ಕಾಲಮಿತಿಯಲ್ಲಿ ಜನರ ಸಮಸ್ಯೆ ಪರಿಹರಿಸಿ


Team Udayavani, Sep 12, 2019, 3:00 AM IST

kalamiti

ಹುಣಸೂರು: ರಸ್ತೆಯಲ್ಲೇ ಮನೆ ನಿರ್ಮಾಣ, ಅನಧಿಕೃತವಾಗಿ ಟವರ್‌ ಅಳವಡಿಕೆ, ಅಕ್ರಮ ಖಾತೆ, ದೊಂಬರ ಕಾಲೋನಿಯವರಿಗೆ ನಿವೇಶನ ವಿತರಣೆ ವಿಳಂಬ ಮತ್ತಿತರ ಅವ್ಯವಸ್ಥೆ ಕುರಿತು ಲೋಕಾಯುಕ್ತ ಎಸ್ಪಿ ಕೆ.ಎನ್‌.ಮಾದಯ್ಯ ಅವರಿಗೆ ಸಾರ್ವಜನಿಕರು ದೂರು ನೀಡಿದರು.

ನಗರದ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ಲೋಕಾಯುಕ್ತ ಎಸ್ಪಿ ನೇತೃತ್ವದಲ್ಲಿ ಬುಧವಾರ ನಡೆದ ದೂರು ಸ್ವೀಕಾರ ಮತ್ತು ವಿಚಾರಣೆ ವೇಳೆ ಸಾರ್ವಜನಿಕರು ಇಲ್ಲಿನ ನಗರಸಭೆ ವಿರುದ್ಧ ದೂರುಗಳ ಸುರಿಮಳೆಗೈದರು. ಇದಕ್ಕೆ ಪ್ರತಿಕ್ರಿಯಿಸಿದ ಎಸ್ಪಿ ಮಾದಯ್ಯ, ಆಯಾ ಇಲಾಖೆಯ ಅಧಿಕಾರಿಗಳನ್ನು ಕರೆಸಿ ಮಾಹಿತಿ ಪಡೆದು ಕಾಲಮಿತಿಯೊಳಗೆ ಸಮಸ್ಯೆ ಬಗೆಹರಿಸುವಂತೆ ನಗರಸಭೆ ಆಯುಕ್ತರಿಗೆ ತಾಕೀತು ಮಾಡಿದರು.

ರಸ್ತೆಯಲ್ಲೇ ಮನೆ: ಮಾರುತಿ ಬಡಾವಣೆಯ ರಸ್ತೆಯಲ್ಲೇ ವ್ಯಕ್ತಿಯೊಬ್ಬರು ಮನೆ ನಿರ್ಮಿಸಿದ್ದಾರೆ. ಈ ಬಗ್ಗೆ ನ್ಯಾಯಾಲಯ ತೆರವಿಗೆ ಆದೇಶಿಸಿದ್ದರೂ ನಗರಸಭೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ನಾಗರಿಕರು ದೂರು ನೀಡಿದರು.

ಟವರ್‌ ತೆರವುಗೊಳಿಸಿ: ಕರವೇ ಅಧ್ಯಕ್ಷ ಪುರುಷೋತ್ತಮ್‌ ಮಾತನಾಡಿ, ಸಂತೆ ಮಾಳವನ್ನು ಒತ್ತುವರಿ ಮಾಡಿಕೊಂಡಿರುವ ಪ್ರಭಾವಿಯೊಬ್ಬರು ಮನೆ ಮೇಲೆ ಅಕ್ರಮವಾಗಿ ಮೊಬೈಲ್‌ ಟವರ್‌ ಅಳವಡಿಸಿಕೊಂಡಿದ್ದಾರೆ. ಈ ಕುರಿತು ನಗರಸಭೆಗೆ ಹಲವಾರು ಬಾರಿ ದೂರು ನೀಡಿ ಪ್ರತಿಭಟಿಸಿದ್ದರೂ ನಗರಸಭಾ ಆಯುಕ್ತರು ಸುಳ್ಳು ಭರವಸೆ ನೀಡುತ್ತಿದ್ದಾರೆ. ಸಾರ್ವಜನಿಕರಿಗೆ ತೊಂದರೆಯಾಗಿರುವ ಟವರ್‌ ಅನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿದರು.

ಅಕ್ರಮ ಖಾತೆ ರದ್ದಾಗಲಿ: ಮಾರುತಿ ಬಡಾವಣೆಯ ಪ್ಯಾಟ್ರಿಕ್‌ರವರು ನಮಗೆ ಸೇರಿದ ಜಾಗದಲ್ಲಿ ರಸ್ತೆ ನಿರ್ಮಿಸಿದ್ದು, ತೆರವುಗೊಳಿಸಿರೆಂದರೂ ಸ್ಪಂದಿಸುತ್ತಿಲ್ಲ. ಚಿಕ್ಕ ಹುಣಸೂರಿನ ಶಿವರಾಂ ತಮಗೆ ಸೇರಿದ ಒಂಟಿಬೋರೆಪಾಳ್ಯ ನಿವೇಶನವನ್ನು ನಗರಸಭೆ ಅಧಿಕಾರಿಗಳು ಮತ್ತೂಬ್ಬರಿಗೆ ಖಾತೆ ಮಾಡಿಕೊಟ್ಟಿದ್ದಾರೆ. ಈ ಬಗ್ಗೆ ಸೂಕ್ತ ದಾಖಲಾತಿ ನೀಡಿದರೂ ಲೋಕಾಯುಕ್ತ ಪೊಲೀಸರೇ ಕ್ರಮವಹಿಸುತ್ತಿಲ್ಲ ಎಂದು ಅವಲತ್ತುಕೊಂಡರು.

ಉದಯ ನಗರದ ವೆರೋನಿಕಾ ನಿರ್ಮಲಾ, ನಿವೇಶನಕ್ಕಾಗಿ ನಗರಸಭೆಗೆ ಹತ್ತಾರು ಬಾರಿ ಮನವಿ ಸಲ್ಲಿಸಿದ್ದರೂ ಈವರೆವಿಗೂ ಮಂಜೂರಾಗಿಲ್ಲ ಎಂದು ಅಳಲು ತೋಡಿಕೊಂಡರು. ನಗರದ ರಾಜಲಕ್ಷ್ಮೀ ವುಡ್‌ ಇಂಡಸ್ಟ್ರೀಸ್‌ ಸ್ಥಳಾಂತರಕ್ಕೆ ಅರಣ್ಯಇಲಾಖೆ ಅನುಮತಿ ನೀಡದೆ ಸತಾಯಿಸುತ್ತಿದೆ ಎಂದು ಧನರಾಜ್‌ ದೂರಿದರೆ, ಹೈರಿಗೆಯ ಮಹೇಶ್‌, ಮೀನುಗಾರಿಕೆ ಸಹಕಾರ ಸಂಘದಲ್ಲಿ ಸದಸ್ಯತ್ವ ನೀಡುತ್ತಿಲ್ಲ ಎಂದರು.

ತಾಲೂಕು ಬಿಜೆಪಿ ಎಸ್‌ಸಿ ಘಟಕದ ಅಧ್ಯಕ್ಷ ಅಪ್ಪಣ್ಣ ಮಾತನಾಡಿ, ರಜಾ ದಿನಗಳಲ್ಲಿ ಗ್ರಾಮಾಂತರ ಪ್ರದೇಶದ ಬಸ್‌ ಮಾರ್ಗಗಳನ್ನು ದಿಢೀರ್‌ ರದ್ದುಗೊಳಿಸುತ್ತಾರೆ. ಮುಂಜಾನೆ ಮತ್ತು ಸಂಜೆ ಮೈಸೂರಿಗೆ ಬಸ್‌ಇಲ್ಲದೇ ಪರದಾಡುತ್ತಿದ್ದರೂ ಡಿಪೋ ಮ್ಯಾನೇಜರ್‌ ಕ್ರಮವಹಿಸುತ್ತಿಲ್ಲ ಎಂದು ದೂರು ನೀಡಿದರು.

ತಡೆಗೋಡೆ ನಿರ್ಮಿಸಿ: ಸತ್ಯ ಫೌಂಡೇಷನ್‌ ಅಧ್ಯಕ್ಷ ಸತ್ಯಪ್ಪ ಮಾತನಾಡಿ, ದೊಂಬರ ಕಾಲೋನಿಯ ಬಡ ಕುಟುಂಬಗಳಿಗೆ ಮನೆ ವಿತರಿಸುತ್ತಿಲ್ಲ. ಮೋದೂರು ಕೆರೆ ಏರಿಯ ಎರಡು ಬದಿತಡೆಗೋಡೆ ನಿರ್ಮಿಸುತ್ತಿಲ್ಲ. ಚಿಲ್ಕುಂದ ಏತ ನೀರಾವರಿ ಯೋಜನೆಯಲ್ಲಿ ಅವ್ಯವಹಾರ ನಡೆದಿದೆ. ರಾಚಯ್ಯ ತಮ್ಮ ಜಮೀನಿನ ದುರಸ್ತು ಕಾರ್ಯ 2016ರಿಂದಲೂ ಆಗಿಲ್ಲ ಎಂದು ದೂರು ಸಲ್ಲಿಸಿದರು.

ಪೊಲೀಸರೇ ಬೈಕ್‌ ದಾಖಲೆ ನೀಡುತ್ತಿಲ್ಲ: ಐದು ವರ್ಷಗಳ ಹಿಂದೆ ಪೊಲೀಸರು ನಡೆಸಿದ ಹರಾಜಿನಲ್ಲಿ ಬೈಕ್‌ ಖರೀದಿಸಿದ್ದೆ. ಆದರೆ ರಿ.ನಂ. ಅವಾಂತರದಿಂದ ತಮ್ಮ ಹೆಸರಿಗಿನ್ನು ವರ್ಗಾಯಿಸಿಕೊಳ್ಳಲು ಸತಾಯಿಸುತ್ತಿದ್ದಾರೆಂದು ನಗರದ ಸ್ಟುಡಿಯೋ ಮಾಲೀಕ ರಾಮಸ್ವಾಮಿ ದೂರಿದರು. ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಎಆರ್‌ಟಿಒ ಅನ್ನದಾನಯ್ಯರಿಗೆ ಎಸ್‌ಪಿ. ಆದೇಶಿಸಿದರು. ತಹಸೀಲ್ದಾರ್‌ ಬಸವರಾಜು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಪೌರಾಯುಕ್ತರಿಗೆ ಎಸ್ಪಿ ತರಾಟೆ: ನಗರಸಭೆ ವಿರುದ್ಧವೇ ಹೆಚ್ಚು ದೂರುಗಳು ಬಂದಿವೆ. ಹಲವಾರು ಬಾರಿ ಸೂಚನೆ ನೀಡಿದ್ದರೂ ಅಕ್ರಮವಾಗಿ ನಿರ್ಮಿಸಿರುವ ಮನೆ, ರಸ್ತೆ ಒತ್ತುವರಿ ತೆರವುಗೊಳಿಸಿಲ್ಲ. ಅಕ್ರಮ ಖಾತೆಗಳನ್ನು ಏಕೆ ರದ್ದುಗೊಳಿಸಿಲ್ಲಂ?, ಯಾವ ಕಾರಣಕ್ಕಾಗಿ ಕ್ರಮವಹಿಸುತ್ತಿಲ್ಲ?, ನಿಮ್ಮನ್ನು ಲೋಕಾಯುಕ್ತ ನ್ಯಾಯಾಲಯಕ್ಕೆ ಕಳುಹಿಸುವುದೇ ಸರಿಯಾದ ಕ್ರಮವೆಂದು ನಗರಸಭೆ ಆಯುಕ್ತ ಶಿವಪ್ಪನಾಯ್ಕ ಅವರ‌ನ್ನು ಎಸ್ಪಿ ಮಾದಯ್ಯ ಹಾಗೂ ವೃತ್ತ ನಿರೀಕ್ಷಕಿ ರೂಪಶ್ರೀ ತರಾಟೆ ತೆಗೆದುಕೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ಆಯುಕ್ತರು, ಇನ್ನು ಮೂರು ದಿನದೊಳಗೆ ಅನಧಿಕೃತ ಮೊಬೈಲ್‌ ಟವರ್‌ ತೆರವುಗೊಳಿಸುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.