ಅಸಾಮಾನ್ಯ ದೃಶ್ಯ ಸೆರೆಹಿಡಿದ ಸತ್ಯನ್‌ ಮಹಾನ್‌ ಛಾಯಾಗ್ರಾಹಕ


Team Udayavani, Jul 4, 2019, 3:00 AM IST

asamanya

ಎಚ್‌.ಡಿ.ಕೋಟೆ: ಛಾಯಾಗ್ರಾಹಕ ಟಿ.ಎಸ್‌.ಸತ್ಯನ್‌ ಸಾಮಾನ್ಯ ಜನರ ಬದುಕು ಹಾಗೂ ಅಸಾಮಾನ್ಯ ವ್ಯಕ್ತಿಗಳ ಚಿತ್ರಗಳನ್ನು ಸೊಗಸಾಗಿ ಚಿತ್ರಿಸುವ ಮೂಲಕ ಚಾರಿತ್ರಿಕ ಘಟನಾವಳಿಗಳನ್ನು ಸಾಕ್ಷಿಕರಿಸಿದ ದೇಶ ಕಂಡ ಮಹಾನ್‌ ಛಾಯಾಗ್ರಾಹಕ ಎಂದು ಅಂತಾರಾಷ್ಟ್ರೀಯ ವನ್ಯಜೀವಿ ಛಾಯಾಗ್ರಾಹಕ ಎಸ್‌.ತಿಪ್ಪೇಸ್ವಾಮಿ ಬಣ್ಣಿಸಿದರು.

ತಾಲೂಕಿನ ಹ್ಯಾಂಡ್‌ಪೋಸ್ಟ್‌ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ಹಾಗೂ ತಾಲೂಕು ಛಾಯಾಗ್ರಾಹಕರ ಸಂಘ ಸಹಯೋಗದಲ್ಲಿ ಏರ್ಪಡಿಸಿದ್ದ “ಟಿ.ಎಸ್‌.ಸತ್ಯನ್‌ ಒಂದು ನೆನಪು’ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸತ್ಯನ್‌ ಸೇವೆ: ಸತ್ಯನ್‌ ಛಾಯಾಚಿತ್ರಗಳು ಮತ್ತು ಲೇಖನಗಳು ದೇಶ ವಿದೇಶಗಳ ಪತ್ರಿಕೆಗಳಲ್ಲಿ ಪ್ರಕಟಗೊಂಡು ಪ್ರಶಂಸೆ ಪಡೆದಿವೆ. ಜೊತೆಗೆ ಇವರು ಯುನಿಸೆಫ್‌ ಸೇರಿದಂತೆ ರಾಷ್ಟ್ರ, ಅಂತಾರಾಷ್ಟ್ರೀಯ ಸಂಸ್ಥೆಗಳ ಸಲಹೆಗಾರಾಗಿ ಕಾರ್ಯನಿರ್ವಹಿಸಿದ್ದಾರೆ.

1979ರಲ್ಲಿ ವಿಶ್ವಸಂಸ್ಥೆ ಕೇಂದ್ರ ಕಚೇರಿ ನ್ಯೂಯಾರ್ಕಿನಲ್ಲಿ ಮಗುವಿನ ಅಂತಾರಾಷ್ಟ್ರೀಯ ವರ್ಷಾಚರಣೆ ಸಂದರ್ಭದಲ್ಲಿ ಇವರ ಚಿತ್ರಗಳು ಪ್ರದರ್ಶನ ಕಂಡಿರುವುದು ಹೆಮ್ಮೆಯ ಸಂಗತಿ. ಪದ್ಮಶ್ರೀ ಹಾಗೂ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿರುವ ಸತ್ಯನ್‌ ನಮ್ಮ ಮೈಸೂರಿಗರು ಎಂಬುದೇ ನಮ್ಮೆಲ್ಲರಿಗೂ ಹೆಮ್ಮೆ ಎಂದರು.

ನೈಪುಣ್ಯತೆ: ಕಸಾಪ ಜಿಲ್ಲಾಧ್ಯಕ್ಷ ಡಾ.ವೈ.ಡಿ.ರಾಜಣ್ಣ ಮಾತನಾಡಿ, ಟಿ.ಎಸ್‌.ಸತ್ಯನ್‌ ಛಾಯಾ ಚಿತ್ರಕಲೆ ಮತ್ತು ಪತ್ರಿಕೋದ್ಯಮದಲ್ಲಿ ಆಸಕ್ತಿ ಬೆಳೆಸಿಕೊಂಡು ಈ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದಾರೆ. ಯುವ ಛಾಯಾಗ್ರಾಹಕರಿಗೆ ಸತ್ಯನ್‌ ಜೀವನ, ಸಾಧನೆ ಮತ್ತು ಹೆಜ್ಜೆ ಗುರುತುಗಳನ್ನು ತಿಳಿಸಬೇಕಾಗಿದೆ.

ಛಾಯಾಗ್ರಾಹಣ ಸವಾಲಿನ ಕೆಲಸವಾದರೂ ಆಧುನಿಕತೆ ಬೆಳೆದಂತೆ ಹೊಸ ರೂಪವನ್ನು ಪಡೆದುಕೊಳ್ಳುತ್ತಿದೆ. ತಮ್ಮ ಬದುಕಿಗಾಗಿ ಛಾಯಾ ವೃತ್ತಿಯನ್ನು ಸಿಮಿತಗೊಳಿಸಿಕೊಳ್ಳದೇ, ಹಳ್ಳಿಗಾಡಿನ ಜನಜೀವನ, ವಿಶಿಷ್ಟವಾದ ಹಬ್ಬ, ಉತ್ಸವ ಮತ್ತು ಗಿರಿಜನರ ಬದಕಿನ ಕುರಿತು ಬೆಳಕು ಚೆಲ್ಲುವ ಛಾಯಾ ಚಿತ್ರಗಳನ್ನು ಸೆರೆ ಹಿಡಿಯುವ ನೈಪುಣ್ಯತೆ ಮೈಗೂಡಿಸಿಕೊಳ್ಳಿ ಎಂದು ಕಿವಿಮಾತು ಹೇಳಿದರು.

ಸತ್ಯನ್‌ ಬರೆದಿರುವ ಕಾಲಕ್ಕೆ ಕನ್ನಡಿ ಎಂಬ ಕೃತಿಯಲ್ಲಿ ಪ್ರಸಿದ್ಧ ವ್ಯಕ್ತಿಗಳ ಚಿತ್ರಲೇಖನ ಹಾಗೂ ತಾಲೂಕಿನ ಕಾಕನಕೋಟೆ ಖೆಡ್ಡಾ ಕಾರ್ಯಾಚರಣೆ ಬಗ್ಗೆ ಮನಮುಟ್ಟುವ ರೀತಿಯಲ್ಲಿ ಘಟನೆಯನ್ನು ದಾಖಲಿಸಿರುವುದನ್ನು ಪ್ರಶಂಸಿದರು.

ತಾಲೂಕು ಛಾಯಾಗ್ರಾಹಕರ ಸಂಘದ ಅಧ್ಯಕ್ಷ ಜಿ.ಕೆಂಡಗಣ್ಣ ಆರಾಧ್ಯ, ಪ್ರಧಾನಕಾರ್ಯದರ್ಶಿ ವಾದಿರಾಜ್‌, ಸಂಘದ ಸದಸ್ಯರಾದ ಸತೀಶ್‌ ಆರಾಧ್ಯ, ಮನೋಜ್‌, ನಾಗೇಶ್‌, ಸ್ವಾಮಿ, ಹೊನ್ನೆಗೌಡ, ಶಂಕರ್‌, ಹೆಚ್‌.ಕೆ.ಸುರೇಶ್‌, ನಂದಕುಮಾರ್‌ ಶೆ„ಲಿ, ನಾಗೇಂದ್ರ, ಪಾರಿಶ್ವನಾಥ್‌, ಸೂರ್ಯಕುಮಾರ್‌, ಕಾಳಾಚಾರಿ, ಕಾಶಿಮಹೇಶ್‌, ವೆಂಕಟೇಶ್‌, ಸಂತೋಷ್‌ ಆರಾಧ್ಯ, ಮೋಹನ್‌, ಬಾಲು, ರಾಜೇಶ್‌, ಶಿವಣ್ಣ, ಕಸಾಪ ತಾಲೂಕು ಅಧ್ಯಕ್ಷ ಕನ್ನಡ ಪ್ರಮೋದ ಇತರರಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.