ವಾಯು ಮಾಲಿನ್ಯ ತಡೆದೆ ಮುಂದಾಗಿ
Team Udayavani, Nov 5, 2017, 11:55 AM IST
ಹುಣಸೂರು: ಪರಿಸರ ಮಾಲಿನ್ಯ ತಡೆಯಲು ಪ್ರತಿಯೊಬ್ಬ ವಾಹನ ಸವಾರರು ಆರು ತಿಂಗಳಿಗೊಮ್ಮೆ ಕಡ್ಡಾಯವಾಗಿ ವಾಹನ ತಪಾಸಣೆಗೊಳಪಡಿಸಿಕೊಳ್ಳಬೇಕೆಂದು ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಎಂ.ಪ್ರಭುಸ್ವಾಮಿ ತಿಳಿಸಿದರು.
ನಗರದ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ವಾಯುಮಾಲಿನ್ಯ ತಡೆ ಮಾಸಾಚರಣೆ ಆಂಗವಾಗಿ ಆಯೋಜಿಸಿದ್ದ ಅರಿವು ಜಾಥಾ ಉದ್ಘಾಟಿಸಿ ಮಾತನಾಡಿದರು. ವಾಹನಗಳು ಹೊರಸೂಸುವ ಕಾರ್ಬನ್ಯುಕ್ತ ವಿವಿಧ ವಿಷಾ ಅನಿಲಗಳಾದ ಕಾರ್ಬನ್ ಮೋನಾಕ್ಸೈಡ್, ಕಾರ್ಬನ್ ಡೈಯಾಕ್ಸೈಡ್, ಸಲರ್ಡೈಯಾಕ್ಸೈಡ್, ಹೈಡ್ರೋಕಾರ್ಬನ್ ಮುಂತಾದವುಗಳು ಹಲವಾರು ದುಷ್ಪರಿಣಾಮಗಳನ್ನು ಉಂಟುಮಾಡುತ್ತವೆ.
ಗರ್ಭಿಣಿಯರಲ್ಲಿ ಗರ್ಭಪಾತಕ್ಕೆ ಕಾರಣವಾಗಬಹುದು. ಹುಟ್ಟುವ ಮಕ್ಕಳಲ್ಲಿ ಬುದ್ಧಿಮಾಂದ್ಯತೆ, ಬೆಳವಣಿಗೆ ಕುಂಠಿತ, ಯುವಕರು ಮತ್ತು ವಯೋವೃದ್ಧರಿಗೆ ಶ್ವಾಸಕೋಶದ ಕ್ಯಾನ್ಸರ್ನಂತಹ ಕಾಯಿಲೆಗಳು ಹೆಚ್ಚುತ್ತಿವೆ ಎಂದರು. ಕಚೇರಿ ಅಧೀಕ್ಷಕ ಎಂ.ಎಲ್.ಎನ್.ಪ್ರಸಾದ್, ಇಲಾಖೆ ವತಿಯಿಂದ ಶಾಲಾ ಕಾಲೇಜುಗಳಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಇಡೀ ತಿಂಗಳು ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದೆಂದರು.
ಕಚೇರಿ ಸಿಬ್ಬಂದಿಗಳಾದ ವೆಂಕಟೇಶ್, ಶ್ರೀನಿವಾಸ್, ಶಾರದಾದೇವಿ, ಶರತ್ಚಂದ್ರ, ಜಾನಕಿ, ಶಿವಣ್ಣ, ಹರೀಶ್ ಇದ್ದರು. ಇದಕ್ಕೂ ಮುನ್ನ ಮುಖ್ಯ ರಸ್ತೆಗಳಲ್ಲಿ ಜಾಥಾ ನಡೆಸಲಾಯಿತು. ಗೃಹರಕ್ಷಕ ದಳದ ಸಿಬ್ಬಂದಿಗಳು, ಚಾಲನಾ ತರಬೇತಿ ಕೇಂದ್ರಗಳ ಮುಖ್ಯಸ್ಥರು, ಸಿಬ್ಬಂದಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!
Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ
Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್ ಪುನಾರಂಭ.. ಡಿ.28ಕ್ಕೆ ಕೂಟ ಶುರು
Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ
Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.