ಕೊಳಚೆ ನೀರಿನ ದುರ್ನಾತ ತಾಳದೇ ಅಂಗಡಿ ಬಂದ್‌


Team Udayavani, Apr 25, 2022, 2:21 PM IST

ಕೊಳಚೆ ನೀರಿನ ದುರ್ನಾತ ತಾಳದೇ ಅಂಗಡಿ ಬಂದ್‌

ನಂಜನಗೂಡು: ಕೊಳಚೆ ನೀರಿನ ದುರ್ನಾತ ತಡೆಯ ಲಾಗದೇ ನಗರದಲ್ಲಿನ ಖಾಸಗಿ ಬಸ್‌ ನಿಲ್ದಾಣದ 15ಕ್ಕೂ ಹೆಚ್ಚು ಅಂಗಡಿಗಳು ವಾರದಿಂದ ಬಾಗಿಲು ಮುಚ್ಚಿವೆ.

ನಗರದ ಡಾ.ಬಿ.ಆರ್‌.ಅಂಬೇಡ್ಕರ್‌ ವೃತ್ತದ ಬಳಿ ಇರುವ ನಿಲ್ದಾಣವು ಬೆಳಗ್ಗಿನಿಂದ ಸಂಜೆವರೆಗೂ ಜನಜಂಗುಳಿಯಿಂದ ಕೂಡಿರುತ್ತಿದೆ. ಇಲ್ಲಿಗೆ ದಿನಕ್ಕೆ 50ಕ್ಕೂ ಹೆಚ್ಚು ಖಾಸಗಿ ಬಸ್‌ಗಳು ತಾಲೂಕಿನ ಕೌಲಂದೇ ಹೋಬಳಿ, ಬಿಳಗರೆ, ತಿ.ನರಸೀಪುರ, ಕೊಳ್ಳೇಗಾಲ, ಬಿಳಿಗಿರಿರಂಗನಬೆಟ್ಟ, ಮಹದೇಶ್ವರಬೆಟ್ಟ, ಚಾಮರಾಜ ನಗರದತ್ತ ಸಂಚರಿಸುತ್ತವೆ. ನೂರಾರು ಪ್ರಯಾಣಿಕರು, ಪ್ರವಾಸಿಗರು ಇಲ್ಲಿಯೇ ಬಸ್‌ ಹತ್ತಲು ಬರುತ್ತಾರೆ.

ಮಳೆ ನೀರಿನ ಜೊತೆ ಕೊಳಚೆ: ಸದಾ ಜನರಿಂದ ಕೂಡಿರುವ ಪ್ರದೇಶದಲ್ಲಿ ಕಳೆದ ವಾರ ಮಳೆ ಬಂದಾಗ ಶೇಖರಣೆ ಆದ ನೀರಿಗೆ ಕೊಳಚೆ ನೀರು, ಕಸ, ಮರದ ಎಲೆ ಸೇರಿ ದುರ್ವಾಸನೆ ಬೀರುತ್ತಿದೆ. ಇದನ್ನು ತಾಳಲಾರದೇ ಇಲ್ಲಿದ್ದ ಗೂಡಂಗಡಿಗಳು ಕೆಲ ದಿನಗಳಿಂದ ಬಾಗಿಲು ಹಾಕಿವೆ. ಸುತ್ತಲಿನ ಜನರು ಮೂಗು ಮುಚ್ಚಿಕೊಂಡು ಸಂಚಾರ ಮಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.

ಮಡುಗಟ್ಟಿ ನಿಂತಿರುವ ಕೊಳಚೆ ನೀರು: ನಿಲ್ದಾಣವು ನಗರಸಭೆಗೆ ಸೇರಿದೆ. ಟೆಂಡರ್‌ದಾರರು ಇಲ್ಲಿನ ಗೂಡಂ ಗಡಿ ಮಾಲಿಕರಿಂದ ತೆರಿಗೆ ವಸೂಲು ಮಾಡುತ್ತಾರೆ. ಖಾಸಗಿ ಬಸ್‌ಗಳಿಂದಲೂ ನಗರಸಭೆಗೆ ವಾರ್ಷಿಕ ಲಕ್ಷಾಂ ತರ ರೂ. ವರಮಾನವಿದೆ. ಆದರೂ, ಮಡುಗಟ್ಟಿ ನಿಂತಿರುವ ಕೊಳಚೆ ನೀರು ಸರಾಗವಾಗಿ ಹರಿಯುತ್ತಿಲ್ಲ.

ಅಧಿಕಾರಿಗಳ ಗಮನಕ್ಕೆ ತಂದಿದ್ದೇವೆ: ಇಲ್ಲಿನ ದುರ್ನಾತ ತಪ್ಪಿಸಲು ಕ್ರಮ ಕೈಗೊಳ್ಳುವಂತೆ ತಾವು ಈಗಾಗಲೇ ನಗರಸಭೆ ಅಧಿಕಾರಿಗಳನ್ನು ಒತ್ತಾಯಿಸಿರುವುದಾಗಿ ಈ ಪ್ರದೇಶದ ನಗರಸಭಾ ಸದಸ್ಯೆ ವಸಂತ ನುಡಿದರು.

ಶೀಘ್ರದಲ್ಲೇ ಕೊಳಚೆ ನೀರು ಹೊರಹೋಗುವಂತೆ ಮಾಡಲಾಗುವದು. ಅಲ್ಲಿಂದ ಮುಂದಿನ ಚರಂಡಿವರಿಗೆ ಕೊಳವೆ ಜೋಡಿಸಿ ದುರ್ನಾತ ತಪ್ಪಿಸಲಾಗುವುದು. – ಶ್ರೀನಿವಾಸ, ಎಇ ನಗರಸಭೆ.

ಮಳೆ ಬಂದರೆ ಸಾಕು ರೈಲ್ವೆ ನಿಲ್ದಾಣ ದ ಕೊಳಚೆ ನೀರು ಇಲ್ಲಿಗೆ ಬಂದು ಸೇರುತ್ತದೆ. ನಾವು ಸಹ ಸಾಕಷ್ಟು ಬಾರಿ ಕೊಳಚೆ ನೀರು ಹೊರಹಾಕುವ ಕೆಲಸ ಮಾಡಿದ್ದೇವೆ. ಇದಕ್ಕೆ ಶಾಶ್ವತ ಪರಿಹಾರ ರೂಪಿಸಬೇಕಿದೆ. ರೈಲ್ವೆ ಇಲಾಖೆಯವರ ಅಸಹಕಾರದಿಂದ ವಿಳಂಬವಾಗುತ್ತಿದೆ. – ಮೈತ್ರಿದೇವಿ, ನಗರಸಭೆ ಆರೋಗ್ಯ ವಿಭಾಗಾಧಿಕಾರಿ.

ನಗರಸಭೆ ಅಧಿಕಾರಿಗಳು ಐದು ನಿಮಿಷ ನಿಲ್ದಾಣದಲ್ಲಿ ನಿಂತರೆ ಇಲ್ಲಿನ ಕಷ್ಟ ಏನೆಂಬುದು ಅವರಿಗೆ ತಿಳಿಯುತ್ತದೆ. ದುರ್ನಾತ ತಾಳಲಾರದೇ ಅಂಗಡಿಗಳನ್ನು ಬಂದ್‌ ಮಾಡಿದ್ದೇವೆ. ಇದರಿಂದ ನಮಗಷ್ಟೇ ಅಲ್ಲ, ಪ್ರಯಾಣಿಕರಿಗೂ ತೊಂದರೆ ಆಗಿದೆ. -ಪುಟ್ಟಮಂಚಯ್ಯ, ಗೂಡಂಗಡಿ ಮಾಲಿಕ.

ನಗರಸಭೆಗೆ ವಾರ್ಷಿಕವಾಗಿ 58,000 ರೂ. ಬಸ್‌ ಕಂದಾಯ ಪಾವತಿಸುತ್ತೇವೆ. ಪ್ರತಿ ದಿನ ನೂರಾರು ಪ್ರಯಾಣಿಕರು ಇಲ್ಲಿ ಬಂದು ಹೋಗುತ್ತಾರೆ. ಈ ಖಾಸಗಿ ಬಸ್‌ ನಿಲ್ದಾಣದ ಅವ್ಯವಸ್ಥೆ ಹೇಳತೀರದು. ಇಲ್ಲಿನ ದುರ್ನಾತದ ಬಗ್ಗೆ ದೂರು ನೀಡಿದ್ದರೂ ಪ್ರಯೋಜನವಾಗಿಲ್ಲ. -ಪುಟ್ಟಮಾದಯ್ಯ, ಅಧ್ಯಕ್ಷ, ಖಾಸಗಿ ಬಸ್‌ಗಳ ಏಜೆಂಟರ ಸಂಘ.

 

-ಶ್ರೀಧರ ಆರ್‌.ಭಟ್‌

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.