ಓಲೈಸುವವರು ಕಲಾವಿದರಲ್ಲ ವಿದೂಷಕರು


Team Udayavani, Apr 10, 2017, 12:38 PM IST

mys7.jpg

ಮೈಸೂರು: ಕಲಾವಿದರು ಯಾವುದೇ ಆತಂಕವಿಲ್ಲದೆ ತಮ್ಮ ಮನಸ್ಸಿನಲ್ಲಿರುವ ವಿಷಯವನ್ನು ನೇರ ಹಾಗೂ ನಿರ್ಭಯದಿಂದ ಅಭಿವ್ಯಕ್ತಪಡಿಸಬೇಕು ಎಂದು ಸಾಹಿತಿ ಪ್ರೊ. ಅರವಿಂದ ಮಾಲಗತ್ತಿ ಅಭಿಪ್ರಾಯಪಟ್ಟರು.

ನಗರದ ಚಾಮರಾಜಪುರಂನ ಶ್ರೀ ರವಿವರ್ಮ ಚಿತ್ರಕಲಾ ಶಾಲೆ ಮೈಸೂರು ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಭಾನುವಾರ ಆಯೋಜಿಸಿದ್ದ ರಾಜ ರವಿವರ್ಮ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಸಾಂವತ್ಸರಿಕ ಚಿತ್ರಕಲಾ ಪ್ರದರ್ಶನ ಉದ್ಘಾಟಿಸಿ ಮಾತನಾಡಿ, ಕಲಾವಿದರು ನಾಡಿನ ನಿರಂಕುಶ ಪ್ರಭುಗಳಾಗಿದ್ದು, ಭಾಷೆ ಮತ್ತು ಮಾಧ್ಯಮ ಬೇರೆ ಬೇರೆ ಯಾದರೂ ಮನಸ್ಸಿನಲ್ಲಿ ಅನಿಸಿದ್ದನ್ನು ನೇರವಾಗಿ ನಿರ್ಭಯದಿಂದ ಅಭಿವ್ಯಕ್ತಿ ಗೊಳಿಸಬೇಕು.

ಇದರ ಹೊರತಾಗಿ ಬೇರೊಬ್ಬರ ಓಲೈಕೆಗೆ ಕಲಾವಿದ ರಾಗುವವರು ಕಲಾವಿದರಾಗದೆ ವಿದೂಷಕ ರಾಗುತ್ತಾರೆ ಎಂದರು. ಸಮಾಜದ ಅಂಕು – ಡೊಂಕು ಗಳನ್ನು ವಾಸ್ತವ ಕಟ್ಟಿಕೊಡದೇ ಇನ್ನೊಬ್ಬರ ಅಸ್ತಿತ್ವ ಕಾಯಬಾರದು. ವರ್ತಮಾನದ ಸಮಸ್ಯೆಗಳಿಗೆ ಸ್ಪಂದಿಸ ದಿದ್ದರೇ ಕಲಾವಿದನಾಗಲು ಸಾಧ್ಯವಿಲ್ಲ. ಆದರೆ ಪ್ರಸ್ತುತ ಸಂದರ್ಭದಲ್ಲಿ ಸರ್ಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಾಹಿತಿಗಳು ಮತ್ತು ಕಲಾವಿದರಲ್ಲಿ ಭೇದ ನೀತಿ ಅನುಸರಿಸುತ್ತಿದೆ.

ಸಾಹಿತಿಗಳಿಗೆ ಇರುವೆ ಸಾಲಿನಂತೆ ಉದ್ದಕ್ಕೂ ಪ್ರಶಸ್ತಿಗಳನ್ನು ನೀಡಲಾಗುತ್ತಿದ್ದು, ಕಲಾವಿದನಿಗೆ ಯಾವುದೇ ಪ್ರಶಸ್ತಿಗಳನ್ನು ನೀಡುತ್ತಿಲ್ಲ ಎಂದು ಬೇಸರಿಸಿದರು. ಪ್ರಧಾನ ಮಂತ್ರಿ ಅವರು ನೋಟ್‌ಬ್ಯಾನ್‌ ನಿರ್ಧಾರ ಗಂಡು ನಿರ್ಧಾರವೆಂದು ಭಾವಿಸಿದೆ. ಆದರೆ ನೋಟ್‌ಬ್ಯಾನ್‌ ತೀರ್ಮಾನ ಒಪ್ಪು$ವಂತಾದರೂ ಅದರ ನಿರ್ವಹಣೆಯಲ್ಲಿ ಕೇಂದ್ರ ಸರ್ಕಾರ ವಿಫ‌ಲವಾಗಿದ್ದು, ಈ ವಿಷಯದಲ್ಲಿ ಕೇಂದ್ರ ಸರ್ಕಾರದ ನಿರ್ಧಾರದಂತೆಯೇ ನಡೆದಿದ್ದರೇ ದೇಶದ ಶೇ.30 ಕಪ್ಪು ಕುಳಗಳು ಪ್ರಸ್ತುತ ಸೆರೆವಾಸದಲ್ಲಿ ಇರಬೇಕಿತ್ತು ಎಂದು ಹೇಳಿದರು.

ದೆಹಲಿಯ ರಾಷ್ಟ್ರೀಯ ಲಲಿತಕಲಾ ಅಕಾಡೆಮಿ ಆಡಳಿತಾಧಿಕಾರಿ ಚಿ.ಸು.ಕೃಷ್ಣ ಸೆಟ್ಟಿ ಮಾತನಾಡಿ, 19ನೇ ಶತಮಾನದಂಚಿನಲ್ಲಿ ಯುರೋಪ್‌ನಲ್ಲಿ ನಡೆದ ಚಳವಳಿಗಳಲ್ಲಿ ಸಾಹಿತಿಗಳಿಗಿಂತ ಒಂದು ಹೆಜ್ಜೆ ಮುಂದಾಗಿದ್ದವರು ಚಿತ್ರಕಲಾವಿದರು. ಹೀಗಾಗಿ ಸಾಹಿತಿಗಳು, ಚಿಂತಕರು ಹಾಗೂ ಚಿತ್ರಕಲಾವಿದರು ಒಗ್ಗೂಡಿದರೆ ಸಾಮಾಜಿಕ, ಸಾಂಸ್ಕೃತಿಕ ಹಾಗೂ ರಾಜಕೀಯ ಪಲ್ಲಟಗಳು ಸೃಷ್ಟಿಯಾಗಲಿದೆ.

ಭ್ರಷ್ಟಾಚಾರ ರಹಿತ, ನೇರ ನುಡಿಯ ಸ್ವಭಾವದ ವ್ಯಕ್ತಿತ್ವ ಪ್ರತಿಯೊಬ್ಬರನ್ನು ನಿರೀಕ್ಷೆಗೂ ಮೀರಿದ ಪ್ರತಿಫ‌ಲವನ್ನು ನೀಡಲಿದೆ. ಆದ್ದರಿಂದ ಪ್ರಾಮಾಣಿಕ ಸಮರ್ಪಣ ಭಾವದಿಂದ ಸಮಾಜಕ್ಕೆ ಕೆಲಸ ಮಾಡಬೇಕಿದ್ದು, ವರ್ತಮಾನದ ಶಿಶುವಾಗಿರುವ ನಾವು ನಮ್ಮೊಳಗಿನ ದನಿಯನ್ನು ಅಭಿವ್ಯಕ್ತಿ ಗೊಳಿಸಬೇಕಿದೆ ಎಂದು ಹೇಳಿದರು.

ಸರ್ಕಾರಗಳು ಸಾಹಿತ್ಯ ಕ್ಷೇತ್ರದಲ್ಲಿನ ಸಾಧನೆ ಪರಿಗಣಿಸಿ ನೀಡುವ ಪ್ರಶಸ್ತಿಗಳಂತೆ ಚಿತ್ರಕಲಾವಿದ ಹಾಗೂ ದೃಶ್ಯ ಕಲಾವಿದರಿಗೂ ಪ್ರಶಸ್ತಿ ನೀಡಿದರೆ ಕಲೆಯ ಚಟುವಟಿಕೆಗಳು ಮತ್ತಷ್ಟು ಉತ್ತುಂಗಕ್ಕೆ ಏರುವ ಜತೆಗೆ ಕಲೆಯ ಬೆಳವಣಿಗೆಗೂ ಸಹಾಯವಾಗಲಿದೆ. ಜತೆಗೆ ಪ್ರತಿಯೊಂದು ಕಲೆಯ ಶಾಲೆಗಳು ಪ್ರಾಯೋಗಿಕ, ತಾತ್ವಿಕವಾಗಿ ಕಲೆಯ ಬಗ್ಗೆ ಬೋಧನೆ ಮಾಡುತ್ತವೆ. ಆದರೆ ಪಠ್ಯದ ಜತೆಯಲ್ಲಿ ಪಠ್ಯೇತರ ಚಟುವಟಿಕೆ ಮನ್ನಣೆ ನೀಡುವ ಕಾಲೇಜುಗಳು ಪ್ರಗತಿ ಸಾಧಿಸಲಿದೆ.

ಆದ್ದರಿಂದ ವಿದ್ಯಾರ್ಥಿಗಳಲ್ಲಿ ಹೊಸ ಚಿಂತನೆಗಳನ್ನು ಹುಟ್ಟು ಹಾಕುವ ಜತೆಗೆ ಪಠ್ಯೇತರಕ್ಕೆ ಚಟುವಟಿಕೆಗಳಿಗೆ ಹೆಚ್ಚಿನ ಮಹತ್ವ ನೀಡುವ ಮೂಲಕ ಕಲೆ ಅಭಿವೃದ್ಧಿ ಪಡಿಸಬೇಕು ಎಂದರು. ಕಾರ್ಯಕ್ರಮದ ಅಂಗವಾಗಿ ಶಾಲೆಯ ವಾರ್ಷಿಕ ಸಾಧಕರಾದ ಪೂಜಾ ಮೆಹ್ತಾ, ಮೋಹನ್‌ ರಾಜ್‌ ಹಾಗೂ ಬಿ. ಕುಮಾರ್‌ ಅವರಿಗೆ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು. ರವಿವರ್ಮ ಚಿತ್ರಕಲಾ ಶಾಲೆ ಪ್ರಾಚಾರ್ಯ ಶಿವಕುಮಾರ ಕೆಸರಮಡು, ಕಾವಾ ಕಾಲೇಜಿನ ಮುಖ್ಯಸ್ಥ ಬಸವರಾಜು ಹಾಜರಿದ್ದರು.

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ

Mysuru-Simhasana

Mysuru Dasara: ಖಾಸಗಿ ದರ್ಬಾರ್‌ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ

Mysore-Sidda

MUDA Case: ನ್ಯಾಯ ನನ್ನ ಪರವಿದೆ, ರಾಜಕೀಯ ಪ್ರೇರಿತ ಕೇಸ್‌ ಎದುರಿಸಿ ಗೆಲ್ಲುವೆ: ಸಿಎಂ

CM-Mysore1

MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್‌ ಸಾಧ್ಯತೆ

Mysuru-Dasara

Mysuru Dasara: ಎದೆ ಝಲ್‌ ಎನ್ನಿಸಿದ ಶಬ್ದಕ್ಕೂ ಜಗ್ಗದ ಗಜಪಡೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.