ಜೂ.21ರ ಯೋಗ ದಿನಾಚರಣೆ ಯಶಸ್ವಿಗೆ ಸಿದ್ಧತೆ


Team Udayavani, Jun 11, 2017, 12:46 PM IST

mys4.jpg

ಮೈಸೂರು: ದೇಶ-ವಿದೇಶದ ಯೋಗಪಟುಗಳನ್ನು ಆಕರ್ಷಿಸುವ ಮೂಲಕ ಯೋಗಾಹಬ್‌ ಎಂದೇ ಕರೆಯಲ್ಪಡುವ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಜೂ.21ರಂದು ನಡೆಯಲಿರುವ 3ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಯಶಸ್ವಿಗೊಳಿಸಲು ಜಿಲ್ಲಾಡಳಿತ ಸಜಾಗಿದೆ.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಡಿ.ರಂದೀಪ್‌ ಮಾತನಾಡಿ, ಕಲೆ, ಸಂಸ್ಕೃತಿ, ಪರಂಪರೆ ಹಾಗೂ ಸ್ವತ್ಛನಗರಿ ಎಂಬ ಖ್ಯಾತಿ ಪಡೆದಿರುವ ಮೈಸೂರು ದೇಶದ ಯೋಗ ರಾಜಧಾನಿಯೆಂದು ಪ್ರಸಿದ್ಧಿಯಾಗಿದೆ.

ವಿಶ್ವಕ್ಕೆ ಯೋಗವನ್ನು ಹರಡುವ ನಿಟ್ಟಿನಲ್ಲಿ ಮೈಸೂರು ವಿಶಿಷ್ಟ ಕೊಡುಗೆ ನೀಡಿದ್ದು, ಈ ಹಿನ್ನೆಲೆ ಜೂ.21ರಂದು ನಡೆಯುವ ಅಂತಾರಾಷ್ಟ್ರೀಯ ಯೋಗ ದಿನವನ್ನು ಸಾರ್ವಜನಿಕರ ಸಹಕಾರದೊಂದಿಗೆ ದೊಡ್ಡ ಮಟ್ಟದಲ್ಲಿ ಆಯೋಜಿಸಲಿ ತೀರ್ಮಾನಿಸಲಾಗಿದೆ. ಈ ಬಾರಿಯ ಯೋಗ ದಿನದಂದು ಅಂದಾಜು 60 ಸಾವಿರ ಯೋಗಪಟುಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ನಗರದ ಅರಮನೆ ಆವರಣ, ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿರುವ ಶ್ರೀಜಯಚಾಮರಾಜೇಂದ್ರ ಒಡೆಯರ್‌ ವೃತ್ತದಿಂದ ಕೃಷ್ಣರಾಜೇಂದ್ರ ವೃತ್ತ, ದೇವರಾಜ ಅರಸ್‌ ರಸ್ತೆ, ಮಹಾರಾಣಿ ಕಾಲೇಜು ವೃತ್ತ, ರಾಮಸ್ವಾಮಿ ವೃತ್ತ, ಮಹಾರಾಜ ಕಾಲೇಜು ಮೈದಾನ, ಓವೆಲ್‌ ಮೈದಾನದಲ್ಲಿ ಯೋಗ ಪ್ರದರ್ಶನ ಆಯೋಜಿಸಲಾಗಿದೆ.

ಇದಕ್ಕಾಗಿ ಜಿಲ್ಲಾಡಳಿತದಿಂದ ಅಗತ್ಯ ಯೋಜನೆಗಳನ್ನು ರೂಪಿಸಲಾಗಿದ್ದು, ಆ ಮೂಲಕ ಮೈಸೂರಿನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಯೋಗದಿನವನ್ನು ಗಿನ್ನಿಸ್‌ ದಾಖಲೆಗೆ ಸೇರಿಸುವ ರೀತಿಯಲ್ಲಿ ತಯಾರಿ ಮಾಡಲಾಗಿದೆ. ಅಲ್ಲದೆ ಜೂ.11 ಮತ್ತು 18 ರಂದು ಪೂರ್ವಬಾವಿ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಕಾನೂನು, ಸುವ್ಯವಸ್ಥೆ ಮತ್ತು ಟ್ರಾಫಿಕ್‌ ವ್ಯವಸ್ಥೆ, ಮೂಲಭೂತ ಸೌಕರ್ಯಗಳ ವ್ಯವಸ್ಥೆ, ಕುಡಿಯುವ ನೀರು, ಸ್ವತ್ಛತೆ, ವೈದ್ಯಕೀಯ ಮತ್ತು ಆ್ಯಂಬುಲೆನ್ಸ್‌ ವ್ಯವಸ್ಥೆ, ಸ್ವಾಗತ, ಶಿಷ್ಟಾಚಾರ, ವಾಸ್ತವ್ಯ, ವಾಹನ ವ್ಯವಸ್ಥೆ ಹಾಗೂ ಆಮಂತ್ರಣ ಮುದ್ರಣ, ಸಾಂಸ್ಕೃತಿಕ ಕಾರ್ಯಕ್ರಮದ ಮೇಲುಸ್ತುವಾರಿ, ಸಾರಿಗೆ ವ್ಯವಸ್ಥೆ, ವೇದಿಕೆ ಕಾರ್ಯಕ್ರಮ, ದಾಖಲಾತಿ ಸಮಿತಿ, ಪ್ರಚಾರ ಸಮಿತಿ ಮತ್ತು ಸ್ವಯಂಸೇವಕ ಸಮಿತಿಗಳನ್ನು ರಚಿಸಲಾಗಿದೆ.

ಎಲ್ಲಾ ಸಮಿತಿಗಳಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಈಗಾಗಲೇ ಸೂಚಿಸಲಾಗಿದೆ ಎಂದು ತಿಳಿಸಿದರು. ಯೋಗಾ ಕಾರ್ಯಕ್ರಮದ ಮೂಲಕ ಭಾವೈಕ್ಯತೆ, ಸಾಮರಸ್ಯ ಮತ್ತು ವಿಶ್ವಶಾಂತಿ ಮಂತ್ರ ಸಾರಲು ವಿವಿಧ ಧರ್ಮಗುರುಗಳನ್ನು ಆಹ್ವಾನಿಸಲಾಗಿದೆ. ನಗರದಲ್ಲಿ 300ಕ್ಕೂ ಹೆಚ್ಚು ಯೋಗ ತರಬೇತಿ ಕೇಂದ್ರಗಳಿದ್ದು, ನಿತ್ಯ 15 ಸಾವಿರ ಯೋಗಾಸಕ್ತರು ತರಬೇತಿ ಪಡೆಯುತ್ತಿದ್ದಾರೆ.

35 ಸಾವಿರ ವಿದ್ಯಾರ್ಥಿಗಳು ಯೋಗಾಭ್ಯಾಸ ಮಾಡುತ್ತಿದ್ದಾರೆ. ಅರಮನೆ ಆವರಣದಲ್ಲಿ ಮುಖ್ಯ ವೇದಿಕೆಯಿದ್ದು, ಅರಮನೆ ಸುತ್ತಮುತ್ತಲಿನ ರಸ್ತೆಗಳಲ್ಲಿ ಯೋಗ ಮಾಡುವವರಿಗೂ ಮುಖ್ಯ ವೇದಿಕೆಯಿಂದಲೇ ಯೋಗಾಭ್ಯಾಸದ ಕುರಿತು ನಿರ್ದೇಶನ ನೀಡಲಾಗುತ್ತದೆ. ಜೂ.21ರಂದು ನಡೆಯುವ ಅಂತಾರಾಷ್ಟ್ರೀಯ ಯೋಗದಿನದ ಪೋಸ್ಟರ್‌ ಬಿಡುಗಡೆ ಮಾಡಲಾಯಿತು. ಜಿಲ್ಲಾ ಯುವಜನ ಸಮನ್ವಯಾಧಿಕಾರಿ ಎಂ.ಎನ್‌.ನಟರಾಜ್‌ ಸೇರಿದಂತೆ ಇನ್ನಿತರರು ಹಾಜರಿದ್ದರು.
 

ಸಾರ್ವಜನಿಕರಿಗೆ ಮೂಲ ಸೌಕರ್ಯ: 60 ಸಾವಿರ ಜನರಿಗೂ ತಲುಪುವಂತೆ ಧ್ವನಿ ವ್ಯವಸ್ಥೆ ಮಾಡಲಾಗುತ್ತದೆ. ಯೋಗ ಗುರುಗಳನ್ನು ಅನುಕರಣೆಗಾಗಿ ಬೃಹತ್‌ ಎಲ್‌ಇಡಿ ಪರದೆಗಳನ್ನು ಹಾಕಲಾಗುವುದು. ವಿವಿಧ ಭಾಗಗಳಿಂದ ಆಗಮಿಸುವ ನಾಗರಿಕರು, ಯೋಗಪಟುಗಳಿಗೆ ಶುಲ್ಕರಹಿತ ಸಾರಿಗೆ ವ್ಯವಸ್ಥೆ, ತುರ್ತು ಚಿಕಿತ್ಸೆಗೆ ವೈದ್ಯರ ತಂಡ ಹಾಗೂ ಆ್ಯಂಬುಲೆನ್ಸ್‌ಗಳನ್ನು ಸ್ಥಳದಲ್ಲಿ ನಿಯೋಜಿಸಲಾಗುವುದು.

ಟಾಪ್ ನ್ಯೂಸ್

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

Road Mishap ಸ್ಲೀಪರ್ ಕೋಚ್ ಬಸ್ ಪಲ್ಟಿ: ಓರ್ವ ಮೃತ್ಯು; 11 ಮಂದಿಗೆ ಗಾಯ

Road Mishap ಸ್ಲೀಪರ್ ಕೋಚ್ ಬಸ್ ಪಲ್ಟಿ: ಓರ್ವ ಮೃತ್ಯು; 11 ಮಂದಿಗೆ ಗಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Langoti Man Movie Review

Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.