ಮೈಸೂರಲ್ಲೂ “ಜಾರಕಿಹೊಳಿ’ ಸಂಚಲನ; ಸಿಎಂ ಬದಲಾವಣೆ ಚರ್ಚೆ ಹಿನ್ನೆಲೆ ತೀವ್ರ ಕುತೂಹಲ
Team Udayavani, Oct 9, 2024, 6:37 AM IST
ಮೈಸೂರು: ಮುಖ್ಯಮಂತ್ರಿ ಬದಲಾವಣೆ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಸಚಿವ ಸತೀಶ್ ಜಾರಕಿಹೊಳಿಯವರು ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆಗೆ ದಿಢೀರ್ ಭೇಟಿ ನೀಡಿ ಸಚಿವರು, ಸ್ಥಳೀಯ ಶಾಸಕರೊಂದಿಗೆ ಮಾತುಕತೆ ನಡೆಸಿರುವುದು ತೀವ್ರ ಕುತೂಹಲ ಕೆರಳಿಸಿದೆ.
ಮಂಗಳವಾರ ಬೆಳಗ್ಗೆ ಮೈಸೂರಿಗೆ ಆಗಮಿಸಿದ ಅವರು ಜಿಲ್ಲಾ ಉಸ್ತುವಾರಿ ಸಚಿವ ಡಾ| ಎಚ್.ಸಿ. ಮಹದೇವಪ್ಪ, ಶಾಸಕರಾದ ಕೆ. ಹರೀಶ್ ಗೌಡ, ಡಿ. ರವಿಶಂಕರ್, ಅನಿಲ್ ಚಿಕ್ಕಮಾದು, ಮುಡಾ ಅಧ್ಯಕ್ಷ ಮರಿಗೌಡ, ಮಾಜಿ ಶಾಸಕ ಎಂ.ಕೆ. ಸೋಮಶೇಖರ್ ಜತೆಗೆ ಚರ್ಚೆ ನಡೆಸಿ ಗಮನ ಸೆಳೆದರು.
ಕುತೂಹಲ ಕೆರಳಿಸಿದ ಭೇಟಿ
ದೆಹಲಿ ಪ್ರವಾಸದ ಅನಂತರ ಎಲ್ಲ ನಾಯಕರನ್ನು ಭೇಟಿ ಮಾಡುತ್ತಿರುವ ಸತೀಶ್ ಜಾರಕಿಹೊಳಿ ಮಂಗಳವಾರ ಮೈಸೂರು ಪ್ರವಾಸ ಕೈಗೊಂಡು ಹಲವರನ್ನು ಭೇಟಿಯಾಗಿದ್ದಾರೆ. ಇದಲ್ಲದೆ ಗೃಹ ಸಚಿವ ಜಿ. ಪರಮೇಶ್ವರ್ ಕೂಡ ಮೈಸೂರು ಪ್ರವಾಸ ಹಮ್ಮಿಕೊಂಡಿದ್ದು, ಮಂಗಳವಾರ ರಾತ್ರಿ ಸಚಿವ ಡಾ| ಮಹದೇವಪ್ಪ ಜತೆಗೆ ಸಭೆ ನಡೆಸುವ ಸಾಧ್ಯತೆಗಳಿದ್ದು, ಸತೀಶ್ ಜಾರಕಿಹೊಳಿ ನಡೆ ಕುತೂಹಲ ಕೆರಳಿಸಿದೆ.
ಕಾರ್ಯಕರ್ತನ ಮನೆಗೆ ಭೇಟಿ
ಮಂಗಳವಾರ ಬೆಳಗ್ಗೆ ಮೈಸೂರಿಗೆ ಆಗಮಿಸಿದ ಸತೀಶ್ ಮೈಸೂರು ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಲೋಕೇಶ್ ಪ್ರಿಯಾ ಅವರ ನಿವಾಸಕ್ಕೆ ತೆರಳಿ ಉಪಾಹಾರ ಸೇವಿಸಿದರು. ಈ ವೇಳೆ ಶಾಸಕ ಅನಿಲ್ ಚಿಕ್ಕಮಾದು ಆಗಮಿಸಿ ಸತೀಶ್ ಜತೆಗೆ ಮಾತಕತೆ ನಡೆಸಿದರು.
ಬಳಿಕ ಚಾಮರಾಜ ನಗರ ಶಾಸಕ ಕೆ. ಹರೀಶ್ ಗೌಡ ಅವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದರು. ಈ ವೇಳೆ ಕೆ.ಆರ್. ನಗರ ಶಾಸಕ ಡಿ. ರವಿಶಂಕರ್, ಮುಡಾ ಅಧ್ಯಕ್ಷ ಮರಿಗೌಡ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
National Film Award: ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಪ್ರದಾನ
Price Hike: ಕಾಫಿ ಪ್ರಿಯರಿಗೆ ಕಹಿ ಸುದ್ದಿ, ಕಾಫಿ ಪುಡಿ ಬೆಲೆ 100 ರೂ. ಹೆಚ್ಚಳ
Donation: ರಾಮನಗರದ ಮಠಕ್ಕೆ ರಾಜಸ್ಥಾನದ ಉದ್ಯಮಿಯಿಂದ 3 ಸಾವಿರ ಎಕರೆ ಭೂಮಿ ದಾನ!
Koppal: ಸಿಎಂ ವಾಹನ ಸಂಚಾರಕ್ಕೆ ಅಡ್ಡಿ: ಶಾಸಕ ಜನಾರ್ದನ ರೆಡ್ಡಿ ರೇಂಜ್ ರೋವರ್ ಕಾರು ವಶ
Internal Reservation: ಬಸವರಾಜ್ ಬೊಮ್ಮಾಯಿ ಅವಧಿಯ ಒಳಮೀಸಲಿಗೆ ಬಿಜೆಪಿ ಒತ್ತಡ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Power…; ವಿನೇಶ್ ಫೋಗಾಟ್ ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ ಬ್ರಜ್ ಭೂಷಣ್!
Navratri special: ಹೆಣ್ಣು ಅಬಲೆಯೇ? ಹಾಗೆಂದು ನಿರ್ಧರಿಸಿದ್ಯಾರು? ಹೆಣ್ಣಾ ಅಥವಾ..
Famous Godesess Temple: ಹಿಂದೂ ನವರತ್ನ ದೇವಾಲಯ ದಕ್ಷಿಣೇಶ್ವರ ಕಾಳಿ ಮಂದಿರ
Cast Census: ಕಾಯ್ದೆ ಪ್ರಕಾರ ಸರಕಾರ ಜಾತಿಗಣತಿ ವರದಿ ಒಪ್ಪಬೇಕು
Haryana Election Result: ಹರಿಯಾಣದಲ್ಲಿ ಅಭಿವೃದ್ಧಿ ಗ್ಯಾರಂಟಿ ಗೆದ್ದಿದೆ: ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.