![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Mar 27, 2019, 12:59 PM IST
ನಂಜನಗೂಡು: ಬನ್ನಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯ ತ್ಯಾಜ್ಯದಿಂದ ಗ್ರಾಮದಲ್ಲಿ ಕಲುಷಿತ ವಾತಾವರಣೆ ನಿರ್ಮಾಣವಾಗಿದೆ ಎಂದು ಆಪಾದಿಸಿ ಮತದಾನವನ್ನು ಬಹಿಷ್ಕರಿಸಿದ್ದ ತಾಲೂಕಿನ ಅಳಗಂಚಿಪುರ ಗ್ರಾಮಸ್ಥರೊಂದಿಗೆ ತಹಶೀಲ್ದಾರ್ ಶಾಂತಿ ಸಭೆ ನಡೆಸಿದರು.
ಸಕ್ಕರೆ ಕಾರ್ಖಾನೆಯಿಂದ ಗ್ರಾಮದ ಕೊಳವೆ ಬಾವಿಗಳ ನೀರು ಕಲುಷಿತಗೊಂಡಿದ್ದು, ಶುದ್ಧ ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ. ಸುತ್ತಮುತ್ತಲಿನ ಪ್ರದೇಶದಲ್ಲಿ ಅಂತರ್ಜಲ ಮಲಿನವಾಗಿದೆ. ಹೀಗಾಗಿ ಈ ಕಾರ್ಖಾನೆಯನ್ನು ಗ್ರಾಮದಿಂದ ತೊಲಗಿಸುವಂತೆ ಆಗ್ರಹಿಸಿ ಗ್ರಾಮಸ್ಥರು, ಮತದಾನ ಬಹಿಷ್ಕರಿಸುವುದಾಗಿ ಘೋಷಿಸಿದ್ದರು.
ಈ ಹಿನ್ನೆಲೆಯಲ್ಲಿ ತಮ್ಮ ಕಾರ್ಯಾಲಯದಲ್ಲಿ ಶಾಂತಿ ಸಭೆ ನಡೆಸಿದ ತಹಶೀಲ್ದಾರ್ ಮಹೇಶ್ ಕುಮಾರ್, ಯಾವುದೇ ಕಾರಣಕ್ಕೂ ಮತದಾನ ಬಹಿಷ್ಕರಿಸುವುದು ಬೇಡ. ಮತದಾನ ನಮ್ಮೆಲ್ಲರ ಕರ್ತವ್ಯವಾಗಿದ್ದು, ಇದರಲ್ಲಿ ಪ್ರತಿಯೊಬ್ಬರೂ ಭಾಗಿಯಾಗೋಣ ಎಂದು ಮನವಿ ಮಾಡಿದರು.
ಸಕ್ಕರೆ ಕಾರ್ಖಾನೆಯ ಡಿಸ್ಟಿಲರಿ (ಎಥಿನಾಲ್) ಘಟಕದಿಂದ ಸುತ್ತಲಿನ ಕೊಳವೆ ಬಾವಿಗಳ ನೀರು ಕಲುಷಿತ, ಹಾರುವ ಬೂದಿ, ಧೂಳು, ಹೊಗೆ ಮತ್ತಿತರ ತ್ಯಾಜ್ಯದಿಂದ ಗ್ರಾಮಸ್ಥರು ತೊಂದರೆ ಅನುಭವಿಸುತ್ತಿರುವುದು ತಮ್ಮ ಗಮನಕ್ಕೆ ಬಂದಿದ್ದು, ಈ ಕುರಿತು ಪರಿಸರ, ಕೃಷಿ, ಆರೋಗ್ಯ ಇಲಾಖೆಗಳಿಂದ ವರದಿ ಕೇಳಲಾಗಿದ್ದು, ವರದಿ ಬಂದ ನಂತರ ಕ್ರಮ ಜರುಗಿಸಲಾಗುವುದು.
ಹೀಗಾಗಿ ನಿಮ್ಮ ತೀರ್ಮಾನವನ್ನು ಹಿಂಪಡೆದು ಕಡ್ಡಾಯವಾಗಿ ಮತದಾನದಲ್ಲಿ ಪಾಲ್ಗೊಳ್ಳಬೇಕು ಎಂದು ಕೋರಿದರು. ಗ್ರಾಮ ಪಂಚಾಯಿತಿಯ ಅನುಮತಿ ಇಲ್ಲದೇ ಬನ್ನಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ನಿರ್ಮಿಸುತ್ತಿರುವ ಕಟ್ಟಡ ಅನಧಿಕೃತವಾಗಿದ್ದು, ಅದನ್ನು ಈ ಕ್ಷಣದಿಂದಲೇ ತೆರವುಗೊಳಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ತಾಪಂ ಇಒ ಶ್ರೀಕಂಠರಾಜ ಅರಸು, ಮಲ್ಲುಪುರ ಗ್ರಾಪಂ ಅಭಿವೃದ್ಧಿ ಅಧಿಕಾರಿ ಗಣೇಶಮೂರ್ತಿ, ಆರ್ಐ ಮದೇವಪ್ರಸಾದ, ಗ್ರಾಪಂ ಸದಸ್ಯರಾದ ಗುರು, ಪರಶಿವ, ಮಂಜು ಶಿವಶಂಕರ, ಸಿದ್ದು, ಮರುಳಿ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.