Protest: ಸಂಸದರ ಕಚೇರಿ ಬಳಿ ಆಕ್ರೋಶ


Team Udayavani, Sep 5, 2023, 4:58 PM IST

TDY-13

ಮೈಸೂರು: ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ಕನ್ನಡ ಪರ ಸಂಘಟನೆಗಳು, ಕಬ್ಬು ಬೆಳೆಗಾರ ಸಂಘದಿಂದ ಜಲದರ್ಶಿನಿಯಲ್ಲಿರುವ ಸಂಸದ ಪ್ರತಾಪಸಿಂಹ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ರಾಜ್ಯದಲ್ಲಿ ಬರಗಾಲ ಸೃಷ್ಟಿಯಾಗಿದ್ದರೂ, ಕಾವೇರಿಕೊಳ್ಳದ ಜಲಾಶಯಗಳ ನೀರು ಖಾಲಿಯಾಗುತ್ತಿದ್ದರೂ, ಮಹದಾಯಿ ನದಿ ನೀರಿನ ವಿವಾದ ಕುರಿತು ಯಾವುದೇ ಗಂಭೀರ ಚಿಂತನೆ ನಡೆಯುತ್ತಿಲ್ಲ. ಈ ಬಗ್ಗೆ ರಾಜ್ಯ ಸಂಸದರು ಏನನ್ನೂ ಮಾತನಾಡದೆ ಮೂಕರಂತಿದ್ದಾರೆಂದು ದೂರಿದರು.

ರಕ್ಷಣಾತ್ಮಕ ಕ್ರಮ ಕೈಗೊಳ್ಳಿ: ಕಬ್ಬು ಬೆಳೆಗಾರರಿಗೆ ಬರಬೇಕಾದ ಹಿಂದಿನ ವರ್ಷದ ಬಾಕಿ ಹೆಚ್ಚುವರಿ 150 ರೂ., ಸಕ್ಕರೆ ಕಾರ್ಖಾನೆಗಳಿಂದ ಕೂಡಿಸ ಬೇಕು. 2023-24ನೇ ಸಾಲಿನಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ಕಬ್ಬಿನ ಇಳುವರಿ ಕಡಿಮೆಯಾಗಿದೆ. ಹೀಗಾಗಿ ಕಬ್ಬಿನ ದರವನ್ನು ಟನ್‌ ಗೆ ನಾಲ್ಕು ಸಾವಿರ ನಿಗದಿ ಮಾಡಬೇಕು. ಕೃಷಿ ಪಂಪ್‌ಸೆಟ್‌ಗಳಿಗೆ ಅಸಮರ್ಪಕ ವಿದ್ಯುತ್‌ ಪೂರೈಕೆ ತಪ್ಪಿಸಿ ಹಗಲು ಹೊತ್ತಿನಲ್ಲಿ 12 ಗಂಟೆ ವಿದ್ಯುತ್‌ ಪೂರೈಕೆ ಮಾಡಬೇಕು. ಜತೆಗೆ ಪಂಪ್‌ಸೆಟ್‌ಗಳಿಗೆ ಆಧಾರ್‌ ಕಾರ್ಡ್‌ ಲಿಂಕ್‌ ಕೈ ಬಿಡಬೇಕು. ಮಳೆ ಅಭಾವದಿಂದ ರೈತ ಬಿತ್ತಿದ ಬೀಜ ಸತ್ತಿದೆ. ಅಂತರ್ಜಲ ಕುಸಿದಿದೆ. ರಾಜ್ಯದಲ್ಲಿ ಬರಪೀಡಿತ ಪ್ರದೇಶಗಳ ಜನ ಜಾನುವಾರುಗಳ ರಕ್ಷಣಾತ್ಮಕ ಕ್ರಮ ಮಾಡದೆ ನಿರ್ಲಕ್ಷ್ಯ ತೋರಿಸುತ್ತಿರುವ ರಾಜ್ಯ ಸರ್ಕಾರ ಕೂಡಲೇ ಬರ ಪೀಡಿತ ಪ್ರದೇಶಗಳ ಬರ ಘೋಷಣೆ ಮಾಡಿ ರಕ್ಷಣಾ ತ್ಮಕ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

 ಸಾಗುವಳಿ ಪತ್ರ ವಿತರಿಸಿ: ಕೇಂದ್ರ ಸರ್ಕಾರ ಅಕ್ಕಿ, ಸಕ್ಕರೆ, ಈರುಳ್ಳಿ, ರಫ್ತು ನಿಷೇಧ ಸರಿಯಲ್ಲ. ತಕ್ಷಣವೇ ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಖಾತರಿ ಕಾನೂನು ಜಾರಿಗೆ ತರಬೇಕು. ಹತ್ತಾರು ವರ್ಷಗಳಿಂದ ಕೃಷಿ ಚಟುವಟಿಕೆ ನಡೆಸುತ್ತಿರುವ ಬಗರಹುಕುಂ ಸಾಗುವಳಿ ರೈತರಿಗೆ ಸಾಗುವಳಿ ಪತ್ರ ವಿತರಿಸಬೇಕು ಎಂದು ಒತ್ತಾಯಿಸಿದರು.

ರೈತ ಮುಖಂಡರಾದ ಹತ್ತಳ್ಳಿ ದೇವರಾಜ್‌, ಬರಡನಪುರ ನಾಗರಾಜ್‌, ಬಸವರಾಜ್‌ ಪಾಟೀಲ್‌, ಗುರುಸಿದ್ದಪ್ಪ, ರಮೇಶ್‌ ಉಗಾರ್‌, ಹಳ್ಳಿಕೆರೆಹುಂಡಿ ಭಾಗ್ಯರಾಜ್‌, ಜೈ ಕರ್ನಾಟಕ ಜನಪರ ವೇದಿಕೆಯ ಕುಮಾರಸ್ವಾಮಿ, ಉಳುವಪ್ಪ ಬಳಗೇರ, ಪರಶುರಾಮ್‌, ಕಮಲಮ್ಮ ಮತ್ತಿತರರು ಭಾಗವಹಿಸಿದ್ದರು.

ಸಂಸದರು ಕೇಂದ್ರದ ಮೇಲೆ ಒತ್ತಡ ತರಲಿ: ಕಬಿನಿ, ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿ ರಾಜ್ಯದ ರೈತರನ್ನು ಬಲಿಕೊಟ್ಟಿರುವ ರಾಜ್ಯ ಸರ್ಕಾರ ಕೂಡಲೇ ನೀರು ನಿಲ್ಲಿಸಬೇಕು. ಕಾವೇರಿಕೊಳ್ಳದ ಹೆಚ್ಚುವರಿ ನೀರನ್ನು ಸಂಕಷ್ಟ ಕಾಲದಲ್ಲಿ ಬಳಸಿಕೊಳ್ಳಲು ಸಮುದ್ರಕ್ಕೆ ಹರಿಯುವ ಹೆಚ್ಚುವರಿ ಸಂಗ್ರಹಿಸಿಟ್ಟಿಕೊಳ್ಳಲು ಮೇಕೆದಾಟು ಜಲಾಶಯ ಯೋಜನೆಯನ್ನು ಕೂಡಲೇ ಕೈಗೆತ್ತಿಕೊಳ್ಳಬೇಕು. ಮಹದಾಯಿ ನದಿ ನೀರಿನ ವಿವಾದವನ್ನು ಕೂಡಲೇ ಬಗೆಹರಿಸಿ ಯೋಜನೆ ಪೂರ್ಣಗೊಳಿಸಿ ಅಚ್ಚುಕಟ್ಟು ಭಾಗದ ನೀರಿನ ಸಮಸ್ಯೆ ಬಗೆಹರಿಸಬೇಕು. ಸಂಸದರು ಕೇಂದ್ರದ ಮೇಲೆ ಒತ್ತಡ ತಂದು ರಾಜ್ಯಕ್ಕೆ ನ್ಯಾಯ ಒಗದಿಸಬೇಕೆಂದು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.