![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Jul 8, 2024, 12:55 AM IST
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಸದಸ್ಯ ರಾಗಲು ಬೇರೆ ಜಿಲ್ಲೆಯ ಪರಿಷತ್ ಸದಸ್ಯರು ವಾಸಸ್ಥಳ ದೃಢೀಕರಣಕ್ಕೆ ಮೈಸೂರು ವಿಳಾಸ ಕೊಡು ತ್ತಿದ್ದರು. ಈ ಮಟ್ಟಕ್ಕೆ ಇಲ್ಲಿಯ ಶಾಸಕರು ಲಾಬಿ ಮಾಡುತ್ತಾರೆ ಎಂದು ಶಾಸಕ ಹಾಗೂ ಮಾಜಿ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ.
ಮೈಸೂರಿನಲ್ಲಿ ರವಿವಾರ ಮಾತನಾಡಿದ ಅವರು, “ಮುಡಾ ಇರುವುದು ಜನ ಸಾಮಾನ್ಯರ ಅಭಿವೃದ್ಧಿಗಾಗಿ. ಆದರೆ ಇಲ್ಲಿ ಆಗುತ್ತಿರು ವುದು ಏನು? ಈ ಬೋರ್ಡ್ ವ್ಯವಸ್ಥೆ ಬದಲಾಗಬೇಕು’ ಎಂದರು.
“ಸಮಿತಿಯಲ್ಲಿ ಶಾಸಕರ ನೇಮ ಕಾತಿಯನ್ನು ರದ್ದು ಮಾಡಲು ಚಿಂತನೆ ಮಾಡಿರುವ ಸಚಿವ ಮಹದೇವಪ್ಪ ಅವರ ನಡೆಯನ್ನು ಸ್ವಾಗತಿಸುತ್ತೇನೆ. ಈ ಮೂಲಕವಾದರೂ ಮುಡಾ ಸ್ವತ್ಛವಾಗಲಿ’ ಎಂದರು.
ನಾನು ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದಾಗ ಈ ಅವ್ಯವ ಹಾರ ಗಮನಕ್ಕೆ ಬಂದಿತ್ತು. ಆಯುಕ್ತರು ಸಭೆ ಮಾಡದೆ ನಿವೇಶನಗಳನ್ನು ನೀಡಿದ್ದಾರೆ. 50:50 ಅನುಪಾತದಡಿ ನಿವೇಶನ ನೀಡುವಾಗ ಕೌನ್ಸಿಲ್ ಸಭೆಯಲ್ಲಿ ಚರ್ಚೆಗೆ ಇಡ ಬೇಕು. ಆದರೆ ಈ ನಿಯಮಗಳನ್ನು ಅಂದಿನ ಆಯುಕ್ತರು ಅನುಸರಿಸಿಲ್ಲ. ಹೀಗಾಗಿ ಅವರನ್ನು ಬದಲಾಯಿ ಸುವಂತೆ ಸೂಚಿಸಿದ್ದೆ.
ಆದರೆ ಜಾತಿಯ ಪ್ರಭಾವದಿಂದ ಅವರು ಉಳಿದುಕೊಂಡರು. ಕೋರ್ಟಿಗೂ ಹೋಗಿ ಅಧಿಕಾರವನ್ನು ಉಳಿಸಿಕೊಂಡರು. ಅವತ್ತೇ ಸರಿಯಾದ ಕ್ರಮ ಆಗಿದ್ದರೆ ಇವತ್ತು ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆಯುತ್ತಿರಲ್ಲಿಲ್ಲ. ಈಗಲಾದರೂ ಈ ಬಗ್ಗೆ ತನಿಖೆಯನ್ನು ಮಾಡಲಿ. ವ್ಯವಸ್ಥೆ ಬದಲಾಗಲಿ ಎಂದು ಆಗ್ರಹಿಸಿದರು.
ಎಸ್ಟಿಎಸ್ ಸವಾಲು
ನನ್ನ ಹೆಸರಿನಲ್ಲಿ ಅಥವಾ ಬೇನಾಮಿ ಹೆಸರಿನಲ್ಲಿ ಒಂದೇ ಒಂದು ನಿವೇಶನ ಇದ್ದರೂ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಶಾಸಕ ಎಸ್. ಟಿ. ಸೋಮಶೇಖರ್ ಸವಾಲು ಹಾಕಿದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.