ಪ್ರಕೃತಿ ಚಿಕಿತ್ಸೆ ಪಡೆಯಲಿರುವ ಸಿದ್ದರಾಮಯ್ಯ
Team Udayavani, Jun 14, 2018, 7:15 AM IST
ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ಜೂನ್ 16ರಂದು ದಾಖಲಾಗಲಿದ್ದಾರೆ.
ಸಿದ್ದರಾಮಯ್ಯ ಅವರು ಚಿಕಿತ್ಸಾ ಕೇಂದ್ರಕ್ಕೆ ದಾಖಲಾಗುವ ಸುದ್ದಿ ತಿಳಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಅವರು ದೂರವಾಣಿ ಮೂಲಕ ಸಿದ್ದರಾಮಯ್ಯ ಅವರನ್ನು ಸಂಪರ್ಕಿಸಿ ಮಾತುಕತೆ ನಡೆಸಿದರು.
ಚುನಾವಣೆಯ ಬಳಿಕ ಚಿಕಿತ್ಸೆ ಪಡೆಯುವ ನಿರ್ಧಾರ ಮಾಡಿದ್ದೆ. ಈ ಹಿನ್ನೆಲೆಯಲ್ಲಿ ಬರುತ್ತಿದ್ದೇನೆ 10ರಿಂದ 12 ದಿನಗಳ ಕಾಲ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ಚಿಕಿತ್ಸೆಗೆ ಒಳಗಾಗುತ್ತೇನೆಂದು ಸಿದ್ದರಾಮಯ್ಯ ಅವರು ವೀರೇಂದ್ರ ಹೆಗ್ಗಡೆಯವರಿಗೆ ತಿಳಿಸಿದರು.
ಸಿದ್ದರಾಮಯ್ಯ ಅವರು ಈ ಹಿಂದೆಯೂ ಹಲವಾರು ಬಾರಿ ಚುನಾವಣೆಗಳು ಮುಗಿದ ಬಳಿಕ ತಪ್ಪದೇ ಈ ಚಿಕಿತ್ಸಾ ಕೇಂದ್ರಕ್ಕೆ ತೆರಳಿ ಚಿಕಿತ್ಸೆ ಪಡೆದಿದ್ದರು. ಈ ಬಾರಿಯ ಚುನಾವಣೆಯಲ್ಲಿಯೂ ಇಡೀ ರಾಜ್ಯ ಸುತ್ತಿ ದಣಿದಿರುವ ಸಿದ್ದರಾಮಯ್ಯ ಅವರು ಪ್ರಕೃತಿ ಚಿಕಿತ್ಸೆಯನ್ನು ಪಡೆಯಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ
BJP Meeting: ದಾವಣಗೆರೆಯಲ್ಲಿ ಯತ್ನಾಳ್, ರಮೇಶ್ ಜಾರಕಿಹೊಳಿ ಇಂದು ಮಹತ್ವದ ಸಭೆ
Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.