ಹೇಮಾದ್ರಂಬ ಜಾತ್ರೆಗೆ ಅಧಿಕೃತ ಚಾಲನೆ


Team Udayavani, Jan 29, 2018, 12:52 PM IST

m6-hemadra.jpg

ಬನ್ನೂರು: ಗಂಗ ಅರಸರ ಎರಡನೇ ರಾಜಧಾನಿಯೆಂದೇ ಹೆಸರು ವಾಸಿಯಾಗಿದ್ದ ಬನ್ನೂರಿನ ಹೇಮಾದ್ರಂಬ ದೇವತೆಯ ಜಾತ್ರೆ ಪ್ರಸಿದ್ದಿ ಪಡೆದಿದೆ. ಭಾನುವಾರ ಈ ದೇಗುಲದ ಮುಂಭಾಗ ಹಸಿರು ಚಪ್ಪರವನ್ನು ಹಾಕುವ ಮೂಲಕ ಜಾತ್ರೆಗೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. 

ಹನ್ನೊಂದು ದಿನಗಳ ಜಾತ್ರಾಮಹೋತ್ಸವದಲ್ಲಿ ಪ್ರತಿದಿನ ಒಂದಿಲ್ಲೊಂದು ಪೂಜಾಕಾರ್ಯಗಳು ಜರುಗಲಿದ್ದು, ಆದಿಜಾಂಬವ ಜನಾಂಗದ ಎಲ್ಲ ಯಜಮಾನರು, ಸುಭಾಷ್‌ನಗರದ ಮುಖಂಡರು, ಮಾಕನಹಳ್ಳಿಯ ಜನಾಂಗದ ಮುಖಂಡರು, ಯುವಕರ ಪಡೆಗಳೊಂದಿಗೆ ದೇವಾಲಯದ ಮುಂಭಾಗದಲ್ಲಿ ಸೇರಿ ಹಸಿರು ಚಪ್ಪರ ಹಾಕಿ ಜಾತ್ರೆಗೆ ಶುಭವನ್ನು ಆಹ್ವಾನಿಸುವುದು ಪ್ರತೀತಿ.

ಚಿನ್ನದ ಮೂರ್ತಿ: ಹಿಂದಿನಿಂದಲೂ ಬಂದ ಪ್ರತೀತಿಯಂತೆ ಜಾತ್ರಾಮಹೋತ್ಸವ ಹತ್ತಿರವಾಗುತ್ತಿದ್ದಂತೆ ಊರಿನ ಮುಖಂಡರು ಹಾಗೂ ಹೇಮಾದ್ರಂಬ ಸಮಿತಿಯ ಮುಖಂಡರೆಲ್ಲರೂ ಒಟ್ಟಾಗಿ ಮುಜರಾಯಿ ಇಲಾಖೆಯಿಂದ ದೇವಿಯನ್ನು ತರುವ ಪ್ರತೀತಿ ಇದೆ.

ಹೇಮಾದ್ರಂಭ ದೇವಿಯ ಚಿನ್ನದ ಮೂರ್ತಿಯು ಮುಜರಾಯಿ ಇಲಾಖೆಯ ವಶದಲ್ಲಿದ್ದು, ಅದನ್ನು ಜಾತ್ರಾ ಮಹೋತ್ಸವದ ವೇಳೆಯಲ್ಲಿ ಮಾತ್ರವೇ ತಂದು ಪೂಜಿಸುವ ಪದ್ದತಿ ರೂಢಿಯಲ್ಲಿದೆ. ದೇವಿಯನ್ನು ಅರ್ಚಕರ ಮನೆಯಲ್ಲಿ ಇರಿಸಿ, ಜಾತ್ರಾ ಮಹೋತ್ಸವದ ದಿನ ದೇವಾಲಯಕ್ಕೆ ತೆಗೆದುಕೊಂಡು ಹೋಗುವುದು ಇಲ್ಲಿನ ಪದ್ಧತಿ.

ಅಂಕುರಾರ್ಪಣೆ: ಅಂತೆಯೇ ಭಾನುವಾರ ದೇವಿಯು ದೇವಳ ಪ್ರವೇಶ ಮಾಡುವ ಹಿನ್ನೆಲೆಯಲ್ಲಿ ಮುಂಜಾನೆಯೇ ಹಸಿರು ಚಪ್ಪರವನ್ನು ಹಾಕಲಾಯಿತು. ಸಂಜೆ ದೇವಾಲಯದ ಅರ್ಚಕರು ದೇವಾಲಯಕ್ಕೆ ದೇವಿಯನ್ನು ತಂದರು. ಈ ಮೂಲಕ ದೇವಿಯು ದೇವಾಲಯವನ್ನು ಪ್ರವೇಶಿಸಿದಂತಾಗಿ, ಸಂಜೆಯ ವೇಳೆ ಅಂಕುರಾರ್ಪಣೆಯ ಕಾರ್ಯವೂ ಜರುಗಿತು.

ಮಾಂಸಾಹಾರ ನಿಷೇಧ: ಜಾತ್ರೆಯ ಹಿನ್ನೆಲೆಯಲ್ಲಿ ಇಡೀ ಊರಿನಲ್ಲಿ ಮಾಂಸಾಹಾರವನ್ನು ಸಂಪೂರ್ಣವಾಗಿ ನಿಷೇಧ ಮಾಡಲಾಗಿದ್ದು, ಮಾಂಸ ಮಾರಾಟ ಮಾಡುತ್ತಿದ್ದ ಮಾರುಕಟ್ಟೆಯ ಮಾಂಸದ ಅಂಗಡಿಗಳು, ಕೋಳಿ ಅಂಗಡಿಗಳು ಮುಚ್ಚಲಾಗಿದೆ.

ಎಳನೀರಿಗೆ ಬೇಡಿಕೆ: ಹಿಂದೆ ಹೇಮಾದ್ರಂಬ ದೇವಿ ಗ್ರಾಮಕ್ಕೆ ಬರಲು ಪ್ರತಿ ಹೆಜ್ಜೆ ಹೆಜ್ಜೆಗೆ ಎಳನೀರನ್ನು ನೀಡಲಾಗಿತ್ತು ಎನ್ನುವ ಪ್ರತೀತಿ ಇದ್ದು, ಅಂತೆಯೇ ದೇವಿಯ ಜಾತ್ರಾಮಹೋತ್ಸವದಲ್ಲಿ ದೇವಿಯ ಪೂಜೆ ಎಳನೀರನ್ನು ಬಳಸುವುದು ರೂಢಿಯಲ್ಲಿದ್ದು, ಎಳನೀರಿಗೆ ಬೇಡಿಕೆ ಹೆಚ್ಚಾಗಿದ್ದು, ಮಾರಾಟ ಮಾಡುವವರ ಸಂಖ್ಯೆಯೂ ಹೆಚ್ಚುತ್ತಿದೆ.

ಟಾಪ್ ನ್ಯೂಸ್

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ ಮಹೇಶ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

22-hunsur-1

Hunsur: ಕಾರು ಪಲ್ಟಿಯಾಗಿ ಎಳನೀರು ವ್ಯಾಪಾರಿ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Pannu Singh

Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್‌ಗೆ ಪನ್ನು ದೂರು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.