ಸಹಕಾರ ಸಂಘದಿಂದ ಸಾವಯವ ಬೆಲ್ಲ 


Team Udayavani, Sep 26, 2017, 12:09 PM IST

mmys4.jpg

ಬನ್ನೂರು: ಯಾಚೇನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಮುಂದಿನ ದಿನಗಳಲ್ಲಿ ಸಾವಯವ ಬೆಲ್ಲವನ್ನೂ ತಯಾರು ಮಾಡಿ ಅದನ್ನು ರಾಜ್ಯದ ಮೂಲೆ, ಮೂಲೆಗೂ ತಲುಪಿಸುವ ಮಹತ್ವದ ಯೋಜನೆ ಹಮ್ಮಿಕೊಂಡಿರುವುದಾಗಿ ಯಾಚೇನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವೈ.ಎನ್‌.ಶಂಕರೇಗೌಡ ತಿಳಿಸಿದರು.

ಪಟ್ಟಣದ ಸಮೀಫ‌ದ ಯಾಚೇನಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಹಮ್ಮಿಕೊಳ್ಳಲಾದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಈಗ, ತಯಾರಾಗುತ್ತಿರುವ ಬೆಲ್ಲ ವಿಷಕಾರಕ ಎಂಬ ಅಂಶವನ್ನು ವಿಜಾnನ ದೃಢಪಡಿಸಿದೆ.

ನಾವು ತಿನ್ನುವ ಆಹಾರ ಪದಾರ್ಥಗಳು ವಿಷವಾಗುತ್ತ ಸಾಗಿದರೆ ಮನುಷ್ಯನ ಸಂತತಿಯೇ ವಿನಾಶ ಹೊಂದುವ ಲಕ್ಷಣಗಳಿವೆ. ಸಕ್ಕರೆಯಿಂದ ದೇಹದ ಆರೋಗ್ಯದ ಮೇಲೆ ದುಷ್ಪರಿಣಾಮಗಳು ಆಗುತ್ತಿದೆ.  ಇದನ್ನು ಮನಗಂಡು ಗ್ರಾಮದ ಜನರಿಗೆ ಉದ್ಯೋಗ ಒದಗಿಸುವ ದೃಷ್ಟಿಯಿಂದ ಹಾಗೂ ರೈತರು ಬೆಳೆಯುವ ಕಬ್ಬಿಗೆ ಸೂಕ್ತವಾದ ಬೆಲೆ ಒದಗಿಸಿಕೊಡುವ ಉದ್ದೇಶದಿಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಎಲ್ಲಾ ಸದಸ್ಯರ ಸಹಕಾರದೊಂದಿಗೆ ಸಾವಯವ ಬೆಲ್ಲ ತಯಾರಿಸುವ ಯೋಜನೆ ಹಮ್ಮಿಕೊಳ್ಳುತ್ತಿರುವುದಾಗಿ ತಿಳಿಸಿದರು.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಉತ್ತಮ ಹಾದಿಯಲ್ಲಿ ಸಾಗಿದೆ. ಇದನ್ನು ಮತ್ತಷ್ಟು ಅಭಿವೃದ್ಧಿ ಮಾಡುವ ಮಹಾದಾಸೆ ತಮಗೆ ಇದ್ದು, ಮುಂದಿನ ದಿನಗಳಲ್ಲಿ ಮಹದೇವ ಪ್ರಸಾದರ ಖಾಲಿ ಸಭಾಂಗಣವನ್ನು ಉಪಯೋಗಿಸಿಕೊಂಡು ಗ್ರಾಮದ ಜನರಿಗೆ ಉದ್ಯೋಗ ಕಲ್ಪಿಸಿಕೊಡಲು ಸದ್ಬಳಕೆ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು. ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಸಿಇಒ ಕ್ಯಾತೇಗೌಡ, ಆಯವ್ಯಯವನ್ನು ಮಂಡಿಸಿ ಸಂಘದ ಸದಸ್ಯರ ಒಪ್ಪಿಗೆ ಪಡೆದುಕೊಂಡರು. ಮುಂದಿನ ಸಾಲಿನ ಆಯವ್ಯಯದ ಯೋಜನೆಯನ್ನು ಮಂಡಿಸಿದರು.

ಕಾರ್ಯಕ್ರಮದಲ್ಲಿ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ವೈ.ಎಂ.ಚಂದ್ರು, ನಿರ್ದೇಶಕರಾದ ವೈ.ಕೆ. ಬೋರೇಗೌಡ, ವೈ.ಜಿ.ಮಹೇಂದ್ರ, ವೈ.ಎಂ.ಮಲ್ಲೇಶ್‌, ಬಿ.ಎಂ. ಶಿವಕುಮಾರ್‌, ಚೆನ್ನಶೆಟ್ಟಿ, ಲಕ್ಷ್ಮಮ್ಮ ಸಿದ್ದೇಗೌಡ, ಮಂಗಳಮ್ಮ, ಸೋಮಶೇಖರ್‌, ಎನ್‌. ಆರ್‌.ರಂಗನಾಥ್‌, ಪುಟ್ಟರಾಜು, ನಂಜುಂಡೇಗೌಡ, ಸಿದ್ದೇಗೌಡ, ವೈ.ಜಿ.ಮಹದೇವು, ವೈ.ಕೆ.ಸಿದ್ದಯ್ಯ, ಲೋಕೇಶ್‌, ವೈ.ಎನ್‌.ಮಹದೇವು, ವೈ.ಎನ್‌.ಕೃಷ್ಣಪ್ಪ, ವೈ.ಕೆ.ಪ್ರಸನ್ನ, ಕರಿಪುಟ್ಟಶೆಟ್ಟಿ ಮತ್ತಿತರರಿದ್ದರು.

ನಬಾರ್ಡ್‌ ಜೊತೆಯಲ್ಲಿ ಈಗಾಗಲೇ ಮಾತುಕತೆ ನಡೆಸಿರುವಂತೆ 100 ಮಂದಿ ಫ‌ಲಾನುಭವಿಗಳಿಗೆ ರಾಸುಗಳನ್ನು ಕೊಳ್ಳಲು ಸಬ್ಸಿಡಿಯೊಂದಿಗೆ ಸಾಲ ನೀಡುವ ಯೋಜನೆ ಹಮ್ಮಿಕೊಂಡಿದ್ದು, ಗ್ರಾಮಸ್ಥರು ಸೌಲಭ್ಯವನ್ನು ಸದ್ಬಳಕೆ ಮಾಡಿಕೊಳ್ಳಬೇಕು.
-ವೈ.ಎನ್‌.ಶಂಕರೇಗೌಡ, ಯಾಚೇನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ 

ಟಾಪ್ ನ್ಯೂಸ್

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

rangapattana-Elephnat

Dasara: ಶ್ರೀರಂಗಪಟ್ಟಣ ದಸರಾಗೆ ಆರಂಭದಲ್ಲೇ ವಿಘ್ನ: ಅಡ್ಡಾದಿಡ್ಡಿ ಓಡಾಡಿದ ಆನೆ

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

H. Vishwanath: “ಚಮಚಗಿರಿ ಭಾಷಣದಿಂದ ದಸರಾ ಪಾವಿತ್ರ್ಯತೆ ಹಾಳು’

H. Vishwanath: “ಚಮಚಗಿರಿ ಭಾಷಣದಿಂದ ದಸರಾ ಪಾವಿತ್ರ್ಯತೆ ಹಾಳು’

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Vaishnodevi-Temple

Famous Goddess Temple: ಗುಹಾಲಯ ಶ್ರೀಮಾತಾ ವೈಷ್ಣೋದೇವಿ ದೇಗುಲ, ಜಮ್ಮು-ಕಾಶ್ಮೀರ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

16

Ullal: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.