ಪ್ಲೀಸ್‌, ನಿಮ್ಮ ವೋಟು ನೀವೇ ಹಾಕಿಸಿಕೊಳ್ಳಿ…


Team Udayavani, Feb 24, 2023, 5:30 AM IST

ಪ್ಲೀಸ್‌, ನಿಮ್ಮ ವೋಟು ನೀವೇ ಹಾಕಿಸಿಕೊಳ್ಳಿ…

ಮೈಸೂರು: ಪ್ಲೀಸ್‌, ನಿಮ್ಮ ವೋಟು ನೀವು ಹಾಕಿಸಿಕೊಳ್ಳಿ….

ಹಳೆ ಮೈಸೂರು ಭಾಗದ ಕೆಲವು ಅಸೆಂಬ್ಲಿ ಕ್ಷೇತ್ರಗಳಲ್ಲಿ ತಳಮಟ್ಟದಲ್ಲಿ ಬಿಜೆಪಿ ಮುಖಂಡರಿಗೆ ಕಾಂಗ್ರೆಸ್‌ ನಾಯಕರು ಮಾಡುತ್ತಿರುವ ಮನವಿ ಇದು.

ಇದಕ್ಕೆ ಕಾರಣ ಇಷ್ಟೇ. ಹಳೆಯ ಮೈಸೂರು ಭಾಗದ ಅನೇಕ ಅಸೆಂಬ್ಲಿ ಕ್ಷೇತ್ರಗಳಲ್ಲಿ ಬಿಜೆಪಿಗೆ ಗೆಲ್ಲುವ ಶಕ್ತಿ ಇಲ್ಲದಿರಬಹುದು. ಆದರೆ ಆ ಪಕ್ಷಕ್ಕೆ ಅದರದ್ದೇ ಆದ ಸಾಂಪ್ರದಾಯಕ ಮತದಾರರಿದ್ದಾರೆ. ಅಲ್ಲಿ ಬಿಜೆಪಿ ಗೆಲ್ಲದಿರಬಹುದು. ಆದರೆ ವೋಟುಗಳಿವೆ. ಈಗ ಈ ಕ್ಷೇತ್ರಗಳಲ್ಲಿ ಬಿಜೆಪಿಗರಿಗೆ ಕಾಂಗ್ರೆಸಿಗರ ಮನವಿ ಇಷ್ಟೇ. ನಿಮ್ಮ ಬಿಜೆಪಿ ವೋಟು ನೀವು ಹಾಕಿಸಿಕೊಳ್ಳಿ. ಯಾವುದೇ ಕಾರಣಕ್ಕೂ ನಿಮ್ಮ ವೋಟುಗಳನ್ನು ಜೆಡಿಎಸ್‌ಗೆ ವರ್ಗಾಯಿಸಬೇಡಿ. ನಿಮ್ಮ ವೋಟು ಜೆಡಿಎಸ್‌ಗೆ ವರ್ಗಾವಣೆಯಾದರೆ ಕಾಂಗ್ರೆಸ್‌ ಸೋಲುತ್ತದೆ. ಇದರಿಂದ ಬಿಜೆಪಿ ಬೆಳೆಯುವುದಿಲ್ಲ. ಕಾಂಗ್ರೆಸ್‌ಗೂ ಅನುಕೂಲವಿಲ್ಲ. ಜೆಡಿಎಸ್‌ಗೆ ಲಾಭವಾಗುತ್ತದೆ. ಅತಂತ್ರ ವಿಧಾನಸಭೆ ರಚನೆಯಾದರೆ  ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್‌, ಬಿಜೆಪಿಯನ್ನು ತನ್ನ ತಾಳಕ್ಕೆ ತಕ್ಕಂತೆ ಕುಣಿಸಲು ಜೆಡಿಎಸ್‌ ಪ್ರಾರಂಭಿಸುತ್ತದೆ. ಹೀಗೆ ಮಾಡ್ಬೇಡಿ ಎಂಬುದು ಈಗ ಕಾಂಗ್ರೆಸಿಗರು ಬಿಜೆಪಿಯ ಸ್ಥಳೀಯ ನಾಯಕರ ಮುಂದಿಡುತ್ತಿರುವ ಬಿನ್ನಹ.

ಕಳೆದ 2018ರ ಅಸೆಂಬ್ಲಿ ಚುನಾವಣೆಯಲ್ಲಿ ಹಳೇ ಮೈಸೂರಿನ ಅನೇಕ ಅಸೆಂಬ್ಲಿ ಕ್ಷೇತ್ರಗಳಲ್ಲಿ ಬಿಜೆಪಿ ಡಮ್ಮಿ ಅಭ್ಯರ್ಥಿಗಳನ್ನು ಹೂಡಿ ಪರೋಕ್ಷವಾಗಿ ಜೆಡಿಎಸ್‌ ಗೆಲುವಿಗೆ ಕಾರಣವಾಯಿತು. ಕಾಂಗ್ರೆಸ್‌ ಸೋಲಿಸಬೇಕೆಂಬ ಏಕೈಕ ಉದ್ದೇಶದಿಂದ ಬಿಜೆಪಿಯ ಸಾಂಪ್ರದಾಯಕ ಮತಗಳು ಜೆಡಿಎಸ್‌ಗೆ ಟ್ರಾನ್ಸ್‌ಫ‌ರ್‌ ಆಯಿತು. ಇದರಿಂದ ಕಾಂಗ್ರೆಸ್‌ ಸೋತಿತು. ಮೈಸೂರು  ಸೇರಿದಂತೆ ಹಳೆಯ ಮೈಸೂರು ಭಾಗದ ಅನೇಕ ಅಸೆಂಬ್ಲಿ ಕ್ಷೇತ್ರಗಳಲ್ಲಿ ಹೀಗಾಯಿತು. ಇದನ್ನು ಕಾಂಗ್ರೆಸಿಗರು ಈಗ ಉದಾಹರಣೆಯಾಗಿ ನೀಡುತ್ತಿದ್ದಾರೆ.

ಇತ್ತ ಬಿಜೆಪಿಯ ಸ್ಥಳೀಯ ನಾಯಕರು ಹಾಗೂ ಕಾರ್ಯಕರ್ತರಿಗೂ ಅಸೆಂಬ್ಲಿ ಚುನಾವಣೆ ಬಂತೆಂದರೆ ಜೆಡಿಎಸ್‌ ಜತೆ ಹೈಕಮಾಂಡ್‌ ಮಟ್ಟದಲ್ಲೇ ಒಳ ಒಪ್ಪಂದ ಏರ್ಪಡುವ ಬಗ್ಗೆ ಬೇಸರವಿದೆ. ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋಲಬೇಕೆಂದು ಜೆಡಿಎಸ್‌ಗೆ  ಅನುಕೂಲ ಮಾಡಿಕೊಡಲು ಬಿಜೆಪಿಯಿಂದ ದುರ್ಬಲ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುತ್ತಿರುವ ಬಗ್ಗೆ ಬಿಜೆಪಿ ಕಾರ್ಯಕರ್ತರಲ್ಲಿ ಅಸಮಾಧಾನವಿದೆ. ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಬೆಳೆಯದಿರಲು ಇದೇ ಮುಖ್ಯ ಕಾರಣವಾಗಿದೆ ಎಂಬುದು ಅವರ ವಾದವಾಗಿದೆ.

ಪಕ್ಷದ ಹೈಕಮಾಂಡ್‌ಗೂ ಅವರು ಈ ಕುರಿತು  ಮನವರಿಕೆ ಮಾಡಿಕೊಟ್ಟಿದ್ದಾರೆ. ಬಿಜೆಪಿ ತನ್ನ ನೆಲೆ ಗಟ್ಟಿ ಇಲ್ಲದ ಅಸೆಂಬ್ಲಿ ಕ್ಷೇತ್ರಗಳಲ್ಲಿ ಸೋತರೂ ಪರವಾಗಿಲ್ಲ, ಯಾವುದೇ ಕಾರಣಕ್ಕೂ ಬಿಜೆಪಿ ಮತಗಳನ್ನು ಜೆಡಿಎಸ್‌ಗೆ ಟ್ರಾನ್ಸ್‌ಫ‌ರ್‌ ಮಾಡುವುದು ಬೇಡ. ಕೆಲವು ಚುನಾವಣೆಗಳಲ್ಲಿ ಸೋಲಬಹುದು. ಆದರೆ ಚುನಾವಣೆಯಿಂದ ಚುನಾವಣೆಗೆ ಪಕ್ಷದ ನೆಲೆಯನ್ನು ಗಟ್ಟಿ ಮಾಡಿ  ಮುಂಬರುವ ವರ್ಷಗಳಲ್ಲಿ ಜಯ ಸಾಧಿಸಬಹುದು ಎಂಬುದು ಬಿಜೆಪಿಯ ಸ್ಥಳೀಯ ಕಾರ್ಯಕರ್ತರ ವಾದವಾಗಿದೆ. ಉದಾಹರಣೆಯಾಗಿ ಅವರು ಅನೇಕ ವಿಧಾನಸಭಾ ಕ್ಷೇತ್ರಗಳ ಹೆಸರನ್ನು ಉಲ್ಲೇಖೀಸುತ್ತಾರೆ. ಇದರಲ್ಲಿ ಈ ಹಿಂದೆ ಬಿಜೆಪಿ ಜಯ ಸಾಧಿಸಿದ್ದ ಕೆಲವು ಅಸೆಂಬ್ಲಿ ಕ್ಷೇತ್ರಗಳೂ ಇವೆ.

ಕಳೆದ ಚುನಾವಣೆ ವೇಳೆ ಕಾಂಗ್ರೆಸ್‌ನ ರಾಹುಲ್‌ ಗಾಂಧಿ ಅವರು ಹಳೇ ಮೈಸೂರು ಭಾಗದ ಬಹಿರಂಗ ಸಭೆಗಳಲ್ಲಿ ಮಾತಾಡುತ್ತಾ ಜೆಡಿಎಸ್‌ ಬಿಜೆಪಿಯ ಬಿ ಟೀಂ ಎಂದು ಜರಿದಿದ್ದರು. ಆಗ ಜೆಡಿಎಸ್‌ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಬಿಜೆಪಿ ದುರ್ಬಲ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿ ಕಾಂಗ್ರೆಸ್‌ ಮಣಿಸಲು ಜೆಡಿಎಸ್‌ಗೆ ಸಾಥ್‌ ನೀಡಿದ್ದನ್ನು ಗಮನಿಸಿಯೇ ರಾಹುಲ್‌ ಈ ಮಾತು ಆಡಿದ್ದರು. ಆದರೆ ಚುನಾವಣೆ ಬಳಿಕ ಅತಂತ್ರ ವಿಧಾನಸಭೆ ರಚನೆಯಾದಾಗ ಜೆಡಿಎಸ್‌ ಪಕ್ಷವು ಕಾಂಗ್ರೆಸ್‌ ಬೆಂಬಲವನ್ನು ಪಡೆದು ಸಮ್ಮಿಶ್ರ ಸರಕಾರ ರಚಿಸಿದ್ದು ಈಗ ಇತಿಹಾಸ.

– ಕೂಡ್ಲಿ ಗುರುರಾಜ 

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.