ರಾಸಾಯನಿಕ ಬಳಸದೆ ಶುದ್ಧ ಅಡುಗೆ ಎಣ್ಣೆ ತಯಾರಿಕೆ; ಆದಿವಾಸಿ ಮಹಿಳೆಯರ ಸಾಧನೆ

ರಾಸಾಯನಿಕ ಬಳಕೆ ಮಾಡದೇ ಅಡುಗೆ ಎಣ್ಣೆ ತಯಾರಿಸುತ್ತಿರುವುದು ಇಲ್ಲಿನ ವಿಶೇಷ

Team Udayavani, Nov 25, 2022, 3:50 PM IST

ರಾಸಾಯನಿಕ ಬಳಸದೆ ಶುದ್ಧ ಅಡುಗೆ ಎಣ್ಣೆ ತಯಾರಿಕೆ; ಆದಿವಾಸಿ ಮಹಿಳೆಯರ ಸಾಧನೆ

ಎಚ್‌.ಡಿ.ಕೋಟೆ: ತಾಲೂಕಿನ ಮಂಜೇಗೌಡನಹಳ್ಳಿ ಹಾಡಿಯಲ್ಲಿ ರಾಸಾಯನಿಕ ಬಳಕೆ ಮಾಡದೆ ಶುದ್ಧ ಅಡುಗೆ ಎಣ್ಣೆ ತಯಾರಿಕೆ ಘಟಕ ಆರಂಭಿಸಿದ ಆದಿವಾಸಿ ಮಹಿಳೆ ಯರು, ಶುದ್ಧ ತಾಜಾ ಅಡುಗೆ ಎಣ್ಣೆ ತಯಾರಿಸಿ ಮಾರಾಟ ಮಾಡುವ ಮೂಲಕ ತಾಲೂಕಿನಲ್ಲಿ ಹೆಸರಾಗಿದ್ದಾರೆ.

ತಾಲೂಕಿನ ಅಂತರಸಂತೆ ಹೋಬಳಿಯ ಮಂಚೇಗೌಡನಹಳ್ಳಿ ಹಾಡಿ ಆದಿವಾಸಿಗರೇ ವಾಸವಾಗಿರುವ ಹಾಡಿ. ಇಲ್ಲಿ ಮಹಿಳೆಯರು ಉದ್ಯೋಗ ಇಲ್ಲದೆ ಜೀವನೋಪಾಯಕ್ಕಾಗಿ ಕೂಲಿ ಕೆಲಸಕ್ಕಾಗಿ ನೆರೆಯ ಕೊಡಗು, ಕೇರಳ ರಾಜ್ಯಗಳಿಗೆ ಗುಳೆ ಹೋಗಬೇಕಾದ ಅನಿವಾರ್ಯತೆ ಇತ್ತು. ಜೀವನೋಪಾಯಕ್ಕಾಗಿ ಗುಳೆ ಹೋದರೆ ಮಕ್ಕಳು ಕೂಡ ಶಿಕ್ಷಣದಿಂದ ವಂಚಿತರಾಗ ಬೇಕಾದ ಸ್ಥಿತಿ ತಲೆದೂರಿತ್ತು.

ಆದಿವಾಸಿಗರ ಭವಣೆ ಅರಿತ ಸ್ವಾಮಿ ವಿವೇಕಾನಂದ ಯೂತ್‌ ಮೂವ್‌ಮೆಂಟ್‌ ಸಂಸ್ಥೆ ಹಾಡಿ ಮಹಿಳೆಯರೊಂದಿಗೆ ಚರ್ಚಿಸಿ ಹಾಡಿಯಲ್ಲಿಯೇ ಅಡುಗೆ ಎಣ್ಣೆ ತಯಾರಿಕೆ ಘಟಕ ಆರಂಭಿಸಿಕೊಟ್ಟರೆ ಅಡುಗೆ ಎಣ್ಣೆ ತಯಾರಿಕೆ ಕೆಲಸ ಮಾಡುವ ಹಂಬಲ ಇರುವುದನ್ನು ಖಚಿತ ಪಡಿಸಿಕೊಂಡಿದ್ದಾರೆ. ಸ್ವಾಮಿ ವಿವೇಕಾನಂದ ಸಂಸ್ಥೆ ಸಹಕಾರ: ಸ್ವಾಮಿ ವಿವೇಕಾನಂದ ಸಂಸ್ಥೆ ಸ್ವಂತ ಬಂಡವಾಳ ಹೂಡಿ ಅಡುಗೆ ಎಣ್ಣೆ ತಯಾರಿಕಾ ಘಟಕ ಆರಂಭಿಸಿಯೇ ಬಿಟ್ಟರು.

ಅಡುಗೆ ಎಣ್ಣೆ ತಯಾರಿಕೆ ಘಟಕದಲ್ಲಿ 9 ಮಂದಿ ಮಹಿಳೆಯರಿಗೆ ಉದ್ಯೋವನ್ನೂ ನೀಡಿದ್ದಾರೆ. ಅಡುಗೆ ಎಣ್ಣೆ ತಯಾರಿಕೆಗೆ ಬೇಕಾದ ಕಚ್ಚಾ ಸಾಮಗ್ರಿಗಳನ್ನು ಸಂಸ್ಥೆಯೇ ಭರಿಸಿಕೊಡುತ್ತಿದೆ. ಆದಿವಾಸಿ ಮಹಿಳೆಯರು ಶ್ರಮದ ಮೂಲಕ ಶುದ್ಧ ಅಡುಗೆ ಎಣ್ಣೆ ತಯಾರಿ ಮಾಡುತ್ತಿದ್ದಾರೆ. ಅವರಿಗೆ ದಿನದ ವೇತನ ನೀಡುವ ಸಂಸ್ಥೆ ಘಟಕದಿಂದ ಗಳಿಸುವ ಆದಾಯ ಮತ್ತು ನಷ್ಟದ ಹೊಣೆ ತಾನೇ ಹೊರಲಿದೆ.

ಮಾರಾಟದ ಅಂಗಡಿ ಆರಂಭ: ಕಲಬೆರಕೆ ಅಡುಗೆ ಎಣ್ಣೆ ಸೇವಿಸಿ ಆರೋಗ್ಯ ಕೆಡಿಸಿಕೊಂಡು ಆಸ್ಪತ್ರೆ ಸೇರಿ ಹಣ ವ್ಯಯ ಮಾಡಿಕೊಳ್ಳುವ ಬದಲು ಕೊಂಚ ದುಬಾರಿ ಬೆಲೆ ನೀಡಿದರೂ ಗುಣಮಟ್ಟದ ರಾಸಾಯನಿಕ ಬಳಕೆ ಮಾಡದೇ ಅಡುಗೆ ಎಣ್ಣೆಗೆ ಜನರು ದಿನದಿಂದ ದಿನಕ್ಕೆ ಮುಗಿ ಬೀಳುತ್ತಿದ್ದಾರೆ. ಸದ್ಯದಲ್ಲಿ ಎಚ್‌.ಡಿ.ಕೋಟೆ ಪಟ್ಟಣದ ತಾಪಂ ಬಳಿಯಲ್ಲಿ ಶುದ್ಧ ಅಡುಗೆ ಎಣ್ಣೆ ಮಾರಾಟದ ಅಂಗಡಿ ಆರಂಭಿಸಿದ್ದು, ಮಂಚೇಗೌಡನಹಳ್ಳಿ ಅಡುಗೆ ಎಣ್ಣೆ ತಯಾರಿಕ ಘಟಕದ ಎಣ್ಣೆ ಲಭ್ಯವಿದ್ದು, ಅಗತ್ಯ ಇರುವವರು ಅಲ್ಲೇ ಖರೀದಿಸುವಂತೆ ಆದಿವಾಸಿ ಮಹಿಳೆಯರು ಮನವಿ ಮಾಡಿಕೊಂಡಿದ್ದಾರೆ.

ಎಣ್ಣೆಗೆ ವಿಶೇಷವಾದ ಬೇಡಿಕೆ
ಘಟಕದಲ್ಲಿ ಎಳ್ಳೆಣ್ಣೆ 350 ರೂ., ಕಡಲೆಕಾಯಿ ಎಣ್ಣೆ 350 ರೂ., ಸೂರ್ಯಕಾಂತಿ ಎಣ್ಣೆ 330 ರೂ. ಹಾಗೂ ಕೊಬ್ಬರಿ ಎಣ್ಣೆ 340 ರೂ. ತಯಾರಿ ಮಾಡಲಾಗುತ್ತಿದೆ. ಕಳೆದ ಸುಮಾರು 6 ತಿಂಗಳಿಂದ ಆರಂಭಗೊಂಡಿರುವ ಶುದ್ಧ ಅಡುಗೆ ತಯಾರಿ ಎಣ್ಣೆ ಘಟಕದ ಅಡುಗೆ ಎಣ್ಣೆಗೆ ವಿಶೇಷವಾದ ಬೇಡಿಕೆ ಇದೆ. ಯಾವುದೇ ರಾಸಾಯನಿಕ ಬಳಕೆ ಮಾಡದೇ ಅಡುಗೆ ಎಣ್ಣೆ ತಯಾರಿಸುತ್ತಿರುವುದು ಇಲ್ಲಿನ ವಿಶೇಷ. ಈಗಾಗಲೇ ತಾಲೂಕಿನ ವಿವಿಧ ಭಾಗಗಳಿಂದ ಆರೋಗ್ಯದ ಹಿತದೃಷ್ಟಿಯಿಂದ ಅಡುಗೆ ಎಣ್ಣೆ ಖರೀದಿಸುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ಇತ್ತೀಚಿನ ವರ್ಷಗಳಲ್ಲಿ ಎಲ್ಲಿ ನೋಡಿದರಲ್ಲಿ ರಾಸಾಯನಿಕ ಮಿಶ್ರಿತ ಆಹಾರ ಮಾರಾಟ ಮತ್ತು ಸೇವನೆಯಾಗುತ್ತಿದೆ. ಇದರಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದ್ದು ಸಾವು ನೋವಿನ ಪ್ರಮಾಣ ಏರಿಕೆ ಜೊತೆಗೆ ಹೃದಯಾಘಾತ, ದೇಹದಲ್ಲಿ ಕೊಬ್ಬಿನ ಅಂಶ ಹೆಚ್ಚಾಗುವ ಮೂಲಕ ಆರೋಗ್ಯ ಹಾಳಾಗುತ್ತಿದೆ. ಆರೋಗ್ಯದ ದೃಷ್ಟಿಯಿಂದ ರಾಸಾಯನಿಕ ಬಳಸದೇ ಅಡುಗೆ ಎಣ್ಣೆ ತಯಾರಿ ಮಾಡಿ ಮಾರಾಟ ಮಾಡಲಾಗುತ್ತಿದೆ.
●ಗುಲಾಬಿ, ಅಡುಗೆ ಎಣ್ಣೆ ಘಟಕದ ಮಹಿಳೆ

ಆಧುನಿಕ ಯುಗದಲ್ಲಿ ಎಲ್ಲೆಲ್ಲೂ ರಾಸಾಯನಿಕ ಬಳಕೆಯ ವಿಷಕಾರಿ ಆಹಾರ ಸೇವೆನೆ ಕಂಡೂ ಕಾಣದಂತೆ ನಡೆಯುತ್ತಿದೆ. ಇಂಥ ಪರಿಸ್ಥಿತಿಯಲ್ಲಿ ಆದಿವಾಸಿಗರಿರುವ ಹಾಡಿಯಲ್ಲಿ ಜನರ ಆರೋಗ್ಯದ ಸುಧಾರಣೆ ದೃಷ್ಟಿಯಿಂದ ಆರಂಭಗೊಂಡಿರುವ ಅಡುಗೆ ತಯಾರಿಕೆ ಘಟಕದಿಂದ ಗುಣಮಟ್ಟದ ಅಡುಗೆ ಎಣ್ಣೆ ತಾಲೂಕಿನ ಜನರಿಗಷ್ಟೇ ಅಲ್ಲದೆ ಜಿಲ್ಲೆ ರಾಜ್ಯಕ್ಕೆ ಹಂತಹಂತವಾಗಿ ವಿಸ್ತರಿಸಲಿ.
● ಸೆಂದಿಲ್‌ ಕುಮಾರ್‌,
ಹಿರಿಯ ವ್ಯವಸ್ಥಾಪಕ, ಕಬಿನಿ

ಎಚ್‌.ಬಿ.ಬಸವರಾಜು

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ ಮಹೇಶ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

22-hunsur-1

Hunsur: ಕಾರು ಪಲ್ಟಿಯಾಗಿ ಎಳನೀರು ವ್ಯಾಪಾರಿ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.