ಸಾ.ರಾ.ಮಹೇಶ್‌ ಹೇಳಿಕೆ ಸರಿಯಲ್ಲ: ವಿಶ್ವನಾಥ್‌ ಬೇಸರ


Team Udayavani, Mar 29, 2019, 1:08 PM IST

m3-sa-ra-mahesh

ಹುಣಸೂರು: ಸಚಿವ ಸಾ.ರಾ.ಮಹೇಶ್‌ ಇತ್ತೀಚೆಗೆ ಮಂಡ್ಯದಲ್ಲಿ ಜೆಡಿಎಸ್‌ ಗೆಲ್ಲಿಸಿದರೆ ಮಾತ್ರ ಮೈಸೂರಲ್ಲಿ ನಾವು ಕಾಂಗ್ರೆಸ್‌ಅಭ್ಯರ್ಥಿಯನ್ನು ಗೆಲ್ಲಿಸ್ತೀವಿ ಎಂಬ ಹೇಳಿಕೆ ಮೈತ್ರಿಧರ್ಮಕ್ಕೆ ವಿರುದ್ಧವಾದುದು ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌ ತಿಳಿಸಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೊಲೀಸ‌ರ ವಿರುದ್ಧದ ಸಾ.ರಾ. ಮಹೇಶ್‌ ನಡೆ ಕೂಡ ಸರಿಯಲ್ಲ. ಮಾತಿನ ಭರದಲ್ಲಿ ಆರೀತಿ ಹೇಳಿರಬಹುದು. ಇನ್ನು ಯಾರೇ ಮಂತ್ರಿಯಾಗಿರಲಿ ಅವರ ನಡತೆ ಸರಕಾರಕ್ಕೆ ಭೂಷಣವಾಗಿರಬೇಕು. ಬಹುತೇಕ ಸಿಬ್ಬಂದಿಗೆ ಮಂತ್ರಿಗಳ ಪರಿಚಯವಿರಲ್ಲ. ಇಂತಹ ಘಟನೆ ವೇಳೆ ಸಮಧಾನವಾಗಿ ವರ್ತಿಸಬೇಕು. ಈ ಬಗ್ಗೆ ಅವರಿಗೆ ಕಿವಿಮಾತು ಹೇಳುತ್ತೇನೆಂದರು.

ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ರಾಜ್ಯಾದ್ಯಂತ ಸಿದ್ದರಾಮಯ್ಯ ಹಾಗೂ ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದ ಸರ್ಕಾರಗಳ ಸಾಧನೆಗಳನ್ನು ಹಾಗೂ ಕೇಂದ್ರದ ಮೋದಿ ಸ‌ರ್ಕಾರದ ವೈಪಲ್ಯಗಳನ್ನು ಜನರ ಮುಂದಿಟ್ಟು ಮತಯಾಚಿಸಲಾಗುವುದು. ಕನಿಷ್ಠ 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತೇವೆಂದು ವಿಶ್ವಾಸ ವ್ಯಕ್ತಪಡಿಸಿದರು.

ಮೈತ್ರಿ ಅಭ್ಯರ್ಥಿ ಸಿ.ಎಚ್‌.ವಿಜಯಶಂಕರ್‌ ಪರವಾಗಿ ಎರಡೂ ಪಕ್ಷಗಳ ನಾಯಕರ ನೇತೃತ್ವದಲ್ಲಿ ಏ.1ರ ನಂತರ ಜಂಟಿಪ್ರಚಾರ ನಡೆಸಲಾಗುವುದು. ಎಲ್ಲಡೆ ಪ್ರಚಾರದ ವೇಳೆ ಸಮನ್ವಯಸಮಿತಿ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವರಾದ ಜಿ.ಟಿ.ದೇವೇಗೌಡ, ಸಾ.ರಾ. ಮಹೇಶ್‌ ಹಾಗೂ ಮೈಸೂರು ಮತ್ತು ಕೊಡಗು ಜಿಲ್ಲೆಯ ಎರಡೂಪಕ್ಷಗಳ ಶಾಸಕರು, ಮಾಜಿ ಶಾಸಕರು ಹಾಗೂ ಮುಖಂಡರ ನೇತೃ‌Ìದಲ್ಲಿ ಎರಡೂ ಜಿಲ್ಲೆಗಳಲ್ಲಿ ವ್ಯಾಪಕ ಪ್ರಚಾರ ನಡೆಸಿ, ಬಹಳ ಅಂತರದಿಂದ ಗೆಲ್ಲಿಸಲು ಶ್ರಮ ಹಾಕಲಾಗುವುದು ಎಂದರು.

ಕುಟುಂಬ ರಾಜಕಾರಣ ಅರ್ಥಹೀನ: ಜೆಡಿಎಸ್‌ ವರಿಷ್ಟ ದೇವೇಗೌಡ ಮತ್ತು ಮೊಮ್ಮಕ್ಕಳಿಗೆ ಟಿಕೆಟ್‌ ನೀಡಲಾಗಿದೆ. ಅಲ್ಲಿ ಗೆಲ್ಲುವ ಅಭ್ಯರ್ಥಿಗಳಿಲ್ಲವೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ವಿಶ್ವನಾಥ್‌, ದೇಶದಲ್ಲಿ ಕುಟುಂಬ ರಾಜಕಾರಣವೆಂಬುದು ಅರ್ಥ ಕಳೆದುಕೊಂಡಿದೆ. ಎಲ್ಲಾ ಪಕ್ಷಗಳಲ್ಲೂ ಕುಟುಂಬ ರಾಜಕಾರಣ ಮೇಳೆ„ಸುತ್ತಿದ್ದು, ಈ ಸಂಬಂಧ ಮಾತನಾಡುವುದರಲ್ಲಿ ಅರ್ಥವಿಲ್ಲವೆಂದು ತಿಳಿಸಿದರು.

ನಾನು ಅಂಬರೀಶ್‌ ಸ್ನೇಹಿತರಾಗಿದ್ದವರು. ಸುಮಲತಾ ಅಂಬರೀಶ್‌ ಬಗ್ಗೆ ಅಪಾರ ಗೌರವವಿದ್ದು, ಅವರ ಬಗ್ಗೆ ನಾನೇನು ಮಾತನಾಡುವುದಿಲ್ಲ ಎಂದು ಹೇಳಿದರು. ನಿರೊದ್ಯೋಗ ಸೃಷ್ಟಿಯೇ ಸಾಧನೆ:2014ರ ಚುನಾವಣೆ ಪ್ರಣಾಳಿಕೆಯಲ್ಲಿ ಬಿ.ಜೆ.ಪಿ.ನೀಡಿದ್ದ ಎರಡು ಕೋಟಿ ಉದ್ಯೋಗಸೃಷ್ಟಿ ಭರವಸೆಯ ಬದಲಿಗೆ ಕೇವಲ 27 ಸಾವಿರ ಉದ್ಯೋಗ ಕಲ್ಪಿಸಿದೆ.

ಉದ್ಯೋಗಸೃಷ್ಟಿಗೆ ಯಾವುದೇ ಕಾರ್ಯಕ್ರಮ ರೂಪಿಸಲಿಲ್ಲ, ಇನ್ನು ಜನ್‌ಧನ್‌ ಯೋಜನೆಯ ಜೀರೋಬ್ಯಾಲೆನ್ಸ್‌ ಖಾತೆ ಹಾಗೆ ಉಳಿದಿದ್ದು, ಪ್ರತಿ ಖಾತೆಗೆ 15 ಲಕ್ಷ ತುಂಬವ ಭರವಸೆ ಹುಸಿಯಾಗಿದ್ದು, ಜೀರೋಬ್ಯಾಲೆನ್ಸ್‌ ಸ‌ರ್ಕಾರವೆಂದು ಟೀಕಿಸಿದರು.

ಸುದ್ದಿಗೋಷ್ಠಿಯಲ್ಲಿ ತಾಲೂಕು ಜೆಡಿಎಸ್‌ ಅಧ್ಯಕ್ಷ ಮಹದೇವೇಗೌಡ, ನಗರ ಅಧ್ಯಕ್ಷ ಮಹಮದ್‌ಪೀರ್‌, ನಗರಸಭೆ ಮಾಜಿ ಅಧ್ಯಕ್ಷರಾದ ಎಚ್‌.ವೈ.ಮಹದೇವ್‌, ಎಂ.ಶಿವಕುಮಾರ್‌, ಜಿ.ಪಂ.ಮಾಜಿ ಸದಸ್ಯ ಫಜಲುಲ್ಲಾ, ಕೆ.ಆರ್‌.ನಗರದ ಜೆಡಿಎಸ್‌ ಮುಖಂಡ ಪ್ರಭುಶಂಕರ್‌, ತಾಪಂ ಸದಸ್ಯ ಶ್ರೀನಿವಾಸ್‌ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.