ಜನತೆ ದೌರ್ಭಾಗ್ಯವೋ, ಜನಪ್ರತಿನಿಧಿಗಳ ವೈಫ‌ಲ್ಯವೋ..


Team Udayavani, Sep 17, 2017, 11:28 AM IST

mys5.jpg

ಪಿರಿಯಾಪಟ್ಟಣ: ದಶಕಗಳೇ ಕಳೆದರೂ ದುರಸ್ತಿ ಭಾಗ್ಯ ಕಾಣದ ತಾಲೂಕು ಕೇಂದ್ರವನ್ನು ಸಂಪರ್ಕಿಸುವ ರಸ್ತೆ ಇದೀಗ ಹಳ್ಳಕೊಳ್ಳಗಳಿಂದ ನಿರ್ಮಾಣವಾಗಿರುವುದು ರಸ್ತೆಯ ದೌರ್ಭಾಗ್ಯವೇ ಸರಿ. ತಾಲೂಕಿನ ರಾವಂದೂರು ಎಸ್‌.ಕೊಪ್ಪಲು ಮಾರ್ಗವಾಗಿ ನಾಗರಘಟ್ಟ-ಕೆಲ್ಲೂರು-ಹೊಸಕೋಟೆ-ಮಳಲಿ ಮಾರ್ಗವಾಗಿ ಕೆ.ಆರ್‌.ನಗರಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗದಿಂದ ನಾಗರಿಕರು ಸಂಕಷ್ಟ ಎದುರಿಸುವಂತಾಗಿದೆ. 

ಸವಾಲಿನ ಪ್ರಯಾಣ: ತಾಲೂಕಿನ ಗಡಿಭಾಗದಲ್ಲಿರುವ ರಾವಂದೂರು ಹೋಬಳಿಗೆ ಹತ್ತಿರವಿರುವ ಕೆ.ಆರ್‌.ನಗರ ತಾಲೂಕಿಗೆ ಸಂಪರ್ಕ ಕಲ್ಪಿಸುವ ರಸ್ತೆ ಲೋಕೋಪಯೋಗಿ ಇಲಾಖೆಗೆ ಒಳಪಟ್ಟಿದೆ. ಅನೇಕ ವರ್ಷಗಳಿಂದ ಡಾಂಬರೀಕರಣ ಕಿತ್ತುಹೋಗಿ ರಸ್ತೆಯ ಅಸ್ತಿತ್ವವನ್ನೇ ಕಳೆದುಕೊಂಡಿದೆ. ಗುಂಡಿಗಳಿಂದ ಆವೃತ್ತವಾಗಿದ್ದು ಸಾರ್ವಜನಿಕರು ಹಾಗೂ ವಾಹನ ಸವಾರರು ರಸ್ತೆಯಲ್ಲಿ ಸಂಚರಿಸಲು ಹರಸಾಹಸ ಪಡಬೇಕಾದ ಪರಿಸ್ಥಿತಿ ಬಂದೊದಗಿದೆ.

ಸವಾರರಿಗೆ ಸೊಳ್ಳೆಗಳ ಭೀತಿ: ರಾವಂದೂರಿಗೆ ಸಮೀಪವಿರುವ ಕೆಲ್ಲೂರು ಗ್ರಾಮದಲ್ಲಿ ಸಂಪೂರ್ಣವಾಗಿ ಈ ರಸ್ತೆ ಕೆರೆಯಂತೆ ನಿರ್ಮಾಣವಾಗಿ ಸೊಳ್ಳೆಗಳ ವಾಸಸ್ಥಾನಕ್ಕೆ ಎಡೆಮಾಡಿಕೊಟ್ಟಿದೆ. ಅಲ್ಲದೆ, ರಸ್ತೆಯಲ್ಲಿ ಗುಂಡಿಗಳು ಬಿದ್ದಿರುವುದರಿಂದಾಗಿ ಅನೇಕ ಸವಾರರು ಬಿದ್ದು ಗಾಯ ಮಾಡಿಕೊಂಡಿರುವ ನಿದರ್ಶನಗಳಿವೆ. 

10 ಕಿ.ಮೀ.ಹೆಚ್ಚು ಪ್ರಯಾಣಿಸುವ ಪ್ರಯಾಣಿಕರು: ಈ ರಸ್ತೆ ಸರಿಯಿಲ್ಲದ ಕಾರಣದಿಂದಾಗಿ ರಾವಂದೂರಿನಿಂದ ಕೆ.ಆರ್‌.ನಗರಕ್ಕೆ ಚಲಿಸಲು ಕಿತ್ತೂರು ಮಾರ್ಗವಾಗಿ ಪ್ರಯಾಣ ಮಾಡಬೇಕಾದ ಪರಿಸ್ಥಿತಿ ಇದೆ. ಇದರಿಂದ ಪ್ರಯಾಣಿಕರಿಗೂ ಹೆಚ್ಚು ಬಸ್‌ ಪ್ರಯಾಣದ ಶುಲ್ಕವನ್ನು ಭರಿಸಬೇಕಾಗಿದೆ. 

ಇದೀಗ ಇಲ್ಲಿಗೆ ಸಮೀಪದ ಕೆಲ್ಲೂರು ಗ್ರಾಮದಲ್ಲಿ ತಾಲೂಕಿನಲ್ಲಿಯೇ ಪ್ರಸಿದ್ಧಿಗೆ ಪಾತ್ರವಾಗಿರುವ ಶ್ರೀ ಗೌರಮ್ಮ ತಾಯಿ ರಥೋತ್ಸವ ಹಾಗೂ ಜಾತ್ರಾ  ಪ್ರತಿ ವರ್ಷವೂ ವಿಜೃಂಭಣೆಯಿಂದ ನಡೆಯುತ್ತದೆ. ಈ ಬಾರಿಯೂ ಸಕಲ ಸಿದ್ಧತೆ ನಡೆಯುತ್ತಿದ್ದು ವಿವಿಧ ಜಿಲ್ಲೆ ಹಾಗೂ ತಾಲೂಕುಗಳಿಂದ ಸಾವಿರಾರು ಭಕ್ತರು ಕೆಲ್ಲೂರಿಗೆ ಆಗಮಿಸುತ್ತಾರೆ. ಈ ರಸ್ತೆಯಲ್ಲಿಯೇ ಸಂಚರಿಸಬೇಕಾಗಿದೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳಾಗಲೀ, ಜನಪ್ರತಿನಿಧಿಗಳಾಗಲೀ, ಕ್ಷೇತ್ರದ ಶಾಸಕರಾಗಲೀ ಇತ್ತ ಗಮನಹರಿಸಿ ರಸ್ತೆಯನ್ನು ದುರಸ್ತಿಪಡಿಸಬೇಕಾಗಿದೆ. 

ಸಾರ್ವಜನಿಕರ ಹಿತದೃಷ್ಟಿಯಿಂದ ಗುಂಡಿ ಬಿದ್ದ ರಸ್ತೆಯನ್ನು ದುರಸ್ತಿ ಮಾಡಬೇಕಿದೆ. ಅಧಿಕಾರಿಗಳು, ಜನಪ್ರತಿನಿಧಿಗಲು ಭರವಸೆ ನೀಡದೆ ಮೊದಲು ದುರಸ್ತಿ ಕಾರ್ಯ ಕೈಗೊಳ್ಳಬೇಕಾಗಿದೆ.
-ಕೆ.ಸಿ.ಮಂಜುನಾಥ್‌, ವಾಹನ ಸವಾರ

ರಾವಂದೂರು ಎಸ್‌.ಕೊಪ್ಪಲು ಮಾರ್ಗವಾಗಿ ನಾಗರಘಟ್ಟ-ಕೆಲ್ಲೂರು-ಹೊಸಕೋಟೆ-ಮಳಲಿ ಮಾರ್ಗವಾಗಿ ಕೆ.ಆರ್‌.ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕೆ.ಆರ್‌.ನಗರ ತಾಲೂಕನ್ನು ಸಂಪರ್ಕಿಸಲು ಕಡಿಮೆ ಅಂತರದ ಮಾರ್ಗವಾಗಿದೆ. ಹಾಗೂ ಪ್ರಮುಖ ರಸ್ತೆಯಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದಾದರೂ ರಸ್ತೆ ದುರಸ್ತಿಗೊಳಿಸಲು ಅಧಿಕಾರಿಗಳು ಮುಂದಾಗಬೇಕು.
-ದೇವರಾಜ್‌.ಕೆ.ಎಸ್‌, ಸಾರ್ವಜನಿಕ

* ರಾ.ಶ.ವೀರೇಶ್‌ಕುಮಾರ್‌

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ

Mysuru-Simhasana

Mysuru Dasara: ಖಾಸಗಿ ದರ್ಬಾರ್‌ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ

Mysore-Sidda

MUDA Case: ನ್ಯಾಯ ನನ್ನ ಪರವಿದೆ, ರಾಜಕೀಯ ಪ್ರೇರಿತ ಕೇಸ್‌ ಎದುರಿಸಿ ಗೆಲ್ಲುವೆ: ಸಿಎಂ

CM-Mysore1

MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್‌ ಸಾಧ್ಯತೆ

Mysuru-Dasara

Mysuru Dasara: ಎದೆ ಝಲ್‌ ಎನ್ನಿಸಿದ ಶಬ್ದಕ್ಕೂ ಜಗ್ಗದ ಗಜಪಡೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.