ರಸ್ತೆ ಬದಿ ವ್ಯಾಪಾರ ಬಂದ್‌ಗೆ ಸೂಚನೆ


Team Udayavani, Mar 16, 2020, 3:00 AM IST

raste-badi’

ಹುಣಸೂರು: ಕೊರೊನಾ ವೈರಸ್‌ ಭೀತಿ ಹಿನ್ನೆಲೆಯಲ್ಲಿ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ರಸ್ತೆ ಬದಿ ಅಂಗಡಿಗಳು, ಫಾಸ್ಟ್‌ಫ‌ುಡ್‌ಗಳನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಆದರೆ, ಬೀದಿಬದಿ ವ್ಯಾಪಾರಿಗಳು ಇದಕ್ಕೆ ಪರ-ವಿರೋಧ ನಿಲುವು ವ್ಯಕ್ತಪಡಿಸಿದ್ದಾರೆ.

ಶಾಸಕ ಎಚ್‌.ಪಿ. ಮಂಜುನಾಥ್‌ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ತುರ್ತು ಸಭೆಯಲ್ಲಿ ಆರೋಗ್ಯಾಧಿಕಾರಿಗಳ ಸಲಹೆ ಮೇರೆಗೆ ತಾಲೂಕಿನಾದ್ಯಂತ ರಸ್ತೆ ಬದಿಯ ಫಾಸ್ಟ್‌ಫ‌ುಡ್‌, ಗೋಬಿಮಂಚೂರಿ, ಪಾನಿಪುರಿ ಅಂಗಡಿಗಳನ್ನು ಬಂದ್‌ ಮಾಡಬೇಕೆಂಬ ಸೂಚನೆಯಂತೆ ಭಾನುವಾರ ಎಲ್ಲಡೆ ರಸ್ತೆ ಬದಿ ವ್ಯಾಪಾರಿಗಳು ಸ್ಪಂದಿಸಿ ಬಂದ್‌ ಮಾಡಿದ್ದರು.

ಈ ನಡುವೆ, ಭಾನುವಾರ ನಗರದ ಮುನೇಶ್ವರ ದೇವಾಲಯದ ಸಮುದಾಯ ಭವನದಲ್ಲಿ ರಾಜ್ಯ ರಸ್ತೆ ಬದಿ ವ್ಯಾಪಾರಿಗಳ ಸಂಘದ ಜಂಟಿ ಕಾರ್ಯದರ್ಶಿ ಎಚ್‌.ಸಿ.ಮಂಜುನಾಥ್‌ ಅಧ್ಯಕ್ಷತೆಯಲ್ಲಿ ನೂರಕ್ಕೂ ಹೆಚ್ಚು ಫ‌ುಟ್‌ಪಾತ್‌ ವ್ಯಾಪಾರಿಗಳ ಸಭೆ ನಡೆಸಲಾಯಿತು.

ತಾಲೂಕು ಆಡಳಿತ ಹಾಗೂ ನಗರಸಭೆಯ ಸೂಚನೆಯಂತೆ ವ್ಯಾಪಾರ ಬಂದ್‌ ಮಾಡುವ ಬಗ್ಗೆ ಸಭೆಯಲ್ಲಿ ಪರ-ವಿರೋಧ ವ್ಯಕ್ತವಾಯಿತು. ಕೆಲಕಾಲ ಗೊಂದಲವೂ ಉಂಟಾಯಿತು. ಈ ವೇಳೆ, ಹಲವರು ವ್ಯಾಪಾರ ನಿಲ್ಲಿಸಿದರೆ ಜೀವನ ನಡೆಸುವುದು, ಬಾಡಿಗೆ ಕಟ್ಟುವುದು, ಕಾರ್ಮಿಕರಿಗೆ ಸಂಬಳ ನೀಡಲು ಕಷ್ಟವಾಗಲಿದೆ ಎಂದು ಅಳಲು ತೋಡಿಕೊಂಡರು.

ಕೆಲವರು, ದೇಶದೆಲ್ಲೆಡೆ ಕೊರೊನಾ ವೈರಸ್‌ ಹರಡುವ ಭೀತಿಯಿಂದ ಎಲ್ಲಾÉ ವಹಿವಾಟುಗಳನ್ನು ಸ್ಥಗಿತಗೊಳಿಸಿದ್ದಾರೆ, ನಮ್ಮ ಹಾಗೂ ನಮ್ಮ ಕುಟುಂಬಗಳ ಭವಿಷ್ಯದ ದೃಷ್ಟಿಯಿಂದ ವಾರ ಕಾಲ ವ್ಯಾಪಾರ ಸ್ಥಗಿತಗೊಳಿಸುವುದು ಒಳಿತು ಎಂದು ತಿಳಿಸಿದರು. ಇದಕ್ಕೆ ಬಹುತೇಕರು ವಿರೋಧ ವ್ಯಕ್ತಪಡಿಸಿ ವ್ಯಾಪಾರ ನಡೆಸೋಣ ಎಂದು ಸಭೆಯಿಂದ ನಿರ್ಗಮಿಸಿದ್ದರಿಂದ ಸೋಮವಾರ ಯಾವ ನಿರ್ಧಾರ ಕೈಗೊಳ್ಳುವರೋ ಎಂಬುದನ್ನು ಕಾದು ನೋಡಬೇಕಿದೆ.

ಸರಕಾರದ ಸೂಚನೆಯಂತೆ ಮುನ್ನೆಚ್ಚರಿಕೆಯಾಗಿ ನಗರಸಭೆಯ ಮೂರು ಆಟೋಗಳಲ್ಲಿ ಕೊರೊನಾ ವೈರಸ್‌ ಮುನ್ನೆಚ್ಚರಿಕೆ ಬಗ್ಗೆ ಪ್ರಚಾರ ನಡೆಸಿ ಜಾಗೃತಿ ಮೂಡಿಸಲಾಗುತ್ತಿದೆ. ಎಲ್ಲೆಡೆ ಸ್ವತ್ಛತೆಗೆ ಆದ್ಯತೆ ನೀಡಲಾಗಿದೆ, ಮನೆಗಳವರು, ವ್ಯಾಪಾರಸ್ಥರು ನಗರಸಭೆಯೊಂದಿಗೆ ಸಹಕಾರ ನೀಡಬೇಕು ಎಂದು ಹಿರಿಯ ಆರೋಗ್ಯ ನಿರೀಕ್ಷಕ ಸತೀಶ್‌ ತಿಳಿಸಿದರು.

ಕೊರೋನಾ ವೈರಸ್‌ ಮುನ್ನೆಚ್ಚರಿಕೆಯಾಗಿ ನಗರದಾದ್ಯಂತ ಇರುವ ಫ‌ುಟ್‌ಪಾತ್‌ ವ್ಯಾಪಾರಿಗಳು, ರಸ್ತೆ ಬದಿಯ ಎಲ್ಲಾ ಅಂಗಡಿಗಳನ್ನು ಮುಚ್ಚುವಂತೆ ಮನವಿ ಮಾಡಲಾಗಿದೆ. ವ್ಯಾಪಾರಸ್ಥರು ಸಹಕಾರ ನೀಡಬೇಕು. ಪರವಾನಗಿ ಇಲ್ಲದ, ಸ್ವತ್ಛತೆಗೆ ಆದ್ಯತೆ ನೀಡದಿದ್ದಲ್ಲಿ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು.
-ಮಂಜುನಾಥ್‌, ನಗರಸಭೆ ಪ್ರಭಾರ ಪೌರಾಯುಕ್ತ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.