ಆದರ್ಶ ರಾಜ್ಯದ ಪರಿಕಲ್ಪನೆಯೇ ರಾಮಾಯಣ


Team Udayavani, Oct 14, 2019, 3:00 AM IST

adarsha

ಜಿಲ್ಲಾದ್ಯಂತ ಭಾನುವಾರ ರಾಮಾಯಣ ಮಹಾಕಾವ್ಯ ರಚಿಸಿದ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಕೀಲುಕುದುರೆ, ಡೊಳ್ಳುಕುಣಿತ, ನಂದಿಧ್ವಜ ಕುಣಿತ, ವೀರಗಾಸೆ ಮತ್ತಿತರ ಆಕರ್ಷಕ ಜಾನಪದ ಕಲಾತಂಡಗೊಂದಿಗೆ ವಾಲ್ಮೀಕಿ ಭಾವಚಿತ್ರ ಮೆರವಣಿಗೆ ಅದ್ಧೂರಿಯಾಗಿ ಜರುಗಿತು. ರಾಮಾಯಣ ಸಂದೇಶ ಸಾರುವ ಸ್ತಬ್ಧಚಿತ್ರಗಳು ಮನಸೂರೆಗೊಂಡವು.

ವಾಲ್ಮೀಕಿ ತತ್ವ, ಸಂದೇಶ ಹಾಗೂ ರಾಮಾಯಣದ ಮೌಲ್ಯ ಅಳಡಿಸಿಕೊಳ್ಳುವಂತೆ ಗಣ್ಯರು ಸಲಹೆ ನೀಡಿದರು. “ರಾಜ್ಯಗಳು, ದೇಶಗಳು ಹೇಗೆ ಇರಬೇಕು, ಪ್ರಜೆಗಳು ಹೇಗೆ ಆದರ್ಶವಾಗಿರಬೇಕು ಎಂಬುದನ್ನು ಹೇಳುವ ರಾಮರಾಜ್ಯದ ಪರಿಕಲ್ಪನೆಯನ್ನು ರಾಮಾಯಣದಲ್ಲಿ ವಾಲ್ಮೀಕಿ ಪ್ರತಿಪಾದಿಸಿದ್ದಾರೆ’ ಎಂದು ಮಾಜಿ ಸಚಿವ ಜಿ.ಟಿ.ದೇವೇಗೌಡ ಬಣ್ಣಿಸಿದರು. ಸಮುದಾಯದ ಗಣ್ಯರು ಹಾಗೂ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಮೆರವಣಿಗೆ ವೇಳೆ ತಮಟೆ ಸದ್ದಿಗೆ ಕಲಾತಂಡಗಳೊಂದಿಗೆ ಜಿ.ಟಿ.ದೇವೇಗೌಡ ಕತ್ತಿಯನ್ನು ಝಳಪಿಸುತ್ತಾ ಸ್ಟೆಪ್‌ ಹಾಕಿ ಗಮನ ಸೆಳೆದರು.

ಮೈಸೂರು: ವಿಶ್ವದಲ್ಲಿರುವ ಎಲ್ಲಾ ಜನರು, ಎಲ್ಲಾ ಕುಟುಂಬಗಳು ಆದರ್ಶವಾಗಿರಬೇಕು. ಜೊತೆಗೆ ಆದರ್ಶವಾಗಿಯೇ ಬಾಳಬೇಕು ಎಂಬ ತತ್ವ, ನೀತಿ, ಮಾರ್ಗದರ್ಶನವನ್ನು ಮಹರ್ಷಿ ವಾಲ್ಮೀಕಿ ರಾಮಾಯಣದಲ್ಲಿ ತಿಳಿಸಿದ್ದಾರೆ ಎಂದು ಮಾಜಿ ಸಚಿವ ಜಿ.ಟಿ.ದೇವೇಗೌಡ ತಿಳಿಸಿದರು. ನಗರದ ಕಲಾಮಂದಿರದಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಮೈಸೂರು ನಗರ ಮತ್ತು ತಾಲ್ಲೂಕು ನಾಯಕ ಜನಾಂಗದ ಸಂಘಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿಗೆಚಾಲನೆ ನೀಡಿ ಮಾತನಾಡಿದರು.

ಮನುಕುಲಕ್ಕೆ ಅತಂತ್ಯ ಶ್ರೇಷ್ಠವಾದ ಆದರ್ಶ ಜೀವನವನ್ನು ಒಳಗೊಂಡಿರುವ ರಾಮಾಯಣ ಮಹಾಕಾವ್ಯವನ್ನು ವಾಲ್ಮೀಕಿಯರು ನೀಡಿದ್ದಾರೆ. ನಮ್ಮ ರಾಜ್ಯಗಳು, ದೇಶಗಳು ಹೇಗೆ ಇರಬೇಕು, ಪ್ರಜೆಗಳು ಹೇಗೆ ಆದರ್ಶವಾಗಿರಬೇಕು ಎಂಬುದನ್ನು ಹೇಳುವ ರಾಮರಾಜ್ಯದ ಪರಿಕಲ್ಪನೆಯನ್ನು ರಾಮಾಯಣದ ಮೂಲಕ ನೀಡಿದ್ದಾರೆ. ಅನ್ಯಾಯದ ವಿರುದ್ಧ ಆಂಜನೇಯ ಹೋರಾಟ ನಡೆಸಿದಂತೆ ಪ್ರತಿಯೊಬ್ಬರು, ಅನ್ಯಾಯದ ವಿರುದ್ಧ ಹೋರಾಟ ಮಾಡಬೇಕು ಎಂದರು.
ಸೀತೆ ತನಗೆ ಪತಿಯೇ ಮುಖ್ಯ ಎಂದು ಶ್ರೀರಾಮನ ಜೊತೆಗೆ ವನವಾಸಕ್ಕೆ ಹೋದಳು.

ರಾಮನೂ ಕೂಡ ಏಕಪತ್ನಿ ವತ್ರಸ್ಥನಾಗಿದ್ದ, ಇವೆಲ್ಲಾ ನಮ್ಮ ಸಮಾಜದಲ್ಲಿ ಆದರ್ಶ ಕುಟುಂಬಗಳು ಹೇಗಿರಬೇಕು ಎಂಬುದನ್ನು ಹೇಳಿಕೊಟ್ಟಿವೆ ಎಂದು ತಿಳಿಸಿದರು. ಶಾಸಕ ಎಲ್‌.ನಾಗೇಂದ್ರ ಮಾತನಾಡಿ, ವಾಲ್ಮೀಕಿ ರಚಿಸಿರುವ ರಾಮಾಯಣ ಮಹಾಕಾವ್ಯ ಎಂದೆಂದಿಗೂ ಶಕ್ತಿ ಶಾಲಿಯಾಗಿಯೇ ಉಳಿದಿದೆ. ಅವರ ತತ್ವ, ಆದರ್ಶ, ಚಿಂತನೆಗಳನ್ನು ಪ್ರತಿಯೊಬ್ಬರೂ ಅನುಸರಿಸಬೇಕು ಎಂದು ಹೇಳಿದರು.

ವಾಲ್ಮೀಕಿ ಕುರಿತು ಧಾರವಾಡ ಕರ್ನಾಟಕ ಕಲಾ ಕಾಲೇಜಿನ ಉಪ ಪ್ರಾಚಾರ್ಯ ಡಾ.ಡಿ.ಬಿ.ಕರಡೋಣಿ ಮುಖ್ಯ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಪೂರ್ಣಿಮಾ, ನಗರಪಾಲಿಕೆಯ ಉಪ ಮೇಯರ್‌ ಶಫಿ ಅಹಮದ್‌, ಸದಸ್ಯರಾದ ಶಿವಕುಮಾರ್‌, ಗುರುವಿನಾಯಕ, ಲೋಕೇಶ್‌ ಪಿಯಾ, ಶೋಭಾ, ಜಿ.ಪಂ ಸದಸ್ಯರಾದ ಬೀರಹುಂಡಿ ಬಸವಣ್ಣ, ಅರುಣ್‌ ಕುಮಾರ್‌, ಮೈಸೂರು ತಾಲೂಕು ನಾಯಕ ಸಂಘದ ಅಧ್ಯಕ್ಷ ಕೆಂಪನಾಯಕ, ನಾರಾಯಣ ಇತರರಿದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.