Government ಯೋಜನೆಗಳ ಜನಪ್ರಿಯತೆ ವಿರೋಧ ಪಕ್ಷಗಳಿಗೆ ಮರ್ಮಾಗಾತ: ಸಚಿವ ಕೆ.ವೆಂಕಟೇಶ್ ಲೇವಡಿ

ಕೈಲಾಗದವರು ಈಗ ಮೈ ಪರಚಿಕೊಳ್ಳುತ್ತಿದ್ದಾರೆ

Team Udayavani, Aug 16, 2023, 9:57 PM IST

Government ಯೋಜನೆಗಳ ಜನಪ್ರಿಯತೆ ವಿರೋಧ ಪಕ್ಷಗಳಿಗೆ ಮರ್ಮಾಗಾತ: ಸಚಿವ ಕೆ.ವೆಂಕಟೇಶ್ ಲೇವಡಿ

ಪಿರಿಯಾಪಟ್ಟಣ: ಸರ್ಕಾರದ ಯೋಜನೆಗಳ ವಿಫಲತೆಯ ಕನಸ್ಸು ಕಂಡಿದ್ದ ಬಿಜೆಪಿ, ಜೆಡಿಎಸ್ ನಾಯಕರು ನಮ್ಮ ಯೋಜನೆಗಳ ಜನಪ್ರಿಯತೆ ಕಂಡು ಈಗ ಮೈಪರಚಿಕೊಳ್ಳುತ್ತಿವೆ ಎಂದು ರೇಷ್ಮೆ ಮತ್ತು ಪಶುಪಾಲನಾ ಸಚಿವ ಕೆ.ವೆಂಕಟೇಶ್ ಲೇವಡಿ ಮಾಡಿದರು.

ತಾಲೂಕಿನ ಮಾಕೋಡು, ಕೆ.ಎಂ.ಕೊಪ್ಪಲು, ಎಂ.ಶೆಟ್ಟಿಹಳ್ಳಿ, ಕಿರನಲ್ಲಿ, ತಾತನಹಳ್ಳಿ, ಹರಿಲಾಪುರ, ಮಲಗನಕೆರೆ, ಸೀಗಡಿಕಟ್ಟೆ ಗ್ರಾಮಗಳಲ್ಲಿ ಬುಧವಾರ ನಡೆದ ಜನಸಂಪರ್ಕ ಅಭಿಯಾನಾ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿದರು.

ನುಡಿದಂತೆ ನಡೆದಿದ್ದೇವೆ:
ಕಾಂಗ್ರೆಸ್ ಬಡವರ ಪಕ್ಷ, ಶ್ರೀಸಾಮಾನ್ಯರ ಅಭಿವೃದ್ದಿಯೇ ನಮ್ಮ ಮೂಲ ಉದ್ದೇಶ, ಕಾಂಗ್ರೆಸ್ ಜಾರಿ ಮಾಡಿದ್ದ ಕಾರ್ಯಕ್ರಮಗಳ ಬಗ್ಗೆ ಬಿಜೆಪಿ ನಾಯಕರಿಗೆ ಹಾಗೂ ಮೋದಿಗೆ ಹೊಟ್ಟೆಉರಿ ಆರಂಭವಾಗಿದೆ, 5 ಗ್ಯಾರೆಂಟಿ ಯೋಜನೆಗಳಿಗಾಗಿ ಪ್ರತಿ ವರ್ಷ 60 ಸಾವಿರ ಕೋಟಿ ವಿನಿಯೋಗ ಮಾಡುತ್ತಿದೆ. ದೇಶದಲ್ಲಿ ಬಡವರಿಗಾಗಿ ಈ ರೀತಿಯ ಯೋಜನೆಗಳನ್ನು ತಂದಿರುವುದು ಕರ್ನಾಟಕ ಮಾತ್ರ, ಹಾಗಾಗಿ ದೇಶದ ಜನತೆ ಕಾಂಗ್ರೆಸ್ ಕಡೆ ವಾಲುತ್ತಿದ್ದಾರೆ. ಶಕ್ತಿ ಯೋಜನೆಯನ್ನು ಎಲ್ಲಾ ಮಹಿಳೆಯರು ಸಮರ್ಪಕವಾಗಿ ಬಳಸಿಕೊಳ್ಳುತ್ತಿದ್ದಾರೆ.

ಈಗಾಗಲೇ ಜನತೆಗೆ ನೀಡಿದ್ದ 5 ಭರವಸೆಗಳಲ್ಲಿ ಶಕ್ತಿ ಯೋಜನೆ, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆ ಜಾರಿಗೊಳಿಸಿದ್ದೇವೆ ಅದೇ ರೀತಿ ನಿರುದ್ಯೋಗಿ ಪದವಿಧರರಿಗಾಗಿ ಡಿಸೆಂಬರ್ ತಿಂಗಳಲ್ಲಿ ಯುವನಿಧಿ ಕಾರ್ಯಕ್ರಮ ಆರಂಭವಾಗಲಿದೆ ನಾವು ನೀಡಿದ್ದ ಎಲ್ಲಾ ಭರವಸೆಗಳನ್ನು ವಿಫಲಗೊಳಿಸಲು ಹಾಗೂ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಹಾಗೂ ಸಿದ್ದರಾಮಯ್ಯನವರ ಮುಖಕ್ಕೆ ಮಸಿ ಬಳಿಯಬೇಕು ಎಂಬ ಬಿಜೆಪಿ,ಜೆಡಿಎಸ್ ನಾಯಕರ ಹುನ್ನಾರ ಈಗ ವಿಫಲವಾಗಿದೆ. ಹಾಗಾಗಿ ಈ ನಾಯಕರು ತಾವೇ ಮೈಪರಚಿಕೊಳ್ಳುತ್ತಿದ್ದಾರೆ ಎಂದು ಲೇವಡಿ ಮಾಡಿದ ಅವರು ಯಾರೂ ಕೂಡ ಸರ್ಕಾರದ ಯೋಜನೆಗಳಿಂದ ವಂಚಿತವಾಗಬಾರದು ಎಂದು ನೊಂದಣಿ ಪ್ರಕ್ರಿಯೆಯನ್ನು ಇನ್ನೂ ಮುಂದುವರಿಸುತ್ತಿದ್ದೇವೆ ಎಲ್ಲರೂ ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.

ಅಹವಾಲುಗಳ ಸುರಿಮಳೆ:
ತಾಲ್ಲೂಕಿನ ಮಾಕೋಡು ಗ್ರಾಮದ ಆಯುರ್ವೇದ ಆಸ್ಪತ್ರೆಯನ್ನು ಪ್ರಾಥಮಿಕ ಆರೋಗ್ಯ ಕೇಂದ್ರವಾಗಿ ಮಾರ್ಪಾಡು ಮಾಡಬೇಕು, ಪದವಿ ಪೂರ್ವ ಕಾಲೇಜು ಮಂಜೂರು ಮಾಡಬೇಕು, ಪಂಚಾಯಿತಿ ವ್ಯಾಪ್ತಿಯ ಎಲ್ಲಾ ರಸ್ತೆ ಅಭಿವೃದ್ಧಿ, ಕೆರೆ ಏರಿಯ ಅಗಲ ಮಾಡಬೇಕು, ಚೆನ್ನಕೇಶವ ದೇವಾಲಯ ದುರಸ್ತಿ ಮಾಡಿಸಬೇಕು, ಚಿಕ್ಕೆರೆ ಏರಿ ಅಭಿವೃದ್ಧಿ ಪಡಿಸಬೇಕು, ಡೈರಿಗೆ ಸ್ವಂತ ಕಟ್ಟಡ ಕಲ್ಪಿಸಬೇಕು, ಬಸ್ ಸೌಲಭ್ಯ ಕಲ್ಪಿಸಬೇಕು ದೇವಾಲಯಗಳಿಗೆ, ಸಮುದಾಯ ಭವನಗಳಿಗೆ, ಅನುದಾನ ನೀಡಬೇಕು ಎಂದು ಸಚಿವರಿಗೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಈ ಸಂದರ್ಭದಲ್ಲಿ ತಹಸೀಲ್ದಾರ್ ಕುಂಜಿ ಅಹಮದ್, ತಾಪಂ ಇಒ ಸುನೀಲ್ ಕುಮಾರ್, ವಿವಿಧ ಇಲಾಖೆಗಳ ಅಧಿಕಾರಿಗಳಾದ ಡಾ.ವೈ.ಪ್ರಸಾದ್, ಡಾ.ಸೋಮಯ್ಯ, ವೆಂಕಟೇಶ್, ದಿನೇಶ್, ಮಾದೇಶ್, ಮಮತಾ, ಪ್ರಸಾದ್, ಚಂದ್ರೇಗೌಡ, ಬಸವರಾಜು, ಸಿಪಿಐ ಕೆ.ವಿ.ಶ್ರೀಧರ್, ಪಿಡಿಒ ಪರಮೇಶ್, ಗ್ರಾಪಂ ಅಧ್ಯಕ್ಷರಾದ ಯಶೋಧಮ್ಮ, ಶೈಲಜಾ ಅಶೋಕ್, ಕೆಪಿಸಿಸಿ ಸದಸ್ಯ ನಿತಿನ್ ವೆಂಕಟೇಶ್, ಮುಖಂಡರಾದ ಡಿ.ಟಿ.ಸ್ವಾಮಿ, ಎಂ.ಲೋಕೇಶ್, ಎಂ.ಕೆ.ಕೃಷ್ಣೇಗೌಡ, ರಮೇಶ್, ಮೊಬಿನ್ ತಾಜ್, ರಹಮತ್ ಜಾನ್ ಬಾಬು, ಕುಮಾರ್ ವಿಜಯ್, ನೀಲಕಂಠ, ಬಸವರಾಜು, ಸತೀಶ್, ಬಲರಾಮ್, ಕಿರನಲ್ಲಿ ರವಿ, ಸೇರಿದಂತೆ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

CM-letter

CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

Kunigal

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

1-nepp

Nepal; ಮಳೆ, ಪ್ರವಾಹ, ಭೂಕುಸಿತಕ್ಕೆ 170 ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mahisha

Mysuru: ಮಹಿಷಾ ಪ್ರತಿಮೆ ಪುಷ್ಪಾರ್ಚನೆಗೆ ಪೊಲೀಸರ ತಡೆ: ಆಕ್ರೋಶ

CM-Ashokapuram

Mysuru: ನಾನು ಹೆದರುವ, ಜಗ್ಗುವ, ಬಗ್ಗುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

1-bahga

K.S.Bhagawan ವಿವಾದ;ಮಾನ ಮರ್ಯಾದೆ ಇದ್ದರೆ ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಬೇಕು…

Yadhu

Udupi: ಚಾಮುಂಡಿ ಬೆಟ್ಟದ ಮೇಲೆ ಮಹಿಷ ದಸರಾ ಸರಿಯಲ್ಲ: ಸಂಸದ ಯದುವೀರ್‌

Mysore

Mysuru ಸಾಂಸ್ಕೃತಿಕ ನಗರಿಯಲ್ಲಿ ರೇವ್‌ ಪಾರ್ಟಿ: ಪೊಲೀಸ್‌ ದಾಳಿ, 50ಕ್ಕೂ ಹೆಚ್ಚು ಮಂದಿ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

CM-letter

CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

Kunigal

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.