![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Jun 19, 2023, 10:24 PM IST
ಹುಣಸೂರು: ಬಕ್ರೀದ್ ಹಬ್ಬ ಆಚರಣೆ ಹಿನ್ನೆಲೆಯಲ್ಲಿ ನಗರ ಠಾಣೆಯಲ್ಲಿಸೋಮವಾರ ಸಂಜೆ ಶಾಂತಿ ಸಭೆ ನಡೆಸಿದರು.
ಶಾಂತಿ ಸಭೆಯಲ್ಲಿ ಮುಖಂಡರಿಂದ ಮಾಹಿತಿ ಪಡೆದ ನಂತರ ಮಾತನಾಡಿದ ಅಧ್ಯಕ್ಷತೆ ವಹಿಸಿದ್ದ ಇನ್ಸ್ ಪೆಕ್ಟರ್ ದೇವೇಂದ್ರ ಅವರು, ಯಾವುದೇ ಸಮುದಾಯವಾಗಿರಲಿ ಹಬ್ಬಗಳ ಆಚರಣೆ ವೇಳೆ ಅನ್ಯ ಧರ್ಮದ ಬಗ್ಗೆ ತಾತ್ಸಾರ ಮಾಡದೆ. ಶಾಂತಿಯುತವಾಗಿ ಆಚರಿಸಿದಾಗ ಮಾತ್ರ ಸಹಭಾಳ್ವೆ ಸಾಧ್ಯ. ಹೀಗಾಗಿ ಶಾಂತಿ ಭಂಗ ತರುವ ಯಾವುದೇ ಹೇಳಿಕೆಗಳು. ಸಾಮಾಜಿಕ ಜಾಲ ತಾಣಗಳಲ್ಲಿ ಪೋಸ್ಟ್ ಮಾಡುವುದು. ಫಾರ್ವಡ್ ಮಾಡಿ ಮತ್ತೊಬ್ಬರಿಗೆ ನೋವುಂಟು ಮಾಡುವುದು ಕಾನೂನಿನಲ್ಲಿ ಅಪರಾಧವಾಗಿದ್ದು, ಸಭೆಯಲ್ಲಿನ ಮುಖಂಡರು ಯುವಕರಿಗೆ ತಿಳಿ ಹೇಳಬೇಕೆಂದು ಮನವಿ ಮಾಡಿ. ಕಾನೂನು ಉಲ್ಲಂಘಿಸುವವರ ವಿರುದ್ದ ನಿರ್ದಾಕ್ಷ್ಯಿಣ್ಯವಾಗಿ ಕ್ರಮ ಜರುಗಿಸಲಾಗುವುದು.
ಇದರಿಂದ ಮುಂದೆ ಯುವಕರು ಉದ್ಯೋಗಕ್ಕೆ ಹೋಗುವ ವೇಳೆ ತೊಂದರೆಯಾಗಲಿದೆ.ಶಾಂತಿ ಭಂಗ ತರುವವರ ವಿರುದ್ದ ಪೊಲೀಸರು ಕಣ್ಗಾವಲಿಟ್ಟಿದ್ದು. ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕೆಂದು ಮನವಿ ಮಾಡಿದರು.
ಮುಂದಿನ ವಾರದಲ್ಲಿ ಬಕ್ರೀದ್ ಹಬ್ಬದ ಸಂಭ್ರಮಾಚರಣೆ ವೇಳೆ ಪೊಲೀಸರು ನಿಗದಿ ಪಡಿಸಿದ ಸ್ಥಳಗಳಲ್ಲೇ ಮೆರವಣಿಗೆ ನಡೆಸುವುದು ಒಳಿತು. ಹಬ್ಬಗಳ ಸಂದರ್ಭಗಳಲ್ಲಿ ರಸ್ತೆಗಳಲ್ಲಿ ಯುವಕರು ವೀಲಿಂಗ್ ಮಾಡುವುದು .ಕರ್ಕಶವಾಗಿ ಶಬ್ದಹೊರಡಿಸುವ ಬೈಕ್ ಗಳನ್ನು ಓಡಿಸುವವರಿಗೂ ಮುಖಂಡರು ತಿಳುವಳಿಕೆ ನೀಡಬೇಕೆಂದು ಮನವಿ ಮಾಡಿದರು.
ಸಭೆಯಲ್ಲಿ ಎಸ್ .ಐ.ಗಳಾದ ಪಂಚಾಕ್ಷರಿಸ್ವಾಮಿ. ನಾಗಯ್ಯ ಹಾಗೂ ಸಿಬ್ಬಂದಿ ಇದ್ದರು.ಈ ವೇಳೆ ನಗರಸಭೆ ಸದಸ್ಯ ಸೈಯದ್ ಯೂನಸ್. ಮಾಜಿ ಸದಸ್ಯ ಮಜಾಜ್ ಅಹಮದ್, ಎಸ್ ಡಿಪಿಐ.ಮುಖ್ಯಸ್ಥ ತಬ್ರೈಜ್, ಫಜಲ್,ಡಿ.ಎಸ್.ಎಸ್. ಮುಖಂಡ ಕಾಂತರಾಜು. ಮಂಜು.ರವಿಗೌಡ,ರಮೇಶ್ ಸೇರಿದಂತೆ ಅನೇಕ ಮುಖಂಡರಿದ್ದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
You seem to have an Ad Blocker on.
To continue reading, please turn it off or whitelist Udayavani.