ರೆಸಾರ್ಟ್‌ಗಳಲ್ಲಿ ಪ್ರವಾಸಿಗರಿಗೆ ಅವಕಾಶ: ಆಕ್ರೋಶ


Team Udayavani, Mar 23, 2020, 3:00 AM IST

resort

ಎಚ್‌.ಡಿ.ಕೋಟೆ: ಕೊರೊನಾ ತಡೆಯುವ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಸುಮಾರು 10 ರೆಸಾರ್ಟ್‌ಗಳ ಪೈಕಿ 9 ರೆಸಾರ್ಟ್‌ ಬಂದ್‌ ಮಾಡಿದ್ದರೆ ಆರೆಂಜ್‌ ಕೌಂಟಿ ರೆಸಾರ್ಟ್‌ ಪ್ರವಾಸಿಗರಿಗೆ ಪ್ರವೇಶ ನೀಡುತ್ತಿರುವ ಕ್ರಮ ವಿರೋಧಿಸಿ ಗ್ರಾಮಸ್ಥರು ರೆಸಾರ್ಟ್‌ಗೆ ಮುತ್ತಿಗೆ ಹಾಕಿ ತೀವ್ರ ವಿರೋಧ ವ್ಯಕ್ತಪಡಿಸಿದರು.

ರೆಸಾರ್ಟ್‌ ಆಡಳಿತ ಮಂಡಳಿ ಅವರೊಡನೆ ಮಾತಿನ ಚಕಮಕಿ ನಡೆಸಿದ ಬೀರಂಬಳ್ಳಿ ಗ್ರಾಮಸ್ಥರು, ಮಹಾಮಾರಿ ಕೊರೊನಾ ತಡೆಗೆ ವಿಶ್ವ ಸೇರಿದಂತೆ ಇಡೀ ಭಾರತ ಮುಂದಾಗಿದೆ. ಹೀಗಿರುವಾಗ ತಾಲೂಕಿನ ಬಹುತೇಕ ಎಲ್ಲಾ ರೆಸಾರ್ಟ್‌ಗಳೂ ಶಾಸಕ ಅನಿಲ್‌ ಚಿಕ್ಕಮಾದು ಅವರು ಸಭೆಯೊಂದರಲ್ಲಿ ನೀಡಿದ ಆದೇಶದಂತೆ ಪ್ರವಾಸಿಗರಿಗೆ ರೆಸಾರ್ಟ್‌ಗೆ ಪ್ರವೇಶ ಬಂದ್‌ ಮಾಡಿವೆ.

ಆದರೆ, ಇದನ್ನೇ ಬಂಡವಾಳ ಮಾಡಿಕೊಂಡ ಎನ್‌.ಬೇಗೂರು ಸಮೀಪದ ಬೀರಂಬಳ್ಳಿ ಬಳಿ ಆರೆಂಜ್‌ ರೆಸಾರ್ಟ್‌ ಇದಾವುದನ್ನೂ ಲೆಕ್ಕಿಸದೆ ಪ್ರವಾಸಿಗರನ್ನು ರೆಸಾರ್ಟ್‌ಗೆ ದಾಖಲಿಸಿಕೊಳ್ಳುತ್ತಿದ್ದು ಸುಮಾರು 17ಮಂದಿ ಪ್ರವಾಸಿಗರಿಗೆ ಪ್ರವೇಶ ನೀಡಿತ್ತು ಅನ್ನುವ ಅಂಶ ತಿಳಿದು ಬಂದಿದೆ.

ಈ ಹಿನ್ನೆಲೆಯಲ್ಲಿ ರೊಚ್ಚಿಗೆದ್ದು ಗ್ರಾಮದ ಪ್ರಮುಖರು ರೆಸಾರ್ಟ್‌ ಬಳಿ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಬೇಕು. ಈಗ ದಾಖಲಾಗಿರುವ ಪ್ರವಾಸಿಗರನ್ನು ಕೂಡಲೇ ಹೊರಗೆ ಕಳಿಸಬೇಕೆಂದು ಪಟ್ಟು ಹಿಡಿದರು. ಈ ಸಂದರ್ಭದಲ್ಲಿ ಮಾತಿನ ಚಕಮಕಿ ನಡೆಯಿತು. ಸ್ಥಳಕ್ಕೆ ದೌಡಾಯಿಸಿದ ತಾಲೂಕು ಆರೋಗ್ಯಾಧಿಕಾರಿ ಡಾ.ರವಿಕುಮಾರ್‌ ಭಾನುವಾರ ಮುಂಜಾನೆ ವೇಳೆಗೆ ಪ್ರವಾಸಿಗರನ್ನು ಕಳುಹಿಸುವುದರ ಜೊತೆಗೆ ಮತ್ತೆ ಪ್ರವೇಶಿಗರಿಗೆ ಪ್ರವೇಶ ನೀಡದಂತೆ ಕ್ರಮ ಕೈಗೊಳ್ಳುವ ಭರವಸೆ ನೀಡಿದಾಗ ಪ್ರತಿಭಟನೆ ವಾಪಸ್‌ ಪಡೆದರು.

ತಹಶೀಲ್ದಾರ್‌ ಆರ್‌.ಮಂಜುನಾಥ್‌ ಸ್ಥಳಕ್ಕೆ ಭೇಟಿ ನೀಡಿ ರೆಸಾರ್ಟ್‌ನಲ್ಲಿ ಪ್ರವಾಸಿಗರಿಗೆ ಪ್ರವೇಶ ನೀಡದಂತೆ ಎಚ್ಚರಿಕೆ ನೀಡಿ ಮುಂದೆ ನಿಯಮ ಪಾಲಿಸದ ರೆಸಾರ್ಟ್‌ಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡುತ್ತಿದ್ದೇವೆಂದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysuru-Elephant

Mysuru Dasara: ಎರಡನೇ ತಂಡದ ಗಜಪಡೆಗೆ ತೂಕ ಪರೀಕ್ಷೆ: ಸುಗ್ರೀವ 5.2 ಟನ್‌

3-hunsur

Hunsur: ಗಣಪತಿ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯ: ಇನ್ಸ್ಪೆಕ್ಟರ್ ಮುನಿಯಪ್ಪ

CM-Siddu

Report on Corruption: ಕೋವಿಡ್‌ ಅಕ್ರಮ: ಸಂಪುಟ ಸಭೆಯಲ್ಲಿ ಚರ್ಚಿಸಿ ಕ್ರಮ: ಸಿಎಂ

Yadhuveer

Mysuru: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ಅಕ್ರಮ: ಸಂಸದ ಯದುವೀರ್‌

Chamundi-Sabhe

Mysore: ಚಾಮುಂಡೇಶ್ವರಿ ದೇಗುಲ ಸಂಪ್ರದಾಯ, ಘನತೆ ಕಾಪಾಡಿ ಉನ್ನತೀಕರಿಸಿ: ಸಿದ್ದರಾಮಯ್ಯ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.