ಗಾಂಧಿ ಬಂದಿದ್ದ ಬದನವಾಳುಗೆ ರಾಹುಲ್‌ ಭೇಟಿ

ಜೋಡೋ ಯಾತ್ರೆಯೊಂದಿಗೆ ಮೈಸೂರು ನಗರದತ್ತ ಪಾದಯಾತ್ರೆಯಲ್ಲಿ ಸಾಗುವರು

Team Udayavani, Sep 16, 2022, 6:31 PM IST

ಗಾಂಧಿ ಬಂದಿದ್ದ ಬದನವಾಳುಗೆ ರಾಹುಲ್‌ ಭೇಟಿ

ನಂಜನಗೂಡು: ಕಳೆದ ಶತಮಾನದಲ್ಲಿ ಮಹಾತ್ಮಾ ಗಾಂಧಿ ಭೇಟಿ ನೀಡಿದ್ದ ತಾಲೂಕಿನ ಬದನವಾಳಿಗೆ ಅ.2ರಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿ ನೀಡಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್‌ ನಾಯಕ ಡಿ.ಕೆ. ಶಿವಕುಮಾರ್‌ ತಿಳಿಸಿದರು.

ನಂಜನಗೂಡಿಗೆ ಬುಧವಾರ ಆಗಮಿಸಿದ್ದ ಡಿ.ಕೆ.ಶಿವಕುಮಾರ್‌, ರಾಹುಲ್‌ ಗಾಂಧಿ ಯವರ ಭಾರತ ಜೋಡೋ ಯಾತ್ರೆ ಕ್ರಮಿಸುವ ಕುರಿತು ಮಾಹಿತಿ ಪಡೆದು,
ಗುರುವಾರ ಮತ್ತೆ ನಂಜನಗೂಡಿಗೆ ಆಗಮಿಸಿ ಬದನವಾಳಿನ ಖಾದಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಗುಂಡ್ಲುಪೇಟೆಯಿಂದ ಅ.1ರಂದು ಜೋಡೋ ಯಾತ್ರೆಯೊಂದಿಗೆ ಆಗಮಿಸುವ ರಾಹುಲ್‌ ಗಾಂಧಿ, ಅಂದು ರಾತ್ರಿಯನ್ನು ತಾಲೂಕಿನ ತಾಂಡವಪುರದ ಎಂಐಟಿ ಕಾಲೇಜಿನ ಆವರಣದ ಮೈದಾನದಲ್ಲಿ ಕಳೆದು, 2ರಂದು ರಾಷ್ಟ್ರಪಿತ ಮಹಾತ್ಮಾ ಗಾಂಧಿ ಭೇಟಿ ನೀಡಿದ್ದ ಬದನವಾಳುವಿನ ಖಾದಿ ಕೇಂದ್ರಕ್ಕೆ ಭೇಟಿ ನೀಡಿ
ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸುತ್ತಾರೆ ಎಂದು ಹೇಳಿದರು.

ನಂತರ ಅವರು ಮತ್ತೆ ತಾಂಡವಪುರಕ್ಕೆ ಆಗಮಿಸಿ ಜೋಡೋ ಯಾತ್ರೆಯೊಂದಿಗೆ ಮೈಸೂರು ನಗರದತ್ತ ಪಾದಯಾತ್ರೆಯಲ್ಲಿ ಸಾಗುವರು ಎಂದು ಅವರು ನುಡಿದರು.

ಡಿಕೆಶಿಗೆ ಸ್ವಾಗತ: ಚಾಮರಾಜನಗರ ಜಿಲ್ಲೆಯಿಂದ ಮೈಸೂರು ಜಿಲ್ಲೆಗೆ ಮಾಜಿ ಸಂಸದ ಆರ್‌.ಧ್ರುವನಾರಾಯಣ, ಮಾಜಿ ಶಾಸಕ ಎ.ಆರ್‌.ಕೃಷ್ಣಮೂರ್ತಿಯವರೊಂದಿಗೆ ಆಗಮಿಸಿದ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರನ್ನು ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಪಕ್ಷದ ಜಿಲ್ಲಾಧ್ಯಕ್ಷ ಬಿ.ಜೆ. ವಿಜಯಕುಮಾರ್‌, ತಾಲೂಕು ಅಧ್ಯಕ್ಷರಾದ ಕುರಹಟ್ಟಿ ಮಹೇಶ, ಶ್ರೀಕಂಠನಾಯಕ, ಸಿ. ಎಂ.ಶಂಕರ್‌, ಎಸ್‌.ಸಿ.ಬಸವರಾಜು ಮತ್ತಿತರರು ಸ್ವಾಗತಿಸಿದರು. ನಂತರ ಪ್ರವಾಸಿ ಮಂದಿರಕ್ಕೆ ಆಗಮಿಸಿದ ಪಕ್ಷಾಧ್ಯಕ್ಷರಿಗೆ ತಾಲೂಕಿನ ಕೈ ಮುಖಂಡರಾದ ನಂದಕುಮಾರ್‌ ಹಡೆತಲೆ, ದೊರೆಸ್ವಾಮಿ ನಾಯಕ, ಶಿವಪ್ಪದೇವರು, ನಾಗೇಶರಾಜು, ಗಂಗಾಧರ್‌, ಖಾದರ್‌, ಅಕºರ್‌, ಶಿವಣ್ಣ ಮತ್ತಿತರರು ಹಾರ ಹಾಕಿ ಸ್ವಾಗತಿಸಿದರು.

ಬಿತ್ತನೆ ಮಾಡುವಾಗ ಬೀಜದ ಆಯ್ಕೆ
ನಂಜನಗೂಡು ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್‌, ಕ್ಷೇತ್ರದಲ್ಲಿನ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಗಳಲ್ಲಿ ಪೈಪೋಟಿ ನಡೆಯುತ್ತಿರುವ ಕುರಿತು ಸೂಕ್ತ ಉತ್ತರ ನೀಡದೆ ನುಣಿಚಿಕೊಂಡರು. ನಂಜನಗೂಡು ವಿಧಾನಸಭಾ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿ ಆಗಿರುವ ಮಾಜಿ ಸಂಸದ ಆರ್‌.ಧ್ರುವನಾರಾಯಣ ಈಗಾಗಲೇ ಕ್ಷೇತ್ರದ ಪ್ರತಿ ಪಂಚಾಯ್ತಿಯನ್ನು ಭೇಟಿ ಮಾಡಿ ಸಂಘಟನೆಗೆ ಇಳಿದಿದ್ದಾರೆ. ಮಾಜಿ ಸಚಿವ ಡಾ.ಎಚ್‌
.ಸಿ.ಮಹದೇವಪ್ಪ ಜೋಡೋ ಯಾತ್ರೆ ನಂತರ ಕ್ಷೇತ್ರದ ಪ್ರತಿ ಹಳ್ಳಿಗೂ ಭೇಟಿ ನೀಡುವುದಾಗಿ ಘೋಷಿಸಿದ್ದಾರೆ. ಈ ಹಿರಿಯರ ಮಧ್ಯೆ ಕೇಶವಮೂರ್ತಿ ಇದ್ದಾರೆ. ಹೀಗಿರುವಾಗ ಪಕ್ಷದ ಪರಿಸ್ಥಿತಿ ಹೇಗೆ ಎಂದು ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್‌ ರಾಜ್ಯಾಧ್ಯಕ್ಷರು, ಭೂಮಿಯನ್ನು ಉತ್ತಿ ಹಸನು ಮಾಡಿದಷ್ಟು ಒಳ್ಳೆಯದು. ಎಲ್ಲರೂ ಉತ್ತಲಿ, ಬೀಜ ಬಿತ್ತುವಾಗ ನಾನು ಆಯ್ಕೆ ಮಾಡಿ ಘೋಷಿಸುತ್ತೇನೆ ಎನ್ನುವುದರ ಮೂಲಕ ಪಕ್ಷದ ಹುರಿಯಾಳುಗಳ ಹೆಸರನ್ನು ಗೌಪ್ಯವಾಗಿಸಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.