ಪ್ರಸಾದ್ ರಾಜಕೀಯ ವ್ಯಭಿಚಾರಿ
Team Udayavani, Apr 7, 2017, 12:29 PM IST
ಮೈಸೂರು: ನಂಜನಗೂಡು ಉಪ ಚುನಾವಣೆಯಲ್ಲಿ ನಾನೇ ಅಭ್ಯರ್ಥಿ ಎಂದು ಭಾವಿಸಿ ಮತಚಲಾಯಿಸುವಂತೆ ಪ್ರಚಾರ ನಡೆಸುತ್ತಿರುವ ಯಡಿಯೂರಪ್ಪ, ಈ ಮೂಲಕ ಬಿಜೆಪಿ ಅಭ್ಯರ್ಥಿ ವಿ. ಶ್ರೀನಿವಾಸಪ್ರಸಾದ್ ಅವರು ಅಸಮರ್ಥ ಅಭ್ಯರ್ಥಿ ಎಂಬುದನ್ನು ಸಾಬೀತುಪಡಿಸಿ ದ್ದಾರೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎ.ಕೆ.ಸುಬ್ಬಯ್ಯ ಟೀಕಿಸಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ವಿ.ಶ್ರೀನಿವಾಸಪ್ರಸಾದ್ ಪರವಾಗಿ ಯಡಿಯೂರಪ್ಪನಿರಂತರವಾಗಿ ಪ್ರಚಾರ ನಡೆಸುತ್ತಿದ್ದು, ಆ ಮೂಲಕ ಶ್ರೀನಿವಾಸ ಪ್ರಸಾದ್ ಅವರಿಗೆ ಮತ ಪಡೆಯುವ ಅರ್ಹತೆ ಇಲ್ಲ ಎಂಬ ರೀತಿಯಲ್ಲಿ ಪ್ರಚಾರ ನಡೆಸುತ್ತಿದ್ದಾರೆ.
ಇದನ್ನೆಲ್ಲಾ ಗಮನಿಸಿದರೆ ವಿ. ಶ್ರೀನಿವಾಸ ಪ್ರಸಾದ್ ಇನ್ನು ಮುಂದೆ ಬಿಜೆಪಿ ಕಚೇರಿಯಲ್ಲಿ ಕಸ ಗುಡಿಸುವುದಕ್ಕೆ ಸೀಮಿತವಾಗು ತ್ತಾರೆಯೇ ಹೊರತು ದಲಿತ ನಾಯಕರಾಗಿ ಉಳಿಯುವುದಿಲ್ಲ. ಒಬ್ಬ ಸ್ವಾಭಿಮಾನಿಗೆ ಇದಕ್ಕಿಂತ ಹೆಚ್ಚು ಅವಮಾನ ಮಾಡಲು ಸಾಧ್ಯವಿಲ್ಲ, ಪ್ರಸ್ತುತ ಬೆಳವಣಿಗೆಯಿಂದ ಪ್ರಸಾದ್ ಅವರ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ.
ವಿ. ಶ್ರೀನಿವಾಸಪ್ರಸಾದ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಇದೀಗ ಚುನಾವಣೆ ಎದುರಿಸುತ್ತಿದ್ದು, ಅವರು ಸ್ವತಂತ್ರ ಅಭ್ಯರ್ಥಿ ಯಾಗಿ ಸ್ಪರ್ಧಿಸಿದ್ದರೆ ಅವರಿಗೆ ಬೆಂಬಲ ನೀಡುತ್ತಿದ್ದೆ. ಆದರೆ ಅವರು ಕೋಮುವಾದಿ ಗಳೊಂದಿಗೆ ಸೇರುವ ಮೂಲಕ ಅಂಬೇಡ್ಕರ್ ಚಿಂತನೆಗಳನ್ನು ಮೂಲೆ ಗುಂಪು ಮಾಡಿರುವುದು, ರಾಜಕೀಯ ವ್ಯಭಿಚಾರ ವಾಗಿದೆ ಎಂದು ಅವರು ಕಿಡಿಕಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ
Ambewadi ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ ಮರ ಕಡಿಯುತ್ತಿದ್ದ ಓರ್ವನ ಬಂಧನ
Cycle Ride: ಸಾಗುತ ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್ ಸವಾರಿ
Kamanur village: ದಾರಿ ತೋರುವ ಮಾದರಿ ಗ್ರಾಮ
Bigg Boss: ಬಿಗ್ ಬಾಸ್ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.