Server Problem, ರೇಷನ್ ಗಾಗಿ ದಿನಗಟ್ಟಲೆ ಕಾದು ಕುಳಿತ ಗ್ರಾಹಕರು


Team Udayavani, Jun 27, 2023, 12:05 PM IST

Server Problem, ರೇಷನ್ ಗಾಗಿ ದಿನಗಟ್ಟಲೆ ಕಾದು ಕುಳಿತ ಗ್ರಾಹಕರು

ಪಿರಿಯಾಪಟ್ಟಣ:ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆಯ ಅನ್ನ ಭಾಗ್ಯ ಮತ್ತು ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ ಅನ್ನ ಯೋಜನೆಗಳ ಅನ್ನಭಾಗ್ಯ ಯೋಜನೆಗೆ ಸರ್ವರ್ ಭೂತ ವಕ್ಕರಿಸಿ ಕಳೆದ 15 ದಿನಗಳಿಂದ ಸರ್ವರ್ ಸಮಸ್ಯೆಯಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಸಾಮಗ್ರಿ ಪಡೆಯಲು ಗ್ರಾಹಕರು ದಿನಗಟ್ಟಲೇ ಕಾದು ಕುಳಿತು ಪರದಾಡುವಂತಾಗಿದೆ.

ಸರ್ಕಾರ ಕಾಳಸಂತೆಯಲ್ಲಿ ಮಾರಾಟವಾಗುವ ಪಡಿತರ ಸಾಮಗ್ರಿಗಳಿಗೆ ಲಗಾಮು ಹಾಕುವ, ಪಡಿತರ ಸೋರಿಕೆ ಹಾಗೂ ಬೋಗಸ್ ಕಾರ್ಡ್ ತಡೆಯುವ ಉದ್ದೇಶದಿಂದ ಆನ್ಲೈನ್ ಬಯೋಮೆಟ್ರಿಕ್ ವ್ಯವಸ್ಥೆಗೆ ಅವಕಾಶ ಕಲ್ಪಿಸಿ ಈ ಎಲ್ಲಾ ಅವಾಂತರಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಆಹಾರ ಇಲಾಖೆ ಮುಂದಾಗಿದೆ. ಆದರೆ ಕಳೆದ 15 ದಿನಗಳಿಂದಲೂ ಕೇವಲ ಪಿರಿಯಾಪಟ್ಟಣ ಮಾತ್ರವಲ್ಲಾ, ರಾಜ್ಯದಾದ್ಯಂತ ಈ ಸಮಸ್ಯೆ ಎದುರಾಗಿ ಪಡಿತರ ಸಾಮಗ್ರಿ ಪಡೆಯಲು ಹೆಣಗಾಡುವಂತಾಗಿದೆ.ಯಾವುದೇ ಗ್ರಾಹಕರು ಆಯಾಯಾ ತಿಂಗಳ ಪಡಿತರ ಸಾಮಗ್ರಿಗಳನ್ನು ಆಯಾಯಾ ತಿಂಗಳಲ್ಲಿಯೇ ಪಡೆಯಬೇಕು ಇಲ್ಲದಿದ್ದರೆ ಅವರು ಈ ಸೌಲಭ್ಯಗಳಿಂದ ವಂಚಿತರಾಗುತ್ತಾರೆ. ಆದರೆ ಜೂನ್ ತಿಂಗಳು ಮುಗಿಯುತ್ತಾ ಬಂದರೂ ಶೇ. 50 ರಷ್ಟು ಗ್ರಾಹಕರಿಗೆ ಪಡಿತರ ಸಾಮಗ್ರಿ ನೀಡಲು ಸಾಧ್ಯವಾಗಿಲ್ಲ ಈ ಹಿಂದೆ ಇವರು ಆಹಾರ ಧಾನ್ಯ ಪಡೆಯಲು ಎಷ್ಟೇ ಸರತಿ ಸಾಲಿನಲ್ಲಿ ನಿಂತರೂ ಒಂದು ದಿನದಲ್ಲಿ ಅವರು ಪಡಿತರ ಸಾಮಗ್ರಿ ಕೈ ಸೇರಿ ಮನೆಗೆ ಸಾಮಾಗ್ರಿಗಳು ಕೊಂಡೊಯ್ಯುತ್ತಿದ್ದರು ಆದರೆ ಜೂನ್ ತಿಂಗಳಲ್ಲಿ ಸರ್ವರ್ ಸಮಸ್ಯೆಯಿಂದ ಪ್ರತಿ ದಿನ ಬಂದು ಬಂದು ಹೋಗುತ್ತಿದ್ದರೂ ಸಮಸ್ಯೆ ಮಾತ್ರ ಮುಗಿದಿಲ್ಲ ಎನ್ನುತ್ತಾರೆ ಗ್ರಾಹಕರು.

ತಾಲೂಕಿನಲ್ಲಿ 72 ಸಾವಿರ ಬಿಪಿಎಲ್ ಕುಟುಂಬಗಳು, 4 ಸಾವಿರ ಎಪಿಎಲ್ ಕುಟುಂಬಗಳು ಸೇರಿದಂತೆ ಒಟ್ಟು 76 ಸಾವಿರ ಕ್ಕೂ ಹೆಚ್ಚು ಅನ್ನಭಾಗ್ಯ ಯೋಜನೆಯ ಫಲಾನುಭವಿಗಳು 89 ನ್ಯಾಯಬೆಲೆ ಅಂಗಡಿಗಳಿಂದ ಪಡಿತರ ಆಹಾರ ಸಾಮಗ್ರಿಗಳನ್ನು ಪಡೆಯುತ್ತಿದ್ದಾರೆ.1,15,79,081 ಬಿಪಿಎಲ್, 23,87,956 ಎಪಿಎಲ್ ಹಾಗೂ 10,90,563 ಅಂತ್ಯೋದಯ ಸೇರಿ ಒಟ್ಟು 1,50,57,600 ಕಾರ್ಡ್‌ಗಳಿವೆ. ಪ್ರತಿ ತಿಂಗಳು 20,168 ನ್ಯಾಯಬೆಲೆ ಅಂಗಡಿಗಳಿಂದ ಯೋಜನೆಯಡಿ ಈ ಎಲ್ಲ ಕಾರ್ಡ್‌ದಾರರಿಗೆ ಪಡಿತರ ವಿತರಣೆ ಮಾಡಲಾಗುತ್ತಿದೆ. ಆದರೆ ಸರ್ವರ್ ಸಮಸ್ಯೆಯಿಂದ ಪ್ರತಿ ನಿತ್ಯ ನ್ಯಾಯಬೆಲೆ ಅಂಗಡಿಗಳ ಮುಂದೆ ತಮ್ಮ ಕೆಲಸ ಬಿಟ್ಟು ನೂರಾರು ಜನರು ಬಯೋಮೆಟ್ರಿಕ್ ನೀಡಲು ಸರದಿ ಸಾಲಿನಲ್ಲಿ ನಿಂತುಕೊಂಡು ಕಾಯುವಂತಾಗಿದೆ. ಪ್ರತಿದಿನ ಎಷ್ಟೇ ಜನ ಸರತಿ ಸಾಲಿನಲ್ಲಿ ನಿಂತರೂ ಕೇವಲ 7 8 ಕಾರ್ಡ್‌ದಾರರ ಬಯೋ ಮಾತ್ರ ತೆಗೆದುಕೊಳ್ಳಲಾಗುತ್ತಿದೆ. ಉಳಿದವರು ಮನೆಗೆ ವಾಪಸ್ ತೆರಳುತ್ತಿದ್ದಾರೆ. ಒಟ್ಟಿನಲ್ಲಿ ದೈನಂದಿನ ಕೆಲಸ ಬಿಟ್ಟು ಕಾರ್ಡ್‌ದಾರರು ಅಂಗಡಿಗಳ ಮುಂದೆ ದಿನಗಟ್ಟಲೆ ಕಾಯುವಂತಾಗಿದೆ.

ಆಹಾರ ಇಲಾಖೆ ಸರ್ವರ್ ಅನ್ನು ಸರ್ಕಾರದ 21 ಇಲಾಖೆಗಳು ಅವಲಂಬಿತವಾಗಿವೆ. ಹೀಗಾಗಿ, ಪಡಿತರ ವಿತರಣೆಗೆ ಪದೇಪದೆ ಸರ್ವರ್ ಸಮಸ್ಯೆ ಎದುರಾಗುತ್ತಿದೆ. ಈ ಸಮಸ್ಯೆಯನ್ನು ಬಗೆಹರಿಸಲು ಮೊಬೈಲ್ ಒಟಿಪಿ ಇಲ್ಲವೆ ಚೆಕ್‌ಲೀಸ್ಟ್ ಮೂಲಕ ವಿತರಣೆಗೆ ಅವಕಾಶ ನೀಡಬೇಕು. ಬರುವ ಬಜೆಟ್‌ನಲ್ಲಿ ನ್ಯಾಯಬೆಲೆ ಅಂಗಡಿಗಳಲ್ಲಿ ಎಣ್ಣೆ, ಉಪ್ಪು, ಸೊಪ್ಪು ಸೇರಿ ದಿನ ಬಳಕೆ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡಬೇಕು.
-ಚೌತಿ ಮಲ್ಲಣ್ಣ
ಗ್ರಾಹಕ

ಅನ್ನಭಾಗ್ಯ ಯೋಜನೆಯಡಿ ಪಡಿತರ ಸಾಮಗ್ರಿ ಪಡೆಯಲು ನಿಗದಿಪಡಿಸಿರುವ ಬಯೋಮೆಟ್ರಿಕ್ ಹಾಗೂ ಸರ್ವರ್ ಸಮಸ್ಯೆ ಬಗೆಯರಿಯದಿದ್ದರೆ ಇವುಗಳ ಬದಲು ಮೊಬೈಲ್ ಒಟಿಪಿ ಇಲ್ಲವೆ ಚೆಕ್‌ಲೀಸ್ಟ್ ಮೂಲಕ ಲಾನುಭವಿಗೆ ಪಡಿತರ ವಿತರಿಸಲು ಅವಕಾಶ ನೀಡಬೇಕು.
-ಬಿ.ವಿ.ಮಂಜುನಾಥ್ ಬೆಟ್ಟದಪುರ ಗ್ರಾಹಕ

-ಪಿ.ಎನ್.ದೇವೇಗೌಡ

ಟಾಪ್ ನ್ಯೂಸ್

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ ಮಹೇಶ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

22-hunsur-1

Hunsur: ಕಾರು ಪಲ್ಟಿಯಾಗಿ ಎಳನೀರು ವ್ಯಾಪಾರಿ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.