ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ 2 ಕೋಟಿ ರೂ.
Team Udayavani, Dec 15, 2017, 12:51 PM IST
ಹುಣಸೂರು: ಇಲ್ಲಿನ ಡಿಡಿ ಅರಸ್ ಪ್ರಥಮ ದರ್ಜೆ ಕಾಲೇಜಿನ ಒಳಾಂಗಣ ಕ್ರೀಡಾಂಗಣಕ್ಕೆ 70ಲಕ್ಷ ಹಾಗೂ ಬಾಲಕರ ಪಿಯು ಕಾಲೇಜು ಹಿಂಭಾಗದ ಕ್ರೀಡಾಂಗಣದ ಹಿಂಭಾಗದಲ್ಲಿ ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ 2 ಕೋಟಿರೂ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಎಚ್.ಪಿ.ಮಂಜುನಾಥ್ ತಿಳಿಸಿದರು.
ನಗರದ ಡಿ.ಡಿ.ಅರಸ್ ಕಾಲೇಜಿನಲ್ಲಿ 12ನೇ ಹಣಕಾಸು ಯೋಜನೆಯಡಿ ಶೆಟಲ್ ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣ ಕಾಮಗಾರಿಗೆ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರೊಂದಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. ಸಿಂಥೆಟಿಕ್ ನೆಲಹಾಸನ್ನು ಅಳವಡಿಸಿ ನಿರ್ಮಿಸಲಾಗುವ, ಇನ್ ಡೋರ್ ಸ್ಟೇಡಿಯಂ ರಾಷ್ಟ್ರಮಟ್ಟದ ಕ್ರೀಡಾಂಗಣಗಳ ಗುಣಮಟ್ಟ ಹೊಂದಿರಲಿದ್ದು ಶೀಘ್ರ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಹೇಳಿದರು.
2 ಕೋಟಿ ರೂ., ವೆಚ್ಚದ ಕ್ರೀಡಾ ಸಂಕೀರ್ಣ: ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹಿಂಭಾಗವಿರುವ ತಾಲೂಕು ಕ್ರೀಡಾಂಗಣದ ಹೊರ ಆವರಣದಲ್ಲಿ 2 ಕೋಟಿ ರೂ.ವೆಚ್ಚದಲ್ಲಿ ಸಾರ್ವಜನಿಕ ಕ್ರೀಡಾ ಸಂಕೀರ್ಣ ನಿರ್ಮಿಸಲು ಕ್ರೀಡಾ ಇಲಾಖೆ ವತಿಯಿಂದ ಅನುದಾನ ಬಿಡುಗಡೆಯಾಗಿದೆ. ಈ ಸಂಬಂಧ ನಗರದ ಕ್ರೀಡಾಪಟುಗಳು ಹಾಗೂ ಕ್ರೀಡಾಭಿಮಾನಿಗಳೊಂದಿಗೆ ಚರ್ಚಿಸಿ ಆಗಬೇಕಾದ ಕ್ರೀಡಾ ಸೌಲಭ್ಯ,
ಮೈದಾನ ಸೇರಿ ಎಲ್ಲವನ್ನೂ ನಿರ್ಮಿಸಲಾಗುವುದು ಎಂದು ಹೇಳಿದರು. ಯಾವುದೇ ಯೋಜನೆಗಳು ಸಾರ್ವಜನಿಕರ ಸಹಕಾರವಿದ್ದಲ್ಲಿ ಮಾತ್ರ ಯಶಸ್ಸು ಕಾಣಲು ಸಾಧ್ಯ. ಇಲ್ಲಿ ಕ್ರೀಡಾ ಸಂಕೀರ್ಣ ನಿರ್ಮಿಸಿದ ನಂತರ ಕ್ರೀಡಾಂಗಣ ಬಳಸುವ ಕ್ರೀಡಾಪಟುಗಳೇ ಇದನ್ನು ನಿರ್ವಹಣೆ ಮಾಡುವ ಹೊಣೆಗಾರಿಕೆ ಹೊರುವ ಅವಶ್ಯವಿದ್ದು, ಕ್ರೀಡಾಪ್ರೇಮಿಗಳು ಸಮಿತಿ ರಚಿಸಿ ಅಭಿವೃದ್ಧಿಪಡಿಸಬೇಕು ಎಂದರು.
ಸಮಾಜ ಕಲ್ಯಾಣ ಕಟ್ಟಡಕ್ಕೆ 70ಲಕ್ಷ ರೂ.,: ಸ್ವಂತ ಕಟ್ಟಡವಿಲ್ಲದೆ ಸಮಾಜ ಕಲ್ಯಾಣ ಇಲಾಖೆ ಆಡಳಿತ ಕಚೇರಿ ನಿರ್ಮಾಣಕ್ಕೆ 70 ಲಕ್ಷ ರೂ., ಅನುದಾನ ಬಿಡುಗಡೆಯಾಗಿದ್ದು, ಕಾಲೇಜು ಹಿಂಭಾಗದ ವಿದ್ಯಾರ್ಥಿ ನಿಲಯದ ಆವರಣದಲ್ಲಿ ಕಟ್ಟಡ ನಿರ್ಮಿಸಲಾಗುವುದು. ತಾಲೂಕಿಗೆ ಪರಿಶಿಷ್ಟ ವರ್ಗಗಳ ಇಲಾಖೆಗೆ ಈಗಾಗಲೇ ಸ್ವಂತ ಕಟ್ಟಡವಾಗಿದ್ದು, ರಾಜ್ಯಕ್ಕೆ ಪ್ರಥಮವಾಗಿರುವುದು ಹೆಮ್ಮೆಯ ವಿಚಾರ ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲ ಪೊ›.ವೆಂಕಟೇಶಯ್ಯ, ಸಿಡಿಸಿ ಉಪಾಧ್ಯಕ್ಷ ಎಚ್.ಆರ್.ಸಿದ್ದೇಗೌಡ ಸದಸ್ಯರಾದ ಜಯರಾಂ, ಮಂಜುನಾಥ್, ರಾಜರತ್ನಂ, ಶ್ರೀನಿವಾಸ್, ಕಾಲೇಜಿನ ಅಧ್ಯಾಪಕರು, ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ನಾನು ಹೆದರುವ, ಜಗ್ಗುವ, ಬಗ್ಗುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
K.S.Bhagawan ವಿವಾದ;ಮಾನ ಮರ್ಯಾದೆ ಇದ್ದರೆ ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಬೇಕು…
Udupi: ಚಾಮುಂಡಿ ಬೆಟ್ಟದ ಮೇಲೆ ಮಹಿಷ ದಸರಾ ಸರಿಯಲ್ಲ: ಸಂಸದ ಯದುವೀರ್
Mysuru ಸಾಂಸ್ಕೃತಿಕ ನಗರಿಯಲ್ಲಿ ರೇವ್ ಪಾರ್ಟಿ: ಪೊಲೀಸ್ ದಾಳಿ, 50ಕ್ಕೂ ಹೆಚ್ಚು ಮಂದಿ ಬಂಧನ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.