ನಾವು ರೈತರಿಂದ ಸರಳ ದಾಖಲೆ ಕೇಳಿದ್ದೇವು. ರೈತರ ದಾಖಲೆ ತಪ್ಪಿದ್ದರೆ ಸರಿಪಡಿಸೋದು ಇಲಾಖೆಯ ಕೆಲಸ. ಅದನ್ನು ತೆವಲಿಗೆ ಮಾತನಾಡೋದು ಬಿಟ್ಟು ಸುಳ್ಳು ಹೇಳಿಕೊಂಡು ಓಡಾಡೋದು ಬೇಡ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ವಿರುದ್ದ ಕೆಂಡಮಂಡಲರಾದರು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
You seem to have an Ad Blocker on.
To continue reading, please turn it off or whitelist Udayavani.