123 ಮರಣೋತ್ತರ ಪರೀಕ್ಷೆ ನಡೆಸಿರುವ ರಾಜಮ್ಮ


Team Udayavani, Apr 10, 2017, 12:31 PM IST

mys4.jpg

ಎಚ್‌.ಡಿ.ಕೋಟೆ: ಹೆಣ ಅಂದ್ರೆ ಯಾರಗೆ ಭಯವಿಲ್ಲ ಹೇಳಿ ? ಅದರಲ್ಲೂ ಕೊಳೆತ ಹೆಣ ಅಂದ್ರೆ ಕೇಳುವುದೇ ಬೇಡ ಗಂಡಸರೇ ಹೆಣ ನೋಡಲು ಭಯ ಬೀಳುತ್ತಾರೆ. ಆದರೆ ಇಲ್ಲೊಬ್ಬ ಮಹಿಳೆ ಹೆಣಗಳು ಕೊಳೆತು ದುರ್ವಾಸನೆ ಬೀರುತ್ತಿದ್ದರೂ ಮೃತದೇಹದ ಮರಣೋತ್ತರ ಪರೀಕ್ಷೆ ಅಂಜಿಕೆ ಅಳುಕಿಲ್ಲದೇ ನೆರರವೇರಿಸುತ್ತಾರೆ ಅಂದ್ರೆ? ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ನಿಯೋಜನೆಗೊಂಡಿರುವ ರಾಜಮ್ಮ ಮೂಲತಃ ನಂಜನಗೂಡು ತಾಲೂಕಿನ ಹುರ ಗ್ರಾಮದವರು.  ಈಕೆಗೆ 1 ಹೆಣ್ಣು ಮಗುವಿದ್ದು ಪತಿ ಈಕೆಯಿಂದ ದೂರವಿದ್ದಾರೆ.

ಹೀಗಿರುವಾಗ ಜೀವನ ನಿರ್ವಹಣೆಗೆ ಅನ್ಯ ಮಾರ್ಗ ಕಾಣದೆ ಹುಲ್ಲಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ದಿನಗೂಲಿ ಆಧಾರದ ಮೇಲೆ ಕಳೆದ ಸುಮಾರು 7 ವರ್ಷದ ಹಿಂದೆ ಆಸ್ಪತ್ರೆಗೆ ಶುಚಿತ್ವದ ಕೆಲಸಕ್ಕೆ ಸೇರಿಕೊಂಡ ರಾಜಮ್ಮ ಶುಚಿತ್ವ ಕೆಲಸಕ್ಕಷ್ಟೇ ಸೀಮಿತವಾಗಿದ್ದರೆ ಇಂದು ಹೆಸರಾಗುತ್ತಿರಲಿಲ್ಲ. ಒಮ್ಮೆ ಹುಲ್ಲಹಳ್ಳಿ ಆಸ್ಪತ್ರೆಯಲ್ಲಿ ಮೃತದೇಹವೊಂದರ ಮರಣೋತ್ತರ ಪರೀಕ್ಷೆ ನೆರವೇರಿಸಬೇಕಿತ್ತು. ಸಹಾಯಕರಿಲ್ಲದ ಕಾರಣ ಅಲ್ಲಿನ ವೈದ್ಯ ಡಾ.ರವಿಕುಮಾರ್‌ ರಾಜಮ್ಮ ಅವರಿಂದ ಮೃತದೇಹದ ಮರಣೋತ್ತರ ಪರೀಕ್ಷೆಗೆ ಸಹಾಯ ಮಾಡುವಂತೆ ಕೇಳಿ ಕೊಂಡಿದ್ದಾರೆ. ಇದಕ್ಕೆ ಸ್ಪಂದಿಸಿದ ರಾಜಮ್ಮ ಮೃತದೇಹದ ಮರಣೋತ್ತರ ಪರೀಕ್ಷೆಗೆ ಸಿದ್ಧರಾಗಿದ್ದಾರೆ.

123 ಮೃತದೇಹಗಳ ಮರಣೋತ್ತರ ಪರೀಕ್ಷೆ ನೆರವೇರಿಸಿರುವ ರಾಜಮ್ಮ: ಬಳಿಕ ಒಂದಾದ ಮೇಲೊಂದರಂತೆ ಸಹಾಯಕರಿರಲಿ ಇಲ್ಲದಿರಲಿ ಹುಲ್ಲಹಳ್ಳಿ ಆಸ್ಪತ್ರೆಯೊಂದರಲ್ಲೇ 115 ಮೃತದೇಹಗಳ ಮರಣೋತ್ತರ ಪರೀಕ್ಷೆ ನೆರವೇರಿಸಿದ ರಾಜಮ್ಮರಿಗೆ ಈಗಲೂ ಮೃತದೇಹದ ಮರಣೋತ್ತರ ಪರೀಕ್ಷೆ ನೆರವೇರಿಸುವುದು ಅಂದ್ರೆ ಯಾವುದೇ ಅಂಜಿಕೆ ಅಳುಕಿಲ್ಲವಂತೆ. ಮೃತದೇಹ ಎಷ್ಟೇ ಕೊಳೆತು ನಾರುತ್ತಾ ಹುಳುಗಳ ಬಂದಿದ್ದರೂ ಮರಣೋತ್ತರ ಪರೀಕ್ಷೆ ನೆರವೇರಿಸುವುದರಲ್ಲಿ ರಾಜಮ್ಮ ಮುಂದಿದ್ದಾರೆ.

ಭಯ ಬೀಳುವ ಮಂದಿಯೇ ಹೆಚ್ಚು: ಎಷ್ಟೇ ಧೈರ್ಯ ಶಾಲಿ ಗಂಡಸರೇ ಆದ್ರೂ ಹೆಣ ಅಂದ್ರೆ ಭಯಬೀಳುವವರೇ ಹೆಚ್ಚು. ಅದರಲ್ಲೂ ಅಪಘಾತವಾಗಿ ವಿಚಿತ್ರವಾಗಿ ಮೃತಪಟ್ಟ ಮೃತದೇಹಗಳು, ನೀರಿನಲ್ಲಿ ಬಿದ್ದು ಕೊಳೆತು ನಾರು ಮೃತದೇಹಗಳು, ಕಾನೂನು ಬಾಹಿರವಾಗಿ ಮಣ್ಣು ಮಾಡದ ಮೃತದೇಹಗಳನ್ನು ಹಲವು ದಿನಗಳ ಬಳಿಕ ಮಣ್ಣಿನಿಂದ ಹೊರತೆಗೆಯುವ ಮೃತದೇಹಗಳು ಅಷ್ಟೇ ಅಲ್ಲದೇ ಬೆಂಕಿ ಅವಘಡದಲ್ಲಿ ಬೆಂದು ಭಯ ಹುಟ್ಟಿಸುವಂತಿರುವ ಮೃತದೇಹಗಳ ಮರಣೋತ್ತರ ಪರೀಕ್ಷೆ ಮಾಡುವುದು ಹಾಗಿರಲಿ ನೋಡಲು ಭಯ ಬೀಳುವ ಮಂದಿಯೇ ಹೆಚ್ಚಾಗಿರುವಾಗ ಯಾವುದೇ ಭಯವಿಲ್ಲದೇ ಒಬ್ಬ ಹೆಣ್ಣು ಮಗಳು ಇಂತಹ ಕಾರ್ಯದಲ್ಲಿ ತೊಡಗಿಸಿಕೊಂಡಿರುವುದು ನಿಜಕ್ಕೂ ಶ್ಲಾಘನೀಯ.

ಎಲ್ಲಾ ಕ್ಷೇತ್ರದಲ್ಲೂ ಹೆಣ್ಣು ಸರಿಸಮಾನಳು: ಹೆಣ್ಣು ಎಲ್ಲಾ ಕ್ಷೇತ್ರಗಳಲ್ಲಿಯೂ ಮುಂದೆ ಬರಬೇಕು. ಹೆಣ್ಣು ಗಂಡಿಗೆ ಸರಿಸಮಾನಳಾಗಿರಬೇಕು ಅನ್ನುವ ಹಲವಾರು ಮಾತುಗಳನ್ನು ಕೇಳಿದ್ದೇವೆ. ಆದರೆ ಮೃತದೇಹಗಳ ಮರಣೋತ್ತರ ಪರೀಕ್ಷೆ ನೆರವೇರಿಸಲು ಪುರುಷರೇ ಹಿಂದೆ ಬೀಳುವಾಗ ಅದೆಂತಹ ಮೃತದೇಹವೇ ಆಗಿರಲಿ ನಾನೊಬ್ಬಳೇ ಮೃತದೇಹದ ಮರಣೋತ್ತರ ಪರೀಕ್ಷೆ ನೆರವೇರಿಸಬಲ್ಲೆ ಅನ್ನುವ ರಾಜಮ್ಮ ಎಚ್‌.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಗೆ ನಿಯೋಜನೆಗೊಂಡ 1 ತಿಂಗಳಲ್ಲಿ 8 ಮೃತದೇಹಗಳ ಮರಣೋತ್ತರ ಪರೀಕ್ಷೆ ನೆರವೇರಿಸಿರುವುದು ನಿಜಕ್ಕೂ ಮೆಚ್ಚುವಂತಹದ್ದು.

ಮರಣೋತ್ತರ ಪರೀಕ್ಷಕರ ಹುದ್ದೆ ಎಚ್‌.ಡಿ. ಕೋಟೆ ತಾಲೂಕು ಕೇಂದ್ರ ಸ್ಥಾನದ ಸಾರ್ವಜನಿಕ ಆಸ್ಪತ್ರೆಯಲ್ಲಿ ಖಾಲಿ ಇದ್ದು ನಿವೃತ್ತ ಸಿಬ್ಬಂದಿಯೊಬ್ಬರಿಂದ ಮೃತದೇಹದ ಮರಣೋತ್ತರ ಪರೀಕ್ಷೆ ನೆರವೇರಿಸಲು ಕೇಳಿದಷ್ಟು ಹಣ ನೀಡಬೇಕಿತ್ತು. ಆದರೂ ನಿಗದಿತ ಸಮಯದಲ್ಲಿ ಮರಣೋತ್ತರ ಪರೀಕ್ಷೆ ನೆರವೇರಿಸುತ್ತಿರಲಿಲ್ಲ. ಹಾಗಾಗಿ ರಾಜಮ್ಮರನ್ನು ಎಚ್‌.ಡಿ. ಕೋಟೆ ಸಾರ್ವಜನಿಕ ಆಸ್ಪತ್ರೆಗೆ ನಿಯೋಜನೆ ಮಾಡಲಾಗಿದೆ. ರಾಜಮ್ಮ ಸಕಾಲದಲ್ಲಿ ಮರಣೋತ್ತರ ಪರೀಕ್ಷೆ ನೆರವೇರಿಸುವ ಮೂಲಕ ಸಂಕಷ್ಟದಲ್ಲಿ ಸಿಲುಕುವ ಮೃತರ ಕುಟುಂಬಗಳಿಗೆ ಪರೋಕ್ಷವಾಗಿ ಸಹಕಾರಿಯಾಗಿದ್ದಾರೆ.

ನಾನು ಮೃತದೇಹಗಳ ಮರಣೋತ್ತರ ಪರೀಕ್ಷೆ ನೆರವೇರಿಸಲು ಡಾ. ರವಿಕುಮಾರ್‌ ಮುಖ್ಯಕಾರಣ. ಒಮ್ಮೆ ತುರ್ತಾಗಿ 1 ಮೃತದೇಹದ ಮರಣೋತ್ತರ ಪರೀಕ್ಷೆ ನೆರವೇರಿಸಲು ನನ್ನ ಸಹಾಯ ಪಡೆದು ಕೊಂಡರು. ಬಳಿಕ ನನಗೆ ಧೈರ್ಯ ತುಂಬಿ ಮರಣೋತ್ತರ ಪರೀಕ್ಷೆಗೆ ಸಜ್ಜಗೊಳಿಸಿದ ಹಿನ್ನೆಲೆ ಇಲ್ಲಿಯ ತನಕ ನಾನು ಒಟ್ಟು 123 ಮೃತದೇಹಗಳ ಮರಣೋತ್ತರ ಪರೀಕ್ಷೆ ನೆರವೇರಿಸಿದ್ದೇನೆ.
-ರಾಜಮ್ಮ, ಮಾದರಿ ಮಹಿಳೆ

* ಎಚ್‌.ಬಿ.ಬಸವರಾಜು

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur-1

Hunsur: ತಂಬಾಕು ಬೆಳೆಗಾರರ ರಕ್ಷಣೆಗೆ ಬದ್ದ: ಸಂಸದ ಯದುವೀರ್ ಒಡೆಯರ್

ಮುಡಾ ಅಧ್ಯಕ್ಷ ಕೆ.ಮರಿಗೌಡ ತಲೆದಂಡ?

MUDA Chairman: ಕೆ.ಮರಿಗೌಡ ತಲೆದಂಡ? ಇಂದು ಅಥವಾ ನಾಳೆ ರಾಜೀನಾಮೆ ನೀಡುವ ಸಾಧ್ಯತೆ

Mysuru: ದೀಪಾಲಂಕಾರ ವಿಸ್ತರಣೆ: ವಾಹನ ಸಂಚಾರ ನಿರ್ಬಂಧವೂ ಮುಂದುವರಿಕೆ

Mysuru: ದೀಪಾಲಂಕಾರ ವಿಸ್ತರಣೆ: ವಾಹನ ಸಂಚಾರ ನಿರ್ಬಂಧವೂ ಮುಂದುವರಿಕೆ

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

Mysuru: ಮರಳಿ ಕಾಡಿನತ್ತ ಪ್ರಯಾಣ ಬೆಳೆಸಿದ ಗಜಪಡೆ

Mysuru: ಮರಳಿ ಕಾಡಿನತ್ತ ಪ್ರಯಾಣ ಬೆಳೆಸಿದ ಗಜಪಡೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.