ವಿಜ್ಞಾನದ ಸಾಧನೆಗಳನ್ನೂ ಪ್ರಶ್ನಿಸಿ


Team Udayavani, Mar 10, 2017, 12:32 PM IST

mys7.jpg

ಮೈಸೂರು: ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದ ಸಾಧನೆಯನ್ನು ಸುಮ್ಮನೆ ಒಪ್ಪಿಕೊಳ್ಳುವ ಬದಲು ಅದನ್ನು ಪ್ರಶ್ನಿಸುವ ಜತೆಗೆ ಅದರಿಂದಾಗುವ ಪ್ರಯೋಜನವೇನು ಎಂಬುದನ್ನು ಅರಿತುಕೊಳ್ಳ ಬೇಕು ಎಂದು ಗಾಂಧಿಮಾರ್ಗಿ ಹಾಗೂ ಜಮುನ ಲಾಲ್‌ ಪ್ರಶಸ್ತಿ ಪುರಸ್ಕೃತ ಡಾ. ಸುರೇಂದ್ರ ಕೌಲಗಿ ಹೇಳಿದರು.

ಮೈಸೂರು ವಿಶ್ವವಿದ್ಯಾನಿಲಯ, ಗಾಂಧಿ ಭವನದ ಗಾಂಧಿ ಅಧ್ಯಯನ ಕೇಂದ್ರ ಹಾಗೂ ಶಾರದಾ ವಿಲಾಸ ಶಿಕ್ಷಣ ಮಹಾವಿದ್ಯಾಲಯ, ಸಂತ ಜೋಸೆಫ್ ಪ್ರಥಮ ದರ್ಜೆ ಕಾಲೇಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಮಾನಸ ಗಂಗೋತ್ರಿಯ ಸೆನೆಟ್‌ ಭವನದಲ್ಲಿ ಗುರುವಾರ ಆಯೋಜಿಸಿದ್ದ ಗಾಂಧಿ ಸುವರ್ಣ ಸಂಭ್ರಮದ ಸಮಾರೋಪ‌ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಸ್ತುತ ಸಂದರ್ಭದಲ್ಲಿ ವಿಜ್ಞಾನ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳು ನಡೆಯತ್ತಿದೆ. ಈ ನಿಟ್ಟಿನಲ್ಲಿ ಈಗಾಗಲೇ ಸಾಕಷ್ಟು ಉಪಗ್ರಹಗಳ ಉಡಾವಣೆ ಮಾಡಿರುವ ವಿಜ್ಞಾನಿಗಳು ಚಂದ್ರಯಾನವನ್ನು ಮಾಡಿದ್ದು, ಚಂದ್ರಗ್ರಹದಲ್ಲಿ ಲಭ್ಯವಿರುವ ಬೆಟ್ಟಗುಡ್ಡಗಳು, ನೀರಿನ ಮೂಲಗಳ ಬಗ್ಗೆ ಸಂಶೋಧನೆ ಮಾಡುತ್ತಿದ್ದಾರೆ. ಆದರೆ, ಭೂಮಿಯ ಮೇಲೆ ಲಭ್ಯವಿರುವ ನೀರು ಹಾಗೂ ಬೆಟ್ಟಗುಡ್ಡಗಳು ನಶಿಸಿ ಹೋಗುತ್ತಿದ್ದರೂ ಇದರ ಉಳಿವಿಗಾಗಿ ಯಾವುದೇ ಪ್ರಯತ್ನಗಳನ್ನು ಮಾಡುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದ ಅವರು, ವಿಜ್ಞಾನದಲ್ಲಿ ಸಾಧನೆಯನ್ನು ಸುಮ್ಮನೆ ಒಪ್ಪಿಕೊಳ್ಳುವ ಬದಲು ಅದರಿಂದಾಗುವ ಪ್ರಯೋಜನವೇನು ಎಂದು ಅರಿತುಕೊಳ್ಳಬೇಕಿದೆ ಎಂದರು.

ಎಷ್ಟು ಸಮಂಜಸ?: ದೇಶದ ವಿಜ್ಞಾನ ಕ್ಷೇತ್ರದ ಅಭಿವೃದ್ಧಿಗಾಗಿ ಇಸ್ರೋ ಮೂಲಕ ದೇಶದ ಸಾವಿರಾರು ವಿಜ್ಞಾನಿಗಳು ನಿರಂತರ ಪ್ರಯತ್ನದಲ್ಲಿ ತೊಡಗಿದ್ದಾರೆ. ಅಲ್ಲದೆ ಭಾರತೀಯ ವಿಜ್ಞಾನಿಗಳ ಈ ಸಾಧನೆಯನ್ನು ಮೆಚ್ಚಿಕೊಂಡಿರುವ ದೇಶದ ಜನತೆ ಇದು ಇನ್ನಷ್ಟು ಹೆಚ್ಚಬೇಕೆಂಬ ನಿರೀಕ್ಷೆಯಲ್ಲಿದ್ದಾರೆ. ಆದರೆ, ಯಂತ್ರಗಳನ್ನು ಕಟುವಾಗಿ ವಿರೋಧಿಸಿದ್ದ ಗಾಂಧೀಜಿ, ಯಂತ್ರಗಳ ಶಕ್ತಿಗಿಂತ ಮಾನವನ ಶಕ್ತಿ ಹೆಚ್ಚಾಗಬೇಕೆಂದು ಬಯಸಿದ್ದರು.

ಈ ನಿಟ್ಟಿನಲ್ಲಿ ವಿಜ್ಞಾನಿಗಳ ಸಾಧನೆಯ ಕುರಿತು ಗಾಂಧಿ ವಿಚಾರದ ಬೆಳಕಿನಲ್ಲಿ ವಿಮರ್ಶೆ ಮಾಡುವ ಮೂಲಕ ಈ ಸಾಧನೆ ಎಷ್ಟು ಸಮಂಜಸ, ಅದರಿಂದ ಏನು ಪ್ರಯೋಜನ ಎಂಬುದರ ಜತೆಗೆ ಇದಕ್ಕಾಗಿ ಕೋಟಿಗಟ್ಟಲೆ ಹಣವನ್ನು ವ್ಯಯ ಮಾಡಬೇಕಾದ ಅಗತ್ಯವಿದೆಯೇ? ಎಂಬ ಬಗ್ಗೆ ಚಿಂತನೆ ಮಾಡಬೇಕಿದೆ ಎಂದು ಹೇಳಿದರು.

ಬೇಸರ ವ್ಯಕ್ತ: ಹೆಚ್ಚಾಗುತ್ತಿರುವ ವಿಜ್ಞಾನದ ಬೆಳವಣಿಗೆಯಿಂದಾಗಿ ಪ್ರಸ್ತುತ ಸಂದರ್ಭದಲ್ಲಿ ರಾಜಕಾರಣಿಗಳಿಗಿಂತ ಮುಖ್ಯವಾಗಿ ಇಸ್ರೋ, ನಾಸಾ ಅಂತಹ ಸಂಸ್ಥೆಗಳು ರಾಜ್ಯಬಾರ ಮಾಡುತ್ತಿದ್ದು, ಪ್ರತಿಯೊಬ್ಬರನ್ನು ತನ್ನದೇ ಹಾದಿಯಲ್ಲಿ ಕರೆದೊಯ್ಯುತ್ತಿವೆ. ಹೀಗಾಗಿ ಇಂದು ಯಂತ್ರಗಳು ಜೀವನದ ಅಂಗವಾಗಿದ್ದು, ಯಂತ್ರಗಳು ಹಾಗೂ ವಿಜ್ಞಾನವನ್ನು ಪ್ರಶ್ನಿಸಲು ಸಾಧ್ಯವಾಗದೆ, ಅವುಗಳ ಹಾದಿಯಲ್ಲೇ ನಾವೆಲ್ಲರೂ ಹೋಗುವಂತಾಗಿದೆ. ಇದರ ಪರಿಣಾಮ ವಾಡಿಕೆ ವಿಷಯದ ಕುರಿತ ಚಿಂತನೆಗಳು ನಡೆಯುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಏನು ಉತ್ಪಾದಿಸದ ಪರಿಸ್ಥಿತಿ: ಮತ್ತೂಂದೆಡೆ ದೇಶದಲ್ಲಿ ಜಾಗತೀಕರಣ ಹಾಗೂ ಉದಾರೀಕರಣದ ಪ್ರಭಾವ ಹೆಚ್ಚಾಗಿದ್ದು, ಬಹುರಾಷ್ಟ್ರೀಯ ಕಂಪನಿಗಳಿಗೆ ದೇಶವನ್ನು ಕಟ್ಟಲು ಅವಕಾಶ ನೀಡಲಾಗುತ್ತಿದೆ. ಇದರಿಂದಾಗಿ ದೇಶದಲ್ಲಿ ನಾವು ಏನನ್ನು ಉತ್ಪಾದನೆ ಮಾಡಲಾಗದ ಸ್ಥಿತಿಗೆ ತಲುಪಿದ್ದು, ದೇಶದಲ್ಲಿ ನಾವುಗಳೇ ದ್ವಿತೀಯ ದರ್ಜೆ ಪ್ರಜೆಗಳಾಗುತ್ತಿದ್ದೇವೆ. ಇದರಿಂದಾಗಿ ದೇಶ ದಲ್ಲಿ ಗಾಂಧಿ ಮಾರ್ಗಿಗಳು ಮಾತ್ರವಲ್ಲದೆ, ಪ್ರತಿ ಯೊಬ್ಬ ವಿದ್ಯಾರ್ಥಿಗಳು ಈ ಬಗ್ಗೆ ಗಂಭೀರ ಚಿಂತನೆ ನಡೆಸಬೇಕಾದ ಅಗತ್ಯವಿದೆ ಎಂದು ಹೇಳಿದರು.

ಗಾಂಧಿ ಮಾರ್ಗ ಮರೆಗೆ: ಮೈಸೂರು ವಿವಿ ಕುಲಪತಿ ಪ್ರೊ. ಬಿ. ದಯಾನಂದ ಅಪ್ಪಣ್ಣ ಮಾನೆ ಮಾತನಾಡಿ, ಇತ್ತೀಚಿನ ದಿನದಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಪ್ರತಿಯೊಬ್ಬರು ಗಾಂಧಿ ಮಾರ್ಗವನ್ನು ಮರೆಯುತ್ತಿದ್ದು, ನಿರ್ದಿಷ್ಟ ದಿನಗಳಂದು ಮಾತ್ರ ಗಾಂಧೀಜಿ ಅವರನ್ನು ನೆನೆಯಲಾಗುತ್ತಿದೆ. ಆದರೆ ಗಾಂಧಿಯನ್ನು ಮರೆಯುವುದು ದುರಂತದ ಸಂಗತಿಯಾಗಲಿದ್ದು, ಈ ನಿಟ್ಟಿನಲ್ಲಿ ಎಲ್ಲಾ ಕಾಲೇಜು ಗಳಲ್ಲಿ ಕಡ್ಡಾಯವಾಗಿ ಗಾಂಧಿ ಕುರಿತ ಕಡ್ಡಾಯ ವಾಗಿ ಪಠ್ಯವಾಗಬೇಕಿದೆ ಎಂದ ಅವರು, ಗಾಂಧೀಜಿ ರಾಜಕೀಯ ಸನ್ಯಾಸಿ, ಪ್ರಶ್ನಾತೀತ ನಾಯಕ ರಾಗುವ ಮೂಲಕ ಜಗತ್ತಿನ ಅನೇಕ ನಾಯಕರು ಗಳಿಗೆ ಪ್ರೇರಣೆಯಾಗಿದ್ದಾರೆ. ಹೀಗಾಗಿ ಜಗತ್ತಿನಲ್ಲಿ ಸೂರ್ಯ, ಚಂದ್ರ ಇರುವವರೆಗೂ ಗಾಂಧೀಜಿ ಪ್ರಸ್ತುತರಾಗಿರುತ್ತಾರೆ ಎಂದು ಬಣ್ಣಿಸಿದರು.

ಸಮಾರಂಭದ ಅಂಗವಾಗಿ ಗಾಂಧಿ ಮಾರ್ಗಿ ಗಳಾದ ಡಾ. ಎಂ.ಜಿ. ಕೃಷ್ಣಮೂರ್ತಿ, ವೇಮಗಲ್‌ ಸೋಮಶೇಖರ್‌, ಎಚ್‌.ಎಂ. ಶಿವಣ್ಣ ಹಾಗೂ ಡಾ. ಸುರೇಂದ್ರ ಕೌಲಗಿ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಮೈಸೂರು ವಿವಿ ಕುಲಸಚಿವ ಪ್ರೊ. ಆರ್‌. ರಾಜಣ್ಣ, ಪರೀûಾಂಗ ಕುಲಸಚಿವ ಪ್ರೊ. ಜೆ. ಸೋಮಶೇಖರ್‌, ಹಣಕಾಸು ಅಧಿಕಾರಿ ಪ್ರೊ. ಬಿ.ಮಹದೇವಪ್ಪ, ಪ್ರೊ. ಎಸ್‌. ಶಿವರಾಜಪ್ಪ, ಶಾರದಾ ವಿಲಾಸ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಪಿ.ಎಸ್‌. ಸುರೇಶ್‌, ಸಂತಜೋಸೆಫ್ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಸಿ.ಎಂ. ಮಣಿ ಹಾಜರಿದ್ದರು.

ಟಾಪ್ ನ್ಯೂಸ್

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು

Electric

Belagavi: ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ, ಮಗ ಸೇರಿ ಮೂವರು ದುರ್ಮರಣ

BBK-11: ಬಿಗ್ ಬಾಸ್‌ ಮನೆಗೆ ಬಂದ್ರು ಖಡಕ್ ‘ವಕೀಲ್ ಸಾಬ್’

BBK-11: ಬಿಗ್ ಬಾಸ್‌ ಮನೆಗೆ ಬಂದ್ರು ಖಡಕ್ ‘ವಕೀಲ್ ಸಾಬ್’

1-bahga

K.S.Bhagawan ವಿವಾದ;ಮಾನ ಮರ್ಯಾದೆ ಇದ್ದರೆ ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಬೇಕು…

BBK-11: ಆರನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ರು ಖ್ಯಾತ ನಟನ ಪುತ್ರ

BBK-11: ಆರನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ರು ಖ್ಯಾತ ನಟನ ಪುತ್ರ

police crime

Bidar; ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ಮಾಡಿದ ಪೇದೆ ಅಮಾನತು

Yadhu

Udupi: ಚಾಮುಂಡಿ ಬೆಟ್ಟದ ಮೇಲೆ ಮಹಿಷ ದಸರಾ ಸರಿಯಲ್ಲ: ಸಂಸದ ಯದುವೀರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bahga

K.S.Bhagawan ವಿವಾದ;ಮಾನ ಮರ್ಯಾದೆ ಇದ್ದರೆ ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಬೇಕು…

Yadhu

Udupi: ಚಾಮುಂಡಿ ಬೆಟ್ಟದ ಮೇಲೆ ಮಹಿಷ ದಸರಾ ಸರಿಯಲ್ಲ: ಸಂಸದ ಯದುವೀರ್‌

Mysore

Mysuru ಸಾಂಸ್ಕೃತಿಕ ನಗರಿಯಲ್ಲಿ ರೇವ್‌ ಪಾರ್ಟಿ: ಪೊಲೀಸ್‌ ದಾಳಿ, 50ಕ್ಕೂ ಹೆಚ್ಚು ಮಂದಿ ಬಂಧನ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

crime (2)

Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Untitled-1

Kundapura: ಹೈದರಾಬಾದ್‌ನಲ್ಲಿ ನಾಪತ್ತೆ; ಪ್ರಕರಣ ದಾಖಲು

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು

death

Udupi: ಸ್ಕೂಟರ್‌ ಮೇಲೆ ವಿದ್ಯುತ್‌ ತಂತಿ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು

1-wqewqe

Malayalam ಚಿತ್ರರಂಗ; ಆ ದೃಶ್ಯಗಳನ್ನು ನೋಡುವಂತೆ ಬಲವಂತ: ನಟಿಯ ಆರೋಪ

12

Manipal:ಪರ್ಕಳದ ಸಾಮಾನ್ಯ ತಂತ್ರಜ್ಞ ಆರ್‌. ಮನೋಹರ್‌ ಅಸಾಮಾನ್ಯ ಸಂಶೋಧಕರಾದ ಕುತೂಹಲಕಾರಿ ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.