ಹಾಸ್ಟೆಲ್‌ನಲ್ಲಿ ಓದಲು ಕರೆಂಟಿಲ್ಲ, ಸ್ನಾನ, ಶೌಚಾಲಯಕ್ಕೂ ನೀರಿಲ್ಲ!


Team Udayavani, Nov 30, 2021, 3:33 PM IST

girls hostel

ಎಚ್‌.ಡಿ.ಕೋಟೆ: ಸರ್ಕಾರಿ ಮೆಟ್ರಿಕ್‌ ನಂತರದ ಗಿರಿಜನ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಕರೆಂಟ್‌ ಕಟ್‌ ಮಾಡಿದ ಪರಿಣಾಮ ವಿದ್ಯಾರ್ಥಿನಿ ಯರು ಕಗ್ಗತ್ತಲಲ್ಲಿ ರಾತ್ರಿ ಕಳೆಯುವುದೇ ಅಲ್ಲದೆ ಶೌಚಾಲಯ, ಸ್ನಾನಕ್ಕೂ ನೀರಿಲ್ಲದೆ ಪರಿತಪಿಸುವಂತಾಗಿದೆ.

ಕೋಟೆ ಪಟ್ಟಣದ ಸರ್ಕಾರಿ ಮೆಟ್ರಿಕ್‌ ನಂತರದ ಗಿರಿಜನ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ 60 ಬಾಲಕಿಯರಿದ್ದಾರೆ. ಸ್ವಂತ ಕಟ್ಟಡ ಇಲ್ಲದ ಕಾರಣ ಬಾಡಿಗೆ ಆಧಾರದ ಮೇಲೆ ಕೊಠಡಿಯೊಂದರಲ್ಲಿ ವಿದ್ಯಾರ್ಥಿ ನಿಲಯ ಕಾರ್ಯನಿರ್ವಹಿಸುತ್ತಿದೆ. ಪ್ರತಿ ತಿಂಗಳೂ ಬಳಕೆ ಮಾಡಿದ ವಿದ್ಯುತ್‌ ಶುಲ್ಕ ಕೂಡ ತಪ್ಪದೇ ಪಾವತಿಸಿದೆ.

ಬಾಡಿಗೆ ಕಟ್ಟಡದಲ್ಲಿ ಇನ್ನಿತರ ಕೊಠಡಿ, ಮಳಿಗೆಗಳು ಇದ್ದು, ಅವರು ಬಳಕೆ ಮಾಡಿದ ವಿದ್ಯುತ್‌ ಶುಲ್ಕ ಪಾವತಿಸಿಲ್ಲ ಎಂಬ ಕಾರಣದಿಂದ ವಿದ್ಯಾರ್ಥಿನಿಲಯದ ಕರೆಂಟ್‌ ಕಟ್‌ ಮಾಡಲಾಗಿದೆ. ಒಂದೇ ಕಟ್ಟಡದ ಎಲ್ಲಾ ಪ್ರತ್ಯೇಕ ಮಳಿಗೆಗಳಿಗೂ ಪ್ರತ್ಯೇಕವಾಗಿಯೇ ಮೀಟರ್‌ ಅಳವಡಿಸಲಾಗಿದೆ ಯಾದರೂ ಒಂದೇ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದೆ.

ಭಾನುವಾರ ಮಧ್ಯಾಹ್ನದ ವೇಳೆ ವಿದ್ಯುತ್‌ ಕಡಿತಗೊಳಿಸಿರುವ ಹಿನ್ನೆಲೆಯಲ್ಲಿ ಸೋಮವಾರ ಸಂಜೆ ತನಕ ವಿದ್ಯುತ್‌ ಸಂಪರ್ಕ ಕಲ್ಪಿಸಿಲ್ಲ. ಹಾಸ್ಟೆಲ್‌ ನ ವಿದ್ಯಾರ್ಥಿನಿಯರು ಭಾನುವಾರದಿಂದ ರಾತ್ರಿ ಮೊಂಬತ್ತಿಗಳನ್ನು ಹೊತ್ತಿಸಿಕೊಂಡು ರಾತ್ರಿ ಕಳೆದಿದ್ದಾರೆ. ವಿದ್ಯುತ್‌ ಸಂಪರ್ಕ ಕಡಿತಗೊಂಡಿರುವುದರಿಂದ ಶೌಚಾಲಯದ ಬಳಕೆ, ನಿತ್ಯ ಸ್ನಾನ ಸೇರಿದಂತೆ ಇನ್ನಿ ತರ ದೈನಂದಿನ ಬಳಕೆಗೆ ನೀರಿಲ್ಲದೆ ವಿದ್ಯಾರ್ಥಿ ನಿಯರು ಪರದಾಡುವಂತಾಗಿದೆ. ನೀರೇ ಇಲ್ಲದೇ ಇರುವುದರಿಂದ ವಿದ್ಯಾರ್ಥಿನಿಲಯದ ಶೌಚಾ ಲಯ ಗಬ್ಬೆದ್ದು ನಾರುತ್ತಿದೆ.

ಇದನ್ನೂ ಓದಿ;- ಸಂವಿಧಾನ ನಮಗೆಲ್ಲ ದಾರಿದೀಪ

ಮಾಸಿಕ 35 ಸಾವಿರ ರೂ. ವಿದ್ಯುತ್‌ ಶುಲ್ಕವನ್ನು ತಪ್ಪದೇ ಪಡೆದುಕೊ ಳ್ಳುವ ಮಾಲಿಕರು ವಿದ್ಯುತ್‌ ಕಡಿತಗೊಂಡು 2 ದಿನಗಳಾದರೂ ಹಾಸ್ಟೆಲ್‌ಗೆ ಮರು ಸಂಪರ್ಕಕ್ಕೆ ತಲೆ ಕೆಡಿಸಿಕೊಂಡಿಲ್ಲ. ಯಾರೋ ಪಾವತಿಸದೇ ಉಳಿಸಿಕೊಂಡಿರುವ ವಿದ್ಯುತ್‌ ಬಾಕಿ ಹಣಕ್ಕೆ ಪ್ರತಿ ತಿಂಗಳೂ ತಪ್ಪದೇ ಹಣ ಪಾವತಿಸಿರುವುದೇ ಅಲ್ಲದೆ ಪ್ರತ್ಯೇಕ ಮೀಟರ್‌ ಅಳವಡಿಕೆಯಾಗಿದ್ದರೂ ಈ ರೀತಿ ವಿದ್ಯುತ್‌ ಕಡಿತಗೊಳಿಸುವುದು ತರವಲ್ಲ.

ಸಂಬಂಧ ಪಟ್ಟವರು ಇನ್ನಾದರೂ ಇತ್ತ ಗಮನ ಹರಿಸಿ ಯಾರದೋ ಬಾಕಿ ಹಣಕ್ಕೆ ಸಂಪೂರ್ಣ ಹಣ ಪಾವತಿಸಿರುವ ಹೆಣ್ಣು ಮಕ್ಕಳ ವಿದ್ಯಾರ್ಥಿನಿಲಯದ ವಿದ್ಯುತ್‌ ಕಡಿತಗೊಳಿಸುವುದು ಎಷ್ಟರಮಟ್ಟಿಗೆ ಸರಿ, ಗ್ರಾಮ ತೊರೆದು ಪೋಷಕರನ್ನು ಬಿಟ್ಟು ವಿದ್ಯಾರ್ಥಿನಿಲಯದಲ್ಲಿ ಉಳಿದುಕೊಂಡಿರುವ ವಿದ್ಯಾರ್ಥಿನಿಯರ ಪಾಡೇನು ಯೋಚಿಸಿ ಎಂದು ಬಾಲಕಿಯರು ಅಳಲು ತೋಡಿಕೊಂಡಿದ್ದಾರೆ.

ಮೊಂಬತ್ತಿ ಹಚ್ಚಿ ರಾತ್ರಿ ಕಳೆದಿದ್ದೇವೆ:

ಹಾಸ್ಟೆಲ್‌ನ ಬಾಲಕಿಯರ ಅಳಲು ವಿದ್ಯಾರ್ಥಿನಿಲಯಕ್ಕೆ ಭಾನುವಾರದಿಂದ ವಿದ್ಯುತ್‌ ಸಂಪರ್ಕ ಕಡಿತಗೊಳಿಸಿದ್ದಾರೆ. ಸೋಮವಾರ ಸಂಜೆಯಾದರೂ ವಿದ್ಯುತ್‌ ಸಂಪರ್ಕ ಕಲ್ಪಿಸಿಲ್ಲ, ರಾತ್ರಿಯೇನೂ ಮೊಂಬತ್ತಿ ಬೆಳಕಿನಲ್ಲಿ ದಿನ ಕಳೆದಿದ್ದಾಯಿತು. ಶೌಚಾಲಯ, ಸ್ನಾನ ಸೇರಿದಂತೆ ನಿತ್ಯ ಕರ್ಮದ ಬಳಕೆಗೆ ನೀರಿಲ್ಲದೆ ಪರದಾಡುವ ಸ್ಥಿತಿ ಇದೆ ಎಂದು ಹಾಸ್ಟೆಲ್‌ನ ವಿದ್ಯಾರ್ಥಿನಿಯರು ಅಳಲು ತೋಡಿಕೊಂಡಿದ್ದಾರೆ.

“ಬಾಲಕಿಯರ ವಿದ್ಯಾರ್ಥಿನಿಲಯದ ವಿದ್ಯುತ್‌ ಸಂಪರ್ಕ ಕಡಿತಗೊಳಿಸಿರುವ ವಿಚಾರ ನನಗೆ ತಿಳಿದಿಲ್ಲ. ವಿದ್ಯಾರ್ಥಿನಿಲಯದ ವಿದ್ಯುತ್‌ ಶುಲ್ಕ ಸಂಪೂರ್ಣವಾಗಿ ನಾವು ಪಾವತಿಸಿದ್ದೇವೆ. ಹಾಸ್ಟೆಲ್‌ ಮೇಲ್ವಿಚಾರಕರಿಂದ ಮಾಹಿತಿ ಪಡೆದುಕೊಂಡು ಕ್ರಮವಹಿಸುತ್ತೇನೆ.” ನಾರಾಯಣಸ್ವಾಮಿ, ತಾಲೂಕು ಗಿರಿಜನ ಅಭಿವೃದ್ಧಿ ಅಧಿಕಾರಿ.

– ಎಚ್‌.ಬಿ.ಬಸವರಾಜು

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.